TOP STORIES:

ಎಣ್ಮೂರ ದೇವು ಬಲ್ಲಾಳರು ಮಾಡಿದ ಕ್ರಮದಲ್ಲಿ ಆಗುತ್ತಿರುವ ಬೈದೇರುಗಳ ನೇಮ.


ಎಣ್ಮೂರ ದೇವು ಬಲ್ಲಾಳರು ಮಾಡಿದ ಕ್ರಮದಲ್ಲಿ ಆಗುತ್ತಿರುವ ಬೈದೇರುಗಳ ನೇಮ.

ನೇಮ ಎನ್ನುವುದು ನಿಯಮ ಪ್ರಕಾರ ಆಗುವಂತಹುದು. ಎಲ್ಲಾ ದೈವಗಳ ನರ್ತನ ಸೇವೆಯನ್ನು ನೇಮ ಎಂದು ಕರೆಯುವ ವಾಡಿಕೆ ಇಲ್ಲ. ಕೆಲವೊಂದು ದೈವಗಳ ನರ್ತನ ಸೇವೆಯನ್ನು ನೇಮ ಎಂದು ಕರೆಯುವುದು ವಾಡಿಕೆ. ಅವುಗಳಲ್ಲಿ ಅಗ್ರಪಂಕ್ತಿಯಲ್ಲಿ ಇರುವುದು ಬೈದೇರುಗಳ ನೇಮ. ಎಣ್ಮೂರ ದೇವಣ್ಣ ಬಲ್ಲಾಳರು ಅನಾದಿಯಲ್ಲಿ ಮಾಡಿದ ಕ್ರಮದ ಪ್ರಕಾರ ಇಂದಿಗೂ ಕೂಡ ನೇತ್ರಾವತಿ ಹೊಳೆಯ ಒಳಗಿರುವ ಗರಡಿಗಳು ಚಾಚು ತಪ್ಪದೆ ಅದೇ ಕ್ರಮದಲ್ಲಿ ಎಣ್ಮೂರ ದೇವು ಬಲ್ಲಾಳೆರ್ ಮಂತಿ ಕಟ್ಟ್ ಅಂತ ಹೇಳುತ್ತಾ ನೇಮವನ್ನು ಮಾಡಿಸುತ್ತಿದ್ದಾರೆ. ಅದೆಷ್ಟೂ ವರ್ಷಗಳು ಸಂದರೂ ಕೂಡ ಇವತ್ತಿಗೂ ಅದೇ ಕ್ರಮದಲ್ಲಿ ಆಗುತ್ತಿದೆ. ಕಟ್ಟಲೆ ಆಯಾಯ ಗರಡಿಗಳಲ್ಲಿ ವಿಭಿನ್ನವಾಗಿದ್ದರೂ‌ ಕೂಡ ಕಟ್ಟ್ ಬದಲಾಗಿಲ್ಲ. ನೇಮಕ್ಕೆ ದಿನ ಇಟ್ಟ 7 ದಿನಗಳ ಮುಂಚೆ ಗೊನೆ ಮುಹೂರ್ತವಾಗುತ್ತದೆ. ಇಲ್ಲಿ 33 ಸ್ವಸ್ತಿಕ ಇಟ್ಟು ತಂಬಿಲ ಶುದ್ದ ಹೋಮ ನಡೆದು ಕಂಚಿಕಲ್ಲಿಗೆ ಕಾಯಿ ಹೊಡೆಯುವ ಕ್ರಮವಿದೆ. ನಂತರ ನೇಮದ ಕಟ್ಲೆ ಬೈದೇರುಗಳ ಕಿರುಬಾಳು ಭಂಡಾರ ತೆಗೆಯುವುದರಿಂದ ಪ್ರಾರಂಭವಾಗುತ್ತದೆ. ಕೆಲವು ಕಡೆಗಳಲ್ಲಿ ಗರಡಿಯಲ್ಲೆ ಭಂಡಾರ ಇದ್ದರೆ ಕೆಲವು ಕಡೆಗಳಲ್ಲಿ ತಾವು ಚಾವಡಿಯಲ್ಲಿ ಅಥವ ಮನೆಯ ಒಳಗಿನಿಂದ ದರ್ಶನ ಪಾತ್ರಿಗಳು ಹುಟ್ಟುಕಟ್ಟನ್ನು ಹೇಳಿ ಆವೇಶ ಭರಿತರಾಗಿ ಭಂಡಾರ ಹೊರಟು ಗರಡಿಗೆ ಪ್ರವೇಶವಾಗುತ್ತದೆ. ನಂತರ ನೇಮ ಕಟ್ಟುವ ಪರವ ಸಮುದಾಯವರಿಗೆ ಎಣ್ಣೆ ಬೂಲ್ಯ ನೀಡಲಾಗುತ್ತದೆ. ತದನಂತರ ನೇಮ ಕಟ್ಟುವವರು ಭತ್ತದಿಂದ ಬೈದೇರುಗಳ ಪ್ರತಿ ರೂಪವನ್ನು ಕೋಟಿ ಚೆನ್ನಯರ ಸಂಧಿಯನ್ನು ಹೇಳುತ್ತಾ ಬಿಡಿಸುತ್ತಾರೆ. ನಂತರ ಬೈದೇರುಗಳ ಪಾತ್ರಿಗಳು ಮತ್ತು ಸಹಾಯಕರು ಸೇರಿ ಭತ್ತದ ಪ್ರತಿ ರೂಪದ ಮೇಲೆ ಮಾವಿನ ಎಲೆ ಇಟ್ಟು ಅದರ ಮೇಲೆ ಬಾಳೆಯ ದಿಂಡಿನ ಸಿಪ್ಪೆಯಿಂದ ಗರಿಯವನ್ನು(ಸಾಮ) ಕಟ್ಟುತ್ತಾರೆ. ಆಮೇಲೆ ಶುಚಿರ್ಭೂತರಾದ ನೇಮ ಕಟ್ಟುವ ಪಾತ್ರಿಗಳು ಚೆಂಡಿನ ಬೂಲ್ಯವನ್ನು ಪಡೆದುಕೊಂಡು ಸಿಂಗಾರ ಮಾಡಿಸಿಕೊಳ್ಳಲು ಕೂರುತ್ತಾರೆ. ಆ ಸಮಯದಲ್ಲಿ ಗರಡಿಯ ಒಳಗೆ ಪಾತ್ರಿಗಳು ಹೋಮ ಇಟ್ಟು 66 ಸ್ವಸ್ತಿಕ ಸಿಂಗದನದಲ್ಲಿ ಬಡಿಸುತ್ತಾರೆ. ಅರದಾಳ ಮುಗಿಸಿದ ನೇಮ ಕಟ್ಟುವ ಪಾತ್ರಿಗಳು ಗರಡಿಯ ಒಳಗೆ ಬರುತ್ತಾರೆ. ಆ ಸಮಯದಲ್ಲಿ ಕೋಟಿ ಪಾತ್ರಿಯು ಗರಿಯದ ( ಬರಿಯ) ಮಧ್ಯದಲ್ಲಿ ಕೂತು ಹೋಮ (ಸೋಮ) ಇಡುತ್ತಾರೆ. ಅಷ್ಟು ಹೊತ್ತಿಗೆ ನೇಮ ಕಟ್ಟುವ ಪಾತ್ರಿಗಳು ಬೈದೇರುಗಳ ಹುಟ್ಟು ಕಟ್ಟುನ್ನು ರಾಗವಾಗಿ ಹಾಡುತ್ತಾರೆ. ನಂತರ ಗಿಂಡೆ ನೀರಿನಿಂದ ಶುದ್ದ ಮಾಡಿಸಿಕೊಳ್ಳುತ್ತಾರೆ. ನಂತರ ಗರಡಿಯ ಮುಖ್ಯಸ್ಥ ಅಥವ ಸಂಬಂಧಪಟ್ಟವರು ಮೂರು ಸಲ ಪಾರಿಯನ್ನು ಹೇಳುತ್ತಾರೆ. ಅವೇಶ ಬರಿಸಿಕೊಂಡ ಪಾತ್ರಿಗಳು ಮೀಸೆ ಧರಿಸದೆ ಗರಡಿ ಇಳಿದು ಸಂಬಂಧ ಪಟ್ಟವರಿಗೆ, ಗರಡಿ ಮನೆತನದವರಿಗೆ ಜೀಟಿಗೆ ಹಿಡಿದು ಅಭಯ ನೀಡುತ್ತಾರೆ. ತದನಂತರ ಬೆರ್ಮರ ಗುಂಡದ ಬಳಿ ಹೋಗಿ ತೆಂಗಿನಕಾಯಿ ಕಾಣಿಕೆಯನ್ನು ಇಡುತ್ತಾರೆ. ಅದನ್ನು ಕುಟುಂಬದ ಯಜಮಾನ ಹಿಡಿದುಕೊಂಡು ಬಂದು ಮನೆಯೊಳಗೆ ಇಡುತ್ತಾನೆ. ನಂತರ ಬೈದೇರುಗಳು ರಂಗಸ್ಥಳ ಪ್ರವೇಶ ಮಾಡುತ್ತಾರೆ. ಅಲ್ಲಿ ನರ್ತನ ಸೇವೆಯನ್ನು ಮಾಡಿ ನಂತರ ಗರಡಿ ಪ್ರವೇಶ ಮಾಡಿ ಮೀಸೆ ಧರಿಸಿ ಗರಡಿ ಇಳಿಯುತ್ತಾರೆ. ಆ ಸಮಯದಲ್ಲಿ ಗರಡಿ ಪಾತ್ರಿಗಳು ಸಹಾಯಕರು ಕೈ ಕೈ ಹಿಡಿದುಕೊಂಡು ಬೈದೇರುಗಳಿಗೆ ಮುಖ ಮಾಡಿ ಚಲಿಸುತ್ತಾರೆ. ಅವರ ಮುಂದಿನಿಂದ ಬೈದೇರುಗಳು ಕುಣಿಯುತ್ತಾ ತಮ್ಮ ಕೈಯಲ್ಲಿದ್ದ ಚವಳದಿಂದ ಆಶೀರ್ವಾದ ಮಾಡುತ್ತಾ ಬರುತ್ತಾರೆ. ರಂಗಸ್ಥಳಕ್ಕೆ ಬಂದಾಗ ಕೈಯನ್ನು ಬೈದೇರುಗಳ ಚಪ್ಪರಕೊಂಬು ಮುಟ್ಟಿ ನಮಸ್ಕರಿಸಿ ಪಾತ್ರಿಗಳು ಗರಡಿಯ ಹತ್ತಿರ ಹೋಗುತ್ತಾರೆ. ಬೈದೇರುಗಳು ರಂಗಸ್ಥಳದಲ್ಲಿ ನರ್ತನ ಸೇವೆ ನೀಡುತ್ತಾರೆ. ಆ ಸಮಯದಲ್ಲಿ ದರ್ಶನ ಪಾತ್ರಿಗಳು ಅವೇಶ ಭರಿತರಾಗಿ ಸುರಿಯ ಹಿಡಿದು ಗರಡಿ ಇಳಿದು ಗರಡಿ ಮುಂದೆ ಇರುವ ಲೋವೆ ಕಂಬ ಅಥವ ರಂಗಸ್ಥಳದ ಬಳಿಯಿರುವ ಲೋವೆ ಕಂಬದ ಅಡಿಗೆ ಬರುತ್ತಾರೆ. ಆ ಸಮಯದಲ್ಲಿ ದರ್ಶನ ಪಾತ್ರಿಗಳು ನೇಮದ ಪಾತ್ರಿಗಳು ಎದುರು ಬದಿರಾಗಿ ಚಲಿಸಿಕೊಂಡು ಸುರಿಯನ್ನು ನೇಮದ ಪಾತ್ರಿಗಳಿಗೆ ಹಸ್ತಾಂತರ ಮಾಡುತ್ತಾರೆ. ನಂತರ ಬೈದೇರುಗಳು ಸುರಿಯ ನರ್ತನ ಮತ್ತು ಗರಡಿ ಸಾಧಗದ ಪಟುಗಳನ್ನು ನೆರೆದಿರುವ ಭಕ್ತ ಸಮುದಾಯಕ್ಕೆ ತೋರಿಸುತ್ತಾರೆ. ಆ ನಂತರ ಮಾಣಿಬಾಲೆ( ಮಾಯಂದಾಲ್) ಅಲಂಕಾರಗೊಂಡು ಕೈಯಲ್ಲಿ ಅಕ್ಕಿ ತೆಂಗಿನಕಾಯಿ ಹಿಂಗಾರ ಮತ್ತು ಅರ್ಧ ತೆಂಗಿನಕಾಯಿಯ ತುಂಡಿನಲ್ಲಿ ಉರಿಯುವ ದೀಪ ಹಾಗೂ ಗೆಜ್ಜೆಕತ್ತಿ ಇರುವ ಹರಿವಾಣವನ್ನು ಹಿಡಿದುಕೊಂಡು ಇಳಿಯುತ್ತಾರೆ. ಆಕೆ ಬಾಣಂತಿ ತಾಯಿಯಾಗಿರುವುದರಿಂದ ಅಲ್ಲಲ್ಲಿ ತಲೆಸುತ್ತಿ ಬೀಳುವ ಕ್ರಮವಿದೆ. ಆಗ ಗಿಂಡೆಯ ಪಾತ್ರಿ ಆಕೆಗೆ ಗಿಂಡೆ ನೀರನ್ನು ಪ್ರೋಕ್ಷಣೆ ಮಾಡುತ್ತಾ ಇರುತ್ತಾರೆ. ಗರಡಿ ಇಳಿದು ರಂಗಸ್ಥಳದ ಲೋವೆ ಕಂಬದ ಹತ್ತಿರ ಬಂದಾಗ ಆಕೆಯ ಅಣ್ಣಂದಿರಾದ ಕೋಟಿ ಚೆನ್ನಯರು ಬಂದು ಆಕೆಯನ್ನು ಇದಿರುಗೊಂಡು ಅಲ್ಲಿ ನರ್ತನ ಸೇವೆಯನ್ನು ನೀಡಿ ಅಣ್ಣಂದಿರ ಆಶೀರ್ವಾದ ಪಡೆದು ನೆರೆದ ಭಕ್ತರಿಗೆ ಮಾಯಂದಾಲ್ ಪ್ರಸಾದ ವಿತರಣೆ ಮಾಡುತ್ತಾಳೆ. ನಂತರ ಗರಡಿ ಪ್ರವೇಶ ಮಾಡಿ ಕಾಯ ಬಿಟ್ಟು ಮಾಯ ಸೇರುತ್ತಾಳೆ.ಬೈದೇರುಗಳು ರಂಗಸ್ಥಳದಲ್ಲಿ ದೇಯಿ ಬೈದೆತಿಯ ನಡೆಯನ್ನು ಹೇಳುತ್ತಾರೆ. ಆ ನಂತರ ಬುದ್ಯಂತನನ್ನು ಜಯಿಸುವ ಅಣುಕನ್ನು ತೋರಿಸುತ್ತಾರೆ. ಆ ನಂತರ ಸುರಿಯವನ್ನು ದರ್ಶನ ಪಾತ್ರಿಗಳಿಗೆ ಹಸ್ತಾಂತರ ಮಾಡುತ್ತಾರೆ. ಸೂರ್ಯೋದಯ ಆಗುವ ಮುಂಚೆ ದರ್ಶನ ಪಾತ್ರಿಗಳು ಎಡೆಕಟ್ಟು ( ಚೆಂಡು ಹಾಕಿಕೊಳ್ಳುವುದು) ಸಂದಾಯ ಮಾಡಿಕೊಂಡು ಸುರಿಯವನ್ನು ನೇಮದ ಪಾತ್ರಿಗಳಿಗೆ ಹಸ್ತಾಂತರ ಮಾಡುತ್ತಾರೆ. ಆ ನಂತರ ಕೋಟಿ ಚೆನ್ನಯರು ಕೈಯಲ್ಲಿ ಹಿಂಗಾರ ಹಿಡಿದುಕೊಂಡು ಮತ್ತು ಕುಜುಂಬ ಕಾಂಜವರು ಕೈಯಲ್ಲಿ ತೆಂಗಿನಕಾಯಿ ಹಿಡಿದುಕೊಂಡು ಕುಜುಂಬ ಕಾಂಜವರ ಹುಟುಕಟ್ಟನ್ನು ಹೇಳಿ ಗರಡಿಯ ಒಳಗೆ ಹೋಗಿ ಗರಿಯದ ಮುಂದೆ ಕಾಣಿಕೆಯನ್ನು ಇಡುತ್ತಾರೆ. ತದನಂತರ ನೇಮದಲ್ಲಿ ಬೈದೇರುಗಳು ಎದೆಕಟ್ಟು ಸಂದಾಯ ಮಾಡಿ ಕೊಳ್ಳುತ್ತಾರೆ. ಆ ನಂತರ ಬೈದೇರುಗಳು ರಂಗಸ್ಥಳದ ಅಲಂಕಾರವನ್ನು ಎಳೆದು ತೆಗೆಯುತ್ತಾರೆ. ಇದು ಅವರು ತಮ್ಮ ಅಂತ್ಯವನ್ನು ಸೂಚಿಸುವ ಕ್ರಮವಾಗಿದೆ. ನಂತರ ಪಟ್ಟಾವು ಇಳಿಯುವ ಕ್ರಮ ಮಾಡುತ್ತಾರೆ. ತಮ್ಮ ಹುಟ್ಟುಕಟ್ಟುನ್ನು ರಾಗಬದ್ದವಾಗಿ ಹಾಡುತ್ತಾರೆ. ಆ ಸಮಯದಲ್ಲಿ ಗಿಂಡೆ ಪಾತ್ರಿಯು ಬೈದೇರುಗಳು ಹೇಳುವ ಸಂಧಿ ಪ್ರಕಾರ ನೆಲಕ್ಕೆ ನೀರನ್ನು ಪ್ರೊಕ್ಷಣೆ ಮಾಡುತ್ತಾರೆ. ನಂತರ ರಂಗಸ್ಥಳ ಬಿಟ್ಟು ಬೈದೇರುಗಳು ಗರಡಿ ಮನೆ ಅಥವ ಧರ್ಮ ಚಾವಡಿಗೆ ಹೋಗಿ ತುಳಸಿ ಕಟ್ಟೆಗೆ ತಮ್ಮ ಸುರಿಯದಿಂದ ಭತ್ತವನ್ನು ಹಾಕಿ ನಂತರ ಗಿಂಡೆ ಹಾಲು ಮತ್ತು ಬಾಳೆಹಣ್ಣು ಸ್ವೀಕಾರ ಮಾಡುತ್ತಾರೆ. ನಂತರ ಹಾಲು ಕುಡಿದ ಮನೆ ಮತ್ತು ಚಾವಡಿಗೆ ಅಕ್ಕಿ ಹಾಕಿ ಗರಡಿಯ ಹತ್ತಿರ ಬಂದು ಎಲ್ಲರಿಗೂ ಗಂಧ ಪ್ರಸಾದ ನೀಡಿ ಕಂಚಿಕಲ್ಲಿಗೆ ಕಾಯಿ ಹೊಡೆದು ಅಭಯ ನೀಡಿ ಗರಡಿ ಪ್ರವೇಶ ಮಾಡಿ ಯಜಮಾನನಿಗೆ ಕಟ್ಟೊತ್ತರ ಬೂಲ್ಯ ನೀಡಿ ಗಿಂಡೆಗೆ ಅಕ್ಕಿ ಹಾಕಿ ಗಿಂಡೆಯ ಅಭಯ ನೀಡಿ ಗರಿಯಕ್ಕೆ ಸುರಿಯ ಊರಿ ಕಾಯ ಬಿಟ್ಟು ಮಾಯ ಸೇರುತ್ತಾರೆ. ಆ ಸಮಯದಲ್ಲಿ ನರ್ತನ ಪಾತ್ರಿಗಳ ಹಣೆಗೆ ನಾಣ್ಯವನ್ನು ಅಂಟಿಸುವ ಕ್ರಮವಿದೆ. ತದನಂತರ ಗರಿಯದ ಮೇಲಿರುವ ಚಕ್ರಂದ ಬಲಿಯನ್ನು ನರ್ತನ ಪಾತ್ರಿಗಳು ಹೊರಗೆ ಇಡುತ್ತಾರೆ. ಆ ನಂತರ ಕೆಲವು ಕಡೆ ಜೋಗಿ ಪುರುಷನಿಗೆ ಕಟ್ಟಲೆಯ ಕೋಲ ನಡೆಯುತ್ತೆ. ಈ ರೀತಿಯಾಗಿ ಯಾವುದೇ ಚ್ಯುತಿ ಬಾರದೆ ದೇವು ಬಲ್ಲಾಳರ ಕಟ್ಲೆಯ ಪ್ರಕಾರ ನೇಮವು ನಿಯಮ ಪ್ರಕಾರವಾಗಿ ನಡೆಯುತ್ತಿದೆ. ಇವತ್ತಿಗೂ ಗರಡಿಗಳು ಭಕ್ತರ ಶ್ರದ್ದಾ ಕೇಂದ್ರವಾಗಿದೆ. ಎಷ್ಟೇ ಆಡಂಬರದ ಗರಡಿಗಳು ಇದ್ದರೂ ಕೂಡ ಕಟ್ಲೆಗಳಲ್ಲಿ ಆಡಂಬರ ಬಂದಿಲ್ಲ ಅದು ಅನಾದಿಯ ನಂಬಿಕೆಯಲ್ಲಿಯೇ ಬೇರೂರುತ್ತಾ ಇದೆ.

 

ಬರಹ:- ಶೈಲು ಬಿರ್ವ ಅಗತ್ತಾಡಿ ದೋಲ ಬಾರಿಕೆ


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »