TOP STORIES:

ದೇವಸ್ಥಾನದ ಆಡಳಿತ ಮಂಡಳಿಯನ್ನು ಕಾರಣಿಕ ಕ್ಷೇತ್ರಗಳ ದೈವ ದೇವರುಗಳಲ್ಲಿ ಪ್ರಮಾಣ ಮಾಡಲು ಆಹ್ವಾನಿಸಿದ ಶಂಕರ್ ಶಾಂತಿ


ಬ್ರಹ್ಮಾವರ,ಮಾ.6; ಕಾಳಿಕಾಂಬಾ ದೇವಸ್ಥಾನದೊಳಗೆ ನನ್ನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿಲ್ಲ ಎನ್ನುವ ಮೊಕ್ತೇಸರ ಶ್ರೀಧರ ಆಚಾರ್ಯ ಅವರು ಹೇಳಿರುವ ಹೇಳಿಕೆಯನ್ನು ಸಾಮಾಜಿಕ ಕಾರ್ಯಕರ್ತ ಶಂಕರ ಶಾಂತಿ ಅವರು ಸಂಪೂರ್ಣ ಸುಳ್ಳಿನ ಅರೋಪವೆಂದು ಬಲವಾಗಿ ಖಂಡಿಸಿದ್ದು, ಇವಾಗ ಅವರು ಉಡುಪಿ ದಕ್ಷಿಣ ಕನ್ನಡದ ಕಾರಣಿಕ ಕ್ಷೇತ್ರಗಳ ದೈವ ದೇವರುಗಳಲ್ಲಿ ಪ್ರಮಾಣ ಮಾಡಲು ಆಹ್ವಾನಿಸಿದ್ದಾರೆ.

ಕಚ್ಚೂರು ಕಾಳಿಕಾಂಬಾ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭ ಮಾಹಿತಿ ಹಕ್ಕು ಕಾರ್ಯಕರ್ತ ಶಂಕರ್ ಶಾಂತಿ ಯವರಿಗೆ ಕಾಳಿಕಾಂಬಾ ದೇವಸ್ಥಾನದೊಳಗೆ ಹಲ್ಲೆಯಾಗಿದೆ ಎನ್ನುವ ವಿಚಾರ ಹರಿದಾಡುತ್ತಿದ್ದು ಇದು ಆಧಾರರಹಿತವಾಗಿದೆ. ಈ ಘಟನೆಗೂ ದೇವಸ್ಥಾನಕ್ಕೂ ಯಾವುದೇ ಸಂಬಂಧವಿಲ್ಲ, ಅನಾವಶ್ಯಕವಾಗಿ ವಿಶ್ವಕರ್ಮ ಸಮಾಜದ ಮೇಲೆ ಆರೋಪ ಮಾಡುತ್ತಿರುವುದು, ನಮ್ಮ ಸಮಾಜದ ಯುವಕರ ಮೇಲೆ ಕೇಸು ದಾಖಲಿಸಿರುವುದು ಸರಿಯಲ್ಲ ಎಂದು ದೇವಸ್ತಾನದ ಆಡಳಿತ ಮೊಕ್ತೇಸರ ವಡೇರಹೋಬಳಿ ಶ್ರೀಧರ ಆಚಾರ್ಯ ಅವರು ಮಾ.5, ರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.

ಈ ಬಗ್ಗೆ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಗಂಭೀರ ಸ್ವರೂಪದ ಗಾಯಾಳಾಗಿ ಚಿಕಿತ್ಸೆ ಪಡೆಯುತ್ತಿರುವ, ಸಾಮಾಜಿಕ ಕಾರ್ಯಕರ್ತ ಶಂಕರಶಾಂತಿ ಅವರು, ಬಾರ್ಕೂರು ಕಾಳಿಕಾಂಬ ದೇವಸ್ಥಾನದ ಅಡುಗೆ ಕೋಣೆಯಲ್ಲಿ ಹಲ್ಲೆ ನಡೆಸಿ,ನಮ್ಮ ದೇವಸ್ಥಾನದಲ್ಲಿ ಯಾವುದೇ ಘಟನೆ ನಡೆದಿಲ್ಲ ಎಂದು ದೇವಸ್ಥಾನದ ಒಂದನೇ ಹಾಗೂ 3 ನೇ ಆಡಳಿತ ಮೊಕ್ತೇಸರ ಸುಳ್ಳು ಹೇಳಿಕೆ ಪತ್ರಿಕೆಗೆ ನೀಡಿರುತ್ತಾರೆ. ಈ ವಿಷಯದಲ್ಲಿ ಧರ್ಮಸ್ಥಳ ಮಂಜುನಾಥಸ್ವಾಮಿ ಹಾಗೂ ಅಣ್ಣಪ್ಪ ಸ್ವಾಮಿಯಲ್ಲಿ ಇಡೀ ಕಾಳಿಕಾಂಬ ದೇವಸ್ಥಾನದ ಆಡಳಿತ ಮಂಡಳಿಯನ್ನು ಸತ್ಯ ಪ್ರಮಾಣಕ್ಕೆ ಕರೆಯುತಿದ್ದೇನೆ, ಕಾಳಿಕಾಂಬೆ ಹಾಗೂ ಕಲ್ಕುಡ ಸನ್ನಿದಿಯಲ್ಲಿ ಸತ್ಯ ಪ್ರಮಾಣ ನಡೆಯಲಿ, ತಾವು ಬಾರದೆ ಇದ್ದಲ್ಲಿ ಧರ್ಮಸ್ಥಳ ಶ್ರೀಕ್ಷೇತ್ರದಲ್ಲಿ ಹಾಗೂ ಶಂಕರನಾರಾಯಣ ಕಲ್ಕುಡ ದೈವದಲ್ಲಿ ಇಡೀ ಕಾಳಿಕಾಂಬ ದೇವಸ್ಥಾನದ ವಿರುದ್ಧ ಹುಯಿಲು (ದೂರು)ಕೊಡುತ್ತೇನೆಂದು ಹೇಳಿದ್ದಾರೆ.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »