TOP STORIES:

FOLLOW US

ಬೆನ್ನು ನೋವು ಇದೆಯಾ ಹಾಗದರೆ ಈ ಸ್ಟೋರಿ ಓದಿ


ಇತ್ತೀಚೆಗಿನ ನಮ್ಮ ದೈನಂದಿನ ಚಟುವಟಿಕೆಗಳು ದೇಹವನ್ನು ನಾನಾ ರೀತಿಯಲ್ಲಿ ಕಾಡುತ್ತದೆ. ಅದರಲ್ಲಿ ಬೆನ್ನು ನೋವು ಕೂಡ ಒಂದಾಗಿದೆ. ಈ ಬೆನ್ನು ನೋವಿನಿಂದ ರಿಲ್ಯಾಕ್ಸ್ ಆಗಲು ನಾವು ಬಹಳಷ್ಟು ಸಲ ಹೆಣಗಾಡಬೇಕಾಗುತ್ತದೆ.

ಹೆಚ್ಚಿನವರು ಬೆನ್ನು ನೋವು ಕಾಡುವಾಗಲೆಲ್ಲ ನೋವು ನಿವಾರಕ ಮಾತ್ರೆ ಸೇವಿಸಿ ತಕ್ಷಣಕ್ಕೆ ಶಮನಗೊಳಿಸುವ ಪ್ರಯತ್ನ ಮಾಡುತ್ತಾರೆ. ಆದರೆ ಇದನ್ನೇ ಮುಂದುವರೆಸುವುದು ಆರೋಗ್ಯದ ದೃಷ್ಠಿಯಿಂದ ಮಾರಕ ಎಂಬುದನ್ನು ಮರೆಯಬಾರದು. ಹಾಗಾದರೆ ಬೆನ್ನು ನೋವು ಕಡಿಮೆ ಮಾಡಲು ಏನು ಮಾಡಬಹುದು ಎಂಬುದನ್ನು ನೋಡುವುದಾದರೆ ವ್ಯಾಯಾಮ ಬೆನ್ನು ನೋವು ತಡೆಗೆ ಸಹಕಾರಿ ಎನ್ನಲಾಗುತ್ತದೆ.

ಸಾಮಾನ್ಯವಾಗಿ ಬೆನ್ನು ನೋವು ಕುಳಿತು, ಬಗ್ಗಿ ಕೆಲಸ ಮಾಡುವವರಲ್ಲಿ, ದೈಹಿಕ ಶ್ರಮದ ಕೆಲಸ ಮಾಡದವರಲ್ಲಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ರಾತ್ರಿ ಮಲಗುವಾಗ ಇಲ್ಲದ ಬೆನ್ನುನೋವು ಬೆಳಿಗ್ಗೆ ಹಾಸಿಗೆಯಿಂದ ಏಳುವಾಗ ಕಾಣಿಸಿಕೊಳ್ಳಬಹುದು. ಬಹಳಷ್ಟು ಜನ ಏನೂ ಕೆಲಸ ಮಾಡದೆ ಮನೆಯಲ್ಲಿ ಕುಳಿತು ಸಮಯ ಕಳೆಯುವವರು ಕೆಲವೊಮ್ಮೆ ಬೆನ್ನು ನೋವಿನ ತೊಂದರೆ ಅನುಭವಿಸಬಹುದು.

ಬೆನ್ನು ನೋವನ್ನು ಶಮನಗೊಳಿಸಲು ಫಿಜಿಯೋಥೆರಪಿ ಸೇರಿದಂತೆ ಹಲವು ವೈದ್ಯಕೀಯ ಚಿಕಿತ್ಸೆಗಳನ್ನು ನೀಡಲಾಗುತ್ತದೆ. ಬೆನ್ನು ನೋವು ಬಂದ ಬಳಿಕ ಚಿಕಿತ್ಸೆ ಪಡೆಯುವ ಬದಲು ಬಾರದಂತೆ ನೋಡಿಕೊಳ್ಳುವುದು ಮುಖ್ಯವಾಗಿರುತ್ತದೆ. ಆದ್ದರಿಂದ ಬೆನ್ನು ನೋವು ತಡೆಗೆ ಅನುಕೂಲವಾಗುವಂತೆ ಕೆಲವು ವ್ಯಾಯಾಮಗಳನ್ನು ಮಾಡುವುದು ಒಳ್ಳೆಯ ಅಭ್ಯಾಸವಾಗಿದೆ.

ಬೆನ್ನಿನ ಸ್ನಾಯು ದುರ್ಬಲವಾದರೆ ಬೆನ್ನು ನೋವು ಕಾಣಿಸುತ್ತದೆ. ಹೀಗಾಗಿ ಸ್ನಾಯುಗಳನ್ನು ಬಲಪಡಿಸುವ ಕೆಲಸವನ್ನು ವ್ಯಾಯಾಮದ ಮೂಲಕ ಮಾಡುವುದು ಅತಿ ಮುಖ್ಯವಾಗಿದೆ. ವೈದ್ಯರು ಶಿಫಾರಸ್ಸು ಮಾಡಿದ ಮೂರು ವ್ಯಾಯಾಮಗಳು ಮತ್ತು ಒಂದಷ್ಟು ಸಲಹೆಗಳು ಬಹುಶಃ ಬೆನ್ನು ನೋವಿನಿಂದ ಬಳಲುವವರಿಗೆ ಅಥವಾ ಬೆನ್ನು ನೋವು ಬಾರದಂತೆ ತಡೆಯುವವರಿಗೆ ಅನುಕೂಲವಾಗಲಿದೆ.

ವ್ಯಾಯಾಮ ಮಾಡುವವರು ಕಾಲುಗಳನ್ನು ನೇರವಾಗಿಸಿ ಅಂಗಾತ ಮಲಗಬೇಕು. ಕೈಗಳನ್ನು ಪಕ್ಕದಲ್ಲಿಟ್ಟುಕೊಳ್ಳಬೇಕು. ಆ ನಂತರ ಮಂಡಿಯನ್ನು ಮೇಲೆತ್ತುತ್ತಾ ನಿಧಾನವಾಗಿ ಎದೆಯ ಕಡೆಗೆ ತರಬೇಕು. ಹೀಗೆ ಹತ್ತು ಬಾರಿ ಮಾಡಬೇಕು.

ಎರಡನೆಯದರಲ್ಲಿ ಮಂಡಿಗಳನ್ನು ಮಡಚಿ, ಪಾದಗಳನ್ನು ನೆಲಕ್ಕೂರಬೇಕು ಆ ನಂತರ ಮಡಚಿದ ಟವೆಲ್ ಮೇಲೆ ತಲೆಯನ್ನಿಟ್ಟು ಅಂಗಾತವಾಗಿ ಮಲಗಿ ನಿಧಾನವಾಗಿ ಕೆಳಭಾಗವನ್ನು ಮೇಲಕ್ಕೆತ್ತಿ ಇಳಿಸಬೇಕು. ಹೀಗೆ ಕನಿಷ್ಟ ಹತ್ತು ಬಾರಿ ಮಾಡಬೇಕು.

ಮೂರನೆಯ ವ್ಯಾಯಾಮದಲ್ಲಿ ಕೈಗಳು ಪಕ್ಕಗಳಲ್ಲಿ ಸಡಿಲವಾಗಿ ನೇತಾಡುವಂತೆ ನೇರವಾಗಿ ನಿಂತುಕೊಳ್ಳಬೇಕು. ಆ ನಂತರ ಭುಜಗಳನ್ನು ಹಿಂದಕ್ಕೆ ಹಿಡಿಯಬೇಕು. ಬಳಿಕ ಸೊಂಟದಿಂದ ನಿಧಾನವಾಗಿ ಮುಂದೆ ಬಾಗುತ್ತಾ ತಲೆ ಮತ್ತು ಕೈಗಳು ಮುಂದಕ್ಕೆ ಬೀಳುವಂತೆ ಮಾಡುತ್ತಾ ಕಾಲುಬೆರಳುಗಳನ್ನು ಸ್ಪರ್ಶಿಸಬೇಕು. ಹೀಗೆ ಮಾಡುವಾಗ ಮಂಡಿಗಳು ಬಾಗದಂತೆ ನೋಡಿಕೊಳ್ಳಬೇಕು. ಇದನ್ನು ಕೂಡ ಹತ್ತು ಬಾರಿ ಮಾಡಬೇಕು.

ಈ ವ್ಯಾಯಾಮಗಳನ್ನು ಒಮ್ಮೆಗೆ ಮಾಡಲು ಕಷ್ಟವಾಗುತ್ತದೆ. ಆದ್ದರಿಂದ ಪ್ರತಿದಿನವೂ ಒಂದೊಂದೇ ಹೆಚ್ಚಿಸುತ್ತಾ ಹತ್ತಕ್ಕೆ ಬಂದು ನಿಲ್ಲಿಸಬಹುದು. ಬಳಿಕ ಪ್ರತಿದಿನವೂ ಒಂದೊಂದನ್ನು ಹತ್ತತ್ತು ಬಾರಿ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದಾಗುತ್ತದೆ.

ಇವತ್ತಿನ ಪರಿಸ್ಥಿತಿಯಲ್ಲಿ ಹೆಚ್ಚಿನವರು ಹಗುರವಾದ ಕೆಲಸಗಳನ್ನೇ ಮಾಡುತ್ತಿರುತ್ತಾರೆ. ಅಂತಹವರು ಕೆಲವೊಮ್ಮೆ ಅನಿವಾರ್ಯ ಪರಿಸ್ಥಿತಿಯಲ್ಲಿ ಕಠಿಣ ಕೆಲಸಗಳನ್ನು ಮಾಡಿದಾಗ ಹಲವು ತೊಂದರೆಗಳನ್ನು ಎದುರಿಸುವುದು ಸಾಮಾನ್ಯ. ಆದ್ದರಿಂದ ಪ್ರತಿದಿನವೂ ಒಂದಲ್ಲ ಒಂದು ರೀತಿಯ ವ್ಯಾಯಾಮಗಳನ್ನು ಮಾಡುವ ಮೂಲಕ ದೇಹವನ್ನು ದಂಡಿಸಬೇಕು. ಒಂದಷ್ಟು ದೂರ ವಾಕಿಂಗ್ ಮಾಡುವುದು, ಯೋಗ, ವ್ಯಾಯಾಮಗಳನ್ನು ರೂಢಿಸಿಕೊಳ್ಳಬೇಕು ಇಲ್ಲದೆ ಹೋದರೆ ಕಾಯಿಲೆಗಳು ನಮ್ಮನ್ನು ಒಂದಲ್ಲ ಒಂದು ರೀತಿಯಲ್ಲಿ ಅಟ್ಟಿಸಿಕೊಂಡು ಬರುವುದರಲ್ಲಿ ಸಂದೇಹವಿಲ್ಲ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »