TOP STORIES:

ಬೆನ್ನು ನೋವು ಇದೆಯಾ ಹಾಗದರೆ ಈ ಸ್ಟೋರಿ ಓದಿ


ಇತ್ತೀಚೆಗಿನ ನಮ್ಮ ದೈನಂದಿನ ಚಟುವಟಿಕೆಗಳು ದೇಹವನ್ನು ನಾನಾ ರೀತಿಯಲ್ಲಿ ಕಾಡುತ್ತದೆ. ಅದರಲ್ಲಿ ಬೆನ್ನು ನೋವು ಕೂಡ ಒಂದಾಗಿದೆ. ಈ ಬೆನ್ನು ನೋವಿನಿಂದ ರಿಲ್ಯಾಕ್ಸ್ ಆಗಲು ನಾವು ಬಹಳಷ್ಟು ಸಲ ಹೆಣಗಾಡಬೇಕಾಗುತ್ತದೆ.

ಹೆಚ್ಚಿನವರು ಬೆನ್ನು ನೋವು ಕಾಡುವಾಗಲೆಲ್ಲ ನೋವು ನಿವಾರಕ ಮಾತ್ರೆ ಸೇವಿಸಿ ತಕ್ಷಣಕ್ಕೆ ಶಮನಗೊಳಿಸುವ ಪ್ರಯತ್ನ ಮಾಡುತ್ತಾರೆ. ಆದರೆ ಇದನ್ನೇ ಮುಂದುವರೆಸುವುದು ಆರೋಗ್ಯದ ದೃಷ್ಠಿಯಿಂದ ಮಾರಕ ಎಂಬುದನ್ನು ಮರೆಯಬಾರದು. ಹಾಗಾದರೆ ಬೆನ್ನು ನೋವು ಕಡಿಮೆ ಮಾಡಲು ಏನು ಮಾಡಬಹುದು ಎಂಬುದನ್ನು ನೋಡುವುದಾದರೆ ವ್ಯಾಯಾಮ ಬೆನ್ನು ನೋವು ತಡೆಗೆ ಸಹಕಾರಿ ಎನ್ನಲಾಗುತ್ತದೆ.

ಸಾಮಾನ್ಯವಾಗಿ ಬೆನ್ನು ನೋವು ಕುಳಿತು, ಬಗ್ಗಿ ಕೆಲಸ ಮಾಡುವವರಲ್ಲಿ, ದೈಹಿಕ ಶ್ರಮದ ಕೆಲಸ ಮಾಡದವರಲ್ಲಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ರಾತ್ರಿ ಮಲಗುವಾಗ ಇಲ್ಲದ ಬೆನ್ನುನೋವು ಬೆಳಿಗ್ಗೆ ಹಾಸಿಗೆಯಿಂದ ಏಳುವಾಗ ಕಾಣಿಸಿಕೊಳ್ಳಬಹುದು. ಬಹಳಷ್ಟು ಜನ ಏನೂ ಕೆಲಸ ಮಾಡದೆ ಮನೆಯಲ್ಲಿ ಕುಳಿತು ಸಮಯ ಕಳೆಯುವವರು ಕೆಲವೊಮ್ಮೆ ಬೆನ್ನು ನೋವಿನ ತೊಂದರೆ ಅನುಭವಿಸಬಹುದು.

ಬೆನ್ನು ನೋವನ್ನು ಶಮನಗೊಳಿಸಲು ಫಿಜಿಯೋಥೆರಪಿ ಸೇರಿದಂತೆ ಹಲವು ವೈದ್ಯಕೀಯ ಚಿಕಿತ್ಸೆಗಳನ್ನು ನೀಡಲಾಗುತ್ತದೆ. ಬೆನ್ನು ನೋವು ಬಂದ ಬಳಿಕ ಚಿಕಿತ್ಸೆ ಪಡೆಯುವ ಬದಲು ಬಾರದಂತೆ ನೋಡಿಕೊಳ್ಳುವುದು ಮುಖ್ಯವಾಗಿರುತ್ತದೆ. ಆದ್ದರಿಂದ ಬೆನ್ನು ನೋವು ತಡೆಗೆ ಅನುಕೂಲವಾಗುವಂತೆ ಕೆಲವು ವ್ಯಾಯಾಮಗಳನ್ನು ಮಾಡುವುದು ಒಳ್ಳೆಯ ಅಭ್ಯಾಸವಾಗಿದೆ.

ಬೆನ್ನಿನ ಸ್ನಾಯು ದುರ್ಬಲವಾದರೆ ಬೆನ್ನು ನೋವು ಕಾಣಿಸುತ್ತದೆ. ಹೀಗಾಗಿ ಸ್ನಾಯುಗಳನ್ನು ಬಲಪಡಿಸುವ ಕೆಲಸವನ್ನು ವ್ಯಾಯಾಮದ ಮೂಲಕ ಮಾಡುವುದು ಅತಿ ಮುಖ್ಯವಾಗಿದೆ. ವೈದ್ಯರು ಶಿಫಾರಸ್ಸು ಮಾಡಿದ ಮೂರು ವ್ಯಾಯಾಮಗಳು ಮತ್ತು ಒಂದಷ್ಟು ಸಲಹೆಗಳು ಬಹುಶಃ ಬೆನ್ನು ನೋವಿನಿಂದ ಬಳಲುವವರಿಗೆ ಅಥವಾ ಬೆನ್ನು ನೋವು ಬಾರದಂತೆ ತಡೆಯುವವರಿಗೆ ಅನುಕೂಲವಾಗಲಿದೆ.

ವ್ಯಾಯಾಮ ಮಾಡುವವರು ಕಾಲುಗಳನ್ನು ನೇರವಾಗಿಸಿ ಅಂಗಾತ ಮಲಗಬೇಕು. ಕೈಗಳನ್ನು ಪಕ್ಕದಲ್ಲಿಟ್ಟುಕೊಳ್ಳಬೇಕು. ಆ ನಂತರ ಮಂಡಿಯನ್ನು ಮೇಲೆತ್ತುತ್ತಾ ನಿಧಾನವಾಗಿ ಎದೆಯ ಕಡೆಗೆ ತರಬೇಕು. ಹೀಗೆ ಹತ್ತು ಬಾರಿ ಮಾಡಬೇಕು.

ಎರಡನೆಯದರಲ್ಲಿ ಮಂಡಿಗಳನ್ನು ಮಡಚಿ, ಪಾದಗಳನ್ನು ನೆಲಕ್ಕೂರಬೇಕು ಆ ನಂತರ ಮಡಚಿದ ಟವೆಲ್ ಮೇಲೆ ತಲೆಯನ್ನಿಟ್ಟು ಅಂಗಾತವಾಗಿ ಮಲಗಿ ನಿಧಾನವಾಗಿ ಕೆಳಭಾಗವನ್ನು ಮೇಲಕ್ಕೆತ್ತಿ ಇಳಿಸಬೇಕು. ಹೀಗೆ ಕನಿಷ್ಟ ಹತ್ತು ಬಾರಿ ಮಾಡಬೇಕು.

ಮೂರನೆಯ ವ್ಯಾಯಾಮದಲ್ಲಿ ಕೈಗಳು ಪಕ್ಕಗಳಲ್ಲಿ ಸಡಿಲವಾಗಿ ನೇತಾಡುವಂತೆ ನೇರವಾಗಿ ನಿಂತುಕೊಳ್ಳಬೇಕು. ಆ ನಂತರ ಭುಜಗಳನ್ನು ಹಿಂದಕ್ಕೆ ಹಿಡಿಯಬೇಕು. ಬಳಿಕ ಸೊಂಟದಿಂದ ನಿಧಾನವಾಗಿ ಮುಂದೆ ಬಾಗುತ್ತಾ ತಲೆ ಮತ್ತು ಕೈಗಳು ಮುಂದಕ್ಕೆ ಬೀಳುವಂತೆ ಮಾಡುತ್ತಾ ಕಾಲುಬೆರಳುಗಳನ್ನು ಸ್ಪರ್ಶಿಸಬೇಕು. ಹೀಗೆ ಮಾಡುವಾಗ ಮಂಡಿಗಳು ಬಾಗದಂತೆ ನೋಡಿಕೊಳ್ಳಬೇಕು. ಇದನ್ನು ಕೂಡ ಹತ್ತು ಬಾರಿ ಮಾಡಬೇಕು.

ಈ ವ್ಯಾಯಾಮಗಳನ್ನು ಒಮ್ಮೆಗೆ ಮಾಡಲು ಕಷ್ಟವಾಗುತ್ತದೆ. ಆದ್ದರಿಂದ ಪ್ರತಿದಿನವೂ ಒಂದೊಂದೇ ಹೆಚ್ಚಿಸುತ್ತಾ ಹತ್ತಕ್ಕೆ ಬಂದು ನಿಲ್ಲಿಸಬಹುದು. ಬಳಿಕ ಪ್ರತಿದಿನವೂ ಒಂದೊಂದನ್ನು ಹತ್ತತ್ತು ಬಾರಿ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದಾಗುತ್ತದೆ.

ಇವತ್ತಿನ ಪರಿಸ್ಥಿತಿಯಲ್ಲಿ ಹೆಚ್ಚಿನವರು ಹಗುರವಾದ ಕೆಲಸಗಳನ್ನೇ ಮಾಡುತ್ತಿರುತ್ತಾರೆ. ಅಂತಹವರು ಕೆಲವೊಮ್ಮೆ ಅನಿವಾರ್ಯ ಪರಿಸ್ಥಿತಿಯಲ್ಲಿ ಕಠಿಣ ಕೆಲಸಗಳನ್ನು ಮಾಡಿದಾಗ ಹಲವು ತೊಂದರೆಗಳನ್ನು ಎದುರಿಸುವುದು ಸಾಮಾನ್ಯ. ಆದ್ದರಿಂದ ಪ್ರತಿದಿನವೂ ಒಂದಲ್ಲ ಒಂದು ರೀತಿಯ ವ್ಯಾಯಾಮಗಳನ್ನು ಮಾಡುವ ಮೂಲಕ ದೇಹವನ್ನು ದಂಡಿಸಬೇಕು. ಒಂದಷ್ಟು ದೂರ ವಾಕಿಂಗ್ ಮಾಡುವುದು, ಯೋಗ, ವ್ಯಾಯಾಮಗಳನ್ನು ರೂಢಿಸಿಕೊಳ್ಳಬೇಕು ಇಲ್ಲದೆ ಹೋದರೆ ಕಾಯಿಲೆಗಳು ನಮ್ಮನ್ನು ಒಂದಲ್ಲ ಒಂದು ರೀತಿಯಲ್ಲಿ ಅಟ್ಟಿಸಿಕೊಂಡು ಬರುವುದರಲ್ಲಿ ಸಂದೇಹವಿಲ್ಲ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »