TOP STORIES:

ನೃತ್ಯಪಟು ಬಹುಮುಖ ಬಾಲ ಪ್ರತಿಭೆ ದಿಶಾ ಕೆ ಪೂಜಾರಿ


‘ಬೆಳೆಯುವ ಸಿರಿ ಮೊಳಕೆಯಲ್ಲಿ’ ಎಂಬ ಮಾತಿನಂತೆ ಚಿಕ್ಕ ವಯಸ್ಸಿನಲ್ಲೇ ಹಲವು ಪ್ರಶಸ್ತಿಗಳನ್ನು ಮುಡಿಗೆರಿಸಿ ಕೊಂಡವಳು.’ಮೂರ್ತಿ ಚಿಕ್ಕದಾದರು ಕೀರ್ತಿ ದೊಡ್ಡದು’ ಎನ್ನುವಾಗೆ ಇನ್ನೂ 11 ವರ್ಷದಲ್ಲೇ ಜಿಲ್ಲಾಮಟ್ಟ,ರಾಜ್ಯ ಮಟ್ಟದವರೆಗೆ ತನ್ನ ಪ್ರತಿಭೆಯನ್ನು ಪ್ರದರ್ಶಿಸಿ ಸೈ ಎನಿಸಿಕೊಂಡು,ಸಾಧನೆಯ ಹಾದಿಯಲ್ಲಿ ಹೆಜ್ಜೆಗಳನ್ನಿಡುತ್ತ ಸಾಗುತ್ತಿರುವ ಹೆಮ್ಮೆಯ ನೃತ್ಯಪಟು ಬಹುಮುಖ ಬಾಲ ಪ್ರತಿಭೆ ದಿಶಾ.ಕೆ.ಪೂಜಾರಿ.

ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕೇಶವ ಪೂಜಾರಿ ಮತ್ತು ರಾಜೀವಿ.ಕೆ ದಂಪತಿಗಳ ಮೊದಲನೆ ಸುಪುತ್ರಿಯಾಗಿ 6/10/2009ರಲ್ಲಿ ಜನಿಸಿದರು. ಒಂದು ಸಹೋದರ ಒಳಗೊಂಡ ಚಿಕ್ಕ ಸಂಸಾರ ಇವರದ್ದು. ಪ್ರಸ್ತುತ ಪ್ರಾಥಮಿಕ ವಿದ್ಯಾಭ್ಯಾಸವನ್ನು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಕಲಿಯುತ್ತಿದ್ದಾಳೆ.

ಚಿಕ್ಕ ವಯಸ್ಸಿನಲ್ಲೇ ನೃತ್ಯದಲ್ಲಿ ಆಸಕ್ತಿ ಇದ್ದ ಇವರು, ಈಗಾಗಲೇ 500 ಮಿಕ್ಕಿ ವೇದಿಕೆಯಲ್ಲಿ ತನ್ನ ಕಲೆಯನ್ನು ಪ್ರದರ್ಶಿಸಿದ್ದಾರೆ.ಇಷ್ಟೇ ಅಲ್ಲದೆ ಯಕ್ಷಗಾನ,ನಾಟಕ,ಚಿತ್ರಕಲೆ,ಯೋಗ,ಭರತನಾಟ್ಯ,ಸಂಗೀತ ಮತ್ತು ನಿರೂಪಣೆ ಕ್ಷೇತ್ರದಲ್ಲು ಮುಂಚೂಣಿಯಲ್ಲಿರುವುದು ಇವರಲ್ಲಿ ಇರುವ ಪ್ರತಿಭೆಗೆ ಸಾಕ್ಷಿಯಾಗಿದೆ. ಚಿಕ್ಕ ವಯಸ್ಸಿನಲ್ಲೇ ಹತ್ತು-ಹಲವು ಸಂಘ-ಸಂಸ್ಥೆಗಳು ಸನ್ಮಾನಗಳು ಇವರ ಮಡಿಲಿಗೆ ಸೇರಿದೆ. ಸ್ಥಳೀಯ ಟಿ.ವಿ ಚಾನೆಲ್ ಗಳು ನಡೆಸಿದ ಡ್ಯಾನ್ಸ್ ಸ್ಪರ್ಧೆಯಲ್ಲಿ ಪಾಲ್ಗೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ‘ರಾರಾಸಂ ಫೌಂಡೇಶನ್ ರವರು ನಡೆಸಿದ ಡ್ಯಾನ್ಸ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಹಾಗೂ ಯುವವಾಹಿನಿ ನಡೆಸುವ ‘ಡೆನ್ನಾನ ಡೆನ್ನಾನ’ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಜನರ ಮನಸ್ಸನ್ನು ಗೆದ್ದ ಹೆಮ್ಮೆಯ ಬಾಲ ಸಾಧಕಿ.#Namma Tv ಚಾನೆಲ್ ನಡೆಸಿದ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಮತ್ತು ‘ಬಿಟ್ ದಿ ಬಿಟ್’ ನೃತ್ಯ ಸ್ಪರ್ಧೆಯಲ್ಲಿ, ‘ವಾಯ್ಸ್ ಝೊನ್’ ಏರ್ಪಡಿಸಿದ ‘ನಮ್ಮ ಡ್ಯಾನ್ಸ್ ಚಾಂಪಿಯನ್’ ಟಿ.ವಿ ಶೋನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ.

#Bodhi media ಆಯೋಜಿಸಿದ “ಗೋಲ್ಡನ್ ಬುಕ್ ಆಪ್ ವರ್ಲ್ಡ್ ರೆಕಾರ್ಡ್” ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಮಾಣ ಪತ್ರ ಗಳಿಸಿದ್ದಾರೆ. “ಡ್ಯಾನ್ಸ್ ಮಾಡಿ ಬಹುಮಾನ ಗೆಲ್ಲಿರಿ” ಎನ್ನುವ ವಿಭಿನ್ನ ಡ್ಯಾನ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ ಕೀರ್ತಿ ಈ ಬಾಲ ಪ್ರತಿಭೆಯದ್ದು, ಇಷ್ಟೇ ಅಲ್ಲದೆ ಮಾಜಿ ಸಚಿವರಾದ ರಮನಾಥ ರೈರವರಿಂದ ಸನ್ಮಾನವನ್ನು ಗಿಟ್ಟಿಸಿಕೊಂಡು,ಹೆಗ್ಗಳಿಕೆ ಮಾತುಗಳನ್ನಾಡಿ,ಶುಭ ಹಾರೈಸಿದ್ದಾರೆ. ಕನ್ನಡ ಚಲನಚಿತ್ರದಲ್ಲಿ ಬಾಲ ನಟಿಯಾಗಿ ಬಣ್ಣ ಹಚ್ಚಿ ನಟನೆ ಮಾಡಿರುವುದು ಇವರ ಸಾಧನೆಯ ದೊಡ್ಡ ಹೆಜ್ಜೆ ಆಗಿದೆ ಮತ್ತು ಈ ಚಲನಚಿತ್ರಯು ಸಾಧ್ಯದಲ್ಲೆ ಬಿಡುಗಡೆಗೊಳ್ಳಲಿದೆ.ಚಿಕ್ಕ ವಯಸ್ಸಿನಲ್ಲೇ ಹಲವು ಶಾರ್ಟ್ ಫಿಲ್ಮ್ ಮತ್ತು ಆಲ್ಬಮ್ ಸಾಂಗ್ ನಲ್ಲಿ ಪಾತ್ರಗಳನ್ನು ಮಾಡಿ ನಟನೆಯಲ್ಲು ತಮ್ಮ ಛಾಪುನ್ನು ಮೂಡಿಸಿದ್ದಾರೆ.

ಹತ್ತು ಹಲವು ಪ್ರಶಸ್ತಿ,ಸನ್ಮಾನಗಳನ್ನು ಬಾಚಿಕೊಂಡಿರುವ ದಿಶಾರವರು ಮತ್ತು ಈಗಾಗಲೇ ಹಲವು ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಇವರು ಪ್ರಸ್ತುತ ‘ಶ್ರೀ ಚಿಂತಾಮಣಿ ಡ್ಯಾನ್ಸ್ ಗ್ರೂಪ್’ ಕಡೇಶಿವಾಲಯದ ತಂಡದ ನಾಯಕ ಮತ್ತು ಕೋರಿಯೊಗ್ರಾಪರ್ ಆದ ಮಹೇಶ್ ಕುಲಾಲ್ ಇವರಿಂದ ನೃತ್ಯವನ್ನು ಅಭ್ಯಾಸ ಮಾಡುತ್ತಿದ್ದಾರೆ.

 

ನಿಮ್ಮೆಲ್ಲಾ ಕನಸು ನನಸಾಗಲಿ,ಸಾಧನೆಯ ಶಿಖರವು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ,ಸಾಧನೆಯ ಹಾದಿ ಸುಗಮವಾಗಲಿ,ಇನ್ನಷ್ಟು ಅವಕಾಶಗಳು ನಿಮ್ಮ ಮಡಿಲಿಗೆ ಸೇರಲಿ,ಪ್ರಶಸ್ತಿ ಪುರಸ್ಕಾರಗಳು ನಿಮಗೆ ಹರಸಿ ಬರಲಿ ಎನ್ನುವ ಶುಭಾಶಯಗಳೊಂದಿಗೆ,ನೃತ್ಯ ಲೋಕದಲ್ಲಿ ಇನ್ನೂ ಎತ್ತರದ ಸ್ಥಾನಕ್ಕೇರಲು ಈ ಪ್ರತಿಭೆಯನ್ನು ಹರಸಿ,ಹಾರೈಸಿ,ಆರ್ಶಿವಾದಿಸೋಣ ಎನ್ನುವ ಕೋರಿಕೆ.

✍ ರಾಜೇಶ್ ಎಸ್ ಬಲ್ಯ


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »