TOP STORIES:

FOLLOW US

ಪ್ರತಿಭೆಗಳ ಪರಿಚಯದಲ್ಲಿಂದು ಹೇಳ ಹೊರಟಿರುವುದು ಒಂದೇ ಕುಟುಂಬದ ಇಬ್ಬರು ಕಲಾ ಪ್ರತಿಭೆಗಳ ಕುರಿತು.


ನೆಟ್ಟಣಿಗೆ ,ಮುಳ್ಳೇರಿಯಾದ ರತ್ನಾಕರ್ , ನಿಶಾ ದಂಪತಿಗಳ ಮಕ್ಕಳಾದಂತಹಪ್ರತೀತಿ ಹಾಗೂ ಈಕೆಯ ಅಣ್ಣ ಪ್ರಥಮ್ ಇಬ್ಬರು ಕೂಡ ಬಹುಮುಖ ಪ್ರತಿಭೆಗಳಾಗಿದ್ದು ಕೊಂಡು ಹಲವಾರು ಸಂಘ-ಸಂಸ್ಧೆಗಳಲ್ಲಿ ತಮ್ಮ‌ಕಲಾ ಪ್ರತಿಭೆಯನ್ನು ಪ್ರದರ್ಶಿಸಿರುತ್ತಾರೆ.

ಹೆಸರು: ಪ್ರತೀತಿ ಪೂಜಾರಿ ನೆಟ್ಟಣಿಗೆ ಇವಳು ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆ ಈಶ್ವರಮಂಗಳ , ಇಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿದ್ದಾಳೆ..
ಮೊದಲೇ ಹೇಳಿದಂತೆ ಇವಳು ಬಹುಮುಖ ಪ್ರತಿಭೆಯಾಗಿದ್ದುಕೊಂಡು ತಮ್ಮ ಸಣ್ಣ ವಯಸ್ಸಿನಲ್ಲಿಯೇ ನೃತ್ಯ , ಭರತನಾಟ್ಯ , ಯಕ್ಷಗಾನ , ಸಂಗೀತ ದಲ್ಲಿ ಆಸಕ್ತಿ ವಹಿಸಿಕೊಂಡು ಹಲವಾರು ವೇದಿಕೆಯಲ್ಲಿ , ನೃತ್ಯ ಪ್ರದರ್ಶನ ಮಾಡಿದ್ದಾಳೆ.

ಭರತನಾಟ್ಯ ವನ್ನು ವಿದುಷಿ ವಿದ್ಯಾಲಕ್ಷ್ಮಿ ಕುಂಬ್ಲೆ ಇವರಿಂದ ಕಲಿಯುತ್ತಿದ್ದಾಳೆ. ಯಕ್ಷಗಾನವನ್ನು ಗುರುಗಳಾದ ಶಶಿಧರ ಬಜಾಕೆರೆ ಇವರಿಂದ ಅಭ್ಯಾಸಿಸುತ್ತಿದ್ದಾಳೆ. ಈಗಾಗಲೇ “ಗಿರಿಜಾ ಕಲಾಣ್ಯ” ಯಕ್ಷಗಾನದಲ್ಲಿ ಷಣ್ಮುಖ ನಾಗಿಯೂ, “ಮೆದಿನಿ ನಿರ್ಮಾಣ ಮಹಿಷಮರ್ದಿನೀ” ಯಕ್ಷಗಾನದಲ್ಲಿ ಯಕ್ಷನಾಗಿಯೂ ಅದ್ಬುತ ಪ್ರದರ್ಶನವನ್ನು ನೀಡಿರುವುದರ ಮುಖೇನವಾಗಿ ಇವಳ ಈ ಪಾತ್ರವನ್ನು ಮೆಚ್ಚಿ ಸಂಘಸಂಸ್ಥೆಯವರು ಅಭನಂದಿಸಿದ್ದಾರೆ.

ಇದಿಷ್ಟೇ ಅಲ್ಲದೇ ಶಾಲೆಯಲ್ಲಿ ನಡೆಯುವ ಪ್ರತಿಯೊಂದು ಸ್ಬರ್ಧೆಯಲ್ಲಿ ಸ್ವರ್ಧಿಸಿ , ಪ್ರತಿಯೊಂದು ಚಟುವಟಿಕೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಪಡೆದುಕೊಳ್ಳುತ್ತಾಳೆ. ಅಲ್ಲದೇ ಕಲಿಕೆಯಲ್ಲಿಯೂ ಮುಂದಿರುವ ಇವಳು ಆಟೋಟ ದಲ್ಲಿ ಭಾಗವಹಿಸಿ ಬಹುಮಾನ ತನ್ನದಾಗಿಸಿಕೊಂಡಿದ್ದಾಳೆ. Lock down ಸಮಯದಲ್ಲಿ ಒಂದು ವರ್ಷದಿಂದ online ನ ಸ್ಬರ್ಧೆಯಲ್ಲಿಯೂ ಭಾಗವಹಿಸಿರುತ್ತಾಳೆ. ಹೀಗೆ ಗಡಿನಾಡಿನ ಪ್ರತಿಭೆ ಪ್ರತೀತಿಯೂ ಇನ್ನು ಹೆಚ್ಚು ಹೆಚ್ಚು ಸಾಧನೆಯನ್ನು ಮಾಡುವಂತಾಗಲಿ ಶುಭವಾಗಲಿ.

ಹೆಸರು:ಪ್ರಥಮ್ ಪೂಜಾರಿ ನೆಟ್ಟಣಿಗೆ ಇವನು ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ಕಲಿಯುತ್ತಿದ್ದಾನೆ. ಇವನಿಗೆ ದೊಡ್ಡವನಾದ ಮೇಲೆ ಸೇನೆಗೆ ಸೇರಬೇಕೆಂಬ ಕನಸಿದೆ. ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿರುವ ಪ್ರಥಮ್ ಹಲವಾರು ವೇದಿಕೆಗಳಲ್ಲಿ, ನೃತ್ಯ, ಯಕ್ಷಗಾನ, ಕರಾಟೆ ಕಾರ್ಯಕ್ರಮ ಕೊಟ್ಟಿದ್ದಾನೆ.

ಆಟೋಟದಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದು.. ತಾಲೂಕು ಮಟ್ಟದಲ್ಲಿ ಭಾಗವಹಿಸಿದ್ದಾನೆ..7ನೇ ತರಗತಿಯಲ್ಲಿ ಶಾಲೆಯಲ್ಲಿ ಚಾಂಪಿಯನ್ ಶಿಪ್ ಪಡೆದು ಕೊಂಡಿದ್ದಾನೆ.. ಇನ್ನೂ ಹಲವಾರು ಚಟುವಟಿಕೆ ಯಲ್ಲೂ ಭಾಗವಹಿಸಿ ಬಹುಮಾನ ಪಡೆದುಕೊಂಡಿದ್ದಾನೆ. Online ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದಾನೆ. ಇನ್ನು ಮುಂದೆಯು ಕೂಡ ಹೆಚ್ಚು ಹೆಚ್ಚು ಸಾಧನೆಯನ್ನು ಮಾಡುವಂತಾಗಲಿ.

ಕಲೆಯನ್ನು ಯಾರು ಪ್ರೀತಿಸುವರೋ , ಕಲೆ ಅವರಿಗೆ ತಾನಾಗಿಯೇ ‌ಒಲಿದು ಬರುತ್ತದೆ.. ಅಂತೆಯೇ ಇಂದು ಈ ಇಬ್ಬರು ಕಲಾ ಪ್ರತಿಭೆಗಳನ್ನು ಪರಿಚಯಿಸುದರ ಜೊತೆಗೆ ಈ ಲೇಖನದ ಮೂಲಕ ಇವರ ಪ್ರತಿಭೆಗೆ ಪ್ರೋತ್ಸಾಹದ ಬೆಳಕಾಗುವ ಉದ್ದೇಶ ವಾಗಿದೆ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »