TOP STORIES:

FOLLOW US

ಬೈಂದೂರು: 4000ಕ್ಕೂ ಅಧಿಕ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದ ಯುವ ಉದ್ಯಮಿ


ಬೈಂದೂರು: ಕೊರೊನಾ 2ನೇ ಅಲೆ ಅದೆಷ್ಟೋ ಬಡ ಕುಟುಂಬಗಳ ನೆಮ್ಮದಿಯನ್ನೆ ಕಸಿದುಕೊಂಡಿದೆ. ಕಳೆದ 45 ದಿನಗಳ ಪೂರ್ಣ ಲಾಕ್ ಡೌನ್ ಸಮಯದಲ್ಲಿ ಸಾವಿರಾರು ಕುಟುಂಬಗಳಿಗೆ ದಿನದ ತುತ್ತಿಗಾಗಿ ಪರದಾಡಿದ ಉದಾಹರಣೆಗಳಿವೆ. ಅಂದಿನ ಸಂಪಾದನೆಯಿಂದ ಆ ದಿನದ ನಿರ್ವಹಣೆ ಮಾಡುತ್ತಿದ್ದ ಕುಟುಂಬಗಳಿಗೆ ಲಾಕ್ ಡೌನ್‍ನಿಂದ ಕೂಲಿ ಕೆಲಸ ಸಿಗದೆ ಅತಂತ್ರರಾಗಿರಬೇಕಾದ ಸ್ಥಿತಿ ನಿರ್ಮಾಣವಾಯಿತು. ಸರ್ಕಾರವೇನು ಪಡಿತರ ನೀಡಿತ್ತಾದರೂ ಅದಕ್ಕೆ ದಿನಸಿ ಸಾಮಾಗ್ರಿಗಳನ್ನು ಖರೀದಿಸಲು ಹಣವಿಲ್ಲದೆ ಅಸಹಾಯಕವಾದ ಕುಟುಂಬಗಳು ಹಲವು. ಈ ಸಂದರ್ಭದಲ್ಲಿ ಬಡ ಜನರಿಗೆ ತನ್ನಿಂದಾದ ಸಹಾಯ ನೀಡಲು ಮುಂದಾದರು ಉದ್ಯಮಿ ಗೋವಿಂದ ಬಾಬು ಪೂಜಾರಿಯವರು.

ಬೈಂದೂರು ಬಿಜೂರಿನವರಾದ ಗೋವಿಂದ ಬಾಬು ಪೂಜಾರಿ ಅವರು ನಿಜಾರ್ಥದಲ್ಲಿ ಬಡವರ ಬಂಧು. ಸದಾ ಬಡವರ, ದೀನ ದುರ್ಬಲರು, ನಿರ್ಗತಿಕರು, ಅಸಾಹಯಕರ ಕಂಡರೆ ಅದೇನೋ ಕನಿಕರ. ಹೃದಯ ಶ್ರೀಮಂತಿಕೆ ಮೂರ್ತಿವೆತ್ತ ಗೋವಿಂದ ಬಾಬು ಪೂಜಾರಿಯವರು ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದರೂ ಕೂಡಾ ತನ್ನೂರಿನ ಜನರ ಕಣ್ಣೀರು ಒರೆಸುವುದರಲ್ಲಿ ಸದಾ ಮುಂದೆ. ಕೊರೊನಾ 2ನೇ ಅಲೆಯ ಸಂದರ್ಭದಲ್ಲಿ ಬೈಂದೂರು ಕ್ಷೇತ್ರ ವ್ಯಾಪ್ತಿಯ ಜನರ ನೆರವಿಗೆ ನಿಂತ ಇವರು ಕಳೆದ ಒಂದು ವಾರದಿಂದ ಶ್ರೀ ವರಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುಮಾರು 4000ಕ್ಕೂ ಹೆಚ್ಚಿನ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದ್ದಾರೆ.

ಬೈಂದೂರು ಕ್ಷೇತ್ರ ವ್ಯಾಪ್ತಿಯ ಹಳ್ಳಿ ಹಳ್ಳಿಯ ಗ್ರಾಮೀಣ ಪ್ರದೇಶಗಳಿಗೆ ತಾನೇ ಖುದ್ದಾಗಿ ಭೇಟಿ ನೀಡಿ ತನ್ನ ಕೈಯಾರೆ ಕಿಟ್ ವಿತರಿಸಿದ್ದಾರೆ. ಪ್ರತಿ ಗ್ರಾಮದಲ್ಲಿಯೂ ಈಗ ಜಿ.ಬಿ.ಪಿ (ಗೋವಿಂದ ಬಾಬು ಪೂಜಾರಿ ಜನಸೇವಾ ಸಂಘ) ವಿದ್ದು ಆ ಸಂಘದ ಮೂಲಕ ಸ್ಥಳೀಯ ಪ್ರದೇಶದಲ್ಲಿ ಆರ್ಹ ಕುಟುಂಬಗಳನ್ನು ಗುರುತಿಸಿ ಆ ಕುಟುಂಬಗಳಿಗೆ ಅಗತ್ಯ ಆಹಾರ ಪದಾರ್ಥಗಳ ಕಿಟ್ ನೀಡಿದ್ದಾರೆ. ಈಗಾಗಲೇ ಬೈಂದೂರು ಕ್ಷೇತ್ರ ವ್ಯಾಪ್ತಿಯ 66 ಗ್ರಾಮಗಳ 4 ಸಾವಿರ ಅಧಿಕ ಮಂದಿಗೆ ಕಿಟ್ ವಿತರಿಸಿದ್ದಾರೆ.

ಇಷ್ಟಕ್ಕೆ ಇವರ ಸೇವಾಧರ್ಮ ನಿಂತಿಲ್ಲ. ಬೇಸಿಗೆಯಲ್ಲಿ ಉಪ್ಪುಂದ, ತಾರಾಪತಿ ಸೇರಿದಂತೆ 470 ಮನೆಗಳಿಗೆ ಕುಡಿಯುವ ನೀರು ಸರಬರಾಜು ಮಾಡಿದ್ದಾರೆ. ತೀರ ಬಡ ಕುಟುಂಬಗಳು ಸೂರು ಹೊಂದಲು ಕಷ್ಟ ವ್ಯಕ್ತ ಪಡಿಸಿದಾಗ ಸ್ಪಂದಿಸಿದ ಇವರು ತಾನೇ ಮನೆ ನಿರ್ಮಾಣ ಮಾಡಿಕೊಡುವ ಆಶ್ವಾಸನೆವಿತ್ತು. ಈಗಾಗಲೇ ಶ್ರೀ ವರಮಹಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ 3 ಮನೆಗಳ ನಿರ್ಮಾಣ ಮಾಡಿದ್ದಾರೆ. ಶೀಘ್ರ ಅದರ ಪ್ರವೇಶೋತ್ಸವವೂ ನಡೆಯಲಿದೆ.

ಇವರ ಉದ್ಯಮ ಕ್ಷೇತ್ರವಿರುವುದು ಬೆಂಗಳೂರಿನಲ್ಲಿ. ಅಲ್ಲಿಯೂ ಕೂಡಾ ಕೊರೊನಾ 2ನೇ ಅಲೆಯಿಂದ ಸಮಸ್ಯೆಗಿಡಾದವರಿಗೆ ಸ್ಪಂದಿಸಿದ್ದಾರೆ. ಆಶಾ ಕಾರ್ಯಕರ್ತೆಯರು, ಬಿಬಿಎಂಒಪಿಯ ಪೌರ ಕಾರ್ಮಿಕರಿಗೆ ಆಹಾರ ಸಾಮಾಗ್ರಿಯ ಕಿಟ್ ವಿತರಿಸಿದ್ದಾರೆ.

ಕಳೆದ ವರ್ಷ ತನ್ನೂರಿನ ಬಡ ಕುಟುಂಬವೊಂದಕ್ಕೆ ಮನೆ ನಿರ್ಮಿಸಿ ಹಸ್ತಾಂತರಿಸಿದ್ದರು. 300 ಅಧಿಕ ಮನೆಗಳಿಗೆ 2 ತಿಂಗಳು ಶುದ್ದ ಕುಡಿಯುವ ನೀರು ಸರಬರಾಜು ಮಾಡಿದ್ದರು. ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿಯೂ ಕೂಡಾ ಕೊರೊನಾ ವಾರಿಯರ್ಸ್ ಹಾಗೂ ಬಡ ಕುಟುಂಬಗಳಿಗೆ ನೆರವು ನೀಡಿದ್ದರು.

ಶೆಫ್ಟಾಕ್ ಫುಡ್ ಹಾಗೂ ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈವೆಟ್ ಲಿಮಿಟೆಡ್ ಸಂಸ್ಥಾಪಕರು ಮತ್ತು ಆಡಳಿತ ನಿರ್ದೇಶಕರಾಗಿರುವ ಇವರು, ಶೆಫ್ಟಾಕ್ ನ್ಯೂಟ್ರಿಫುಡ್ ಪ್ರೈ.ನ ಆಡಳಿತ ನಿರ್ದೇಶಕರು, ಪ್ರಗ್ನ್ಯಾ ಸಾಗರ್ ಹೋಟೆಲ್ಸ್ ಹಾಗೂ ರೆಸಾರ್ಟ್ ಪ್ರೈ. ಲಿ. ಮತ್ತು ಮತ್ಯ ಬಂಧನ ಪ್ರೈ. ಲಿ.ನ ಆಡಳಿತ ನಿರ್ದೇಶಕರು. ಶೆಫ್ಟಾಕ್ ಕ್ಯಾಟರಿಂಗ್ ಸರ್ವಿಸಸ್‍ನ ಮಾಲಕರು ಆಗಿರುವ ಇವರು ಹಲವಾರು ಸಂಸ್ಥೆಗಳ ಪ್ರಮುಖ ಜವಾಬ್ದಾರಿಯುತ ಹುದ್ದೆಗಳನ್ನು ನಿರ್ವಹಿಸುತ್ತಿದ್ದಾರೆ.

 


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »