TOP STORIES:

ಕಲಾವಿದರ ಕಣ್ಮಣಿ ‘ರಂಜು ತುಳುರಂಗ ಪ್ರೇಮಿ’


ಓರ್ವ ಕಲಾವಿದನಿಗೆ ಕಲೆಯೇ ತನ್ನ ಬಣ್ಣದ ಪ್ರಪಂಚವಾದರೆ , ಇನ್ನೊಂದೆಡೆ ಆ ಕಲಾವಿದರ ಏಳಿಗೆಯೇ ತನ್ನ ಜಗತ್ತು ಮತ್ತವರ ಆಶೀರ್ವಾದನೇ ತನಗೆ ಶ್ರೀ ರಕ್ಷೆ ಎಂದುಕೊಂಡು ರಂಜಿತ್ ಕಕ್ಕಿಂಜೆ ಇವರು ಕಾರ್ಯಪ್ರವೃತ್ತರಾಗಿದ್ದಾರೆ. ರಂಗಸೇವಕರಿಗೆ ಈ ಸಮಾಜದಲ್ಲಿ ಒಂದೊಳ್ಳೆ ಸ್ಥಾನ ಸಿಗಬೇಕೆಂಬ ಆಶಯದಿಂದ ತನ್ನ ತುಳುವನಾಡಿಗೆ ದುಡಿಯುತ್ತಿರುವ ಇವರು, ತುಳುನಾಡಿನೆಲ್ಲೆಡೆ ಇವರು ‘ರಂಜು ತುಳುರಂಗ ಪ್ರೇಮಿ’ ಎಂದೇ ಜನರಿಗೆ ಚಿರಪರಿಚಿತರಾಗಿದ್ದಾರೆ.

ವಸಂತ್ ಪೂಜಾರಿ ಮತ್ತು ಉಷಾ ದಂಪತಿಯ ಸುಪುತ್ರನಾದ ಇವರು ಐಟಿಐ ಪದವೀಧರ , ಪ್ರಸ್ತುತ ಸೌದಿ ಅರೇಬಿಯಾದ ಅಬ್ಹಾ ಏರ್ಪೋಟ್ ನಲ್ಲಿ ಗ್ರೌಂಡ್ ಸಪೋರ್ಟ್ ಸೆರ್ವಿಸಸ್ ಮೈಂಟೈನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಣ್ಣದ ಲೋಕದ ಕಲಾವಿದನಾಗಿ,ನಾಟಕರಂಗದ ನಿರ್ದೇಶಕನಾಗಿ , ಭಜನಕಾರನಾಗಿ, ಗಾಯಕನಾಗಿ, ಯುವ ಪ್ರತಿಭೆಗಳಿಗೆ ಪ್ರೋತ್ಸಾಹಿಸುವ ಬರಹಗಾರನಾಗಿ , ಸಾಹಿತಿಯಾಗಿ ಹೀಗೆ ಸಕಲ ಕಲೆಗಳನ್ನು ಹೊಂದಿರುವ ಪ್ರತಿಭಾನ್ವಿತ ಸಾಧಕರಿವರು.

ಬಾಲ್ಯದಿಂದಲೇ ಭಜನೆಯ ಮೇಲಿನ ಒಲವು:

ಬಾಲ್ಯದಿಂದಲೇ ಇವರು ಉಳ್ಳಾಲ್ತಿ ಭಜನಾ ಮಂಡಳಿ, ಅರಂತಬೈಲಿನಲ್ಲಿ ದೇವರ ನಾಮಸ್ಮರಣೆ ಮಾಡಿಕೊಂಡು ಬಂದವರು.ಭಜನೆಯ ಮೇಲಿನ ಅಪಾರ ಪ್ರೀತಿಯಿಂದಾಗಿ ಇವರು ತನ್ನ ಊರಿನಲ್ಲೇ ಒಂದು ಭಜನಾ ತಂಡವನ್ನು ಕಮಲಾಕ್ಷ ಪೂಜಾರಿಯವರ ಪ್ರೋತ್ಸಾಹದಿಂದ ‘ಶ್ರೀ ಶಬರಿ ಭಜನಾ ಮಂಡಳಿ’ ಯನ್ನು ತೋಟತ್ತಾಡಿಯಲ್ಲಿ ಕಟ್ಟಿದರು. ಊರು ಬಿಟ್ಟು ಕೆಲಸದ ನಿಮಿತ್ತವಾಗಿ ಬೆಂಗಳೂರಿಗೆ ಹೋದವರು ಅಲ್ಲೂ ‘ಮಕರ ಶ್ರೀ ಭಜನಾ ಮಂಡಳಿ’ ಯನ್ನು ಹೊಸಳ್ಳಿಯ ಬಾಲಗಂಗಾಧೇಶ್ವರ ದೇವಸ್ಥಾನದಲ್ಲಿ ರಚಿಸಿದರು ಹಾಗೂ ಮದು ಬಂಗೇರ ಕಲ್ಲಡ್ಕ ಮತ್ತು ಕಿಶನ್ ಪೂಜಾರಿ ಯವರೊಂದಿಗೆ ಕೂಡಿ ‘ಯುವವಾಹಿನಿ ಬೆಂಗಳೂರು ಘಟಕ’ ವನ್ನು ಸ್ಥಾಪಿಸಿ ಅದರ ಸಾಂಸ್ಕೃತಿಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದರು.

ರಂಗಪ್ರೇಮಿಯ ಮನದ ಮಾತು:

“ನಾನು ಬರಹಗಾರನಲ್ಲ ಅಭಿಮಾನಿ.ಕಲಾವಿದರ ಪ್ರೀತಿ ಅಭಿಮಾವೇ ನನ್ನ ಬರಹದ ಘಳಿಕೆ ಮತ್ತು ಶ್ರೀರಕ್ಷೆ.ಕಲಾಕ್ಷೇತ್ರದಲ್ಲಿ ನಿರಂತರ ಸೇವೆಗೈಯುವ ಕಲಾವಿದರನ್ನು ಸಮಾಜಕ್ಕೆ ಪರಿಚಯಿಸುವುದೇ ನನ್ನ ಉದ್ದೇಶ.ಇದು ನನ್ನ ಸಾಧನೆಯಲ್ಲ ಕೇವಲ ಒಂದು ಪ್ರಯತ್ನ, ತನ್ನ ಪ್ರತಿ ಕಾರ್ಯದಲ್ಲೂ ಬೆನ್ನು ತಟ್ಟಿ ಪ್ರೋತ್ಸಾಹಿಸಿದವರು ಆತ್ಮೀಯ ಮಿತ್ರ ಸುಧೀರ್ ಎಸ್.ಕೆ ಮತ್ತು ಪ್ರಸಾದ್ ಕಲ್ಲಾಜೆ ” ಎನ್ನುತ್ತಾರೆ ತುಳುರಂಗ ಪ್ರೇಮಿ.

ರಂಗಭೂಮಿಯಲ್ಲಿನ ಪರಿಣಿತಿ:

ತಾನು ಒಬ್ಬ ಕಲಾವಿದನಾಗಬೇಕೆಂಬ ಆಸೆ ಹೊಂದಿದ್ದ ಇವರು ಅವಕಾಶವಿಲ್ಲದ ಕಾರಣ ಶಬರಿ ತಂಡದ ಯುವಕರಿಗೆ ಅಭಿನಯವನ್ನು ಕಲಿಸಿ ಕಿರಣ್ ಕಕ್ಕಿಂಜೆಯವರ ಸಹಕಾರದಿಂದ ” ಬುದ್ಧಿ ಬನ್ನಗ” ಎಂಬ ತುಳು ನಾಟಕವನ್ನು ಸ್ವತಃ ಬರೆದು ನಿರ್ದೇಶಿಸಿ ಮೊದಲ ಪ್ರಯತ್ನದಲ್ಲೇ ಯಶಸ್ಸನ್ನು ಪಡೆದರು. ನಂತರ ‘ಗೌಜಿ ಗಮ್ಮತ್ತ್’ , ‘ಎನ್ನ ತಂಗಡಿ’ , ‘ಮಲ್ಲಸ್ತಿಕೆದ ಮರ್ಮಾಲ್’ , ‘ಒಂಜೆಕ್ ಒಂಜರೆ ಮಲ್ಪೊಚ್ಚಿ’ ನಾಟಕಗಳಿಗೆ ಸಾಹಿತ್ಯ ನೀಡಿ ನಿರ್ದೇಶಿಸಿ ನಟಿಸಿದ್ದಾರೆ. ಹಾಗೂ ಮೊದಲಬಾರಿಗೆ ಇವರು ‘ಗೋಲ್ಮಾಲ್’ ಎಂಬ ತುಳು ಚಲನಚಿತ್ರದಲ್ಲಿಯೂ ನವೀನ್ ಡಿ ಪಡಿಲ್ ರವರೊಡನೆ ನಟಿಸಿದ್ದಾರೆ. ತುಳುರಂಗಭೂಮಿ ಕಲಾವಿದರ ಸಲುವಾಗಿ ಇವರು ‘ಕಲಾವಿದೆರೆ ಕಡಲ್’ ವಾಟ್ಸಾಪ್ ಗ್ರೂಪ್ ರಚಿಸಿ ಒತ್ತಡದ ಕೆಲಸದ ಮಧ್ಯೆಯೂ ಕಲಾವಿದರಿಗೆ ತನ್ನ ಬರಹದ ಮೂಲಕ ಪ್ರೋತ್ಸಾಹಿಸುತ್ತಿದ್ದಾರೆ.

ಸಂದ ಗೌರವಗಳು:

ಇವರ ನಿಸ್ವಾರ್ಥ ಸೇವೆಯನ್ನು ಗಮನಿಸಿ ಯುವವಾಹಿನಿ ಬೆಂಗಳೂರು ಘಟಕದ ವತಿಯಿಂದ ಸನ್ಮಾನ ,ಮಡಿಲು ಸಂಸ್ಥೆಯಿಂದ ‘ಮಡಿಲು ಪುರಸ್ಕಾರ’, ತೆಲಿಕೆದ ತೆನಾಲಿ ಕಾರ್ಲ ತಂಡದಿಂದ “ಕಲಾವಿದೆರೆ ಕಣ್ಮಣಿ” ಎಂಬ ಬಿರುದು ಹೀಗೆ ಹತ್ತು ಹಲವು ಕಡೆ ಇವರನ್ನು ಸನ್ಮಾನಿಸಲಾಗಿದೆ.

ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ತಾನು ಹುಟ್ಟಿದ ಮಣ್ಣಿಗೆ ಋಣಿಯಾಗಿರು ಎಂಬಂತೆ, ಸದಾ ಮುಗುಳ್ನಗೆಯ ಮಾಲೀಕನಾಗಿರುವ ಇವರು ಪ್ರಸ್ತುತ ಸೌದಿ ಅರೇಬಿಯಾದಲ್ಲಿ ಕಾರ್ಯನಿರತರಾಗಿದ್ದರೂ ತುಳುನಾಡು ಹಾಗೂ ತುಳು ಭಾಷೆಯ ಮೇಲಿನ ಇವರ ಅಭಿಮಾನವನ್ನು ಒಂಚೂರು ಕುಗ್ಗಿಸದೆ ,ರಂಗಭೂಮಿ ಕಲಾವಿದರಿಗೂ ಈ ಸಮಾಜದಲ್ಲಿ ಉನ್ನತ ಸ್ಥಾನ ಸಿಗಬೇಕೆಂಬ ನಿಮ್ಮ ನಿಸ್ವಾರ್ಥ ಭಾವನೆಗೆ ನಾವೆಂದಿಗೂ ಚಿರಋಣಿ. ನಿಮ್ಮ ಈ ರಂಗಪ್ರೇಮ ಶಾಶ್ವತವಾಗಿದ್ದು ಇನ್ನಷ್ಟು ಪ್ರತಿಭೆಗಳು ನಿಮ್ಮ ಮೂಲಕ ಬೆಳಕಿಗೆ ಬರಲಿ ಎಂದು ಆಶಿಸುತ್ತಾ ಶ್ರೀ ನಾರಾಯಣ ಗುರುಗಳ ಆಶೀರ್ವಾದ ಕೋಟಿ – ಚೆನ್ನಯರ ಅನುಗ್ರಹ ಸದಾ ನಿಮ್ಮ ಮೇಲೆ ಇರಲಿ.

ಬರಹ: ಯಕ್ಷಿತಾ ಆರ್ ,ಮೂಡುಕೊಣಾಜೆ


Related Posts

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »