TOP STORIES:

ಹೆಣ್ಣು ಕೂಡ ಒಂದು ಜೀವಿ ಎಂಬುವುದನ್ನು ಇಂದಿನ ಸಮಾಜ ಮರೆತಿದೆಯೇ ?


ಹೆಣ್ಣು
“ಯತ್ರ ನಾರ್ಯಸ್ತು ಪೂಜೆಯಂತೇ ತತ್ರ ದೇವತಾ”: ಅಂದರೆ “ಎಲ್ಲಿ ಹೆಣ್ಣನ್ನು ಪೂಜೆಸುತ್ತಾರೋ ಅಲ್ಲಿ ಸಕಲ ದೇವತೆಗಳು ನೆಲೆಸುತ್ತಾರೆ” ಆದರೆ ಬೇಸರದ ಸಂಗತಿಯೆಂದರೆ ಈ ೨೧ನೆಯ ಶತಮಾನದಲ್ಲಿ ಈ ಅರ್ಥ ಅಕ್ಷರಶ: ಸುಳ್ಳುಯೆನಿಸುತ್ತಿದೆ.

ಹೆಣ್ಣನ್ನು ಪೂಜೆಮಾಡುವುದು ಬೇಡ ಕನಿಷ್ಟ ಪಕ್ಷ ಅವಳು ಒಂದು ಜೀವಿ ,ಅವಳಿಗೂ ಈ ಭೂಮಿಯಲ್ಲಿ ಅವಳ ಇಚ್ಛೆಯಂತೇ ಬದುಕಲು ಬಿಟ್ಟರೆ ಸಾಕು..

‘ಹೆಣ್ಣು ‘ಒಬ್ಬಳು ಗಂಡಿನಂತೆ ಒಂದು ಜೀವಿ ,ಅವಳಿಗೂ ಮನಸ್ಸು ,ಭಾವನೆಗಳಿವೆ,ಅವಳು ಕೇವಲ ಉಸಿರಾಡುವ ಬೊಂಬೆಯಲ್ಲ ,ಅವಳಿಗೂ ಗಂಡಿನಂತೆ ಜೀವವಿದೆ . ಇದೆನ್ನೆಲ್ಲ ಮರೆತಂತಿದೆ ಗಂಡುಕುಲ . ‘ಹೆಣ್ಣು ‘ಅಂದರೆ ಕೇವಲ ನಿಮ್ಮ ಕಾಮದ ಬಯಕೆಗಳನ್ನ ತೀರಿಸುವ ಒಂದು ಯಂತ್ರವಾಗಿ ಕಾಣುತ್ತಾಳ ? ಮತ್ತೇಕೆ..ಅವಳ ಮೇಲಿನ ದೌರ್ಜನ್ಯ ,ಅತ್ಯಾಚಾರ, ಹಿಂಸೆ ಇನ್ನು ನಿಂತಿಲ್ಲ ..ಹೆಣ್ಣನ್ನು ಅಪಹರಿಸಿದಕ್ಕೆ ,ಹೆಣ್ಣಿನ ಮಾನಭಂಗ ಮಾಡಿದ್ದಕ್ಕೆ ರಾಮಾಯಣ ,ಮಹಾಭಾರತ ಎನ್ನುವ ಮಹಾಸಂಗ್ರಾಮವೇ ನಡೆದುಹೋಯಿತು. ಆದರೆ ಇಂದು ಹೆಣ್ಣಿನ ಮೇಲೆ ಅದೆಷ್ಟೋ ದೌರ್ಜನ್ಯ, ಅತ್ಯಾಚಾರಗಳು ನಡಿದಿದೆ ನಡೆಯುತ್ತಿದೆ . ಯಾಕಂದ್ರೆ ಅವಳು ‘ಹೆಣ್ಣು’ ಎನ್ನುವ ಕಾರಣವೆ??

   (Copyrights owned by: billavaswarriors.com )

ಒಂದೇ ರಾತ್ರಿಯಲ್ಲಿ ನೋಟ್ ಬ್ಯಾನ್ ಆಗುತ್ತೆ , ಒಂದೇ ರಾತ್ರಿಯಲ್ಲಿ ಸರಕಾರ ಬದಲಾಗುತ್ತೆ ,ಒಂದೇ ದಿನದಲ್ಲಿ ಎಲ್ಲ ಚೈನೀಸ್ ಆಪ್ ಟಿವಿ ಚಾನೆಲ್ ಬ್ಯಾನ್ ಆಗುತ್ತೆ ,ಆದರೆ ಯಾಕೆ ??ವ್ಯಾಘ್ರ ಕಾಮುಕರಿಗೆ ಶಿಕ್ಷೆ ಆಗುದಿಲ್ಲ. ಯಾಕಂದ್ರೆ ಒಂದೇ ಉತ್ತರ ಅವಳು ‘ಹೆಣ್ಣು’ ಅಲ್ಲವೇ.?

ಇಂದು ಮನುಷ್ಯ ಕಾಲಿಡದ ಕ್ಷೇತ್ರವಿಲ್ಲ . ಭೂಮಿಯಲ್ಲಿ ಮಾತ್ರವಲ್ಲದೆ ಹೊಸಜಗತ್ತನ್ನು ಹುಡುಕುತ್ತ ಆಕಾಶಕ್ಕೆ ಹಾರಿದ್ದಾನೆ . ಹಲವಾರು ಅಮೋಘ ಸಾಧನೆ ಮಾಡಿದ್ದಾನೆ. ಆದರೆ ಹೆಣ್ಣಿನ ಮೇಲಿನ ಅತ್ಯಾಚಾರಗಳು ನಡೆಯುತ್ತಲೇ ಇದೆ ಕಾರಣ ಅವಳು ‘ಹೆಣ್ಣು’…

ಗಂಡುಜಾತಿಯ ರಣಹೇಡಿಗಳೇ, ವ್ಯಾಘ್ರಕಾಮುಕರೇ ..ಯಾಕೆ ನಿಮಗೆ ಇನ್ನು ಅರ್ಥವಾಗುತ್ತಿಲ್ಲ ನಿಮಗೆ ಪ್ರೀತಿ ಕೊಟ್ಟು ನಿಮ್ಮನ್ನು ಒಂಭತ್ತು ತಿಂಗಳು ಸಾಕಿ ಸಲುಹಿದ ಆ ನಿಮ್ಮ ತಾಯಿಯು ಒಬ್ಬಳು ಹೆಣ್ಣಲ್ಲವೇ . ಅವಳು (ಹೆಣ್ಣು ) ಹುಟ್ಟುವಾಗ ಅಣ್ಣ- ತಮ್ಮ ಎನ್ನುವ ಪಟ್ಟಕಟ್ಟಿ ನಿಮಗೆ ಪ್ರೀತಿ ,ಸಂತೋಷ ನೀಡುವ ಅಕ್ಕ -ತಂಗಿ ಸ್ವರೂಪವಲ್ಲವೇ ಹೆಣ್ಣು ..

ಕೊನೆ ಪಕ್ಷ ನಿಮಗೆ ಹೆಣ್ಣಿಗೆ ತಾಯಿ ,ಅಕ್ಕ ,ತಂಗಿ ಸ್ಥಾನ ನೀಡಲು ಕಷ್ಟವಾದರೇ ಬಿಡಿ..ಕನಿಷ್ಟ ಪಕ್ಷ ಅವಳು ನಿಮ್ಮಂತೆಹೇ ಮನುಷ್ಯಳು ಅವಳಿಗೂ ಒಂದು ಜೀವವಿದೆ, ಜೀವನವಿದೆ..ಸಾವಿರಾರು ಬಣ್ಣ- ಬಣ್ಣದ ಕನಸುಗಳಿವೆ ,ಆ ಕನಸುಗಳಿಗೆ ಬಣ್ಣ ಹಚ್ಚುವ ಕೆಲಸಮಾಡದಿದ್ದರು ಪರವಾಗಿಲ್ಲ ಅವಳ ರೆಕ್ಕೆ ಕತ್ತರಿಸುವ ಕೆಲಸಮಾಡದಿರು ಮನುಜ…

ಒಮ್ಮೆ ಮನುಜನಾಗು ..ಹೆಣ್ಣನ್ನು ಕೆಟ್ಟ ದ್ರಷ್ಟಿಯಿಂದ ನೋಡುವುದನ್ನು ನಿಲ್ಲಿಸು ..ಈ ಮನುಷ್ಯ ಜನುಮದಲ್ಲಿ ಮಾನವನಾಗಿ ಬಾಳು .

“ನಮ್ಮ ರಾಷ್ಟ್ರಪಿತ ಮಹಾತ್ಮಾ ಗಾಂಧಿ “ಈ ರೀತಿ ಹೇಳಿದ್ದಾರೆ “ಮಧ್ಯರಾತ್ರಿ ೧೨ಗಂಟೆಗೆ ಹೆಣ್ಣು ಹೊರಗಡೆ ಹೋಗಿ ಮನೆಗೆ ಸುರಕ್ಷಿತವಾಗಿ ಹಿಂತಿರುಗಿ ಬಂದರೆ ಆ ದಿನ ನಮಗೆ ಸ್ವಾತಂತ್ರಾ ಸಿಕ್ಕಿದೆ ಎಂದರ್ಥ”.ಒಮ್ಮೆ ಈ ಪ್ರಶ್ನೆಯನ್ನು ಮನದಲ್ಲಿ ಕೇಳಿ ನೋಡಿ ಉತ್ತರ ಪ್ರಶ್ನೆಯಾಗಿಯೇ ಉಳಿದುಬಿಡುತ್ತೆ
ಅಲ್ಲವೇ.. ಸಾಧ್ಯವಾದರೆ ಮಾತ್ರ ಮಾತ್ರ .. ಹೆಣ್ಣಿಗೆ ನಿಮ್ಮ ಬೆಂಬಲ ಸಹಾಯ ನೀಡಿ ಅದು ಬಿಟ್ಟು ಅವಳ ಮಾನಹರಣ ಮಾಡದಿರಿ ಅವಳ ಮೇಲಿನ ಅತ್ಯಾಚಾರ ನಿಲ್ಲುವ ನಿಟ್ಟಿಗೆ ಒಂದು ಪ್ರಯತ್ನ ಮಾಡಿ..ಅದು ಬಿಟ್ಟು ಅವಳ ದೌರ್ಜನ್ಯ ಮಾಡದಿರು, ಇಲ್ಲದಿದ್ದರೆ ಕೇಳು ಮನುಜ ಕಾಲ ಪಾಠ ಕಲಿಸಲು ಒಂದೊಂದು ಹೆಜ್ಜೆ ಮುಂದೆ ಇಟ್ಟಿದೆ ಪ್ರವಾಹ ,ಕರೋನ ಭೂಕಂಪ, ಪ್ರಕೃತಿ ವಿಕೋಪಗಳಿಂದ ಪಾಠ ಕಲಿಯದೇ ನೀ ಗೆದ್ದೇ ಎಂದು ಬೀಗಬೇಡ
ಮನುಜ…ಬೀಗಬೇಡ..ಕಾಲದಯೆದುರು ನೀ ತೃಣ ಸಮಾನವೆಂದು ನೆನಪಿಟ್ಟುಕೋ. ಇನ್ನಾದರೂ ಎಚ್ಚೆತ್ತಿಕೊ ಇಲ್ಲವಾದ್ರೆ ಕಾಲದ ಉಗ್ರರೂಪವ ಸಹಿಸುವ ಶಕ್ತಿ ನಿನ್ನಲ್ಲಿ ಇನ್ನು ಉಳಿದಿಲ್ಲ ಮನುಜ …ನೀ ಬದಲಾಗು ..ನೀ ಮನುಷ್ಯನಾಗಿ ಬದಲಾಗು..ಇನ್ನು ಬದಲಾಗದಿದ್ದರೆ ಕಾಲದ ಎದುರು ಸುಟ್ಟು ಭಸ್ಮವಾಗಿಬಿಡುತ್ತೀಯ.ಕಾಲ ತನ್ನ ಉಗ್ರರೂಪ ತೋರಿಸುವ ಸಮಯ ಬಹಳ ಹತ್ತಿರದಲ್ಲಿದೆ .

ರಮ್ಯಾ ಸಾಲಿಯಾನ್
ಬೋರುಗುಡ್ಡೆ, ಮೂಡಬಿದ್ರೆ

   (Copyrights owned by: billavaswarriors.com )


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »