TOP STORIES:

ಹದಿಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತ.! ಈ ಕುರಿತು ವೈದ್ಯರಿಂದ ಮಹತ್ವದ ಮಾಹಿತಿ


ಬಹಳ ದಿನಗಳಿಂದ ಇದ್ದ ಭಯವೊಂದು ನಿಧಾನವಾಗಿ ವಾಸ್ತವದ ರೂಪ ತಾಳುತ್ತಿದ್ದು, 40 ವರ್ಷ ವಯಸ್ಸಿನ ಒಳಗಿನ ಮಂದಿಯಲ್ಲೂ ಹೃದಯಾಘಾತವಾಗುವ ಸಾಧ್ಯತೆಗಳು ದಿನೇ ದಿನೇ ಹೆಚ್ಚುತ್ತಲೇ ಇದೆ.

ಪುರುಷರಲ್ಲಿ ಸಾಮಾನ್ಯವಾಗಿ 50ರ ಹರೆಯದಲ್ಲಿ ಹಾಗೂ ಮಹಿಳೆಯರಲ್ಲಿ 60ರ ಹರೆಯದಲ್ಲಿ ಹೃದಯಾಘಾತವಾಗುವ ಸಾಧ್ಯತೆ ಇದೆ ಎಂದು ಆಧುನಿಕ ವೈದ್ಯಕೀಯ ಲೋಕ ಲೆಕ್ಕಾಚಾರ ಮಾಡುತ್ತಿದ್ದ ನಡುವೆಯೇ ಈ ರೀತಿಯ ಹೊಸದೊಂದು ಆತಂಕ ಬೇರು ಬಿಡುತ್ತಿದೆ.

“40ಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನಿಧನರಾಗುವುದನ್ನು ನೋಡುವುದು ಬಹಳ ಅಪರೂಪವಾಗಿತ್ತು. ಈಗ ಆಗುತ್ತಿರುವುದನ್ನು ನೋಡಿದರೆ ನಾವೆಲ್ಲೊ ತಪ್ಪು ದಿಕ್ಕಿನಲ್ಲಿ ಸಾಗುತ್ತಿದ್ದೇವೆ ಎನಿಸುತ್ತಿದೆ,” ಎಂದು ಬೋಸ್ಟನ್‌ನಲ್ಲಿರುವ ಹಾರ್ವಡ್‌ ವೈದ್ಯಕೀಯ ಶಾಲೆಯ ಪ್ರೊಫೆಸರ್‌ ರಾನ್ ಬ್ಲಾಂಕ್‌ಸ್ಟೀನ್ ತಿಳಿಸಿದ್ದಾರೆ.

ಈ ಸಮಸ್ಯೆ ಕೇವಲ ಪಾಶ್ಚಾತ್ಯ ಜಗತ್ತಿಗೆ ಮಾತ್ರವೇ ಸೀಮಿತವಾಗಿಲ್ಲ. ಭಾರತದಲ್ಲೂ ಸಹ ಈ ರೀತಿ ದಿಢೀರ್‌ ಹೃದಯಾಘಾತಗಳಿಂದ ಸಾವು ಸಂಭವಿಸುವುದು ಬಲು ಸಾಮಾನ್ಯವಾಗುತ್ತಿದೆ. ಬಿಗ್ ಬಾಸ್ ಖ್ಯಾತಿಯ ಸಿದ್ಧಾರ್ಥ್‌ ಶುಕ್ಲಾ ಈ ಪಟ್ಟಿಗೆ ಸೇರಿದ ಹೊಸ ಹೆಸರಾಗಿದೆ ಅಷ್ಟೇ.

ಈ ಬಗ್ಗೆ ವಿವರಣೆ ಕೊಡುವ ಮುಂಬೈ ಗ್ಲೋಬಲ್ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ ಚರಣ್ ಲಂಜೇವಾರ್‌, “ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತವಾಗಲು ಹಲವಾರು ಕಾರಣಗಳಿವೆ. ನಿಷ್ಕ್ರಿಯ ಜೀವನಶೈಲಿ, ದೈಹಿಕ ವ್ಯಾಯಾಮದ ಕೊರತೆಗಳು ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತವಾಗಲು ಮುಖ್ಯ ಕಾರಣಗಳಾಗುತ್ತವೆ” ಎಂದಿದ್ದಾರೆ.

“ತಮ್ಮ 20ರ ವಯೋಮಾನದಲ್ಲೇ ಹೃದಯಾಘಾತಕ್ಕೆ ತುತ್ತಾಗುವ ಮಂದಿ, ಮಹಿಳೆಯರನ್ನೂ ಒಳಗೊಂಡು, ಹೆಚ್ಚಾಗುತ್ತಿದ್ದಾರೆ. ದಶಕದ ಹಿಂದೆ ಹೀಗೆಲ್ಲಾ ಆಗುತ್ತಿರಲಿಲ್ಲ. ಜೊತೆಗೆ ಈ ಕೋವಿಡ್ ಸಾಂಕ್ರಮಿಕದ ಕಾಲಘಟ್ಟದಲ್ಲಿ ಹೃದಯಾಘಾತಗಳ ಕೇಸ್‌ಗಳು ಇನ್ನಷ್ಟು ಹೆಚ್ಚಾಗಿರುವುದನ್ನು ಕಂಡಿದ್ದೇವೆ,” ಎನ್ನುತ್ತಾರೆ ಚರಣ್.

“ಶಿಸ್ತಿನ ಪಥ್ಯ, ವಾಸ್ತವಿಕ ಹಾಗೂ ಸುದೀರ್ಘವಾಧಿಗೆ ಮಾಡಬಹುದಾದ ವ್ಯಾಯಾಮದ ಅಭ್ಯಾಸ, ಒತ್ತಡ ರಹಿತ ಜೀವನಗಳು ಕಡಿಮೆ ವಯಸ್ಸಿನಲ್ಲಿ ಹೃದಯಾಘಾತದ ಸಾಧ್ಯತೆ ಕಡಿಮೆ ಮಾಡುವ ಉತ್ತಮ ಕ್ರಮಗಳು. ಪ್ರತಿಯೊಬ್ಬ ವಯಸ್ಕನೂ ಸಹ ದೈಹಿಕ ತಜ್ಞರ ಬಳಿ ತಪಾಸಣೆಗೆ ಒಳಪಟ್ಟು, 30ರ ವಯಸ್ಸಿಗೆ ಕಾಲಿಡುವ ಮುನ್ನವೇ ನಿರ್ದಿಷ್ಟ ರಕ್ತ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವುದು ಉತ್ತಮ. ರಕ್ತ ಪರೀಕ್ಷೆಯಲ್ಲಿ ಲಿಪಿಡ್ ಹಾಗೂ ಸಕ್ಕರೆ ಅಂಶವನ್ನು ಪರಿಶೀಲನೆ ಮಾಡಬೇಕು,” ಎಂದು ವಿವರಿಸಿದ್ದಾರೆ ಚರಣ್.

ನಡಿಗೆ ಹಾಗೂ ಸೈಕ್ಲಿಂಗ್‌ಗಳಿಂದಾಗಿ ಹೃದಯಾಘಾತದ ಸಾಧ್ಯತೆಯು ಬ್ರಿಟನ್‌ನ 4.3 ಕೋಟಿ ಮಂದಿಯಲ್ಲಿ ಕಡಿಮೆಯಾಗಿದೆ ಎಂದು ಬ್ರಿಟನ್‌ನ ಲೀಡ್ಸ್‌ ವಿವಿಯ ಅಧ್ಯಯನವೊಂದು ತಿಳಿಸಿದೆ.

“ನಿಮ್ಮ ಕೆಲಸದ ಸ್ಥಳಕ್ಕೆ ತಲುಪಬೇಕಾದಲ್ಲಿ ನಡಿಗೆ ಹಾಗೂ ಸೈಕ್ಲಿಂಗ್ ಮಾಡಬೇಕಾದ ಅಗತ್ಯ ಹೆಚ್ಚಾದಲ್ಲಿ ಖುಷಿ ಪಡಿ. ನಮ್ಮ ಬ್ಯುಸಿ ಜೀವನದಲ್ಲಿ ವ್ಯಾಯಾಮ ಮಾಡಲು ಸಮಯ ಸಿಗದೇ ಇರಬಹುದು. ಆದರೆ ವ್ಯಾಯಾಮ ಮಾಡಲು ನೀವು ಜಿಮ್‌ಗೆ ಹೋಗಿ ಗಂಟೆಗಟ್ಟಲೇ ಟ್ರೆಡ್‌ಮಿಲ್ ಮೇಲೆ ಕಳೆಯಬೇಕೆಂದೇನಿಲ್ಲ,” ಎನ್ನುವ ಬ್ರಿಟಿಷ್ ಹಾರ್ಟ್ ಫೌಂಡೇಶನ್‌ನ ನಿರ್ದೇಶಕ ಮೆಟಿನ್ ಅವ್ಕಿರನ್, “ನಿಮ್ಮ ಸಂಚಾರಕ್ಕೆ ಬೈಸಿಕಲ್ ಅವಲಂಬಿಸಿದಲ್ಲಿ, ನಿಮ್ಮ ಹೃದಯ ಬಡಿತಕ್ಕೆ ಉತ್ತಮ. ಇದು ಆಯ್ಕೆಯಲ್ಲ, ಕೆಲ ಬೀದಿಗಳ ಹಿಂದೆಯೇ ನಿಮ್ಮ ವಾಹನ ಪಾರ್ಕ್ ಮಾಡುವುದು ಅಥವಾ ಕೆಲ ಸ್ಟಾಪ್‌ಗಳ ಹಿಂದೆಯೇ ಬಸ್‌ನಿಂದ ಇಳಿಯುವುದು ಇನ್ನಷ್ಟು ಆರೋಗ್ಯಕರ ಜೀವನಕ್ಕೆ ನೆರವಾಗಬಲ್ಲವು,” ಎಂದಿದ್ದಾರೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »