TOP STORIES:

FOLLOW US

ಮಾಣಿ ಯುವವಾಹಿನಿಯ ಮನೆಮನೆಗೆ ಗುರುತತ್ವ ಸಂಚಾರದ ಸಂಪನ್ನ ಸಂಭ್ರಮ


” ಜಗತ್ತಿನ ವೈಚಾರಿಕತೆಯ ಬೆಳಕು, ಸಾಮಾಜಿಕ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಾರ್ವಕಾಲಿಕ ಮೌಲ್ಯವುಳ್ಳದ್ದು. ಸಂಘಟನೆಗಳ ಸಮಾಜಮುಖಿ ಕಾರ್ಯಗಳು ಸರ್ವರನ್ನೂ ಒಳಗೊಳ್ಳುವ ಒಲವು ಹೊಂದಿರಬೇಕು. ಈ ನಿಟ್ಟಿನಲ್ಲಿ ಯುವವಾಹಿನಿ (ರಿ.) ಮಾಣಿ ಘಟಕವು ಹಮ್ಮಿಕೊಂಡಿರುವ ಮನೆಮನೆಗೆ ಗುರುತತ್ವ ಸಂಚಾರ ಕಾರ್ಯಕ್ರಮವು ಸರ್ವಸ್ಪರ್ಶಿ ಉದ್ದೇಶವನ್ನು ಹೊಂದಿದ್ದು ನಾರಾಯಣ ಗುರುಗಳ ತತ್ವಾದರ್ಶಗಳಿಗೆ ಪೂರಕವಾಗಿವೆ ” ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಂ ಕೆ.ಬಿ.ನುಡಿದರು.ಯುವವಾಹಿನಿ (ರಿ.) ಕೇಂದ್ರ ಸಮಿತಿಯ ವಿಶುಕುಮಾರ್ ದತ್ತಿ ನಿಧಿಯ ಸಂಚಾಲಕರಾದ ಶಶಿಧರ್ ಕಿನ್ನಿಮಜಲು ಸಂಪನ್ನ ಕಾರ್ಯಕ್ರಮದ ಗುರುತತ್ವ ಉಪನ್ಯಾಸ ನೀಡಿ, ನಾರಾಯಣ ಗುರುಗಳ ಸರಳ ಜೀವನ ಮಾದರಿಯ ಅನ್ವಯ ಹಾಗೂ ಅಗತ್ಯತೆಯ ಬಗ್ಗೆ ವಿಶದೀಕರಿಸಿದರು.

ಘಟಕದ ಅಧ್ಯಕ್ಷರಾದ ಪ್ರಶಾಂತ್ ಅನಂತಾಡಿ ಹತ್ತು ಗ್ರಾಮವ್ಯಾಪ್ತಿಯಲ್ಲಿ ಗುರುತತ್ವ ಸಂಚಾರ ನಡೆದುಬಂದ ರೀತಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಸಂಯೋಜಿಕೊಂಡ ಮನೆಯವರಿಗೆ ಕೃತಜ್ಞತೆ ಸಲ್ಲಿಸಿದರು.

ಯುವವಾಹಿನಿ (ರಿ.) ಮಾಣಿ ಘಟಕವು ಕಳೆದ ಒಂದು ತಿಂಗಳಿನಿಂದ ಅನಂತಾಡಿ, ಮಾಣಿ, ಬರಿಮಾರು, ನೆಟ್ಲಮುಡ್ನೂರು, ಕೆದಿಲ,ಕಡೇಶಿವಾಲಯ, ಬಿಳಿಯೂರು,ಪೆರಾಜೆ ಗ್ರಾಮವ್ಯಾಪ್ತಿಗಳ ಹದಿಮೂರು ಕಡೆಗಳಲ್ಲಿ ಮನೆಮನೆಗೆ ಗುರುತತ್ವ ಸಂಚಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ನೂರೈವತ್ತಕ್ಕಿಂತಲೂ ಹೆಚ್ಚು ಮನೆಗಳನ್ನು ಸಂಪರ್ಕಿಸುವ ಮೂಲಕ ಗುರುತತ್ವ ಅಭಿಯಾನವನ್ನು ಯಶಸ್ಸುಗೊಳಿಸಿದೆ. ಈ ಅಭಿಯಾನದಲ್ಲಿ ಗುರುತತ್ವ ಉಪನ್ಯಾಸ ನೀಡಿದ ಶ್ರೀಮತಿ ತ್ರಿವೇಣಿ ರಮೇಶ್, ಶ್ರೀಮತಿ ರೇಣುಕಾ ಕಣಿಯೂರು, ದಿನಕರ್ ಅಂಚನ್, ರಾಜೇಶ್ ಬಲ್ಯ ಹಾಗೂ ಗುರುತತ್ವ ಸಂಚಾರದ ಸಂಚಾಲಕರಾದ ಜನಾರ್ದನ ಕೊಡಂಗೆ ಇವರುಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾನಿಧಿ ಮತ್ತು ಸ್ಪಂದನ ಯೋಜನೆಗಳ ಬಲವರ್ಧನೆಗಾಗಿ ಆಯೋಜಿಸಿದ ಸಹಾಯಧನ ಕೂಪನಿನ ಬಹುಮಾನವನ್ನು ವಿತರಿಸಲಾಯಿತು ಮತ್ತು ಸ.ಕಿ.ಪ್ರಾ.ಶಾಲೆ,ಬಂಟ್ರಿಂಜ ಇದರ ಕಟ್ಟಡ ಮತ್ತು ಮೇಲ್ಛಾವಣಿ ದುರಸ್ತಿಗೆ ಘಟಕದ ವತಿಯಿಂದ ಸ್ಪಂದನ ಯೋಜನೆಯಡಿ 5000 ರೂಪಾಯಿಯನ್ನು ಶಾಲೆಯ ಎಸ್.ಡಿ.ಎಂ.ಸಿ ಸಮಿತಿಯ ಸದಸ್ಯೆಯಾದ ಶೋಭ ರವರ ಮೂಲಕ ನೀಡಲಾಯಿತು.

ಯುವವಾಹಿನಿ ಕೇಂದ್ರ ಸಮಿತಿಯ ಎರಡನೇ ಉಪಾಧ್ಯಕ್ಷರಾದ ರಾಜೇಶ್ ಬಂಟ್ವಾಳ,ಸತೀಶ್ ಬಾಯಿಲ, ಘಟಕದ ಗೌರವ ಸಲಹೆಗಾರರಾದ ಜಯಂತ ಬರಿಮಾರು, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ,ಪೇರಮೊಗೆರು ಇದರ ಗೌರವ ಅಧ್ಯಕ್ಷರಾದ ಮಾರಪ್ಪ ಸುವರ್ಣ, ಘಟಕದ ನಿರ್ದೇಶಕರು, ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಭಾಗವಹಿಸಿದ್ದರು.ಶ್ರೀದುರ್ಗಾ ನಿಲಯದ ಶ್ರೀಮತಿ ಶೋಭಾ ರಾಜೇಶ್ ದಂಪತಿಗಳು ಹಾಗೂ ಮನೆಯ ಸದಸ್ಯರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಘಟಕದ ಕಾರ್ಯದರ್ಶಿಯಾದ ರಾಜೇಶ್ ಎಸ್ ಬಲ್ಯ ರವರು ಸ್ವಾಗತಿಸಿದರು. ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಜರ್ನಾದನ ಪೂಜಾರಿ ಕೊಡಂಗೆ ವಂದಿಸಿದರು. ವ್ಯಕ್ತಿತ್ವ ವಿಕಸನ ನಿರ್ದೇಶಕಿ ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು.

ಘಟಕದ ಉಪಾಧ್ಯಕ್ಷರುಗಳಾದ ಸುಜಿತ್ ಅಂಚನ್,ರವಿಚಂದ್ರ ಬಾಬನಕಟ್ಟೆ, ನಿಕಟಪೂರ್ವ ಕಾರ್ಯದರ್ಶಿ ಶಿವರಾಜ್ ಪಿ.ಆರ್, ಮಾಜಿ ಸಲಹೆಗಾರರಾದ ಬಾಲಕೃಷ್ಣ ದೇಲಬೆಟ್ಟು, ಸಂಘಟನಾ ಕಾರ್ಯದರ್ಶಿ ಕಿರಣ್ ಗೋಳಿಕಟ್ಟೆ, ಸತೀಶ್ ಕೊಪ್ಪರಿಗೆ, ಮಾಜಿ ಕೋಶಾಧಿಕಾರಿ ವಿಶ್ವನಾಥ್ ಮುಜಲ, ಬಾಲಕೃಷ್ಣ ಮುಜಲ, ಪ್ರವೀಣ್ ಮಿತ್ತೂರು ಅತಿಥಿಗಳನ್ನು ಗೌರವಿಸಿದರು.

ವೇದಿಕೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಮಾಣಿ ಇದರ ಅಧ್ಯಕ್ಷರಾದ ಸುರೇಶ್ ಸೂರ್ಯ,ಸಲಹಾ ಸಮಿತಿಯ ಅಧ್ಯಕ್ಷರಾದ ನಾರಾಯಣ ಸಾಲ್ಯಾನ್, ಯುವವಾಹಿನಿ ಕೇಂದ್ರ ಸಮಿತಿಯ ಕಲೆ,ಸಾಹಿತ್ಯ, ಸಾಂಸ್ಕೃತಿಕ ನಿರ್ದೇಶಕರಾದ ಹರೀಶ್ ಪೂಜಾರಿ ಬಾಕಿಲ, ನಿಕಟಪೂರ್ವ ಅಧ್ಯಕ್ಷರಾದ ರಮೇಶ್ ಮುಜಲ, ಮನೆಯ ಯಜಮಾನರಾದ ರಾಜೇಶ್ ಬಾಬನಕಟ್ಟೆ ಉಪಸ್ಥಿತರಿದ್ದರು. ಯುವವಾಹಿನಿ (ರಿ.)ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕೆ. ಶುಭಹಾರೈಸಿದರು.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »