TOP STORIES:

ಅಕ್ಟೋಬರ್ 7 ರಿಂದ ’ಮಂಗಳೂರು ದಸರಾ’, ಭರದ ಸಿದ್ಧತೆಯಲ್ಲಿ ಕುದ್ರೋಳಿ ಕ್ಷೇತ್ರ


ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವವನ್ನು ಸರಕಾರದ ಮಾರ್ಗಸೂಚಿಯಂತೆ ಸಾಂಪ್ರದಾಯಿಕವಾಗಿ ನಡೆಸಲು ನಿರ್ಧರಿಸಲಾಗಿದ್ದು, ಇದಕ್ಕೆ ಪೂರಕ ಸಿದ್ಧತೆಗಳು ನಡೆಯುತ್ತಿದೆ ಎಂದು ದೇವಸ್ಥಾನದ ಅಧ್ಯಕ್ಷ ಹೆಚ್.ಎಸ್. ಸಾಯಿರಾಂ ತಿಳಿಸಿದ್ದಾರೆ.

ದಸರಾ ಮಹೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅ.7 ರಿಂದ ಅ.16ರವರೆಗೆ ಮಂಗಳೂರು ದಸರಾ ಮಹೋತ್ಸವ ನಡೆಯಲಿದೆ. ಈ ಬಾರಿಯ ಮಹೋತ್ಸವವೂ ಯಶಸ್ವಿಯಾಗಿ ನಡೆಯಬೇಕಾದರೆ ಸಂಘಸಂಸ್ಥೆಗಳು, ಭಕ್ತಾದಿಗಳು ಸರ್ವರ ಸಹಕಾರ ಪ್ರಮುಖವಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ನಗರದ ರಾಜಬೀದಿಗಳು ವಿದ್ಯುದ್ದೀಪಗಳಿಂದ ಕಂಗೊಳಿಸಲಿವೆ ಎಂದರು.

ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ ಮಾತನಾಡಿ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿ ಆಶಯದಂತೆ ಮಂಗಳೂರ ದಸರಾ ಮಹೋತ್ಸವ ನಡೆಯಲಿದ್ದು, ಇದು ಯಶಸ್ವಿಯಾಗಿ ನಡೆಯಬೇಕಾದರೆ ಎಲ್ಲ ಸಂಘ-ಸಂಸ್ಥೆಗಳು, ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ ಎಂದರು.

ಕಳೆದ ಬಾರಿಯೂ ‘ನಮ್ಮ ದಸರಾ-ನಮ್ಮ ಸುರಕ್ಷೆ’ ಚಿಂತನೆಯೊಂದಿಗೆ ಯಶಸ್ವಿಯಾಗಿ ನಡೆಸಲಾಗಿದೆ. ದಸರಾ ಮಹೋತ್ಸವದ ದರ್ಬಾರು ಮಂಟಪ, ಮೂರ್ತಿ ರಚನೆ ಕಾರ್ಯ ನಡೆಯುತ್ತಿದೆ. ಕಳೆದ ಬಾರಿಯೂ ಮಂಗಳೂರು ದಸರಾ ಮಹೋತ್ಸವ ಮೂಲಕ ಕರಾವಳಿಯ ಆರ್ಥಿಕ ಚೈತನ್ಯಕ್ಕೆ ಪುನಶ್ಚೇತನ ಸಿಕ್ಕಂತಾಗಿದೆ. ಇದಕ್ಕೆ ಗೋಕರ್ಣನಾಥ, ಶಾರದೆ, ನವದುರ್ಗೆಯರ ಅನುಗ್ರಹ ಕಾರಣ. ಎಲ್ಲರ ಸಹಕಾರದೊಂದಿಗೆ ಈ ಬಾರಿಯೂ ಉತ್ಸವ ಯಶಸ್ವಿಯಾಗಿ ನಡೆಯಲಿದೆ.
– ಪದ್ಮರಾಜ್ ಆರ್., ಕೋಶಾಧಿಕಾರಿ ಕುದ್ರೋಳಿ ಕ್ಷೇತ್ರ ತಿಳಿಸಿದರು.

ಸಭೆಯಲ್ಲಿ ಕುದ್ರೋಳಿ ದೇವಸ್ಥಾನದ ಉಪಾಧ್ಯಕ್ಷರಾದ ಉರ್ಮಿಳಾ ರಮೇಶ್ ಕುಮಾರ್, ಟ್ರಸ್ಟಿಗಳಾದ ರವಿಶಂಕರ್ ಮಿಜಾರು, ಜಗದೀಶ್ ಡಿ. ಸುವರ್ಣ, ಶೇಖರ್ ಪೂಜಾರಿ, ಕುದ್ರೋಳಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷರಾದ ಡಾ. ಅನಸೂಯ, ಡಾ.ಬಿ.ಜಿ. ಸುವರ್ಣ, ಸದಸ್ಯರಾದ ಹರಿಕೃಷ್ಣ ಬಂಟ್ವಾಳ್, ರಾಧಾಕೃಷ್ಣ ಕೆ., ಶೈಲೇಂದ್ರ ಸುವರ್ಣ, ಚಿತ್ತರಂಜನ್ ಗರೋಡಿ, ಸೂರ್ಯ ಜಯ ಸಿ. ಸುವರ್ಣ,  ಜಯರಾಜ್ ಹೆಚ್ ಎಸ್, ಚಂದ್ರಹಾಸ್, ವೇದಕುಮಾರ್ ಬೆಂಗಳೂರು, ಲೀಲಾಕ್ಷ ಕರ್ಕೇರಾ ಉಪಸ್ಥಿತರಿದ್ದರು.

Subscribe our channel: https://www.youtube.com/c/BillavasWarriors


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »