TOP STORIES:

ಮಾರಕ ಕ್ಯಾನ್ಸರ್ಗೆ ಮಂಗಳೂರಿನ ಮದ್ದು…20 ವರ್ಷಗಳ ಅವಧಿಗೆ ಪೇಟೆಂಟ್


ಮಂಗಳೂರು: ನಮ್ಮಲ್ಲಿರುವ ಕೃಷಿ ತೋಟಗಳಲ್ಲಿ ದೊರಕುವ ಹಡೆ ಬಳ್ಳಿ ಮಾರಕ ಕ್ಯಾನ್ಸರ್ ರೋಗಕ್ಕೆ ಮದ್ದು ಎನ್ನುವುದನ್ನು ಮಂಗಳೂರಿನ ಸಸ್ಯ ವಿಜ್ಞಾನಿಗಳು ಸಂಶೋಧಿಸಿದ್ದಾರೆ.

ಮಂಗಳೂರಿನ ವಿಜ್ಞಾನಿಗಳು ಹಡೆ ಬಳ್ಳಿ ಮೇಲೆ ಸಂಶೋಧನೆ ನಡೆಸಿದ್ದು ಮಾತ್ರವಲ್ಲದೆ ಅದನ್ನು ಶುದ್ಧೀಕರಣ ಮಾಡಿ ಕ್ಯಾನ್ಸರ್ ಗೆ ರಾಮಬಾಣವಾಗುವ ಅಂಶವನ್ನು ಪತ್ತೆ ಹಚ್ಚಿದ್ದಾರೆ. ಇದಕ್ಕೆ ಭಾರತ ಸರಕಾರದಿಂದ ಪೇಟೆಂಟ್ ಸಹ ಪಡೆದಿದ್ದಾರೆ. ಹಡೆ ಬಳ್ಳಿ ಮೇಲೆ ನಡೆದ ದೇಶದ ಮೊದಲ ಸಂಶೋಧನೆ ಇದಾಗಿದ್ದು , ಭಾರತದ ಮೊದಲ ಪೇಟೆಂಟ್ ಸಹ ಇದಾಗಿದೆ. ಮಂಗಳೂರು ವಿಶ್ವವಿದ್ಯಾಲಯದ ಸಸ್ಯ ಶಾಸ್ತ್ರ ಸಂಶೋಧಕರಾದ ಪ್ರೊ. ಕೆ. ಆರ್.ಚಂದ್ರಶೇಖರ್ ಮತ್ತು ಪ್ರೊ. ಭಾಗ್ಯ ನಕ್ರೆ ಕಲಾಯ ಹಡೆ ಬಳ್ಳಿ ಯನ್ನೂ ಸಂಶೋಧನೆ ಮಾಡಿದ್ದು,ಸದ್ಯ ಈ ಇಬ್ಬರು ವಿಜ್ಞಾನಿಗಳು ಮಂಗಳೂರು ಖಾಸಗಿ ಕಾಲೇಜಿನಲ್ಲಿ ಸಸ್ಯಶಾಸ್ತ್ರ ಪ್ರಾದ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ವಿಜ್ಞಾನಿಗಳು 2017 ರಂದು ಸಂಶೋಧನೆ ನಡೆಸಿ ಪೇಟೆಂಟ್ ಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಬಹಳ ಸಮಯದ ನಂತರ ಪೇಟೆಂಟ್ ಲಭ್ಯವಾಗಿದೆ.20 ವರ್ಷಗಳ ಅವಧಿಗೆ ಪೇಟೆಂಟ್ ಲಭ್ಯವಾಗಿದ್ದು,ಈ ಸಂಶೋಧನಾ ಅಂಶ ಬಳಸಿ ಔಷಧಿ ತಯಾರಿಸಬಹುದಾಗಿದೆ. ಅಂಗಾಂಗ ಕಸಿ ಮಾಡಿದ ನಂತರ ರಾಸಾಯನಿಕ ಅಂಶ ಪತ್ತೆ ಮಾಡುವ ಸಂದರ್ಭದಲ್ಲಿ ಕ್ಯಾನ್ಸರ್ ಗೆ ಮರಕವಾಗಬಲ್ಲ ಟೆಂಟ್ರಾಡೈನ್ ಅಂಶವು ಈ ಹಡೆಬಳ್ಳಿ ಯಲ್ಲಿ ಇರುವ ಅಂಶ ಪತ್ತೆಯಾಗಿದೆ. ಭಾರತದಲ್ಲಿ ಇಲ್ಲಿಯವರೆಗೆ ಯಾರೂ ಕೂಡ ಈ ವಿಷಯದಲ್ಲಿ ಸಂಶೋಧನ ಮಾಡಿರಲಿಲ್ಲ. ಅದರಿಂದಾಗಿ ಇದು ಭಾರತದ ಮೊದಲ ಸಂಶೋಧನೆ ಎಂಬ ಹಿರಿಮೆಗೆ ಪಾತ್ರವಾಗಿದೆ. ಇದಕ್ಕೂ ಹಿಂದೆ ಚೀನಾದಲ್ಲಿ ಈ ರೀತಿಯ ಸಂಶೋಧನೆ ಮಾಡಲಾಗಿತ್ತು.ಅಲ್ಲಿನ ಬಳ್ಳಿಯಲ್ಲಿ ಟೆಂಟ್ರಾಡೈನ್ ಅಂಶವನ್ನು ಪತ್ತೆಮಾಡಿದ್ದರು. ಸಾಮಾನ್ಯವಾಗಿ ಈ ಹಡೆ ಬಳ್ಳಿ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಭಾಗದಲ್ಲಿ ಹೇರಳವಾಗಿ ದೊರೆಯುತ್ತವೆ. ಹಳ್ಳಿ ಜನರು ಈ ಬಳ್ಳಿಯನ್ನು ಹರೆದು ಹಣೆಗೆ ಹಚ್ಚುತ್ತಿದ್ದರು. ನೆಗಡಿ ಜ್ವರ ಶೀತ , ಮಧುಮೇಹ ಸೇರಿದಂತೆ ಹಲವು ರೋಗಗಳಿಗೆ ಇದು ಔಷಧವಾಗಿದೆ


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »