TOP STORIES:

ಅಮೇರಿಕಾದ ನೆಲದಲ್ಲಿ, ಭಾರತದ ಪ್ರಧಾನಿಗೆ ಆತಿಥ್ಯದ ಜವಾಬ್ದಾರಿಯನ್ನು ವಹಿಸಿಕೊಂಡ ತುಳುನಾಡ ಮನೆ ಮಗಳು ಸುಮಲ್ ಕೋಟ್ಯಾನ್


ಈ ತುಳುನಾಡಿನ ಮಣ್ಣಿನ ಗುಣವೇ ಹಾಗೇ, ಅದೇಷ್ಟೋ ಸಾಧಕರನ್ನು,ಉದ್ಯಮಿಗಳನ್ನು ಜಗತ್ತಿಗೆ ಬಳುವಳಿಯಾಗಿ ಕೊಟ್ಟ ಪುಣ್ಯ ಭೂಮಿ ಇದು. ಕೆಲವರು ಸದ್ದು ಮಾಡಿದರು,ಇನ್ನು ಕೆಲವರು ತನ್ನ ಕಾರ್ಯದಿಂದಲೇ ತನ್ನತ್ತ ತಿರುಗುವಂತೆ ಮಾಡಿದರು ಎಂಬುದನ್ನು ಹೇಳಲು ಯಾವುದೇ ಅಂಜಿಕೆಯಿಲ್ಲ.ಇಂದು ತುಳುನಾಡಿನ ಮನೆ ಮಗಳ ಸಣ್ಣ ಪರಿಚಯವನ್ನು ನಿಮ್ಮ ಎದುರಿಗೆ ತರಲೇಬೇಕು ಅನಿಸಿತು. ನಮ್ಮ ಪ್ರಧಾನಿಯಾದ ನರೇಂದ್ರ ಮೋದಿಯವರು ಇತ್ತೀಚೆಗೆ ಅಮೇರಿಕದ ಪ್ರವಾಸವನ್ನು ಕೈಗೊಂಡಿದ್ದರು.

ಪ್ರಧಾನಿ ಮತ್ತು ಭಾರತದ ಗಣ್ಯ ವ್ಯಕ್ತಿಗಳ ಆತಿಥ್ಯದ ಜವಾಬ್ದಾರಿಯನ್ನು ನಮ್ಮ ಕರಾವಳಿಯ ಆನಂದ್ ರೆಸ್ಟೋರೆಂಟ್ ಗೆ(ಆನಂದ್ ಪೂಜಾರಿ) ನೀಡಲಾಗಿತ್ತು. ಇವರು ಕ್ಯಾಪಿಟಲ್ ಹಿಲ್ ಮತ್ತು ವೈಟ್ ಹೌಸ್ಸ್ ಗೆ ಭಾರತೀಯ ಶೈಲಿಯ ಆಹಾರ ಕ್ರಮಕ್ಕೆ ಗುತ್ತಿಗೆ ಪಡೆದ ನಮ್ಮ ಹೆಮ್ಮೆಯ ಕರಾವಳಿಗರು. ಈ ಸಂದರ್ಭದಲ್ಲಿ ಸುಮಲ್ ಕೋಟ್ಯಾನ್ ಅವರು ನರೇಂದ್ರ ಮೋದಿ ಮತ್ತು ಗಣ್ಯ ವ್ಯಕ್ತಿಗಳಿಗೆ ಭಾರತೀಯ ಆತಿಥ್ಯ ನೀಡುವ ಜವಾಬ್ದಾರಿಯ ಹೊಣೆಯನ್ನು ಇವರು ವಹಿಸಿಕೊಂಡಿದ್ದರು.ಕರಾವಳಿಯ ಒಬ್ಬಳು ಮನೆ ಮಗಳು ದೂರದ ಅಮೆರಿಕದಲ್ಲಿ ಇಂತಹ ದೊಡ್ಡ ಜವಾಬ್ದಾರಿಯನ್ನು ನಿರ್ವಹಿಸಿದುದು ನಮಗೆಲ್ಲರಿಗೂ ಹೆಮ್ಮಯ ವಿಷಯವೇ. 2017 ಮತ್ತು 2021ರಲ್ಲೀ ಎರಡು ಬಾರಿ ಈ ಕಾರ್ಯವನ್ನು ಮಾಡಿದ ಸುಮಲ್ ಕೋಟ್ಯಾನ್ ರವರು ಮಂಗಳೂರಿನ ಮೇರಿ ಹಿಲ್ ನಲ್ಲಿ ಜನಿಸಿದವರು.

ಗೋಪಾಲ ಪೂಜಾರಿ ಮತ್ತು ಸುಫಲ ರವರ ಮಗಳಾಗಿ ಜನಿಸಿದ ಇವರು ಪ್ರಾಥಮಿಕ ಶಿಕ್ಷಣವನ್ನು ಅನಾಸ್ ನಲ್ಲಿ ಪ್ರೌಢ ಶಿಕ್ಷಣವನ್ನು ಕಾರ್ಮಲ್ ಶಾಲೆಯಲ್ಲಿ ಪೂರ್ಣಗೊಳಿಸಿದರು.ಹಾಗೆಯೇ ಪಿ.ಯು.ಸಿ.ಯನ್ನು ಸೈಂಟ್ ಅಲೋಶಿಸ್,ಬಯೋಟೆಕ್ನಾಲಜಿ ಎಂಜಿನಿಯರಿಂಗ್ ನ್ನು ನಿಟ್ಟೆ ಮಂಗಳೂರಿನಲ್ಲಿ ಮುಗಿಸಿದರು.

ಅಮೆರಿಕದಲ್ಲಿ 9 ವರುಷದಿಂದ ವಾಸವಾಗಿರುವ ಸುಮಲ್ ಅವರು ಸಂದೀಪ್ ಕೋಟ್ಯಾನ್ ರವರನ್ನು ವಿವಾಹವಾಗಿ ತಮ್ಮ ದಾಂಪತ್ಯ ಜೀವನವನ್ನು ಸಾಗಿಸುತ್ತಿದ್ದಾರೆ.ಹಾಗೆಯೇ ಎರಡು ಮುದ್ದಾದ ಮಕ್ಕಳ ತಾಯಿಯಾಗಿದ್ದಾರೆ.ಹೊಟೇಲ್ ಉದ್ಯಮದಲ್ಲಿ ಅತೀವ ಆಸಕ್ತಿ ಇದ್ದ ಇವರು ಆನಂದ್ ಪೂಜಾರಿಯವರ ಆನಂದ್ ರೆಸ್ಟೋರೆಂಟ್ ನ ಜೊತೆ ಸೇರಿದರು,ಆನಂದ್ ರೆಸ್ಟೋರೆಂಟ್ 4 ಬಾರಿ ಪ್ರಧಾನಿ ಮತ್ತು ಭದ್ರತ ದಳದ ಆತಿಥ್ಯವನ್ನು ವಹಿಸಿಕೊಂಡ ಹೆಮ್ಮೆ ಇವರದು.

ಮೋದಿಯವರು ಸುಮಲ್ ಕೋಟ್ಯಾನ್ ಜೋತೆ ಹಂಚಿಕೊಂಡ ಮಾತು:

ಪ್ರಧಾನಿ ಮೋದಿಯವರು “ಮಗಳೇ” ಎಂದು ಕರೆಯುತ್ತಿದ್ದರಂತೆ, ಖುದ್ದಾಗಿ ಮೋದಿಯವರೇ ಕಳೆದ ಕಾರ್ಯಕ್ರಮದಲ್ಲಿ (2017) ನೀವೇ ಇದ್ದುದು ಅಲ್ಲವೇ ಎಂದು ಕೇಳಿದರಂತೆ. ಹಾಗೆಯೇ ಮಂಗಳೂರು ಎಂದಾಗ ಕರ್ನಾಟಕ ಎಂಬುದನ್ನು ಹೇಳಿದರಂತೆ.

ಒಬ್ಬ ಮಹಿಳೆಯಾಗಿ ಅಷ್ಟು ದೊಡ್ಡ ಕಾರ್ಯಕ್ರಮದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ಕರಾವಳಿಗರ ಪಾಲಿಗೆ ಹೆಮ್ಮೆಯ ವಿಷಯವೇ. ಪ್ರಧಾನಿ ಮೋದಿಯವರ ಸರಳತೆಯನ್ನು ನೇರವಾಗಿ ಕಂಡ ಇವರು,ಇಂತಹ ಅವಕಾಶವನ್ನು ಪಡೆದು ಧನ್ಯನಾದೆ ಎನ್ನುತ್ತಾರೆ.

ವಿಜೇತ್ ಪೂಜಾರಿ ಶಿಬಾಜೆ.

 


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »