TOP STORIES:

FOLLOW US

ಗರ್ಭಿಣಿ ಹೊಟ್ಟೆ ಆಕಾರ ನೋಡಿದ್ರೆ ಮಗು ಗಂಡೋ, ಹೆಣ್ಣೋ ಅಂತ ತಿಳಿಯತ್ತಾ?; ಪ್ರೆಗ್ನೆಸಿಯ ಸತ್ಯ ಮಿಥ್ಯಗಳು ಇಲ್ಲಿವೆ


ನವಜಾತ ಶಿಶು ಅಥವಾ ಜನಿಸಲಿರುವ ಶಿಶುವಿನ ಕುರಿತು ನೀಡುವ ಕೆಲವು ತಪ್ಪು ಮಾಹಿತಿಗಳು ಮತ್ತು ಆ ಕುರಿತ ವಾಸ್ತವ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ನವಜಾತ ಶಿಶುಗಳು ಅಥವಾ ಹುಟ್ಟಲಿರುವ ಶಿಶು ಯಾವುದು ಎಂಬ ಕುತೂಹಲ ಸಾಮಾನ್ಯ. ಅನೇಕರು ಗರ್ಭಿಣಿಯರ ಹೊಟ್ಟೆಯ ಆಕಾರ ನೋಡಿ ಅನೇಕರು ಹುಟ್ಟುವ ಮಗು ಗಂಡೋ ಅಥವಾ ಹೆಣ್ಣೋ ಎಂದು ಅಂದಾಜು ಮಾಡುತ್ತಾರೆ. ಅಲ್ಲದೇ ಅನೇಕ ಗರ್ಭಿಣಿಯರು ಕೂಡ ಈ ಕುರಿತು ವಿಚಾರವನ್ನು ಅಂತರ್ಜಾಲದಲ್ಲಿ ಹುಡುಕುತ್ತಾರೆ.  ಅಷ್ಟೇ ಅಲ್ಲದೇ ಗರ್ಭಾವಸ್ಥೆಯಲ್ಲಿನ ಅನೇಕ ವಿಚಾರಗಳ ಕುರಿತು ನಮ್ಮ ಸುತ್ತ ಮುತ್ತಲಿನವರು ಅನೇಕ ಸಲಹೆ ನೀಡುತ್ತಲೇ ಇರುತ್ತಾರೆ. ಆದರೆ ಅವೆಲ್ಲವೂ ಸತ್ಯವಾಗಿರುವುದಿಲ್ಲ, ಅವುಗಳಲ್ಲಿ ಸತ್ಯಕ್ಕೆ ದೂರವಾದ ಮತ್ತು ಅವೈಜ್ಞಾನಿಕವಾದ ಮಾಹಿತಿಗಳು ಬಹಳಷ್ಟಿರುತ್ತವೆ. ನವಜಾತ ಶಿಶುವಿನ ತಾಯಂದಿರು ಅಥವಾ ಸದ್ಯದಲ್ಲಿಯೇ ಶಿಶುವಿಗೆ ಜನ್ಮ ನೀಡಲಿರುವ ಭಾವಿ ಅಮ್ಮಂದಿರ ಸುತ್ತಮುತ್ತ ತರಾವರಿ ಸಲಹೆಗಳನ್ನು ನೀಡುವ ಅಥವಾ ಊಹೆಗಳನ್ನು ಮಾಡುವ ಜನರ ದಂಡೇ ಇರುತ್ತದೆ ಎಂಬುವುದು ಸರ್ವಕಾಲಿಕ ಸತ್ಯ.

 

ಒಂದು ನವಜಾತ ಶಿಶುವಿನ ತಾಯಿ ಅಥವಾ ಸದ್ಯದಲ್ಲಿಯೇ ಶಿಶುವಿಗೆ ಜನ್ಮ ನೀಡಲಿರುವ ಮಹಿಳೆ ಆದಾಗಲೇ ದುರ್ಬಲಳಾಗಿರಬಹುದು ಅಥವಾ ಹೊಸ ಅನುಭವದ ಒತ್ತಡದ ಮನಸ್ಥಿತಿಯಲ್ಲಿ ಇರಬಹುದು, ಅಂತಹ ಸಂದರ್ಭದಲ್ಲಿ ಆಧಾರವಿಲ್ಲದ ಸಲಹೆಗಳಿಗೆ ಕಿವಿ ಕೊಡದೆ, ತಜ್ಞರು ನೀಡುವ ಮಾಹಿತಿಗಳನ್ನು ನಂಬುವುದು ಬಹಳ ಅಗತ್ಯ. ನವಜಾತ ಶಿಶು ಅಥವಾ ಜನಿಸಲಿರುವ ಶಿಶುವಿನ ಕುರಿತು ನೀಡುವ ಕೆಲವು ತಪ್ಪು ಮಾಹಿತಿಗಳು ಮತ್ತು ಆ ಕುರಿತ ವಾಸ್ತವ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

 

 

ಮಿಥ್ಯ 1: ಗರ್ಭಿಣಿಯ ಹೊಟ್ಟೆ ಎಷ್ಟು ಉಬ್ಬಿದೆ ಎಂಬುದನ್ನು ಆಧರಿಸಿ ಅದರ ಲಿಂಗವನ್ನು ನಿರ್ಧರಿಸಲಾಗುತ್ತದೆ. ಗರ್ಭಿಣಿಯ ಹೊಟ್ಟೆ ಕಡಿಮೆ ಉಬ್ಬಿದ್ದರೆ ಒಳಗಿರುವುದು ಗಂಡು ಮಗು. ಹೊಟ್ಟೆ ದೊಡ್ಡದಿದ್ದರೆ ಅದು ಹೆಣ್ಣು ಮಗು.
ಸತ್ಯ: ರಾಷ್ಟ್ರೀಯ ಆರೋಗ್ಯ ಸೇವೆಯ (ಎನ್‍ಹೆಚ್‍ಎಸ್) ಪ್ರಕಾರ, ಈ ಊಹೆಗೆ ಯಾವುದೇ ವೈಜ್ಞಾನಿಕ ಆಧಾರವಿಲ್ಲ ಮತ್ತು ಹೊಟ್ಟೆಯ ಗಾತ್ರಕ್ಕೂ ಮಗುವಿನ ಲಿಂಗಕ್ಕೂ ಯಾವುದೇ ಸಂಬಂಧವಿಲ್ಲ. ಗರ್ಭಿಣಿಯ ಹೊಟ್ಟೆಯ ಗಾತ್ರ ಮತ್ತು ಆಕಾರವು ಆಕೆಯ ಸ್ನಾಯುವಿನ ಗಾತ್ರ, ರಚನೆ, ಭಂಗಿ ಮತ್ತು ಆಕೆಯ ಹೊಟ್ಟೆಯ ಸುತ್ತಲೂ ಸಂಗ್ರಹವಾಗಿರುವ ಕೊಬ್ಬನ್ನು ಅವಲಂಬಿಸಿದೆ.

ಮಿಥ್ಯ 2 : ಕೊಲಸ್ಟ್ರಮ್ ಅಥವಾ ತಾಯಿಯ ಆರಂಭದ ಎದೆಹಾಲನ್ನು ಮಗುವಿಗೆ ಕುಡಿಸಬಾರದು. ಅದು ಅಶುದ್ಧವಾಗಿರುತ್ತದೆ.

ಸತ್ಯ : ಕೊಲಸ್ಟ್ರಮ್ ಎಂದರೆ ಹಳದಿ ಬಣ್ಣವುಳ್ಳ , ತಾಯಿಯ ಪ್ರಪ್ರಥಮ ಎದೆ ಹಾಲು. ಅತ್ಯಧಿಕ ಪ್ರೊಟೀನ್ ಹೊಂದಿರುವ ಆ ಹಾಲು ಸೋಂಕು ನಿರೋಧಕ ಗುಣಗಳನ್ನು ಹೊಂದಿದೆ. ಆದ್ದರಿಂದ ಮಗುವಿಗೆ ಇದನ್ನು ಕುಡಿಸಲು ಸೂಚಿಸಲಾಗುತ್ತದೆ. ಆದರೆ, ಭಾರತದಲ್ಲಿ ಕೆಲವು ಮಹಿಳೆಯರು ಇದನ್ನು ಇಂದಿಗೂ ಅಶುದ್ಧವೆಂದು ಭಾವಿಸಿದ್ದು, ಮಗುವಿಗೆ ಕುಡಿಸಲು ನಿರಾಕರಿಸುತ್ತಾರೆ.

ಮಿಥ್ಯ 3: ನವಜಾತ ಶಿಶುವಿನ ಜೀವನ ಸಿಹಿಯಾಗಿರಬೇಕು ಎಂಬುದರ ಸಂಕೇತವಾಗಿ, ಅದಕ್ಕೆ ಪ್ರಥಮವಾಗಿ ಜೇನು ತುಪ್ಪವನ್ನು ನೆಕ್ಕಿಸುವುದು ಅತ್ಯಂತ ಪುರಾತನ ಸಂಪ್ರದಾಯ.

ಸತ್ಯ: ನವಜಾತ ಶಿಶುವಿನ ಪ್ರತಿರಕ್ಷಣಾ ವ್ಯವಸ್ಥೆ ತುಂಬಾ ನಾಜೂಕಾಗಿ ಇರುತ್ತದೆ. ಮಗುವಿಗೆ ಅದರ ಮೊದಲ ಹುಟ್ಟುಹಬ್ಬಕ್ಕಿಂತ ಮೊದಲು ಜೇನು ತುಪ್ಪವನ್ನು ನೀಡುವುದು ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ. ಕಾರಣವೇನೆಂದರೆ, ಅದು ನವಜಾತ ಶಿಶುವಿನ ಅಪಕ್ವ ವ್ಯವಸ್ಥೆಯಲ್ಲಿ ಸೇರಿಕೊಳ್ಳಬಲ್ಲ ಬ್ಯಾಕ್ಟೀರಿಯಾವಾದ ಕ್ಲೋಸ್ಟ್ರಿಡಿಯಂ ಬೊಟುಲಿನಮ್ ಬೀಜಕಗಳನ್ನು ಹೊಂದಿರುತ್ತದೆ, ಮತ್ತು ಆ ಬ್ಯಾಕ್ಟೀರಿಯಾ ಶಿಶುವಿಗೆ ಮಾರಕ ರೋಗವನ್ನು ಉಂಟು ಮಾಡಬಹುದು.

ಮಿಥ್ಯ 4: ನವಜಾತ ಶಿಶುವಿನ ಆಹಾರ ಕ್ರಮದಲ್ಲಿ ಜ್ಯೂಸ್‍ಗಳನ್ನು ಕೂಡ ಸೇರಿಸಬೇಕು.
ಸತ್ಯ : ಹಣ್ಣಿನ ರಸದಲ್ಲಿ ವಿಟಮಿನ್ ಸಿ ಹೇರಳವಾಗಿರುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಅದು ಮಗುವಿನ ಕರುಳಿನ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರಬಹುದು . ಏಕೆಂದರೆ ಆರಂಭದಲ್ಲಿ , ಅದರಲ್ಲೂ ಮುಖ್ಯವಾಗಿ ಜನಿಸಿದ ಒಂದು ವರ್ಷದವರೆಗೆ ಅವುಗಳಲ್ಲಿ ಹಣ್ಣಿನ ರಸವನ್ನು ಜೀರ್ಣ ಮಾಡಿಕೊಳ್ಳಬಲ್ಲ ಸಾಮರ್ಥ್ಯ ಇರುವುದಿಲ್ಲ.

 

ಮಿಥ್ಯ 5 : ಎರಡನೇ ಮತ್ತು ಮೂರನೆಯ ಶಿಶುಗಳಿಗೆ ಹೋಲಿಸಿದರೆ, ಮೊದಲ ಮಗು ತಡವಾಗಿ ಹೊರ ಬರುತ್ತದೆ ಎಂಬ ನಂಬಿಕೆ ಕೂಡ ಜನರಲ್ಲಿದೆ.

ಸತ್ಯ : ವಾಸ್ತವ ಏನೆಂದರೆ, ನಿಮ್ಮ ಋತುಚಕ್ರದ ಅವಧಿಯ ಉದ್ದವು ನಿಮ್ಮ ಮಗುವಿನ ಆಗಮನವನ್ನು ನಿರ್ಧರಿಸುತ್ತದೆ. ನಿಮ್ಮ ಋತುಚಕ್ರದ ಅವಧಿ ಕಡಿಮೆ ಇದ್ದರೆ ಹೆರಿಗೆ ಬೇಗ ಆಗಬಹುದು, ಉದ್ದನೆಯ ಋತುಚಕ್ರದ ಅವಧಿ ಇದ್ದಲ್ಲಿ ಹೆರಿಗೆ ಕೂಡ ತಡ ಆಗಬಹುದು.ಆದರೂ ಋತುಚಕ್ರದ ಅವಧಿ 28 ದಿನಗಳದ್ದಾಗಿದ್ದರೆ, ನಿಮಗೆ ಹೆರಿಗೆಗೆ ನಿಗದಿ ಪಡಿಸಿದ ದಿನಾಂಕದ ಹತ್ತಿರದ ತಾರೀಖಿನಲ್ಲೇ ಹೆರಿಗೆ ಆಗುವ ಸಾಧ್ಯತೆ ಇರುತ್ತದೆ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »