TOP STORIES:

ಕೂದಲು , ಚರ್ಮದ ಸಮಸ್ಯೆಗೆ ಬೆಳ್ಳುಳ್ಳಿ ಬಳಸಿ ಮ್ಯಾಜಿಕ್ ನೋಡಿ..


ಅಡಿಗೆ ಮನೆ  ಎಂದರೆ ಕೇವಲ ಆಹಾರ ತಯಾರಿಸಿ ಸೇವನೆ ಮಾಡುವ ಸ್ಥಳವಲ್ಲ , ನಮ್ಮ ಆರೋಗ್ಯವನ್ನು ಕಾಪಾಡುವ ಶಕ್ತಿ ಕೇಂದ್ರ ಎಂದರೆ ತಪ್ಪಾಗಲಾರದು. ಇದು ನಮ್ಮ ಎಲ್ಲ ಸೌಂದರ್ಯ ಮತ್ತು ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ಗುಣಪಡಿಸುವ ನೈಸರ್ಗಿಕ ಪರಿಹಾರಗಳನ್ನು ಹೇರಳವಾಗಿ ಹೊಂದಿರುವ ಸ್ಥಳ.

ಹಳದಿ ಮತ್ತು ಮೊಸರಿನಿಂದ ಶುಂಠಿ ಮತ್ತು ಬೆಳ್ಳುಳ್ಳಿಯವರೆಗೆ, ನಾವು ಅಡುಗೆಮನೆಯ ಎಲ್ಲಾ ಪದಾರ್ಥಗಳನ್ನು  ಔಷಧವಾಗಿ ಬಳಕೆ ಮಾಡಬಹುದು.  ಇಲ್ಲಿ ವಿಶೇಷವಾಗಿ ಬೆಳ್ಳುಳ್ಳಿಯ ಬಗ್ಗೆ ಹೇಳುವುದಾದರೇ,  ಇದನ್ನು ಕೇವಲ ನಮ್ಮ ಆಹಾರಕ್ಕೆ ಪರಿಮಳವನ್ನು ನೀಡಲು ಮಾತ್ರ ಬಳಸಲಾಗುವುದಿಲ್ಲ, ಆದರೆ ಇದು ಹಲವಾರು  ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಬೆಳ್ಳುಳ್ಳಿಯು ಹಲವಾರು ರೋಗಗಳನ್ನು ಗುಣಪಡಿಸಲು ಸಹಾಯ ಮಾಡುವ ವೈದ್ಯಕೀಯ ಗುಣಗಳನ್ನು ಹೊಂದಿದೆ.
ಬೆಳ್ಳುಳ್ಳಿಯಲ್ಲಿ ಅಲ್ಲಿಸಿನ್, ಸಲ್ಫರ್, ಸತು ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದೆ, ಇದು ಸೌಂದರ್ಯದ ಪ್ರಯೋಜನಗಳನ್ನು ಹಾಗೂ ಆ್ಯಂಟಿಬಯಾಟಿಕ್ ಮತ್ತು ಆಂಟಿಫಂಗಲ್ ಗುಣಗಳನ್ನು ಹೊಂದಿದೆ. ಇದು ಕೂದಲು ಮತ್ತು ಚರ್ಮಕ್ಕೂ ಪ್ರಯೋಜನಕಾರಿ.  ಹೇಗೆ ಎಂಬುದು ಇಲ್ಲಿದೆ.
ನಾವು ಯಾವಾಗಲೂ ಕೂದಲು ಉದುರುವುದರ ಬಗ್ಗೆ ಹೆಚ್ಚು ಕಾಳಜಿವಹಿಸುತ್ತೇವೆ. ಅದನ್ನು ಗುಣಪಡಿಸಲು ಯಾವ ಉತ್ಪನ್ನಗಳನ್ನು ಬಳಸಬೇಕೆಂದು ಯೋಚಿಸುತ್ತೇವೆ. ನಾವು ಹಲವಾರು ಉತ್ಪನ್ನಗಳನ್ನು ಮತ್ತು ಮನೆಯಲ್ಲಿ ತಯಾರಿಸಿದ  ಮಾಸ್ಕ್ಗಳನ್ನು ಪ್ರಯತ್ನಿಸಿದರೂ ಸಹ  ಅದು ಏನೂ ಕೆಲಸ ಮಾಡುವುದಿಲ್ಲ.  ಹಾಗಾದ್ರೆ , ಈಗ, ಬೆಳ್ಳುಳ್ಳಿಯನ್ನು ಪ್ರಯತ್ನಿಸಿ ನಿಮ್ಮ ಕೂದಲಿನ ಮೇಲೆ ಮ್ಯಾಜಿಕ್ ಮಾಡುವುದನ್ನು ನೋಡಿ.

 

ಇಂಡಿಯನ್ ಜರ್ನಲ್ ಆಫ್ ಡರ್ಮಟಾಲಜಿ, ವೆನಿಯರಾಲಜಿ ಮತ್ತು ಲೆಪ್ರೊಲಜಿಯಲ್ಲಿನ ಅಧ್ಯಯನದ ಪ್ರಕಾರ, ಬೆಳ್ಳುಳ್ಳಿ ನಿಮ್ಮ ಕೂದಲು ಉದುರುವಿಕೆಯ ಸಮಸ್ಯೆಗಳಿಗೆ ಪರಿಹಾರ ಏಕೆಂದರೆ ಹೆಚ್ಚಿನ ಪ್ರಮಾಣದಲ್ಲಿ ಅಲಿಸಿನ್ ಮತ್ತು ಸಲ್ಫರ್ ಇರುತ್ತದೆ. ಬೆಳ್ಳುಳ್ಳಿಯ ಒಂದು ಎಸೆಳನ್ನು ತೆಗೆದುಕೊಂಡು ಅದನ್ನು ನಿಮ್ಮ ನೆತ್ತಿಯ ಮೇಲೆ ಉಜ್ಜಿ,  ಅದನ್ನು ಚನ್ನಾಗಿ ಹಿಂಡಿ ರಸ ತೆಗೆದು ಉಜ್ಜಿದರೆ ಹೆಚ್ಚಿನ ಪ್ರಯೋಜನ ನೀಡುತ್ತದೆ. ಬೆಳ್ಳುಳ್ಳಿ ಕೂಡ ತಲೆಹೊಟ್ಟು ತಡೆಯುವಲ್ಲಿ ಸಹಾಯ ಮಾಡುತ್ತದೆ.
ನೀವು ನೆತ್ತಿಯ ತುರಿಕೆಯ ಸಮಸ್ಯೆಯನ್ನು ಅನುಭವಿಸುತ್ತಿದ್ದರೆ, ಬೆಳ್ಳುಳ್ಳಿ ಮತ್ತು ಎಣ್ಣೆಯನ್ನು ಮಿಶ್ರಣ ಮಾಡಿ, ಅದನ್ನ ಮಸಾಜ್  ಮಾಡಿ. ಸ್ವಲ್ಪ ಸಮಯದ ನಂತರ ಅದನ್ನು ತೊಳೆಯಿರಿ. ಉತ್ತಮ ಫಲಿತಾಂಶ ಪಡೆಯಲು ಇದನ್ನು  ನಿಯಮಿತವಾಗಿ ಬಳಸಿ.  ಬೆಳ್ಳುಳ್ಳಿ ಕೂದಲು ಬೆಳವಣಿಗೆಗೆ ಸಹಾಯ ಮಾಡುತ್ತದೆ. ಬೆಳ್ಳುಳ್ಳಿಯಲ್ಲಿ ಲಭ್ಯವಿರುವ ಅಲ್ಲಿಸಿನ್ ರಕ್ತ ಪರಿಚಲನೆ ಹೆಚ್ಚಿಸಲು ಸಹಾಯ ಮಾಡುತ್ತದೆ ಅದು ನಿಮ್ಮ ಕೂದಲು ಬೆಳೆಯುವ ವೇಗವನ್ನು ಹೆಚ್ಚು ಮಾಡುತ್ತದೆ ಎನ್ನಲಾಗುತ್ತಿದೆ.

ಕೇವಲ ಕೂದಲಿಗೆ ಮಾತ್ರವಲ್ಲ, ಬೆಳ್ಳುಳ್ಳಿ ನಿಮ್ಮ ಚರ್ಮಕ್ಕೂ ಪ್ರಯೋಜನಕಾರಿ ಮತ್ತು ನಿಮಗೆ ತಾಜಾ ಮತ್ತು ಹೊಳೆಯುವ ಚರ್ಮವನ್ನು ನೀಡುತ್ತದೆ. ಇದು ರಂಜಕ, ಸತು, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ನಂತಹ ಖನಿಜಗಳಿಂದ ಸಮೃದ್ಧವಾಗಿದೆ, ಇದು ಚರ್ಮದ ಸಮಸ್ಯೆಗಳಿಗೆ ಅತ್ಯುತ್ತಮ ಆಯ್ಕೆಯಾಗಿದೆ.
ಮೊಡವೆಗಳಿಂದ ಪರಿಹಾರ ಪಡೆಯಲು ಬೆಳ್ಳುಳ್ಳಿ ಸಹಾಯ ಮಾಡುತ್ತದೆ. ಬೆಳ್ಳುಳ್ಳಿಯಲ್ಲಿರುವ ಆ್ಯಂಟಿಆಕ್ಸಿಡೆಂಟ್ಗಳು ಬ್ಯಾಕ್ಟೀರಿಯಾವನ್ನು ಕೊಲ್ಲಲು ಸಹಾಯ ಮಾಡುತ್ತದೆ. ಒಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ನಿಮ್ಮ ಮೊಡವೆ ಮೇಲೆ ಉಜ್ಜಿ. ಬೆಳ್ಳುಳ್ಳಿಯಲ್ಲಿರುವ ಅಲಿಸಿನ್ ಮೊಡವೆಗಳಿಗೆ ಕಾರಣವಾಗುವ ಬ್ಯಾಕ್ಟೀರಿಯಾವನ್ನು ಕೊಲ್ಲಲು ಸಹಾಯ ಮಾಡುತ್ತದೆ.
ಇದು ರಕ್ತ ಪರಿಚಲನೆ ಮತ್ತು ಮೊಡವೆಗಳಿಂದ ಉಂಟಾಗುವ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಮದು ಸಾಬೀತಾಗಿದೆ. ಬೆಳ್ಳುಳ್ಳಿ ರಸವು  ಹುಣ್ಣುಗಳು, ದದ್ದುಗಳು ಮತ್ತು ಗುಳ್ಳೆಗಳನ್ನು ಸಹ ನಿವಾರಣೆ ಮಾಡಲು  ಪ್ರಯೋಜನಕಾರಿಯಾಗಿದೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »