TOP STORIES:

ಶ್ರೀ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ – ಉಪ್ಪುಂದ ವತಿಯಿಂದ ನಿರ್ಮಿಸಿದ 5ನೇ ಮನೆ ಹಸ್ತಾಂತರ


ಕುಂದಾಪುರ :-8 ಅಕ್ಟೋಬರ್, ಕಾಳಾವರದಲ್ಲಿ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್( ರಿ ) ಉಪ್ಪುಂದ ಇದರ ವ್ಯವಸ್ಥಾಪಕ ನಿರ್ದೇಶಕರಾದ ಡಾಕ್ಟರ್, ಶ್ರೀ ಗೋವಿಂದ ಬಾಬು ಪೂಜಾರಿ ಅವರು ಪೂರ್ಣ ಜವಾಬ್ದಾರಿಯನ್ನು ಹೊತ್ತು ನಿರ್ಮಿಸಿಕೊಟ್ಟ 5ನೇ ಮನೆ ಗೃಹಪ್ರವೇಶ ಇಂದು ಸಂತಸದಿಂದ ನಡೆಯಿತು.

ರಿಕ್ಷಾ ಡ್ರೈವರ್ ಒಬ್ಬರ “ಕನಸು” ನನಸು ಮಾಡಿದ ಆಶ್ರಯದಾತ ಶ್ರೀ ಗೋವಿಂದ ಬಾಬು ಪೂಜಾರಿ, ಕಾಳಾವರರದ ನರಿಕೋಡ್ಲು ಮನೆ ಸತೀಶ್ ಪೂಜಾರಿ ಯವರು ನೂತನ ಮನೆ ನಿರ್ಮಾಣ ಮಾಡಬೇಕು ಎಂಬ ಕನಸು ಕಂಡು ಮನೆ ನಿರ್ಮಾಣಕ್ಕೆ ಕೈ ಹಾಕಿದ್ದರು.

ಆದರೆ ವಿಧಿ ಆಟವೇ ಬೇರೆಯಾಗಿತ್ತು ಮನೆ ಪೂರ್ಣವಾಗುವ ಮೊದಲೇ ಅಕಾಲಿಕ ಮರಣಕ್ಕೆ ತುತ್ತಾಗುತ್ತಾರೆ ಇದರಿಂದ ಮನೆಯವರು ಮನೆ ನಿರ್ಮಾಣ ಮಾಡಲು ಸಾಧ್ಯವಾಗದೇ ತೀವ್ರ ಕಷ್ಟದಲ್ಲಿ ಇರುವುದು ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಗೋವಿಂದ ಬಾಬು ಪೂಜಾರಿ ಅವರ ಗಮನಕ್ಕೆ ಬಂದು ಮನೆಯನ್ನು ಪೂರ್ಣಗೊಳಿಸಿ ಕೊಡುವ ಭರವಸೆ ನೀಡಿದರು.

ಇದೀಗ ಸುಸಜ್ಜಿತ ನಿರ್ಮಾಣಗೊಂಡಿದ್ದು ಈ ಮನೆ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಿ ಕೊಡುತ್ತಿರುವ 5ನೇ ಮನೆ ಇದಾಗಿರುತ್ತದೆ.

ಶುಭಗಳಿಗೆಯಲ್ಲಿ “ಶ್ರೀ ವರಲಕ್ಷ್ಮಿ ನಿಲಯದ “ಗ್ರಹಪ್ರವೇಶವು ಕಾಳಾವರ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಶಾಸಕರು ಕುಂದಾಪುರ, ಗೋವಿಂದ ಬಾಬು ಪೂಜಾರಿ, ಅಶೋಕ್ ಪೂಜಾರಿ ಬಿಲ್ಲಾಡಿ, ಬಿಲ್ಲವ ಸೇವಾ ಸಂಘದ ಅಧ್ಯಕ್ಷರು ಆಶಾಲತಾ ಶೆಟ್ಟಿ ಕಾಳಾವರ ಗ್ರಾಮ ಪಂಚಾಯತ್ ಅಧ್ಯಕ್ಷರು. ಬಿಲ್ಲವ ಸಂಘದ ಹಿರಿಯ ಮುಖಂಡರು,ಪಂಚಾಯತ್ ಸದಸ್ಯರು ಮತ್ತು ಶ್ರೀ ಗೋವಿಂದ ಬಾಬು ಪೂಜಾರಿ ಅಭಿಮಾನಿ ಬಳಗ ಶ್ರೀಯುತರ ಮಾತಾಪಿತರು ಮತ್ತು ಸಂಸಾರದ ಸರ್ವಸದಸ್ಯರು ಊರ ಜನತೆಯ ಉಪಸ್ಥಿತಿಯೊಂದಿಗೆ ಬಹಳ ಮಹತ್ವಪೂರ್ಣವಾಗಿ ಕಾರ್ಯಕ್ರಮ ನಡೆಯಿತು.

✍️ಈಶ್ವರ್ ಸಿ ನಾವುಂದ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »