TOP STORIES:

FOLLOW US

“ಎಲ್ಲಿ ಸ್ತ್ರೀ ಶಕ್ತಿಯನ್ನು ಪೂಜಿಸುತ್ತಾರೋ ಅಲ್ಲಿ ದೈವಿಕ ಶಕ್ತಿ ನೆಲೆಸುತ್ತದೆ” : ಬರಹ – ರಶ್ಮಿ ಸನಿಲ್ ಮಂಗಳೂರು


“ಎಲ್ಲಿ ಸ್ತ್ರೀ ಶಕ್ತಿಯನ್ನು ಪೂಜಿಸುತ್ತಾರೋ ಅಲ್ಲಿ ದೈವಿಕ ಶಕ್ತಿ ನೆಲೆಸುತ್ತದೆ” ಎಂಬ ನಂಬಿಕೆ ಇರುವ ದೇಶ ಭಾರತ. ಆದರೆ, ಇಂದು ವಿಶ್ವದಲ್ಲೇ ಮಹಿಳೆಯರಿಗೆ ಭಾರತ ಅತ್ಯಂತ ಅಪಾಯಕಾರಿ ದೇಶ. ಅದಕ್ಕೆ ಕಾರಣ ಇತ್ತೀಚೆಗೆ ಮಹಿಳೆಯರ ಮೇಲೆ ನಡೆಯುತ್ತಿರುವ ಭೀಕರ ಅತ್ಯಾಚಾರಗಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳು.

ಭಾರತದಲ್ಲಿ ಪ್ರತಿ ಒಂದು ಗಂಟೆಗೆ ನಾಲ್ಕು ಅತ್ಯಾಚಾರ ಪ್ರಕರಣ ದಾಖಲಾಗುತ್ತಿದೆಯಂತೆ. ದಾಖಲಾಗದೆ ಉಳಿದ ಅತ್ಯಾಚಾರಗಳನ್ನು ಪರಿಗಣಿಸಿದರೆ ಗಂಟೆಗೆ ೧೦ಕ್ಕೂ ಹೆಚ್ಚು ಅತ್ಯಾಚಾರಗಳಾಗುತ್ತಿವೆ ಎಂಬುದು ಆತ್ಮವನ್ನೇ ಹಿಸುಕಿ ಹಾಕುವ ಕಠೋರ ಸತ್ಯ.

 

ಭಾರತದಲ್ಲಿ ಪ್ರಮುಖವಾಗಿ ಮಹಿಳೆಯರ ಮೇಲೆ ಮೂರು ವಿಧದ ದೌರ್ಜನ್ಯಗಳು ನಡೆಯುತ್ತಿವೆ. ಮೊದಲನೆಯದು ಲೈಂಗಿಕ ಅತ್ಯಾಚಾರ, ಎರಡನೆಯದು ಧಾರ್ಮಿಕ ಮತ್ತು ಸಂಪ್ರದಾಯಗಳ ಹೆಸರಿನಲ್ಲಿ ಆಗುತ್ತಿರುವ ದೌರ್ಜನ್ಯ, ಮೂರನೆಯದ್ದು ಲೈಂಗಿಕ ಗುಲಾಮರನ್ನಾಗಿ ಮಾಡಿಕೊಳ್ಳಲು ಮಾನವ ಕಳ್ಳ ಸಾಗಣೆ ಮಾಡುವುದು ಕೂಡ ಭಾರತದಲ್ಲಿಯೇ ಹೆಚ್ಚಂತೆ.

 

ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಹೊಂದಿರುವ ಹಾಗೂ ಬಾಹ್ಯಾಕಾಶ ವಿಜ್ಞಾನದಲ್ಲಿ ಮುಂಚೂಣಿಯಲ್ಲಿರುವ ಭಾರತ ಮಹಿಳಾ ಸುರಕ್ಷತೆ ವಿಷಯದಲ್ಲಿ ಮಾತ್ರ ಇಡೀ ವಿಶ್ವದ ಮುಂದೆ ತಲೆ ತಗ್ಗಿಸುವಂತಾಗಿದೆ.

 

ಮಹಿಳೆಯನ್ನು ಪೂಜ್ಯನೀಯ ಭಾವನೆಯಲ್ಲಿ ಕಂಡು ಪೂಜಿಸುವ ದೇಶ ನಮ್ಮದು ಎನ್ನುವ ಹೆಮ್ಮೆಯ ಮಾತಿಗೆ ಕಳಂಕ ತರುವ ಕಾರ್ಯವನ್ನು ಇಂದು ಕೆಲವೊಂದು ಕಾಮ ಪಿಶಾಚಿಗಳು ಹಾಗೂ ದುಷ್ಟ, ದುಷ್ಕರ್ಮಿಗಳು ಎಸಗಿ ಹೂವಿನಂತಹ ಹೆಣ್ಣಿಗೆ ಮಾತ್ರ ಲೋಕದ ಕಟ್ಟು ಪಾಡು ಎನ್ನುವಂತೆ ಮಾಡಿದ್ದಾರೆ. ಮನೆಯ ಮಗನಿಗೆ ಬುದ್ಧಿ ಹೇಳಿದರೆ ಇಂದು ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಯಾಕೆಂದರೆ ಇಂದು ಹೆಣ್ಣನ್ನು ಅವಳು ತೊಡುವ ಬಟ್ಟೆಯಿಂದ ಅಳೆಯಲಾಗುತ್ತಿದೆ. ಆದರೆ ಅತ್ಯಾಚಾರ ಆದ ಪ್ರಕರಣಗಳಲ್ಲಿ ಅಪ್ರಾಪ್ತ ಬಾಲಕಿಯರ ಸಂಖ್ಯೆಯೂ ಹೆಚ್ಚಾಗಿದೆ. ಹೊರದೇಶಗಳಲ್ಲಿ ಅರೆಬರೆ ಬಟ್ಟೆ ತೊಟ್ಟರೂ ಅತ್ಯಾಚಾರದ ಸಂಖ್ಯೆ ಕಡಿಮೆ. ಹಾಗಾದರೆ ಇಲ್ಲಿ ಯಾರ ತಪ್ಪಿದೆ ಹೇಳಿ? ನೋಡುವವರ ದೃಷ್ಟಿ ಸರಿ ಇದ್ದರೆ ಎಲ್ಲವೂ ಪೂಜ್ಯನೀಯ ಅಲ್ಲವೇ? ಅದಕ್ಕಾಗಿ ಮನೆಯಿಂದಲೇ ಇದರ ಅರಿವು ಮೂಡಿಸಬೇಕು. ಮನೆಯಲ್ಲಿ ಹಿರಿಯರು ತಮ್ಮ ಮಕ್ಕಳಿಗೆ ಬುದ್ಧಿ ಹೇಳಿದರೆ ಬೇರೊಬ್ಬರಿಗೆ ಉಪದೇಶ ನೀಡುವ ಅಗತ್ಯ ಬರುವುದಿಲ್ಲ. ಅತ್ಯಾಚಾರ, ಲೈಂಗಿಕ ಶೋಷಣೆಯಂತಹ ಅಮಾನವೀಯ, ದುಷ್ಕೃತ್ಯಗಳು ಸ್ವಲ್ಪ ಮಟ್ಟಿಗೆಯಾದರೂ ಕಡಿಮೆಯಾಗಬಹುದು.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »