TOP STORIES:

FOLLOW US

ನಿಮ್ಮ ವಾಟ್ಸ್​ಆಯಪ್ ಜೊತೆ ಈ ಆ್ಯಪ್ ಇದ್ದರೆ ತಕ್ಷಣ ಡಿಲೀಟ್ ಮಾಡಿ


ವಾಟ್ಸ್​ಆಯಪ್ ಪ್ಲಸ್ ಆಯಪ್ ಇಂದು ಲಕ್ಷಕ್ಕೂ ಅಧಿಕ ಮಂದಿ ಉಪಯೋಗ ಮಾಡುತ್ತಿದ್ದಾರೆ. ನೀವು ಇಂಥಹ ಅನಧಿಕೃತ ಆಯಪ್ ಅನ್ನು ಬಳಸುತ್ತಿದ್ದರೆ ತಕ್ಷಣವೇ ಅದನ್ನು ಅನ್​ಇನ್​ಸ್ಟಾಲ್ ಮಾಡಿ.

ಒಂದು ಆಯಪ್ ಫೇಮಸ್ ಆಗಿದೆ ಎಂದಾದರೆ ಅದಕ್ಕೆ ಪೂರಕವಾದ ಅಥವಾ ಥೇಟ್ ಅದರಂತೆ ಇರುವ ನಕಲಿ ಆಯಪ್​ಗಳು (Fake App) ಕೂಡ ಹುಟ್ಟಿಕೊಳ್ಳುತ್ತವೆ. ಗೂಗಲ್ ಪ್ಲೇ ಸ್ಟೋರ್​​ನಲ್ಲಿ (Goolge Play store) ಈಗಲೂ ಅಂತಹ ಅನೇಕ ಆಯಪ್​ಗಳು ರಾರಾಜಿಸುತ್ತಿವೆ. ಇಂತಹ ಫೇಕ್ ಆಯಪ್​ಗಳನ್ನು ನೀವು ಇನ್​ಸ್ಟಾಲ್ ಮಾಡಿದ್ದರೆ, ಇವು ನಿಮ್ಮಲ್ಲಿರುವ ವೈಯಕ್ತಿಕ ಮಾಹಿತಿಯನ್ನು ಕದಿಯುತ್ತದೆ, ನಿಮ್ಮ ಬ್ಯಾಂಕ್ ಮಾಹಿತಿಯನ್ನು ಕಲೆಹಾಕಿ ಹಣ ದೋಚುತ್ತದೆ. ಈರೀತಿ ಅನೇಕ ಪ್ರಕರಣಗಳು ವರದಿಯಾಗಿದ್ದು ಗೊತ್ತೇ ಇದೆ. ಸದ್ಯ ವಾಟ್ಸ್​ಆಯಪ್​ನಂತೆ ಇರುವ ವಾಟ್ಸ್​ಆಯಪ್ ಪ್ಲಸ್ (WhatsApp Plus) ಎಂಬ ಆಯಪ್ ಅನ್ನು ಅನೇಕರು ಉಪಯೋಗಿಸುತ್ತಿದ್ದಾರೆ ಎಂಬುದು ತಿಳಿದುಬಂದಿದ್ದು ಅಂಥವರಿಗೆ ಕಂಟಕ ಎದುರಾಗಿದೆ.

 

ಹೌದು, ವಾಟ್ಸ್​ಆಯಪ್ ಪ್ಲಸ್ ಆಯಪ್ ಇಂದು ಲಕ್ಷಕ್ಕೂ ಅಧಿಕ ಮಂದಿ ಉಪಯೋಗ ಮಾಡುತ್ತಿದ್ದಾರೆ. ಸಾಮಾನ್ಯವಾಗಿ ಒಂದೇ ಸ್ಮಾರ್ಟ್​ಫೋನಿನಲ್ಲಿ ಎರಡು ವಾಟ್ಸ್​ಆಯಪ್ ಖಾತೆ ತೆರೆಯಲು ಸಾಧ್ಯವಿಲ್ಲ. ಹೀಗಾಗಿ ಒಂದು ಮೊಬೈಲ್​ನಲ್ಲಿ ಎರಡು ಸಿಮ್ ಬಳಸುವ ಅನೇಕರು ಒಂದು ಸಿಮ್​ನಲ್ಲಿ ಅಧಿಕೃತ ವಾಟ್ಸ್​ಆಯಪ್ ಇದ್ದರೆ, ಇನ್ನೊಂದು ಸಿಮ್​ಗಾಗಿ ವಾಟ್ಸ್​ಆಯಪ್ ಪ್ಲಸ್ ಅನ್ನು ಬಳಸುತ್ತಿದ್ದಾರೆ. ನೀವು ಹೀಗೆ ಮಾಡುತ್ತಿದ್ದರೆ ತಕ್ಷಣವೇ ವಾಟ್ಸ್​ಆಯಪ್ ಪ್ಲಸ್ ಆಯಪ್ ಅನ್ನು ಡಿಲೀಟ್ ಮಾಡಿ.

 

ವಾಟ್ಸ್​ಆಯಪ್​ ಪ್ಲಸ್​ನಿಂದ ವಾಟ್ಸ್​ಆಯಪ್​ಗೆ ತಲೆನೋವಾಗುವ ಪರಿಸ್ಥಿತಿ ಎದುರಾಗಿದ್ದು, ನೀವು ವಾಟ್ಸ್​ಆಯಪ್​ ಪ್ಲಸ್ ನಂತಹ ಅನಧಿಕೃತ ಆಯಪ್ ಅನ್ನು ಬಳಸುತ್ತಿದ್ದರೆ ತಕ್ಷಣವೇ ಅದನ್ನು ಅನ್​ಇನ್​ಸ್ಟಾಲ್ ಮಾಡಿ ಎಂದು ವರದಿಯಾಗಿದೆ. ಇಲ್ಲದಿದ್ದರೆ ವಾಟ್ಸ್​ಆಯಪ್​​ ನಿಮ್ಮ ಖಾತೆಯನ್ನು ಸ್ಥಗಿತಗೊಳಿಸಬಹುದು. ವಾಟ್ಸ್​ಆಯಪ್​​ ಪ್ಲಸ್ ಒಂದು ಅನಧಿಕೃತ ಆವೃತ್ತಿಯಾಗಿದ್ದು, ಬಳಕೆದಾರರಿಗೆ ಸ್ಥಿತಿಯನ್ನು ಮರೆಮಾಚುವುದು, ಮಿತಿಗಳಿಲ್ಲದೆ ಫೋಟೋಗಳನ್ನು ಕಳುಹಿಸುವುದು, ನಿರ್ಧಿಷ್ಟ ಮಿತಿಯನ್ನು ಮೀರಿ ಗುಂಪುಗಳನ್ನು ರಚಿಸುವುದು ಮುಂತಾದ ಹೆಚ್ಚುವರಿ ವೈಶಿಷ್ಟ್ಯಗಳನ್ನು ನೀಡುತ್ತದೆ.

 

ಥರ್ಡ್ ಪಾರ್ಟಿ ಆಯಪ್​ ವಾಟ್ಸ್​ಆಯಪ್​ ಪ್ಲಸ್ ಬಳಸಿದರೆ ವಾಟ್ಸ್​ಆಯಪ್​ನಿಂದ ತಾತ್ಕಾಲಿಕ ಬ್ಯಾನ್ ಮಾಡಲಾಗುತ್ತದೆ ಎಂದು ವಾಟ್ಸ್​ಆಯಪ್ ನೀತಿ ನಿಯಮಗಳು ತಿಳಿಸುತ್ತವೆ. ಹೀಗಾಗಿ ಈ ಆಯಪ್​ಗಳನ್ನು ಬಳಸುತ್ತಿದ್ದರೆ ತಕ್ಷಣವೆ ಡಿಲೀಟ್ ಮಾಡಿ.

 

ಕಳೆದ ಆಗಸ್ಟ್ ತಿಂಗಳಲ್ಲಿ 20,70,000 ವಾಟ್ಸ್​ಆಯಪ್​ ಖಾತೆಗಳನ್ನು ಫೇಸ್​ಬುಕ್ ಒಡೆತನದ ಕಂಪನಿ ವಾಟ್ಸ್​​ಆಯಪ್ ಭಾರತದಲ್ಲಿ ನಿಷೇಧಿಸಿದೆ. ವಾಟ್ಸ್​ಆಯಪ್​ ಸುಮಾರು 420 ಕುಂದುಕೊರತೆಯ ವರದಿಗಳನ್ನು ಆಗಸ್ಟ್‌ನಲ್ಲಿ ಪಡೆದಿತ್ತು. ವಾಟ್ಸ್​​ಆಯಪ್​ ಕುರಿತಾಗಿ ಖಾತೆ ಬೆಂಬಲ (105), ನಿಷೇಧ ಮನವಿ (222), ಇತರ ಬೆಂಬಲ (34), ಉತ್ಪನ್ನ ಬೆಂಬಲ (42) ಮತ್ತು ಸುರಕ್ಷತೆ (17) ಗಳ ವಿಚಾರವಾಗಿ 420 ಬಳಕೆದಾರರ ವರದಿಗಳನ್ನು ಸ್ವೀಕರಿಸಲಾಗಿದೆ ಎಂದು ವಾಟ್ಸ್‌ಆಯಪ್ ಅನುಸರಣೆ ಡೇಟಾ ತೋರಿಸಿದೆ. ಆದಾಗ್ಯೂ, 421 ವರದಿಗಳ ಪೈಕಿ, ವಾಟ್ಸಾಪ್ 41 ಖಾತೆಗಳ ವಿರುದ್ಧ ಪರಿಹಾರ ಕ್ರಮಗಳನ್ನು ಕೂಡ ಕೈಗೊಂಡಿದೆ.

 

 


Share:

More Posts

Category

Send Us A Message

Related Posts

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »