TOP STORIES:

ಬಂಟ್ವಾಳ : ಬಿರುವೆರ್ ಕುಡ್ಲ ಮಹಾ ಸೇವಾ ಯೋಜನೆಯ ಅಡಿಯಲ್ಲಿ ನಿರ್ಮಿಸಲಾದ ನೂತನ ಸುಸಜ್ಜಿತ ಮನೆಯ ಹಸ್ತಾಂತರ


ಬಂಟ್ವಾಳ:   ಬಿರುವೆರ್ ಕುಡ್ಲ ಇದರ ಮಹಾ ಸೇವಾ ಯೋಜನೆಯ ಅಂಗವಾಗಿ ಬಂಟ್ವಾಳದ ಭಂಡಾರಿ ಬೆಟ್ಟುವಿನಲ್ಲಿ ಬಡಕುಟುಂಬದ ಲಿಂಗಪ್ಪ ದಂಪತಿಗಳಿಗೆ ಸುಸಜ್ಜಿತ ಮನೆ ನಿರ್ಮಿಸಿದ್ದು ಬುಧವಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಕಷ್ಟ ಕಣ್ಣೀರಿನಲ್ಲಿರುವವರಿಗೆ ನೆರವು ನೀಡುವುದೇ ಭಗವಂತನ ಪೂಜೆಯಾಗಿದ್ದು, ಬ್ರಹ್ಮಶ್ರೀ ನಾರಾಯಣ ಗುರುಗಳು ಕೂಡ ಇದನ್ನೇ ಪ್ರತಿಪಾದಿಸಿದ್ದರು‌. ಒಂದು ಸರಕಾರ ಮಾಡುವ ಕಾರ್ಯವನ್ನು ಬಿರುವೆರ್ ಕುಡ್ಲ ಮಾಡುತ್ತಿದೆ ಎಂದು ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.

 

ಬಂಟ್ವಾಳ:   ಬಿರುವೆರ್ ಕುಡ್ಲ ಇದರ ಮಹಾ ಸೇವಾ ಯೋಜನೆಯ ಅಂಗವಾಗಿ ಬಂಟ್ವಾಳದ ಭಂಡಾರಿ ಬೆಟ್ಟುವಿನಲ್ಲಿ ಬಡಕುಟುಂಬದ ಲಿಂಗಪ್ಪ ದಂಪತಿಗಳಿಗೆ ಸುಸಜ್ಜಿತ ಮನೆ ನಿರ್ಮಿಸಿದ್ದು ಬುಧವಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್ ಕಟೀಲ್ ಅವರು ಮನೆ ಹಸ್ತಾಂತರಿಸಿದರು.ಬಳಿಕ ಮಾತನಾಡಿದ ಅವರು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯಪೂಜಾರಿ ನೇತೃತ್ವದಲ್ಲಿ ಸಂಘಟನೆಯ ಯುವಕರು ಮಾದರಿ ಕೆಲಸ ಮಾಡುತ್ತಿದ್ದಾರೆ.

ಯಾವುದೇ ಒಳ್ಳೆಯ ಕೆಲಸ ಮಾಡುವಾಗ ಟೀಕೆ ಸಹಜ.ಅದನ್ನು ಎದುರಿಸಿಕೊಂಡೇ ಇಂದು ಈ ಸಂಘಟನೆ ಈ ಮಟ್ಟಕ್ಕೆ ಬೆಳೆದಿದೆ.ಬಡವರಿಗೆ ಸೇವೆ ಮಾಡುವುದೂ ಕೂಡ ದೇವರ ಪೂಜಾ ಕಾರ್ಯ ಎನಿಸಿಕೊಳ್ಳುತ್ತದೆ.ಸರಕಾರ ಮಾಡಬೇಕಾದ ಕೆಲಸ ಬಿರುವೆರ್ ಕುಡ್ಲದಿಂದ ನಡೆದಿದೆ.ಈ ಸಂಘಟನೆ ರಾಜ್ಯ ಮಟ್ಟದಲ್ಲಿ ಬೆಳೆಯಲಿ ಎಂದು ಹಾರೈಸಿದರು.

ಬಿಜೆಪಿ ದ.ಕ ಜಿಲ್ಲಾಧ್ಯಕ್ಷ  ಸುದರ್ಶನ್ , ಬಂಟ್ವಾಳ ಶಾಸಕ ರಾಜೇಶ್ ನೈ್ಕ್ ,ನ್ಯಾಯವಾದಿ ಪ್ರಸಾದ್ ,ಮತ್ತಿತರರು ಶುಭ ಹಾರೈಸಿದರು. ಬಿರುವೆರ್ ಕುಡ್ಲದ ಮಹಿಳಾ ಘಟಕ ಸಹಿತ  22 ಘಟಕಗಳು ಸಂಯುಕ್ತವಾಗಿ ಸೇರಿ ಈ ಮಹಾ ಸೇವಾ ಯೋಜನೆ ಕಾರ್ಯ ಹಮ್ಮಿಕೊಂಡಿದೆ.ಬಂಟ್ವಾಳದಲ್ಲಿ  ನಿರ್ಮಿಸಿದ ಮನೆ 5ನೇಯದ್ದಾಗಿದೆ.ಇದರ ಜತೆಗೆ ಇತೃ 500ಕ್ಕೂ ಅಧಿಕ ಸಮಾಜಮುಖೀ ಸೇವಾ ಯೋಜನೆ ಮಾಡಿದೆ.ಉದಯ ಪೂಜಾರಿ ನೇತೃತ್ವದಲ್ಲಿ ಪ್ರಧಾನ ಸಂಘಟನೆ ಈಗಾಗಲೇ ಅಂದಾಜು 2 ಕೋಟಿಗೂ ಮಿಕ್ಕಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬದ ಆರೋಗ್ಯ ಚಿಕಿತ್ಸೆಗೆ,ವಿಕಲ ಚೇತನರಿಗೆ  ಗಾಲಿ ಕುರ್ಚಿ,ಶಿಕ್ಷಣಕ್ಕೆ  ಮತ್ತಿತರ ಯೋಜನೆಗೆ ವಿತರಿಸಿದೆ.ಸಂಘಟನೆಯ ಸದಸ್ಯರ,ದಾನಿಗಳ ನೆರವಿನಿಂದ  ನಿರಂತರವಾಗಿ ಸಮಾಜದಲ್ಲಿ ಕಳೆದ 7 ವರ್ಷಗಳಲ್ಲಿ  ಸೇವಾ ನಿರತವಾಗಿದೆ.ಕಾರ್ಯಕ್ರಮದಲ್ಲಿ ವಸಂತಪೂಜಾರಿ,ಬುಡಾ ಅಧ್ಯಕ್ಷರು,ಬಿರುವೆರ್ ಕುಡ್ಲ ಸ್ಥಾಪಕ ಉದಯಪೂಜಾರಿ,ಸಂಘಟಕ ಚಂದ್ರಕುಮಾರ್, ಮತ್ತಿತರರು ಉಪಸ್ಥಿತರಿದ್ದರು


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »