TOP STORIES:

ಬಿಲ್ಲವರಲ್ಲಿ ನಡೆಯುತ್ತಿದ್ದ ಕೈ ಪತ್ತವುನಿ ಎನ್ನುವ ಕ್ರಮದ ಮದುವೆ


ಮೂಲ:- ಅಮಣಿ ಅಮ್ಮ ಅಗತ್ತಾಡಿ ದೋಲ ಬಾರಿಕೆ

ಬರಹ:- ಶೈಲು ಬಿರ್ವ ಅಗತ್ತಾಡಿ ದೋಲ ಬಾರಿಕೆ

 

ಮದುವೆ ಎನ್ನುವುದು ಎರಡು ಜೀವಗಳನ್ನು ಬೆಸೆಯುವುದರ ಜೊತೆಗೆ ಸಂತಾನಾಭಿವೃದ್ಧಿಯ ದ್ಯೋತಕವು ಹೌದು. ತುಳುನಾಡಿನ ಪ್ರತಿಯೊಂದು ಜಾತಿಗಳು ಅವರದೇ ಆದ ಕ್ರಮಗಳಲ್ಲಿ ಮದುವೆಗಳನ್ನು ನಡೆಸುತ್ತಿದ್ದರು, ಇನ್ನೊಂದು ಜಾತಿ ಬೇರೆ ಜಾತಿಗಳ ಕ್ರಮಗಳಲ್ಲಿ ಮೂಗು ತೂರಿಸಿದ ಉದಾಹರಣೆಗಳು ಇಲ್ಲ. ಮಾತೃ ಪ್ರಧಾನ ಜಾತಿಗಳಾದ ಬಿಲ್ಲವ, ಬಂಟ, ಕುಲಾಲ, ಗಾಣಿಗ ಮತ್ತು ಮೊಗವೀರ ಜಾತಿಗಳಲ್ಲಿ ಸಾಮಾನ್ಯವಾಗಿ ಕೆಲವೊಂದು ಕ್ರಮಗಳನ್ನು ಹೊರತು ಪಡಿಸಿ ಎಲ್ಲಾ ಕ್ರಮಗಳಲ್ಲಿ ಒಂದು ರೀತಿಯ ಹೋಲಿಕೆ ಇತ್ತು. ಬಿಲ್ಲವರು ತಮ್ಮ ಎಲ್ಲಾ ಕ್ರಮಗಳಲ್ಲಿ ತಮ್ಮದೇ ಆದ ಅಧಿಪತ್ಯವನ್ನು ಹೊಂದಿದ್ದವರು.

ಎಲ್ಲವೂ ಕೂಡ ಈ‌ ಹಿಂದೆ ಹೇಳಿದಂತೆ ಗುರಿಕಾರನ( ಬೋಂಟ್ರ) ಮುಖಾಂತರ ನಡೆಯುತ್ತಿತ್ತು. ನಾನು ಇಲ್ಲಿ ಹೇಳಹೊರಟಿರುವುದು ವಿಧವೆ ಮತ್ತು ಎರಡನೇ ಮದುವೆಯಾಗ ಹೊರಟ ಗಂಡಿನ ಮದುವೆಯ ಬಗ್ಗೆ. ಸಾಮಾನ್ಯವಾಗಿ ಮೊದಲನೇ ಮದುವೆಯಾದರೆ ಕೈಧಾರೆ ಬುಡುದಾರೆಗಳ ಕ್ರಮಗಳು ಮಡಿವಾಳರ ಪೌರೋಹಿತ್ಯದಲ್ಲಿ ಆಗುತ್ತಿದ್ದರೆ, ಈ ಕೈ ಪತ್ತವುನಿ ಕ್ರಮದಲ್ಲಿ ಮದುವೆಯಾಗುವ ಸಮಯದಲ್ಲಿ ಮಡಿವಾಳ ಪೌರೋಹಿತ್ಯ ಇರುವುದಿಲ್ಲ. ಎಲ್ಲವೂ ಕೂಡ ಗುರಿಕಾರನ ಮುಂದಾಳತ್ವದಲ್ಲಿ ಕೆಲವೇ ಸಂಬಂಧಿಕರ ಸಮ್ಮಖದಲ್ಲಿ ನಡೆಯುತ್ತಿತ್ತು. ಹೊರಗಿನವರ ಉಪಸ್ಥಿತಿ ಇಲ್ಲಿ ನಿಶಿಧ್ದವಾಗಿತ್ತು. ಮುಖ್ಯವಾಗಿ ಈ ಮದುವೆ ನಡೆಯುತ್ತಿದ್ದಿದ್ದೇ ಸಂಜೆಯ ಇಳಿ ಹೊತ್ತಿನಲ್ಲಿ ಹೆಣ್ಣಿನ ಮನೆಯಲ್ಲಿ. ಗಂಡಿನ ದಿಬ್ಬಣ ಹೆಣ್ಣಿನ ಮನೆಗೆ ಸೂರ್ಯ ಅಸ್ತಮಿಸುವ ಮುನ್ನ ಬಂದು ಸೇರುತ್ತಿತ್ತು. ಮದುವೆಯ ಹೆಣ್ಣು ಈ ಮೊದಲೇ ವಿಧವೆಯಾಗಿರುವುದರಿಂದ ಆಕೆಗೆ ಬೇರೊಬ್ಬರು ಅಲಂಕಾರ ಮಾಡುವ ಕ್ರಮ ಇರಲಿಲ್ಲ. ಆಕೆಯೆ ಒಂದು ಮರದ ಮಣೆಯಲ್ಲಿ ಕುಳಿತು ತನಗೆ ಬೇಕಾದ ಅಲಂಕಾರಗಳನ್ನು ತಾನೇ ಮಾಡಿಕೊಳ್ಳಬೇಕು ಮತ್ತು ಸೀರೆಯು ಕೂಡ ತಾನೇ ಉಟ್ಟುಕೊಳ್ಳಬೇಕು.

ಅದೇ ರೀತಿ ಕರಿಮಣಿಯನ್ನು ತಾನೇ ಕಟ್ಟಿಕೊಳ್ಳಬೇಕು, ಸಾಮಾನ್ಯವಾದ ಮದುವೆಯಲ್ಲಿ ಆದರೆ ಹೆಣ್ಣಿನ ತಾಯಿ ಅಥವ ಗುರಿಕಾರ್ತಿ ಕಟ್ಟುವ ಕ್ರಮ ಇರುತ್ತದೆ. ಅದೇ ರೀತಿ ಇಲ್ಲಿ ಗಂಡಿನ ಅಲಂಕಾರದಲ್ಲಿ ಮಾತ್ರ ಈ ರೀತಿಯ ಕಟ್ಟುಪಾಡು ಇರಲಿಲ್ಲ ಆತನಿಗೆ ಕಚ್ಚೆ ಹಾಕಲು ಇನ್ನೊಬ್ಬರ ಸಹಾಯ ಪಡೆದುಕೊಳ್ಳಬಹುದಿತ್ತು. ತದನಂತರ ಮದುವೆ ಗಂಡು ಮತ್ತು ಹೆಣ್ಣನ್ನು ಮನೆಯ ಚಾವಡಿಯಲ್ಲಿ ಎದುರು ಬದುರಾಗಿ ನಿಲ್ಲಿಸಿ ಅವರ ಮಧ್ಯದಲ್ಲಿ ಬಿಳಿ‌ ಬಟ್ಟೆಯನ್ನು ಅಡ್ಡವಾಗಿ ಮುಖ ಕಾಣದ ರೀತಿಯಲ್ಲಿ ಹಿಡಿಯುತ್ತಾರೆ, ಅವರ ಮಧ್ಯದಲ್ಲಿ ಗುರಿಕಾರ ನಿಂತು ಹೆಣ್ಣಿನ ಕೈಗೆ ಗಂಡಿನ ಕೈಯನ್ನು ಬಟ್ಟೆಯ ಮೇಲಿಂದ ಹಿಡಿಸುತ್ತಾನೆ. ಕೈಯನ್ನು ಹಿಡಿಸುವಾಗ ಲೆತ್ತ್ ಪನ್ಪುನಿ ಎನ್ನುವ ಕ್ರಮ ಇದೆ. ಅದು ಈ ರೀತಿಯಾಗಿ ಇದೆ. ಜಾತಿ ಸಂಗತೆರೆಡ, ಜಾತಿ ಬುದ್ಯಂತೆರೆಡ ಪೊಣ್ಣನ ಕೈನ್ ಆನನ ಕೈಟ್ ಪತ್ತಾವ ಅಂತ ಮೂರು ಸಲ ಕೂಗಿ ಹೇಳಿ ಕೈ ಹಿಡಿಸುತ್ತಾರೆ.

ಇಲ್ಲಿ ಹೆಣ್ಣಿನ ಕಡೆಯ ಗುರಿಕಾರನ ಮೂಲಕ ಈ ಕ್ರಮಗಳು ನಡೆಯುತ್ತವೆ. ನಂತರ ಗಂಡು ಹೆಣ್ಣನ್ನು ಕೂರಿಸಿ ಸೇಸೆ ಹಾಕುತ್ತಾರೆ. ಆದರೆ ಇಲ್ಲಿ ಬಂದವರೆಲ್ಲ ಮುಯ್ಯಿ ( ಹಣ ನೀಡುವ ಕ್ರಮ) ಮಾಡುವ ಕ್ರಮ ಇರಲಿಲ್ಲ. ಅದು ಮೊದಲನೇ ಮದುವೆಗೆ ಮಾತ್ರ ಸೀಮಿತವಾಗಿತ್ತು. ಇಲ್ಲಿ ಮದುವೆ ಮಾಡಿಸುವ ಮುಖ್ಯವಾದ ಉದ್ದೇಶ ಏನೆಂದರೆ ಹೆಣ್ಣಿಗೊಂದು ರಕ್ಷಣೆ ಇರಲಿ ಎನ್ನುವ ಉದ್ದೇಶ ಮಾತ್ರ ಆಗಿತ್ತು. ಮತ್ತು ಇದು ಅಷ್ಟೊಂದು ಪ್ರಚಾರವನ್ನು ಪಡೆದುಕೊಳ್ಳದೆ ಕೇವಲ ಕೆಲವೇ ಸಂಬಂಧಿಕರ ಉಪಸ್ಥಿತಿಯಲ್ಲಿ ಆಗುವ ಕ್ರಮಗಳಾಗಿದ್ದವು. ಊಟವು ಅಷ್ಟೆ ಕಡ್ಲೆ ಬಲ್ಯಾರಿನ ಸಮಾರಾಧನೆ ಆಗಿತ್ತು. ಯಾವುದೇ ಕಾರಣಕ್ಕೂ ಇದನ್ನು ಹಗಲಿನ ಹೊತ್ತಿನಲ್ಲಿ ನಡೆಸುತ್ತಿರಲಿಲ್ಲ. ಆದರೆ ಅಪರೂಪಕ್ಕೆ ಮತ್ತು ಅನುಕೂಲಕ್ಕಾಗಿ ಕೆಲವೊಂದು ಆಗಿದ್ದ ಉದಾಹರಣೆಯು ಇದಿಯಂತೆ.

ಇಲ್ಲಿ ಈ ಹಿಂದೆ ಹುಡುಗಿಗೆ ಮೊದಲ ಗಂಡನಲ್ಲಿ ಮಕ್ಕಳಿದಲ್ಲಿ ಆ ಮಕ್ಕಳನ್ನು ಎರಡನೇ ಗಂಡನೆ ತನ್ನ ಮನೆಗೆ ಕರೆದುಕೊಂಡು ಹೋಗಿ ಸಾಕುವ ಪರಿಪಾಠವು ಇತ್ತು. ಇಲ್ಲಿ ಗಮನಿಸಬೇಕಾದ ಮುಖ್ಯವಾದ ಅಂಶವೆಂದರೆ ವಿಧವಾ ವಿವಾಹಕ್ಕೆ ಮಾತೃ ಪ್ರಧಾನ ವ್ಯವಸ್ಥೆಯಲ್ಲಿ ಇದ್ದಂತಹ ಪ್ರೋತ್ಸಾಹ. ಈಗ ಈ ರೀತಿಯ ಕ್ರಮದ ಅವಶ್ಯಕತೆಯಿಲ್ಲ ಯಾಕೆಂದರೆ ಕ್ರಮಪ್ರಕಾರವಾಗಿ ಎರಡನೇ ಮದುವೆಯು ಕೂಡ ಮೊದಲನೇಯ ಮದುವೆ ರೀತಿಯಲ್ಲೇ ಆಗುತ್ತಿದೆ. ಆದರೆ ಈ ಕೈ ಪತ್ತವುನಿ ಕ್ರಮದ ಮದುವೆಗಳು ಪ್ರದೇಶದಿಂದ ಪ್ರದೇಶಕ್ಕೆ ಭಿನ್ನತೆಯನ್ನು ಕಾಯ್ದುಕೊಂಡಿದೆ.


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »