TOP STORIES:

ನಾಡು ಕಂಡ ಧೀಮಂತ ರಾಜಕಾರಣಿ ಮಾಜಿ ಮುಖ್ಯಮಂತ್ರಿ ದಿ!! ಎಸ್ ಬಂಗಾರಪ್ಪ ಜನುಮ ದಿನದಂದು ಗೌರವ ಪೂರ್ವಕ ನಮನಗಳು


ಬಂಗಾರಪ್ಪಾಜಿಯವರ ಸ್ಮರಣೋತ್ಸವದ ಅಂಗವಾಗಿ ಈ ಲೇಖನ.

ಎಸ್, ಬಂಗಾರಪ್ಪ ಅಂದರೆ ಸಾರೆಕೊಪ್ಪ ಬಂಗಾರಪ್ಪ ಅಂತ ಅರ್ಥ. ಸಾರೆಕೊಪ್ಪ ಎಂಬುದು ಅಂಚೆ ವಿಳಾಸ.

ಇವರ ಹುಟ್ಟೂರು ಶಿವಮೊಗ್ಗ* ಜಿಲ್ಲೆಯ *ಸೊರಬ* ತಾಲೂಕಿನ *ಕುಬಟೂರು* ಎಂಭ ಕುಗ್ರಾಮ. ಇವರ ತಂದೆಯ ಹೆದರು *ಕಲ್ಲಪ್ಪ.* ಮತ್ತು ತಾಯಿಯ ಹೆಸರು *ಕಲ್ಲಮ್ಮ* ಎಂದು. ಇವರಿಗೆ ಈ ಹೆಸರು ಬರಲು ಕಾರಣ *ಕಾರವಾರ* ಜಿಲ್ಲೆಯ *ಶಿರ್ಶಿ* ತಾಲೂಕಿನ *ಕದಂಭರು* ಆಳಿದ *ಬನವಾಸಿಯ* ಹತ್ತಿರ ಕೇವಲ ಮೂರು ಕಿ.ಮೀ. ದಲ್ಲಿ *ಗುಡ್ನಾಪುರ* ಎಂಬ ಹಳ್ಳಿ ಇದೆ. ಈ ಹಳ್ಳಿಯ ಪಕ್ಕದಲ್ಲಿ *ದೊಡ್ಡದಾದ ಕೆರೆಯೊಂದಿದೆ* ಸದಾ ವರ್ಷವಿಡೀ ನೀರಿನಿಂದ ತುಂಬಿರುವ ಈ ಕೆರೆಯ ಮಧ್ಯಭಾಗದಲ್ಲಿ *ಬಂಗಾರೇಶ್ವರ ದೇವಾಲಯವಿದೆ.* ಅಲ್ಲಿ *ಶಿವನ* ಅವತಾರ *ಬಂಗಾರೇಶ್ವರ* ನೆಲೆಸಿದ್ದಾನೆ.

 

*ಕಲ್ಲಪ್ಪ* ಮತ್ತು *ಕಲ್ಲಮ್ಮ* ದಂಪತಿಗಳಿಗೆ ಬಹಳ ದಿನವಾದರೂ ಗಂಡು ಸಂತಾನವಾಗುವುದಿಲ್ಲ ಆಗ ಮನೆದೇವರು *ಹುಚ್ಚುರಾಯೇಶ್ವರ ಸ್ವಾಮಿ {ಆಂಜನೇಯ ಸ್ವಾಮಿ}* ನೆನೆಯುತ್ತಾ ಈ ಬಂಗಾರೇಶ್ವರ ದೇವರಿಗೆ ಹರಕೆ ಹೊತ್ತರಂತೆ ಗಂಡು ಮಗು ಜನಿಸಿದರೆ ನಿನ್ನ ಹೆಸರೇ ನಾಮಕರಣ ಮಾಡುತ್ತೇವೆ ಅಂತ.ಆ ನಂತರದಲ್ಲಿ ಕಲ್ಲಮ್ಮನವರು ನವಮಾಸ ತುಂಬಿ ಮಗುವಿಗೆ ಜನ್ಮ ನೀಡಿದಾಗ ಗಂಡಯ ಮಗು ಆಗಿತ್ತಂತೆ ಹರಕೆಯ ಪ್ರಕಾರ ಆ ಗಂಡು ಮಗುವಿಗೆ *ಬಂಗಾರೇಶ್ವರನ* ಆಶಿರ್ವಾದದಿಂದ ಜನಿಸಿದ್ದಕ್ಕೆ *ಬಂಗಾರಪ್ಪ* ಎಂದು ನಾಮಕರಣ ಮಾಡಿದರಂತೆ. ಇವರೇ ನಾಡುಕಂಡ ಧೀಮಂತ ವ್ಯಕ್ತಿ , ಬಡವರ ಬಂಧು *ಈಡಿಗ ಸಮುದಾಯದ ಆಶಾಕಿರಣ ಬಂಗಾರಪ್ಪನವರು.*

 

ಅದೇ ರೀತಿಯಾಗಿ *ಬಂಗಾರಪ್ಪನವರ* ಸಹೋದರಿಯರು *ದೊಡ್ಡ ಕೆರಿಯಮ್ಮ* ಮತ್ತು *ಸಣ್ಣ ಕೆರಿಯಮ್ಮ* ಎಂದು. *ಬಂಗಾರೇಶ್ವರ* ದೇವಾಲಯದ ಪಕ್ಕ ಇರುವ *ಗುಡ್ನಾಪುರ* ಎಂಬ ಕುಗ್ರಾಮದ ಪಕ್ಕ ಕೆರೆ ಇದೆಯಲ್ಲ, ಅಲ್ಲಿ *ಬಂಗಾರೇಶ್ವರ ಸ್ವಾಮಿಯ ಜೊತೆಗೆ ಶಕ್ತಿಸ್ವರೂಪಿಣಿ ಆದಿಶಕ್ತಿ ಅಮ್ಮನಾಗಿ ಕೆರೆಯಲ್ಲಿರುವುದರಿಂದ ಕೆರೆಯಮ್ಮಳಾಗಿ ದರ್ಶನ ಕೊಡುತ್ತಿದ್ದಾಳೆ.*

 

ಆದ್ದರಿಂದ *ಬಂಗಾರಪ್ಪನವರ* ತಂದೆ ತಾಯಿ ತಮ್ಮ ಹೆಣ್ಣಮಕ್ಕಳಿಗೆ *ದೊಡ್ಡ ಕೆರೆಯಮ್ಮ,,, ಸಣ್ಣ ಕೆರೆಯಮ್ಮ* ಎಂದು ನಾಮಕರಣ ಮಾಡಿದ್ದಾರೆ.

ಬಂಗಾರಪ್ಪನವರು ಈಡಿಗ ಜಾತಿಗೆ ಸೇರಿದವರು. ಈಡಿಗ ಜಾತಿಯ ಉಪಜಾತಿಯಾದ ದೀವರು ಸಮುದಾಯಕ್ಕೆ ಸೇರಿದವರು.ಇವರ ಧರ್ಮ ಪತ್ನಿಯ ಹೆಸರು *ಶಕುಂತಲ. ಇವರದು ಕಾರವಾರ ಜಿಲ್ಲೆಯ ಶಿರ್ಶಿ ತಾಲೂಕಿನ ಮಳಲಗಾಂವ್ಎಂಬ ಹಳ್ಳಿ.ಇವರದು ಸಹಿತ ಈಡಿಗ ಸಮುದಾಯದ ಉಪಜಾತಿ ನಾಯ್ಕ ಕುಟುಂಬದವರು.

 

ಬಂಗಾರಪ್ಪನವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.

ಇವರ ಒಬ್ಬ ಪುತ್ರಿಯನ್ನು ಇದೇ ಸಮುದಾಯದ ಕನ್ನಡದ ಮುತ್ತು ಪದ್ಮಬೂಷಣ ಡಾ ! ರಾಜಕುಮಾರ ಅವರ ಪುತ್ರ ಶಿವರಾಜಕುಮಾರ ಮದುವೆಯಾಗಿದ್ದಾರೆ.

ಇನ್ನೋರ್ವ ಪುತ್ರಿ ಹೆಸರಾಂತ ದಿನಪತ್ರಿಕೆ ಪ್ರಜಾವಾಣಿಯ ಮಾಲಾಕರನ್ನು ಮಡದಿಯಾಗಿದ್ದಾರೆ.

ಬಂಗಾರಪ್ಪನವರು ತಮ್ಮ ರಾಜಕೀಯ ಅಕಾಂಕ್ಷೆಗೆ ಕಲಾವಿದರನ್ನು ಎಂದೂ ಬಳಸಿಕೊಳ್ಳಲಿಲ್ಲ. *ಡಾ ! ರಾಜ್* ಅವರನ್ನು ಒಂದು ದಿನವೂ ತಮ್ಮ ರಾಜಕೀಯ ಪ್ರಚಾರಕ್ಕೆ ಬರುವಂತೆ ಆಹ್ವಾನಿಸಲಿಲ್ಲ.

ಮಿರಿ ಮಿರಿ ಮಿಂಚುವ ಶರ್ಟ್ ಬಿಳಿ ಪ್ಯಾಂಟ್ ಬಿಳಿ ಚಪ್ಪಲಿ ಅಥವಾ ಶೂ, ಕಣ್ಣಿಗೆ ಕೂಲಿಂಗ್ ಕನ್ನಡಕ, ಕೈಯಲ್ಲಿ ಕನ್ನಡಕ ಇಡುವ ಬಾಕ್ಸ್ ಇದು *ಬಂಗಾರಪ್ಪನವರ* ಸಾರ್ವಜನಿಕ ವಸ್ತ್ರ ಸಂಹಿತೆ. ವೇದಿಕೆ ಮೇಲಿರುವಾಗಲಂತೂ ದೂರದಲ್ಲಿ ನಿಂತು ನೋಡುವವರಿಗೆ ಗುರುತು ಹಿಡಿಯಲು *ಮಿಂಚು ಅಚ್ಚಕೆಂಪು, ತಿಳಿನೀಲಿ, ಅಚ್ಚನೀಲಿ,ಶರ್ಟ್ ದರಿಸುತ್ತಿದ್ದರು.

ಬಂಗಾರಪ್ಪನವರನ್ನು ಈ ದಿನ ಮನದಲ್ಲಿ ಸ್ಮರಿಸಿಕೊಳ್ಳುತ್ತಾ ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಹಾರೈಸೋಣ.

ವಿಷಯ ಸಂಗ್ರಹ : ಆಂಜನೇಯ.ಟಿ.{ ಈಡಿಗ }

ಅಗಡಿ ಹಾವೇರಿ

9113604162


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »