TOP STORIES:

ನಾಡು ಕಂಡ ಧೀಮಂತ ರಾಜಕಾರಣಿ ಮಾಜಿ ಮುಖ್ಯಮಂತ್ರಿ ದಿ!! ಎಸ್ ಬಂಗಾರಪ್ಪ ಜನುಮ ದಿನದಂದು ಗೌರವ ಪೂರ್ವಕ ನಮನಗಳು


ಬಂಗಾರಪ್ಪಾಜಿಯವರ ಸ್ಮರಣೋತ್ಸವದ ಅಂಗವಾಗಿ ಈ ಲೇಖನ.

ಎಸ್, ಬಂಗಾರಪ್ಪ ಅಂದರೆ ಸಾರೆಕೊಪ್ಪ ಬಂಗಾರಪ್ಪ ಅಂತ ಅರ್ಥ. ಸಾರೆಕೊಪ್ಪ ಎಂಬುದು ಅಂಚೆ ವಿಳಾಸ.

ಇವರ ಹುಟ್ಟೂರು ಶಿವಮೊಗ್ಗ* ಜಿಲ್ಲೆಯ *ಸೊರಬ* ತಾಲೂಕಿನ *ಕುಬಟೂರು* ಎಂಭ ಕುಗ್ರಾಮ. ಇವರ ತಂದೆಯ ಹೆದರು *ಕಲ್ಲಪ್ಪ.* ಮತ್ತು ತಾಯಿಯ ಹೆಸರು *ಕಲ್ಲಮ್ಮ* ಎಂದು. ಇವರಿಗೆ ಈ ಹೆಸರು ಬರಲು ಕಾರಣ *ಕಾರವಾರ* ಜಿಲ್ಲೆಯ *ಶಿರ್ಶಿ* ತಾಲೂಕಿನ *ಕದಂಭರು* ಆಳಿದ *ಬನವಾಸಿಯ* ಹತ್ತಿರ ಕೇವಲ ಮೂರು ಕಿ.ಮೀ. ದಲ್ಲಿ *ಗುಡ್ನಾಪುರ* ಎಂಬ ಹಳ್ಳಿ ಇದೆ. ಈ ಹಳ್ಳಿಯ ಪಕ್ಕದಲ್ಲಿ *ದೊಡ್ಡದಾದ ಕೆರೆಯೊಂದಿದೆ* ಸದಾ ವರ್ಷವಿಡೀ ನೀರಿನಿಂದ ತುಂಬಿರುವ ಈ ಕೆರೆಯ ಮಧ್ಯಭಾಗದಲ್ಲಿ *ಬಂಗಾರೇಶ್ವರ ದೇವಾಲಯವಿದೆ.* ಅಲ್ಲಿ *ಶಿವನ* ಅವತಾರ *ಬಂಗಾರೇಶ್ವರ* ನೆಲೆಸಿದ್ದಾನೆ.

 

*ಕಲ್ಲಪ್ಪ* ಮತ್ತು *ಕಲ್ಲಮ್ಮ* ದಂಪತಿಗಳಿಗೆ ಬಹಳ ದಿನವಾದರೂ ಗಂಡು ಸಂತಾನವಾಗುವುದಿಲ್ಲ ಆಗ ಮನೆದೇವರು *ಹುಚ್ಚುರಾಯೇಶ್ವರ ಸ್ವಾಮಿ {ಆಂಜನೇಯ ಸ್ವಾಮಿ}* ನೆನೆಯುತ್ತಾ ಈ ಬಂಗಾರೇಶ್ವರ ದೇವರಿಗೆ ಹರಕೆ ಹೊತ್ತರಂತೆ ಗಂಡು ಮಗು ಜನಿಸಿದರೆ ನಿನ್ನ ಹೆಸರೇ ನಾಮಕರಣ ಮಾಡುತ್ತೇವೆ ಅಂತ.ಆ ನಂತರದಲ್ಲಿ ಕಲ್ಲಮ್ಮನವರು ನವಮಾಸ ತುಂಬಿ ಮಗುವಿಗೆ ಜನ್ಮ ನೀಡಿದಾಗ ಗಂಡಯ ಮಗು ಆಗಿತ್ತಂತೆ ಹರಕೆಯ ಪ್ರಕಾರ ಆ ಗಂಡು ಮಗುವಿಗೆ *ಬಂಗಾರೇಶ್ವರನ* ಆಶಿರ್ವಾದದಿಂದ ಜನಿಸಿದ್ದಕ್ಕೆ *ಬಂಗಾರಪ್ಪ* ಎಂದು ನಾಮಕರಣ ಮಾಡಿದರಂತೆ. ಇವರೇ ನಾಡುಕಂಡ ಧೀಮಂತ ವ್ಯಕ್ತಿ , ಬಡವರ ಬಂಧು *ಈಡಿಗ ಸಮುದಾಯದ ಆಶಾಕಿರಣ ಬಂಗಾರಪ್ಪನವರು.*

 

ಅದೇ ರೀತಿಯಾಗಿ *ಬಂಗಾರಪ್ಪನವರ* ಸಹೋದರಿಯರು *ದೊಡ್ಡ ಕೆರಿಯಮ್ಮ* ಮತ್ತು *ಸಣ್ಣ ಕೆರಿಯಮ್ಮ* ಎಂದು. *ಬಂಗಾರೇಶ್ವರ* ದೇವಾಲಯದ ಪಕ್ಕ ಇರುವ *ಗುಡ್ನಾಪುರ* ಎಂಬ ಕುಗ್ರಾಮದ ಪಕ್ಕ ಕೆರೆ ಇದೆಯಲ್ಲ, ಅಲ್ಲಿ *ಬಂಗಾರೇಶ್ವರ ಸ್ವಾಮಿಯ ಜೊತೆಗೆ ಶಕ್ತಿಸ್ವರೂಪಿಣಿ ಆದಿಶಕ್ತಿ ಅಮ್ಮನಾಗಿ ಕೆರೆಯಲ್ಲಿರುವುದರಿಂದ ಕೆರೆಯಮ್ಮಳಾಗಿ ದರ್ಶನ ಕೊಡುತ್ತಿದ್ದಾಳೆ.*

 

ಆದ್ದರಿಂದ *ಬಂಗಾರಪ್ಪನವರ* ತಂದೆ ತಾಯಿ ತಮ್ಮ ಹೆಣ್ಣಮಕ್ಕಳಿಗೆ *ದೊಡ್ಡ ಕೆರೆಯಮ್ಮ,,, ಸಣ್ಣ ಕೆರೆಯಮ್ಮ* ಎಂದು ನಾಮಕರಣ ಮಾಡಿದ್ದಾರೆ.

ಬಂಗಾರಪ್ಪನವರು ಈಡಿಗ ಜಾತಿಗೆ ಸೇರಿದವರು. ಈಡಿಗ ಜಾತಿಯ ಉಪಜಾತಿಯಾದ ದೀವರು ಸಮುದಾಯಕ್ಕೆ ಸೇರಿದವರು.ಇವರ ಧರ್ಮ ಪತ್ನಿಯ ಹೆಸರು *ಶಕುಂತಲ. ಇವರದು ಕಾರವಾರ ಜಿಲ್ಲೆಯ ಶಿರ್ಶಿ ತಾಲೂಕಿನ ಮಳಲಗಾಂವ್ಎಂಬ ಹಳ್ಳಿ.ಇವರದು ಸಹಿತ ಈಡಿಗ ಸಮುದಾಯದ ಉಪಜಾತಿ ನಾಯ್ಕ ಕುಟುಂಬದವರು.

 

ಬಂಗಾರಪ್ಪನವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.

ಇವರ ಒಬ್ಬ ಪುತ್ರಿಯನ್ನು ಇದೇ ಸಮುದಾಯದ ಕನ್ನಡದ ಮುತ್ತು ಪದ್ಮಬೂಷಣ ಡಾ ! ರಾಜಕುಮಾರ ಅವರ ಪುತ್ರ ಶಿವರಾಜಕುಮಾರ ಮದುವೆಯಾಗಿದ್ದಾರೆ.

ಇನ್ನೋರ್ವ ಪುತ್ರಿ ಹೆಸರಾಂತ ದಿನಪತ್ರಿಕೆ ಪ್ರಜಾವಾಣಿಯ ಮಾಲಾಕರನ್ನು ಮಡದಿಯಾಗಿದ್ದಾರೆ.

ಬಂಗಾರಪ್ಪನವರು ತಮ್ಮ ರಾಜಕೀಯ ಅಕಾಂಕ್ಷೆಗೆ ಕಲಾವಿದರನ್ನು ಎಂದೂ ಬಳಸಿಕೊಳ್ಳಲಿಲ್ಲ. *ಡಾ ! ರಾಜ್* ಅವರನ್ನು ಒಂದು ದಿನವೂ ತಮ್ಮ ರಾಜಕೀಯ ಪ್ರಚಾರಕ್ಕೆ ಬರುವಂತೆ ಆಹ್ವಾನಿಸಲಿಲ್ಲ.

ಮಿರಿ ಮಿರಿ ಮಿಂಚುವ ಶರ್ಟ್ ಬಿಳಿ ಪ್ಯಾಂಟ್ ಬಿಳಿ ಚಪ್ಪಲಿ ಅಥವಾ ಶೂ, ಕಣ್ಣಿಗೆ ಕೂಲಿಂಗ್ ಕನ್ನಡಕ, ಕೈಯಲ್ಲಿ ಕನ್ನಡಕ ಇಡುವ ಬಾಕ್ಸ್ ಇದು *ಬಂಗಾರಪ್ಪನವರ* ಸಾರ್ವಜನಿಕ ವಸ್ತ್ರ ಸಂಹಿತೆ. ವೇದಿಕೆ ಮೇಲಿರುವಾಗಲಂತೂ ದೂರದಲ್ಲಿ ನಿಂತು ನೋಡುವವರಿಗೆ ಗುರುತು ಹಿಡಿಯಲು *ಮಿಂಚು ಅಚ್ಚಕೆಂಪು, ತಿಳಿನೀಲಿ, ಅಚ್ಚನೀಲಿ,ಶರ್ಟ್ ದರಿಸುತ್ತಿದ್ದರು.

ಬಂಗಾರಪ್ಪನವರನ್ನು ಈ ದಿನ ಮನದಲ್ಲಿ ಸ್ಮರಿಸಿಕೊಳ್ಳುತ್ತಾ ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಹಾರೈಸೋಣ.

ವಿಷಯ ಸಂಗ್ರಹ : ಆಂಜನೇಯ.ಟಿ.{ ಈಡಿಗ }

ಅಗಡಿ ಹಾವೇರಿ

9113604162


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »