TOP STORIES:

“ಕಸ್ತೂರಿ ಕನ್ನಡ” ಬಹರೈನ್ ಎಫ್.ಎಂ. ರೇಡಿಯೋ ಕಾರ್ಯಕ್ರಮದ ರೂವಾರಿ ಕಮಲಾಕ್ಷ ಅಮೀನ್ ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ


ಬಹರೈನ್ ದ್ವೀಪ ರಾಷ್ಟ್ರದಲ್ಲಿ ಸುಮಾರು ಮೂರು ದಶಕದಿಂದ ಕನ್ನಡತುಳು ಸೇವೆಯನ್ನು ಪ್ರಾಮಾಣಿಕವಾಗಿ ಮಾಡುತ್ತಾ ಬಂದಿದ್ದ ಶ್ರೀಕಮಲಾಕ್ಷ ಅಮೀನ್ ರವರ ಬಹುಮುಖೀ ಸೇವೆಯನ್ನು ಸರಕಾರವು ಗುರುತಿಸಿ  ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿರಾಜ್ಯೋತ್ಸವಪ್ರಶಸ್ತಿಯನ್ನು ನೀಡಿ ಗೌರವಿಸಲು ನಿರ್ಧರಿಸಿದೆ. 1991ರಲ್ಲಿ ಬಹರೈನ್ ಗೆ ಬಂದಿದ್ದಕಮಲ್ನಂತರ ಹಿಂದೆ ತಿರುಗಿ ನೋಡಿಲ್ಲ. ಕನ್ನಡ ನಾಟಕಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ ಸುಧೆ, ಕನ್ನಡತುಳು ಸಮ್ಮೇಳನಗಳು, ಹೀಗೆ ಎಲ್ಲಾಕಾರ್ಯಕ್ರಮಗಳಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದರು. ಬಹರೈನ್ ಉತ್ಕೃಷ್ಟ ನಿರೂಪಕನೆಂಬ ಹೆಗ್ಗಳಿಕೆಗಳ ಮಧ್ಯೆ ಬಹರೈನ್ರೇಡಿಯೋದಲ್ಲಿಕಸ್ತೂರಿ ಕನ್ನಡವೆಂಬ ಕನ್ನಡ ಎಫ್.ಎಂ. ರೇಡಿಯೋವನ್ನೂ ಪ್ರಾರಂಭಿಸಿದ ಕೀರ್ತಿ ಇವರದ್ದು. ಇದೇ ಎಫ್.ಎಂ. ನಲ್ಲಿ  ಜಯಮಾಲಾ ಹಾಗೂ ಆಗ ಕಾರ್ಮಿಕ ಸಚಿವರಾಗಿದ್ದ ಆಸ್ಕರ್ ಫೆರ್ನಾಂಡಿಸ್ ರನ್ನು ಸಂದರ್ಶಿಸಿದ್ದರು. ಇವರ ಸ್ಪಷ್ಟ ಹಾಗೂಶುದ್ಧ ಕನ್ನಡದ ನಿರೂಪಣೆಯನ್ನು ಮೆಚ್ಚಿಕೊಂಡವರ ಸಾಲಿನಲ್ಲಿ ಶ್ರೀ ಬಿ. ಎಸ್. ಯೆಡಿಯೂರಪ್ಪ, ಶ್ರೀ ಅಭಯಚಂದ್ರ ಜೈನ್, ಕ್ಯಾಪ್ಟನ್ಗಣೇಶ್ ಕಾರ್ಣಿಕ್, ಮುಂತಾದವರು ಸೇರುತ್ತಾರೆ.

ಕರಾವಳಿ ಜಿಲ್ಲೆಗಳ ಕೆಲವೊಂದು ಕುಟುಂಬಗಳಿಗಾಗಿ ದ್ವೀಪದಲ್ಲಿ ಧನ ಸಂಗ್ರಹಿಸಿ ನೆರವಾದ ಹಿನ್ನೆಲೆಯೂ ಇವರದ್ದಾಗಿದೆ. ಕನ್ನಡ ಭಾಷೆಹಾಗೂ ಸಂಸ್ಕೃತಿಯನ್ನು ಅಚ್ಚುಕಟ್ಟಾಗಿ ಪ್ರಸ್ತುತಪಡಿಸಿ, ಕನ್ನಡದ ಕಂಪನ್ನು ಬಹರೈನ್ ದೇಶದಲ್ಲಿ ಪಸರಿಸುವಲ್ಲಿ ಇವರ ಕೊಡುಗೆದೊಡ್ಡಮಟ್ಟದಲ್ಲಿದೆ. ಕನ್ನಡ ಸಿನೆಮಾ ರಂಗದಲ್ಲಿ ಬಹಳಷ್ಟು ಮೇರು ಕಲಾವಿದರೊಡನೆ ಇವರಿಗೆ ನಿಕಟ ಸಂಪರ್ಕವಿದೆ.

ಕಳೆದ ದಶಕದಲ್ಲಿ ಇವರು ಗೆಳೆಯರೊಡನೆ ಹುಟ್ಟು ಹಾಕಿದನಮ್ಮ ಕನ್ನಡವೇದಿಕೆಯು ಬಹರೈನ್ ನಲ್ಲಿ ಉತ್ಕೃಷ್ಟ ಮಟ್ಟದ ಕನ್ನಡಸಾಂಸ್ಕೃತಿಕ ಹಾಗೂ ಸಂಗೀತ ಕಾರ್ಯಕ್ರಮಗಳನ್ನು ನೀಡಿದೆ. ಸ್ಯಾಂಡಲ್ ವುಡ್ ಶ್ರೀನಾಥ್, ನೆನಪಿರಲಿ ಪ್ರೇಮ್, ಗುರು ಕಿರಣ್, ದರ್ಶನ್, ರವಿ ಶಂಕರ್, ಅನುರಾಧ ಭಟ್ ರಂತಹಾ ದಿಗ್ಗಜರನ್ನು ಆಹ್ವಾನಿಸಿ ಕಾರ್ಯಕ್ರಮ ಹಮ್ಮಿಕೊಂಡಿದೆ.

ಮಡದಿ ಸೋನಲ್, ಮಕ್ಕಳಾದ ರಿಶಾನ್ ಮತ್ತು ಚಿರಾಗ್ ರನ್ನೊಳಗೊಂಡ ಸುಖೀ ಸಂಸಾರ ಇವರದ್ದು. ಬಹರೈನ್ ನಿಂದದಕ್ಷಿಣಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಪ್ರಥಮ ಕನ್ನಡಿಗ ಇವರು.

ಅಭಿನಂದನೆಗಳು ಕಮಲ್. ಬಹರೈನ್ ಕನ್ನಡಿಗರ ಇತಿಹಾಸದಲ್ಲಿ ಇದೊಂದು ಮೈಲಿಗಲ್ಲು. ಇತಿಹಾಸ ತಾನಾಗಿನಿರ್ಮಾಣವಾಗುವದಿಲ್ಲ. ಸಾಧಕರಿಂದ ನಿರ್ಮಿಸಲ್ಪಡುತ್ತದೆ.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »