TOP STORIES:

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ(ರಿ) ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಮಹಾ ಸಭೆ


ಪುತ್ತೂರು: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲ ಸ್ಥಾನ ಕ್ಷೇತ್ರಾಡಳಿತ ಸಮಿತಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ 2020-21 ನೇ ಸಾಲಿನ 5 ನೇ ವಾರ್ಷಿಕ ವಾರ್ಷಿಕ ಮಹಾ ಸಭೆಯು 30-10-2021 ಶನಿವಾರ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲ್ ಇವರ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್ ನಲ್ಲಿ ಜರಗಿತು.

ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ರವಿ ಪೂಜಾರಿ ಚಿಲಿಂಬಿ ಮಂಡಿಸಿದರು ವರದಿಯನ್ನು ಸಭೆಯು ಸರ್ವಾನುಮತದಿಂದ ಅಂಗೀಕರಿಸಿತು, ಸುಜಿತಾ ವಿ ಬಂಗೇರ ಸೂಚಿಸಿ ದಯಾನಂದ ಕಲ್ಯಾ ಅನುಮೋದಿಸಿದರು. ಕ್ಷೇತ್ರಾಡಳಿತ ಸಮಿತಿಯ ಕೋಶಾಧಿಕಾರಿ ದೀಪಕ್ ಕೋಟ್ಯಾನ್ ವಾರ್ಷಿಕ ಲೆಕ್ಕಪತ್ರ ವನ್ನು ಸಭೆಗೆ ಮಂಡಿಸಿದರು ಲೆಕ್ಕ ಪತ್ರ ವನ್ನು ಸಭೆಯು ವಿವರವಾಗಿ ಚರ್ಚಿಸಿ ಅಂಗೀಕರಿಸಿತು, ಭಾಸ್ಕರ್ ಸಾಲ್ಯಾನ್ ಸೂಚಿಸಿ ಎನ್. ಟಿ. ಪೂಜಾರಿ ಅನುಮೋದಿಸಿದರು. ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಸಮಗ್ರ ಅಭಿವೃದ್ಧಿಯ ಬಗ್ಗೆ ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು.

ಕ್ಷೇತ್ರಾಡಳಿತ ಸಮಿತಿಯ ಬೈಲಾದಲ್ಲಿ ನಮೂದಿಸಿರುವ ಹಾಗೆ ಹಾಲಿ ಕಾರ್ಯಕಾರಿ ಸಮಿತಿಯಲಿದ್ದ ಸದಸ್ಯರನ್ನು ಕೈ ಎತ್ತುವುದರ ಮೂಲಕ ಮುಂದಿನ ಅವಧಿಗೆ ಪುನಾರಾಯ್ಕೆ ಮಾಡಲಾಯಿತು.

ಪವರ್ ಸ್ಟಾರ್ ಸಮಾಜದ ಕಣ್ಮಣಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬಗ್ಗೆ ಭಕ್ತಿ ಭಾವವಿರುವ ಪುನೀತ್ ರಾಜ್ ಕುಮಾರ್ ನಿಧನಕ್ಕೆ ವಿಶೇಷವಾಗಿ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಭೆಯಲ್ಲಿ ಸಲ್ಲಿಸಲಾಯಿತು.

ಸಭೆಯಲ್ಲಿ ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷರಾದ ಡಾ. ರಾಜಶೇಖರ್ ಕೋಟ್ಯಾನ್, ಉಪಾಧ್ಯಕ್ಷರಾದ ಪೀತಾಂಬರ ಹೆರಾಜೆ, ಕಾರ್ಯಕಾರಿ ಸಮಿತಿಯ ಲ್ಲಿರುವ ಮುಂಬೈ ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷರಾದ ಹರೀಶ್ ಅಮೀನ್, ಬಿಲ್ಲವ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ರಾದ ಎನ್. ಟಿ. ಪೂಜಾರಿ ಹಾಗೂ ಇನ್ನಿತರ ಕಾರ್ಯಕಾರಿ ಸಮಿತಿ ಸದಸ್ಯರು ಸಭೆಯಲ್ಲಿಹಾಜರಿದ್ದರು. ಅಧ್ಯಕ್ಷರಾದ ಜಯಂತ ನಡುಬೈಲ್ ಸ್ವಾಗತಿಸಿ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಧನ್ಯವಾದ ನೀಡಿದರು.


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »