TOP STORIES:

ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ಸೇವಿಸೋದು ಎಷ್ಟು ಸೇಫ್? ಹಾಗಾದ್ರೆ ಓದಿ ಈ ಸುದ್ದಿ..!


ಆರೋಗ್ಯಕರ ದೇಹವನ್ನು ಪಡೆಯಬೇಕು ಅಂದರೆ ಬೆಳಗ್ಗಿನ ಉಪಹಾರದ ಕಡೆಯೂ ಸೂಕ್ತ ಗಮನ ಹರಿಸುವುದು ಅತ್ಯಗತ್ಯವಾಗಿದೆ. ಆದರೆ ಅನೇಕರಿಗೆ ಕೆಲಸಕ್ಕೆ ಹೋಗುವ ತರಾತುರಿ, ಮಕ್ಕಳನ್ನು ಶಾಲೆಗೆ ಕಳುಹಿಸುವ ಒತ್ತಡದಿಂದಾಗಿ ಉಪಹಾರ ಸೇವಿಸಲು ಸಾಧ್ಯವೇ ಆಗೋದಿಲ್ಲ. ಇಂತಹ ಸಂದರ್ಭದಲ್ಲಿ ಅನೇಕರು ಬಾಳೆ ಹಣ್ಣನ್ನು ತಿಂದು ಹೊಟ್ಟೆ ತುಂಬಿಸಿಕೊಳ್ಳುವುದುಂಟು.

ಈ ರೀತಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ಸೇವಿಸೋದು ಎಷ್ಟು ಸೇಫ್​ ಎಂದು ಎಂದಾದರೂ ಯೋಚಿಸಿದ್ದೀರೇ..? ಇಲ್ಲ ಎಂದಾದಲ್ಲಿ ಈ ಸ್ಟೋರಿಯನ್ನು ನೀವು ಓದಲೇಬೇಕು.

ರಾತ್ರಿ ಗಂಟೆಗಟ್ಟಲೇ ನಿದ್ದೆ ಮಾಡಿ ಬೆಳಗ್ಗೆ ಏಳುವ ನೀವು ಏನನ್ನು ಸೇವಿಸುತ್ತೀರಾ ಅನ್ನೋದು ನಿಮ್ಮ ಆರೋಗ್ಯವನ್ನು ರಕ್ಷಿಸಲೂಬಹುದು. ಹಾಳುಗೆಡವಲೂಬಹುದು. ಸುಲಭವಾಗಿ ಸಿಗುತ್ತೆ ಎಂಬ ಕಾರಣಕ್ಕೆ ಅನೇಕರು ಬೆಳಗ್ಗೆ ಬಾಳೆಹಣ್ಣನ್ನು ತಿಂದು ಹೊಟ್ಟೆ ತುಂಬಿಸಿಕೊಳ್ತಾರೆ. ಇದು ಆರೋಗ್ಯಕ್ಕೆ ಒಳ್ಳೆಯದು ಕೂಡ ಹೌದು.

ಬಾಳೆಹಣ್ಣನ್ನು ತಿನ್ನಬೇಕು ಎನಿಸಿದ್ರೆ ಸಾಕು ಅದನ್ನು ಹುಡುಕೋದು ಕಷ್ಟದ ಕೆಲಸವೇ ಅಲ್ಲ. ಒಂದು ವೇಳೆ ನೀವು ಫಿಟ್​ನೆಸ್​ ಪ್ರಿಯರಾಗಿದ್ದು ಬೆಳಗ್ಗಿನ ಉಪಹಾರ ತಯಾರಿಸುವ ವಿಚಾರದಲ್ಲಿ ಸೋಂಬೇರಿಗಳಾಗಿದ್ದರೆ ಬಾಳೆಹಣ್ಣು ನಿಮಗೆ ಉತ್ತಮ ಆಯ್ಕೆಯಾಗಿದೆ. ಬಾಳೆಹಣ್ಣಿನಲ್ಲಿ ಅಗಾಧ ಪ್ರಮಾಣದಲ್ಲಿ ಫೈಬರ್​, ಪೊಟ್ಯಾಷಿಯಂ, ಮ್ಯಾಗ್ನಿಷೀಯಂ ಅಂಶವಿದೆ. ಇದರಿಂದ ನಿಮ್ಮ ಜೀವ ನಿರೋಧ ಶಕ್ತಿ ಉತ್ತಮ ಆಗೋದ್ರ ಜೊತೆ ಜೊತೆಗೆ ಮೂಳೆಗಳೂ ಬಲಿಷ್ಠವಾಗುತ್ತದೆ.

ಅಲ್ಲದೇ ಬಾಳೆಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಬ್ಬಿಣಾಂಶ, ವಿಟಮಿನ್​ ಬಿ, ವಿಟಮಿನ್​ ಬಿ 6 ಇದೆ. ಬಾಳೆಹಣ್ಣಿನಲ್ಲಿರುವ ಸಿಹಿ ರುಚಿಯು ನಿಮಗೆ ಹೆಚ್ಚಿನ ಎನರ್ಜಿಯನ್ನು ನೀಡುತ್ತೆ. ಆದರೆ ಯಾವುದೇ ಕಾರಣಕ್ಕೂ ಬಾಳೆ ಹಣ್ಣೊಂದನ್ನೇ ನೀವು ಉಪಹಾರದಲ್ಲಿ ಸೇವನೆ ಮಾಡುವಂತಿಲ್ಲ..!

ಬಾಳೆಹಣ್ಣಿನಲ್ಲಿ ಅಗಾಧ ಪ್ರಮಾಣದಲ್ಲಿ ಪೋಷಕಾಂಶ ಅಡಗಿದೆ ಎಂಬ ಮಾತನ್ನು ತಳ್ಳಿ ಹಾಕುವಂತಿಲ್ಲ. ಆದರೆ ಇದರಲ್ಲಿರುವ ಸಕ್ಕರೆ ಅಂಶ ಮಧುಮೇಹಿಗಳಿಗೆ ಒಳ್ಳೆಯದಲ್ಲ. ಅಲ್ಲದೇ ಬಾಳೆಹಣ್ಣಿನಿಂದ ದೇಹಕ್ಕೆ ಸಿಕ್ಕ ಶಕ್ತಿಯು ಕೆಲವೇ ಸಮಯಗಳಲ್ಲಿ ಕರಗಿಬಿಡುತ್ತದೆ. ಇದೇ ಕಾರಣಕ್ಕೆ ನೀವು ಬಾಳೆ ಹಣ್ಣನ್ನು ಓಟ್ಸ್​​, ಇತರೆ ಹಣ್ಣುಗಳೊಂದಿಗೆ ಸೇವಿಸುವುದು ಹೆಚ್ಚು ಸೂಕ್ತ ಎನ್ನುವುದು ತಜ್ಞರ ಅಭಿಪ್ರಾಯವಾಗಿದೆ.

ಅಲ್ಲದೇ ಬಾಳೆಹಣ್ಣಿನಲ್ಲಿ ಮ್ಯಾಗ್ನೆಷಿಯಂ ಅತಿಯಾದ ಪ್ರಮಾಣದಲ್ಲಿದೆ. ಹೀಗಾಗಿ ಖಾಲಿ ಹೊಟ್ಟೆಯಲ್ಲಿ ಸೇವಿಸಿದ್ರೆ ಅದು ದೇಹದ ಜೀರ್ಣ ಕ್ರಿಯೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿರುತ್ತದೆ.


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »