TOP STORIES:

FOLLOW US

ಬಿಲ್ಲವ ಸಂಘಟನೆಯ ವಿರುದ್ದ ಶರಣ್‌ ಪಂಪ್ವೆಲ್‌ ಆರೋಪ ಖಂಡನೀಯ – ಅಕ್ಷಿತ್‌ ಸುವರ್ಣ


ಮಂಗಳೂರು: ಎರಡು ಸಂಘಟನೆಗಳ ಮಧ್ಯದ ಮನಸ್ತಾಪದ ವಿಚಾರದಲ್ಲಿ ಬಜರಂಗದಳ ನಾಯಕರಾದ ಶರಣ್‌ ಪಂಪ್ವೆಲ್‌ ಅವರು ಸದಾ ಒಂದೇ ಜಾತಿ ಒಂದೆ ಮತ ಎಂಬ ಧ್ಯೇಯದೊಂದಿಗೆ ಕಾರ್ಯಾಚರಿಸುತ್ತಿರುವ ಬಿಲ್ಲವ ಸಂಘಟನೆಯ ಹೆಸರನ್ನು ಎಳೆದು ತಂದಿರುವುದು ಖಂಡನೀಯವಾಗಿದೆ ಎಂದು ದಕ ಜಿಲ್ಲಾ ಯುವ ಜೆಡಿಎಸ್‌ ಅಧ್ಯಕ್ಷ ಅಕ್ಷಿತ್‌ ಸುವರ್ಣ ಹೇಳಿದ್ದಾರೆ.ನಾರಾಯಣ ಗುರುಗಳ ತತ್ವದಡಿಯಲ್ಲಿ ಎಲ್ಲರೂ ಕೂಡ ಒಂದೇ ಜಾತಿ ಒಂದೇ ಧರ್ಮ ಎಂಬ ಧ್ಯೇಯದೊಂದಿಗೆ ಜಿಲ್ಲೆಯಲ್ಲಿ ಬಿಲ್ಲವ ಸಂಘಟನೆ ಕಾರ್ಯಾಚರಿಸುತ್ತಿದ್ದು ಯಾವುದೇ ರೀತಿಯ ಘರ್ಷಣೆ ಕಲಹಕ್ಕೆ ಅವಕಾಶ ಮಾಡಿಕೊಡದೆ ತನ್ನ ಪಾಡಿಗೆ ಸಮಾಜದ ಉದ್ದಾರಕ್ಕಾಗಿ ಕೆಲಸ ಮಾಡಿಕೊಂಡು ಬರುತ್ತಿದೆ. ಇತ್ತೀಚೆಗೆ ಬಜರಂಗದಳದ ನಾಯಕರಾಗಿರುವ ಶರಣ್‌ ಪಂಪ್ವೆಲ್‌ ಅವರು ಇನ್ನೊಂದು ಸಂಘಟನೆಯೊಂದಿಗೆ ನಡೆದಿರುವ ಮಾತಿನ ಕಲಹದ ವೇಳೆ ವಿನಾಕಾರಣ ಬಿಲ್ಲವ ಸಂಘಟನೆಯನ್ನು ಎಳೆದು ತಂದಿರುವುದು ಮಾಧ್ಯಮಗಳಿಂದ ತಿಳಿದುಬಂದಿದೆ. ಬಿಲ್ಲವ ಸಂಘಟನೆ ಎಂದೂ ಕೂಡ ಯಾವುದೇ ಜಾತಿ ಧರ್ಮದ ವಿಚಾರದಲ್ಲಿ ಮೂಗು ತೂರಿಸದೇ ತನ್ನ ಸಮುದಾಯದ ಉದ್ದಾರಕ್ಕೆ ಶ್ರಮಿಸುತ್ತಿರುವಾಗ ತಮ್ಮ ವೈಯುಕ್ತಿಕ ದ್ವೇಷಕ್ಕೆ ಬಿಲ್ಲವ ಸಂಘಟನೆಯ ಹೆಸರನ್ನು ಬಳಸಿಕೊಂಡಿರುವುದು ಸರಿಯಲ್ಲ. ಸಾಮಾಜಿಕ ನ್ಯಾಯದ ಅಡಿಯಲ್ಲಿ ಕೆಲಸ ಮಾಡಿಕೊಂಡು ಬಂದಿರುವಾಗ ಅನಾವಶ್ಯಕವಾಗಿ ಸಂಘಟನೆಗಳ ಹೆಸರನ್ನು ಬಳಸಿಕೊಂಡು ಸಮಾಜದಲ್ಲಿ ಘರ್ಷಣೆಗೆ ಕಾರಣವಾಗುವ ಪರಿಸ್ಥಿತಿ ಉಂಟಾಗುತ್ತದೆ ಎನ್ನುವುದನ್ನು ನಾಯಕರಾದವರು ಅರಿಯಬೇಕಾಗಿದೆ. ಇನ್ನಾದರೂ ಅನಾವಶ್ಯಕವಾಗಿ ಬಿಲ್ಲವ ಸಂಘಟನೆಯ ಹೆಸರನ್ನು ಇಲ್ಲ ಸಲ್ಲದ ವಿಚಾರಕ್ಕೆ ಎಳೆದು ತರುವುದನ್ನು ನಿಲ್ಲಿಸುವಂತೆ ಅವರು ಆಗ್ರಹಿಸಿದ್ದಾರೆ.


Share:

More Posts

Category

Send Us A Message

Related Posts

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »