TOP STORIES:

ಫ್ರೆಂಡ್ಸ್ ಬಲ್ಲಾಳ್ ಬಾಗ್ “ಬಿರುವೆರ್ ಕುಡ್ಲದ ” ಉದಯಣ್ಣ ಓರ್ವ ವ್ಯಕ್ತಿಯಲ್ಲ ಸಮಾಜದ ಶಕ್ತಿ..


ಒಂದೇ ಜಾತಿ ಒಂದೇ ಮತ ಒಂದೇ ದೇವರುಎಂಬ ನೀತಿ ಸಂದೇಶವನ್ನು ವಿಶ್ವಕ್ಕೆ ಸಾರಿದ ಜಗದ್ಗುರು ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶವನ್ನು ಪಾಲಿಸಿಕೊಂಡು ಜನ ಸಾಮಾನ್ಯರ ಕಷ್ಟ ಕಾರ್ಪಣ್ಯಗಳಿಗೆ ಕರುಣೆ ಮಮತೆಯ ದೀವಿಗೆಯಾಗಿ ಸಮಾಜಸೇವೆಯನ್ನೇ ತನ್ನ ಉಸಿರಾಗಿಸಿಕೊಂಡು ಪರರ ನೋವು ನಲಿವುಗಳಿಗೆ ಧ್ವನಿಯಾಗಿ ಕಷ್ಟ ಎಂದು ಕಂಬನಿ ಮಿಡಿಯುವ ಮನಗಳಿಗೆಅವರ ಕಣ್ಣೀರೋರೆಸಿ ಮನ  ಮನೆಯಲ್ಲಿ ನಂದಾದೀಪ ಬೆಳಗಿಸಿದವೇ ನಮ್ಮ ಪ್ರೀತಿಯ ಬಿರುವೆರ್ ಕುಡ್ಲ ಸಂಘಟನೆಯ ರೂವಾರಿಉದಯ ಪೂಜಾರಿ ಬಲ್ಲಾಳ್ ಬಾಗ್.

ಆಡಡೆಲೆ ಮಾಡುವವನು ರೂಢಿಯೊಳಗುತ್ತಮಎನ್ನುವ ಸರ್ವಜ್ಞನ ಸಾರದಂತೆ ಯಾವುದೇ ಸದ್ದುಗದ್ದಲವಿಲ್ಲದೆ ಸಮಾಜದಸೇವೆಗಾಗಿ ತನ್ನ ಜೀವನವನ್ನು ಮುಡಿಪಾಗಿಟ್ಟವರು. ಮಾತ್ರವಲ್ಲದೆ ಸಮಾಜ ಒದಗಿಸಿರೋ ಅವಕಾಶವನ್ನು ಸಮಾಜದ ಸೇವೆಗಾಗಿಮೀಸಲಾಗಿಟ್ಟವರು.

ಬಿರುವೆರ್ ಕುಡ್ಲ ಸ್ಥಾಪನೆಯಾಗಿ 7ವರ್ಷ ಕಳೆದಿಲ್ಲ ಆದರೆ ಕಡಿಮೆ ಅವಧಿಯಲ್ಲಿ ಮಹತ್ತರವಾದ ಸೇವೆಯ ಮುಖೇನ ಸುಮಾರು20 ಘಟಕಗಳನ್ನು ಸ್ಥಾಪಿಸಿ  ಕೋಟ್ಯಾತರ ರೂಪಾಯಿ ಮೊತ್ತದ  ಸಹಾಯಹಸ್ತವನ್ನು ಸಮಾಜದ ಬಡ ಜನರಿಗಾಗಿ ನೀಡಿರುವುದುಮಾತ್ರವಲ್ಲದೆ ಕೊರೊನಾ ಮಹಾಮಾರಿಯಿಂದ ಜನತೆ ತತ್ತರಿಸುತ್ತಿರುವ ಸಂಧರ್ಭದಲ್ಲಿ ಲಕ್ಷಾಂತರ ರೂಪಾಯಿ ಮೊತ್ತದ ಆಂಬುಲೆನ್ಸ್ನ್ನು ಜನರ ಸೇವೆಗಾಗಿ ನೀಡಿದ್ದು ಒಂದು ದಾಖಲೆಯೇ ಸರಿ. ಇಂತಹ ಸಮಾಜಮುಖಿ ಚಿಂತನೆಯ ಫ್ರೆಂಡ್ಸ್ ಬಲ್ಲಾಳ್ ಬಾಗ್ಬಿರುವೆರ್ ಕುಡ್ಲ ಸಂಘಟನೆಯ  ಕೀರ್ತಿ,  ಶ್ರೇಯಸ್ಸನ್ನು ಕಂಡು ಕೆಲವರಿಗೆ ಸಹಿಸಲಾಗಲಿಲ್ಲವೋ ಏನೋ, ಅದಕ್ಕಾಗಿಯೇ ಸಂಚುರೂಪಿಸಿ ಸಂಘಟನೆಯ ಹೆಸರಿಗೆ ಕಪ್ಪು ಚುಕ್ಕಿ ತರುವ ಪ್ರಯತ್ನ ಮಾಡುತ್ತಿರುವುದು ಅವರ ಕೀಳು ಮನಸ್ಥಿತಿಯನ್ನು ಎತ್ತಿತೋರಿಸುತ್ತದೆ.

ನಿಟ್ಟಿನಲ್ಲಿ ಶರಣ್ ಪಂಪ್ ವೆಲ್ ಅವರು ಬಿರುವೆರ್ ಕುಡ್ಲದ ಸಾಧನೆ  ಸೇವೆ ಕಣ್ಣಿಗೆ ಬಿದ್ದರೂ ಅರಗಿಸಿಕೊಳ್ಳಲಾಗಲ್ಲಿವೇನೋಅನಿಸುತ್ತಿದೆ. ಶರಣ್ ಅಣ್ಣ ನಿಮ್ಮ ಹಿಂದೂಪರ ಹೋರಾಟದ ಬಗ್ಗೆ ನಮಗೆ ತುಂಬಾ ಅಭಿಮಾನ ಹೆಮ್ಮೆ ಇತ್ತು.. ಗೌರವ ಇತ್ತು.. ಆದರೆಈಗ ನೀವು ಬಿರುವೆರ್ ಕುಡ್ಲ ಸಂಘಟನೆಯ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ ಪ್ರತಿಭಟಿಸುದನ್ನು ಕಂಡು ಅದೆಲ್ಲವನ್ನೂಕಳೆದಕೊಂಡಿರಿ..

ಒಂದು ಜಾತಿ ಧರ್ಮ, ಸಮುದಾಯವನ್ನು ಮೀರಿ ಬೆಳೆದು ನಿಂತು ಎಲ್ಲಾ ಸಮಾಜದ ಪ್ರೀತಿಗೆ ಪಾತ್ರರಾದ ಬಿರುವೆರ್ ಕುಡ್ಲಸಂಘಟನೆಯ ಬಗ್ಗೆ ಅನವಶ್ಯಕವಾಗಿ ಆರೋಪ ಮಾಡಿದ ಹಿನ್ನಲೆಯಲ್ಲಿ  ಅದರ ಹಿಂದಿರುವ ಕಾಣದ ಕೈಗಳ ಕೈವಾಡಖಂಡಿತವಾಗಿಯೂ ಒಂದಲ್ಲ ಒಂದು ದಿನ ಜನರ ಮುಂದೆ ಬರುತ್ತದೆ.

ಪಂಪ್ ವೆಲ್ ರವರೆ ಒಮ್ಮೆ ಯೋಚಿಸಿ ಶುಭ ಮಂಗಳ ಕಾರ್ಯದ ಸಮಯದಲ್ಲಿಉದಯಣ್ಣ ಸ್ಥಾನದಲ್ಲಿ ನೀವಿರುತ್ತಿದ್ದರೆಹೇಗಾಗುತ್ತಿತ್ತು!!!!!!!! ಎಂದು. ಕನಿಷ್ಠ ಮಾನವೀಯತೆಯನ್ನೂ ಮರೆತು ನೀವು ರೀತಿ ಮಾಡುತ್ತಿರುವುದು ಬಿರುವೆರ್ ಕುಡ್ಲಸಂಘಟನೆ ಮಾತ್ರವಲ್ಲ ಲಕ್ಷಾಂತರ ತುಳು ಕನ್ನಡಿಗ ಉದಯಣ್ಣನ ಅಭಿಮಾನಿ ಬಳಗಕ್ಕೆ ಅತೀವ ನೋವಾಗಿದೆ.

ಶರಣ್ ರವರೆ,…. ಹಣ ಅಧಿಕಾರ ಅಂತಸ್ತು ಯಾವುದೂ ಶಾಶ್ವತವಲ್ಲ ಆದರೇ ಎಲ್ಲಕ್ಕಿಂತ ಮಿಗಿಲಾದುದು ಮಾನವೀಯತೆ, ಮಾನವೀಯ ಮೌಲ್ಯಗಳುಅದನ್ನು ತುಳಿದು ನಡೆಯಬೇಡಿ….

ನಮ್ಮಂತಹ ನೂರಾರು ಜನರಿಗೆ ನಿಮ್ಮ ಮೇಲೆ ಗೌರವ ಅಭಿಮಾನ ವಿತ್ತು ಆದರೆ ಅರ್ಹತೆಯನ್ನು ನಿಮ್ಮ ಕೀಳುಮಟ್ಟದರಾಜಕಾರಣದಿಂದ ಮಣ್ಣುಪಾಲು ಮಾಡಿದಿರಿ.. ಎಲ್ಲದಕ್ಕೂ ಭಗವಂತ ಹಾಗೂ ತುಳುನಾಡಿನ ಸತ್ಯಗಳು ನಿಮಗೆ ಒಳ್ಳೆಯ ಬುದ್ದಿನೀಡಲಿ ಎಂದು ಆಶಿಸುತ್ತೇವೆ.

ಉದಯಣ್ಣ ಸತ್ಯಕ್ಕೆ ಜಯವಿದೆ.

ನಿಮ್ಮೊಂದಿಗೆ ನಾವಿದ್ದೇವೆ

ಪ್ರೀತಿ ಅಭಿಮಾನ ಗೌರವ ಅನವರತ….

ಜೈ ಬಿರುವೆರ್ ಕುಡ್ಲ ಜೈ ಉದಯಣ್ಣ..

✒️ಪ್ರಭಾಕರ ಬೆಳುವಾಯಿ

(ನಮನ ಫ್ರೆಂಡ್ಸ್ ಮುಂಬಯಿ)


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »