TOP STORIES:

FOLLOW US

ಚಳಿಗಾಲದಲ್ಲಿ ಚರ್ಮ ರಕ್ಷಣೆಗೆ ಇಲ್ಲಿದೆ ಮನೆ ಮದ್ದು


ಚಳಿಗಾಲದಲ್ಲಿ ಚರ್ಮ ಬೇಗನೆ ಕಾಂತಿ ಕಳೆದುಕೊಳ್ಳುತ್ತದೆ. ಇದಕ್ಕಾಗಿ ಮನೆಯಲ್ಲಿಯೇ ಹಲವಾರು ಕ್ರಮ ಕೈಗೊಳ್ಳಬಹುದು. ಅದು ಹೇಗೆ ಅಂತ ನೀವು ತಿಳಿಯಿರಿ.ಕಡಲೆಹಿಟ್ಟು ಹಾಗೂ ಅರಿಶಿಣ

ಒಣ ಚರ್ಮವಾಗಿದ್ದಲ್ಲಿ ಈ ಲೇಪನದಲ್ಲಿ ಕೆನೆ, ಮೊಸರು ಬಳಸಬಹುದು.

ಇಲ್ಲದಿದ್ದಲ್ಲಿ ನಿಂಬೆ ರಸ ಅಥವಾ ತಿಳಿಮಜ್ಜಿಗೆ ನೀರು ಬೆರೆಸಿ ಲೇಪನ ಮಾಡಿಕೊಳ್ಳಬೇಕು.

ಈ ಲೇಪನವನ್ನು ಮುಖ, ಕೈ-ಕಾಲುಗಳಿಗೆ ಲೇಪಿಸಿಕೊಂಡು, ಒಣಗಿದಂತೆ ಅನಿಸಿದಾಗ ಉಗುರು ಬೆಚ್ಚಗಿನ ನೀರನ್ನು ಬಳಸಿ ತೊಳೆದುಕೊಳ್ಳಬೇಕು.

ಲೋಳೆಸರ

ಯಾವ ಬಗೆಯ ಚರ್ಮದವರೂ ಧಾರಾಳವಾಗಿ ಇದನ್ನು ಬಳಸಬಹುದು. ಬಟ್ಟಲೊಂದಕ್ಕೆ ಲೋಳೆ ಸರದ ತಿರುಳನ್ನು ತೆಗೆದುಕೊಂಡು, ನಿಂಬೆ ರಸ ಹಾಗೂ ಅರಿಶಿಣವನ್ನು ಬೆರೆಸಿ, ಜೆಲ್‌ನಂತೆ ಇದನ್ನು ಮುಖಕ್ಕೆ, ಮೊಣಕೈ ತುದಿಗಳಿಗೆ ಲೇಪಿಸಿ, ಹದಿನೈದು ನಿಮಿಷಗಳ ನಂತರ ತೊಳೆದುಕೊಳ್ಳಿ.

ಆಲೂಗಡ್ಡೆ

ಇದು ಚರ್ಮವನ್ನು ಸ್ವಚ್ಛಗೊಳಿಸಿ, ಕೋಮಲಾಂಶ ನೀಡುತ್ತದೆ. ಆಲೂಗಡ್ಡೆಯನ್ನು ತುರಿದುಕೊಂಡು, ಆ ತುರಿಯನ್ನು ಮುಖಕ್ಕೆ ಉಜ್ಜಿಕೊಳ್ಳಬೇಕು. ಅದರ ನಂತರ ಐಸ್‌ ಕ್ಯುಬ್‌ ಅನ್ನು ಮುಖದ ತುಂಬಾ ಆಡಿಸಿಕೊಂಡರೆ ನುಣುಪು ನಿಮ್ಮ ಅನುಭವಕ್ಕೆ ಬರುತ್ತದೆ.

ಪಪ್ಪಾಯ

ಅತಿ ಹಣ್ಣಾಗಿ ಕಳೆತ ಪಪ್ಪಾಯದ ತಿರುಳನ್ನು ಅಂಗೈಯಲ್ಲಿ ಹಿಸುಕಿಕೊಳ್ಳಿ. ಒಣಚರ್ಮವಾದರೆ ಕೆನೆ, ಎಣ್ಣೆ ಚರ್ಮವಾದರೆ ನಿಂಬೆರಸ ಬೆರೆಸಿ, ಪೇಸ್ಟ್‌ ಮಾಡಿಕೊಳ್ಳಿ. ಈ ಲೇಪನವನ್ನು ಮುಖ, ಕತ್ತು, ಕೈಗಳಿಗೆ ಲೇಪಿಸಿಕೊಳ್ಳಿ. ಕಾಲು ಗಂಟೆಯ ನಂತರ ಚರ್ಮ ಬಿಗಿದುಕೊಂಡಂತೆ ಎನಿಸತೊಡಗುತ್ತದೆ. ಆಗ ಉಗುರು ಬಿಸಿ ನೀರಿನಿಂದ ಇದನ್ನು ತೊಳೆದುಕೊಳ್ಳಿ.

ಕೊಬ್ಬರಿ ಎಣ್ಣೆ

ಸ್ನಾನದ ಮೊದಲು ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಉಗುರು ಬಿಸಿ ನೀರಿನಿಂದ ಸ್ನಾನ ಮಾಡಿದರೆ ನೈಸರ್ಗಿಕ ಮಾಯಿಶ್ಚರೈಸರ್‌ ನೀಡಿದಂತೆ ಆಗುತ್ತದೆ. ಸ್ನಾನಕ್ಕೆ ಮೊದಲು ಕೊಬ್ಬರಿ ಎಣ್ಣೆ ಹಚ್ಚಿಕೊಳ್ಳಲು ಆಗದಿದ್ದರೆ ಸ್ನಾನದ ಕೊನೆಯಲ್ಲಿ ಒಂದು ಲೋಟ ನೀರಿಗೆ ಒಂದಷ್ಟು ತೆಂಗಿನೆಣ್ಣೆಯ ಹನಿಗಳನ್ನು ಸೇರ್ಪಡೆಗೊಳಿಸಿ, ಅವನ್ನು ಕೈ, ಕಾಲು, ಬೆನ್ನು, ಹೊಟ್ಟೆಗೆ ಹಚ್ಚಿಕೊಂಡರೆ ಚಳಿಗಾಲದ ತುರಿಕೆ ಹಾಗೂ ಕೆರೆತವನ್ನು ಕಡಿಮೆ ಮಾಡಬಹುದು.


Share:

More Posts

Category

Send Us A Message

Related Posts

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »

ಬಿಲ್ಲವ ಸಮಾಜಕ್ಕಾಗಿ ಪಂದ್ಯಾಟದ ಜೊತೆಗೆ ಆರ್ಥಿಕ ಯೋಜನೆಯನ್ನು ರೂಪಿಸಿದ ರುವಾರಿ ವಿಶ್ವನಾಥ ಪೂಜಾರಿ ಕಡ್ತಲ


Share       ಆದರಣೀಯ ಕ್ಷಣಗಳನ್ನು ‌ಮತ್ತೊಮ್ಮೆ ಮರಳಿಸಿ ವಿದೇಶದ  ಮಣ್ಣಲ್ಲೂ ಬಿಲ್ಲವರನ್ನು ಒಗ್ಗೂಡಿಸಿಕೊಂಡು ಒಂದು ಪಂದ್ಯಾಟ ನಡೆಸುವುದು ಕಷ್ಟ ಎಂಬ ಸನ್ನಿವೇಶದಲ್ಲಿ ಮಾಡಿಯೇ ಸಿದ್ಧ ಎಂಬ ಸ್ಪಷ್ಟ ನಿಲುವಿನೊಂದಿಗೆ ಎಲ್ಲರಿಗೂ ಇಷ್ಟವಾಗಿಸಿದ ಕ್ರಿಕೆಟ್ ಪಂದ್ಯಾಟ ಮಾಡಿ


Read More »