TOP STORIES:

ವಾಹನ ಸವಾರರಿಗೆ ಗುಡ್ ನ್ಯೂಸ್!


ಬೆಂಗಳೂರು : ಒಂದು ರಾಜ್ಯದಿಂದ ಇನ್ನೊಂದು ರಾಜಯಕ್ಕೆ ಕೆಲಸಕ್ಕೆಂದು ತೆರಳುವ ಜನರಿಗೆ ವಾಹನ ನೋಂದಣಿಯ ಸಮಸ್ಯೆ ಹೆಚ್ಚಾಗಿದೆ. ಇಂತಹ ಸಮಸ್ಯೆ ಸರಿಮಾಡುವ ನಿಟ್ಟಿನಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ನೆರವಾಗಲು ಮುಂದಾಗಿದೆ. ಈ ತೊಂದರೆ ನಿವಾರಿಸಲು ಹೊಸ ನೋಂದಣಿ ಗುರಿತು ಅಂದರೆ ಭಾರತ್ ಸರಣಿ(BH) ಪ್ರಾರಂಭಿಸಿದೆ. ಇದರ ಮೊದಲ ಬುಕಿಂಗ್ ಮಿರ್ಜಾಪುರದಲ್ಲಿ ಆಗಿದೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಇದನ್ನು ಪರಿಚಯಿಸಿದೆ. ವಾಹನ ಮಾಲೀಕರು, ಬೇರೆ ರಾಜ್ಯಕ್ಕೆ ವರ್ಗಾವಣೆಗೊಂಡಾಗ ತಮ್ಮ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನವನ್ನು ಮತ್ತೆ ನೋಂದಾಯಿಸಬೇಕಿಲ್ಲ.

ಬಿಎಚ್ ಸರಣಿ ನಂಬರ್ ಪ್ಲೇಟ್ ಕಪ್ಪು ಮತ್ತು ಬಿಳಿ ಬಣ್ಣದ್ದಾಗಿರುತ್ತದೆ. ವಾಹನ ಸಂಖ್ಯೆ BH ಸರಣಿ ಪಡೆಯಲು ವಾಹನ ಮಾಲೀಕರು 2 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಕಾಲ ರಸ್ತೆ ತೆರಿಗೆಯನ್ನು ಪಾವತಿಸಬೇಕಾಗುತ್ತದೆ. ಈ ಸಂಪರ್ಣ ಪ್ರಕ್ರಿಯೆ ಆನ್ ಲೈನ್ ನಲ್ಲಿ ನಡೆಯುತ್ತದೆ.

ರಕ್ಷಣಾ ಸಿಬ್ಬಂದಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಉದ್ಯೋಗಿಗಳು, ನಾಲ್ಕು ಅಥವಾ ಹೆಚ್ಚಿನ ರಾಜ್ಯಗಳಲ್ಲಿ ಕಚೇರಿಗಳನ್ನು ಹೊಂದಿರುವ ಖಾಸಗಿ ವಲಯದ ಕಂಪನಿಗಳು ಹಾಗೂ ಸಂಸ್ಥೆಗಳ ಉದ್ಯೋಗಿಗಳಿಗೆ ಇದರಿಂದ ಲಾಭವಾಗಲಿದೆ.

ತಮ್ಮ ವೈಯಕ್ತಿಕ ವಾಹನಗಳನ್ನು ಭಾರತ್ ಸರಣಿಯಲ್ಲಿ ನೋಂದಾಯಿಸಿಕೊಳ್ಳಬಹುದು. ಇದು ಎಲ್ಲರಿಗೂ ಕಡ್ಡಾಯವಲ್ಲ. ಇದಕ್ಕೆ ಅರ್ಜಿ ಸಲ್ಲಿಸಲು ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಆ ನಂತರ ಭಾರತ್ ಸರಣಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ರಸ್ತೆ ಸಾರಿಗೆ ಸಚಿವಾಲಯ ಮತ್ತು ಹೆದ್ದಾರಿಗಳ ವಾಹನ ಪೋರ್ಟಲ್ ಗೆ ಲಾಗಿನ್ ಮಾಡಬೇಕು. ಹೊಸ ವಾಹನವನ್ನು ಖರೀದಿಸುವಾಗ ಡೀಲರ್ ಮಟ್ಟದಲ್ಲಿಯೂ ಇದನ್ನು ಮಾಡಬಹುದು. ಡೀಲರ್ ವಾಹನ ಮಾಲೀಕರ ಪರವಾಗಿ ವ್ಯಾನ್ ಪೋರ್ಟಲ್ ನಲ್ಲಿ ಲಭ್ಯವಿರುವ ಫಾರ್ಮ್ 20ನ್ನು ಭರ್ತಿ ಮಾಡಬೇಕು. ಕಾರಿನ ವೆಚ್ಚದ ಮೇಲೆ ರಸ್ತೆ ತೆರಿಗೆ ಪಾವತಿಸಬೇಕಾಗುತ್ತದೆ.


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »