TOP STORIES:

ಲಾಕ್ ಡೌನ್ ಬಗ್ಗೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕ್ರಮ: ಸಚಿವ ಡಾ. ಸುಧಾಕರ್


ಬೆಂಗಳೂರು: ಕೊರೊನಾ ಮೂರನೇ ಅಲೆ ಹಾಗೂ ಹೊಸ ರೂಪಾಂತರಿ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ ಡಾ. ಸುಧಾಕರ್, ಲಾಕ್ ಡೌನ್ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ, ಅನಗತ್ಯ ಗೊಂದಲ ಸೃಷ್ಟಿಸುವ ಸುದ್ದಿ ಹರಡಬೇಡಿ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸುಧಾಕರ್, ಈಗಾಗಲೇ ಸಾಕಷ್ಟು ಜನರು ಕೋವಿಡ್ ನಿಂದಾಗಿ ಸಂಕಷ್ಟ ಎದುರಿಸಿದ್ದಾರೆ. ಅನೇಕರು ಉದ್ಯೋಗ ಕಳೆದುಕೊಂಡು ಆರ್ಥಿಕ ಸಮಸ್ಯೆ ಎದುರಿಸಿದ್ದಾರೆ. ಈಗಷ್ಟೇ ಎಲ್ಲಾ ಕ್ಷೇತ್ರಗಳು ಮತ್ತೆ ಚೇತರಿಕೆಯತ್ತ ಸಾಗುತ್ತಿದೆ. ಇಂಥ ಸಂದರ್ಭದಲ್ಲಿ ’ಮತ್ತೆ ಲಾಕ್ ಡೌನ್’ ಮಾಡಲಾಗುತ್ತಿದೆ ಎಂಬ ಸುಳ್ಳು ಸುದ್ದಿ ಹರಡುವ ಕೆಲಸ ಮಾಡಬಾರದು. ಸರ್ಕಾರದ ಮುಂದೆ ಲಾಕ್ ಡೌನ್ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ, ಅಂತಹ ಯಾವ ಆಲೋಚನೆಯೂ ಇಲ್ಲ. ಅನಗತ್ಯವಾಗಿ ಸುಳ್ಳು ಸುದ್ದಿ ಹರಡಿ ಜನರಲ್ಲಿ ಆತಂಕ ಸೃಷ್ಟಿಸುವ ಕೆಲಸ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಾಮಾಜಿಕ ಜಾಲತಾಣದ ವೇದಿಕೆಯನ್ನು ಒಳ್ಳೆಯ, ಖಚಿತ ಮಾಹಿತಿಯನ್ನೊಳಗೊಂಡ ಸುದ್ದಿಗಳನ್ನು ವೇಗವಾಗಿ ಜನರಿಗೆ ತಲುಪಿಸಲು ಬಳಕೆ ಮಾಡಬೇಕೇ ಹೊರತು ಗೊಂದಲಮಯ ಸುದ್ದಿಗಳನ್ನು, ಸುಳ್ಳು ಸುದ್ದಿಗಳನ್ನು ಹಬ್ಬಿಸಲು ವೇದಿಕೆಯಾಗಿ ಬಳಸಿಕೊಳ್ಳಬಾರದು. ಲಾಕ್ ಡೌನ್ ಬಗ್ಗೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಇನ್ನು ಹೊಸ ರೂಪಾಂತರಿ ಒಮಿಕ್ರಾನ್ ವೇಗವಾಗಿ ಹರಡುತ್ತೆ, ಆದರೆ ಪರಿಣಾಮ ಕಡಿಮೆ ಎಂದು ಹೇಳಲಾಗುತ್ತಿದೆ. ನಾಡಿಬಡಿತ ಹೆಚ್ಚಾಗುವುದು, ವಾಂತಿ, ಸುಸ್ತು ಇವು ಒಮಿಕ್ರಾನ್ ರೋಗ ಲಕ್ಷಣಗಳು ಎಂದು ಈಗಾಗಲೇ ಹೊಸ ವೈರಸ್ ಪತ್ತೆಯಾಗಿರುವ ದೇಶಗಳಲ್ಲಿ ಕೆಲಸ ಮಾಡುವ ನನ್ನ ಸ್ನೇಹಿತರು ಮಾಹಿತಿ ನೀಡಿದ್ದಾರೆ. ಒಮಿಕ್ರಾನ್ ಬಗ್ಗೆ ಇನ್ನೂ ನಿಖರ ಲಕ್ಷಣಗಳು ತಿಳಿದುಬಂದಿಲ್ಲ. ಹಾಗಾಗಿ ಆತಂಕ ಪಡುವ ಅಗತ್ಯ ಇಲ್ಲ ಆದರೆ ಎಲ್ಲರೂ ಮಾಸ್ಕ್, ಸಾಮಾಜಿಕ ಅಂತರ ಪಾಲನೆ ಮೂಲಕ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »