TOP STORIES:

ಪಾರ್ಲೆ ಜಿ ಪ್ಯಾಕೆಟ್​ನಲ್ಲಿರುವ ಮಗು ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ


ಜೀವನದಲ್ಲಿ ಒಮ್ಮೆಯಾದರೂ ನೀವು ಪಾರ್ಲೆ ಜಿ ಬಿಸ್ಕತ್ತನ್ನು ತಿಂದೇ ಇರ್ತೀರಾ..! ಆದರೆ ಈ ಬಿಸ್ಕತ್ತಿಗೆ ಪಾರ್ಲೆ ಜಿ ಎಂಬ ಹೆಸರು ಹೇಗೆ ಬಂತು ಅಂತಾ ಎಂದಾದರೂ ಯೋಚನೆ ಮಾಡಿದ್ದೀರಾ..?‌ ಈ ಬಿಸ್ಕತ್ತು ತಯಾರಿಕೆಯ ಕಾರ್ಯವನ್ನು ಮುಂಬೈನ ವಿಲೇ ಪಾರ್ಲೆಯಲ್ಲಿ ಆರಂಭಿಸಲಾಯ್ತು.

ಇದೇ ಕಾರಣಕ್ಕೆ ಪಾರ್ಲೆ ಎಂಬ ಪದವನ್ನು ಬಳಕೆ ಮಾಡಲಾಯ್ತು. ಆದರೆ ಪಾರ್ಲೆ ಜಿ ಯಲ್ಲಿರುವ ‘ಜಿ’ ಅಂದರೆ ಏನು..? ಆ ಪ್ಯಾಕೆಟ್​ನಲ್ಲಿರುವ ಮಗು ಯಾರು..? ಎಂಬ ಪ್ರಶ್ನೆ ಯಕ್ಷಪ್ರಶ್ನೆಯಾಗಿಯೇ ಉಳಿದಿದೆ.

ಪಾರ್ಲೆ ಉತ್ಪನ್ನಗಳು 1929ರಿಂದ ಆರಂಭವಾದವು. ಮೊದಲು ಈ ಕಾರ್ಖಾನೆಯಲ್ಲಿ ಕೆಲಸ ಮಾಡ್ತಾ ಇದ್ದದ್ದು ಕೇವಲ 12 ಮಂದಿ ಮಾತ್ರ. ಆಗ ಈ ಬಿಸ್ಕತ್ತಿನ ಹೆಸರು ಪಾರ್ಲೆ – ಗ್ಲುಕೋ ಎಂದಾಗಿತ್ತು. 80 ದಶಕದ ಆರಂಭದವರೆಗೂ ಅದೇ ಹೆಸರನ್ನು ಮುಂದುವರಿಸಲಾಗಿತ್ತು. ಆದರೆ 1981ರಲ್ಲಿ ಕಂಪನಿಯು ಗ್ಲುಕೋ ಎಂಬ ಪದವನ್ನು ಶಾರ್ಟ್ ಮಾಡಿ ಪಾರ್ಲೆ ಜಿ ಎಂದು ಬದಲಾಯಿಸಿದೆ. 80 ದಶಕದಲ್ಲಿ ಈ ಬಿಸ್ಕತ್ತು ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಎಲ್ಲರ ಫೇವರಿಟ್​ ಆಗಿ ಬದಲಾಗಿತ್ತು. ಮಕ್ಕಳಿಗೆ ಈ ಬಿಸ್ಕತ್ತು ಇಷ್ಟವಾದ ಬಳಿಕ ಪಾರ್ಲೆ ಜಿ ಯಲ್ಲಿದ್ದ ಜಿಯನ್ನು ಜೀನಿಯಸ್​ ಎಂದು ಬದಲಾಯಿಸಲಾಯ್ತು. ಆದರೂ ಪ್ಯಾಕೆಟ್​ ಮೇಲೆ ಜಿ ಎಂದೇ ಬರೆಯಲಾಗಿತ್ತು.

 

ಪಾರ್ಲೆ ಜಿ ಬಿಸ್ಕತ್ತಿನ ಪ್ಯಾಕೆಟ್​ನಲ್ಲಿರುವ ಮಗು ಯಾರು..?

 

ಪಾರ್ಲೆ ಜಿ ಬಿಸ್ಕತ್ತಿನ ಪ್ಯಾಕೆಟ್​ನಲ್ಲಿರುವ ಮಗು ಯಾರು ಎಂಬದು ಒಂದು ಮಿಲಿಯನ್​ ಡಾಲರ್ ಪ್ರಶ್ನೆಯಾಗಿದೆ. ಹಲವು ದಶಕಗಳೇ ಕಳೆದರೂ ಸಹ ಈ ಮಗು ಯಾರು ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರವಿಲ್ಲ.

ಆದರೆ ಮೂರು ಹೆಸರುಗಳನ್ನು ಸಾಮಾನ್ಯವಾಗಿ ಹೇಳಲಾಗುತ್ತೆ. ನೀರು ದೇಶಪಾಂಡೆ, ಸುಧಾ ಮೂರ್ತಿ ಹಾಗೂ ಗುಂಜನ್​ ಗುಂಡಾನಿಯಾ ಹೆಸರು ಹೆಚ್ಚು ಪ್ರಚಲಿತದಲ್ಲಿದೆ. ಈ ಮೂವರಲ್ಲಿ ಒಬ್ಬರ ಬಾಲ್ಯದ ಪೋಟೋ ಇದು ಎಂದು ಅನೇಕರು ಹೇಳುತ್ತಾರೆ.ಅದರಲ್ಲೂ ನೀರೂ ದೇಶಪಾಂಡೆ ಹೆಸರು ಹೆಚ್ಚಾಗಿ ಕೇಳಲಾಗುತ್ತಿದೆ.

ಹಲವು ಪತ್ರಿಕೆಗಳಲ್ಲಿ ನೀರು ದೇಶಪಾಂಡೆ ಅವರ ಫೋಟೋ ಸಹಿತ ಸುದ್ದಿ ಪ್ರಕಟವಾಗಿತ್ತು. ಈ ಚಿತ್ರವು ನಾಗ್ಪುರದ ನಿವಾಸಿ 65 ವರ್ಷದ ನೀರು ಅವರ ಬಾಲ್ಯದ ಚಿತ್ರ ಎಂದು ಹಲವಾರು ಮಾಧ್ಯಮ ವರದಿಗಳು ಹೇಳಿವೆ. ನೀರೂ ಅವರ ಈ ಚಿತ್ರವನ್ನು ಆಕೆ 4 ವರ್ಷದವಳಿದ್ದಾಗ ತೆಗೆದದ್ದು ಎಂದು ಸುದ್ದಿಯಲ್ಲಿ ಹೇಳಲಾಗಿತ್ತು. ಅವರ ತಂದೆ ವೃತ್ತಿಪರ ಛಾಯಾಗ್ರಾಹಕ ಅಲ್ಲ, ಆದ್ದರಿಂದ ಅವರು ಸುಮ್ಮನೇ ಒಂದು ಫೋಟೋ ತೆಗೆದಿದ್ದರು. ಆ ಫೋಟೊ ಎಷ್ಟು ಚೆನ್ನಾಗಿ ಬಂದಿತ್ತು ಅಂದರೆ ಅದೇ ಫೋಟೋವನ್ನು ಪಾರ್ಲೆ ಜಿ ಪ್ಯಾಕಿಂಗ್​​ಗೆ ಆಯ್ಕೆ ಮಾಡಿಕೊಂಡಿತು ಎಂದು ಹೇಳಲಾಗುತ್ತದೆ.

ಈ ಸುದ್ದಿ ವೈರಲ್​ ಆಗುತ್ತಿದ್ದಂತೆಯೇ ಪಾರ್ಲೆ ಪ್ರಾಡಕ್ಟ್​ನಿಂದ ಸ್ಪಷ್ಟನೆ ನೀಡಲಾಗಿದೆ. ಎಲ್ಲಾ ವದಂತಿಗಳಿಗೆ ಪೂರ್ಣವಿರಾಮ ಹಾಕಿದ ಗ್ರೂಪ್​​ನ ಪ್ರಾಡಕ್ಟ್​ ಮ್ಯಾನೇಜರ್​ ಮಯಂಕ್​ ಷಾ, ಪ್ಯಾಕೆಟ್​ನಲ್ಲಿ ಕಂಡುಬರುವ ಮಗು ಒಂದು ಇಲ್ಯೂಸ್ಟ್ರೇಷನ್​ ಆಗಿದೆ. ಇದನ್ನು 60ರ ದಶಕದಲ್ಲಿ ಮಾಡಲಾಗಿದೆ. ಇಲ್ಲಿ ಯಾವುದೇ ಮಗುವಿನ ಫೋಟೋವನ್ನು ಕಂಪನಿ ಬಳಕೆ ಮಾಡಿಲ್ಲ. ಈ ಚಿತ್ರವನ್ನು ಎವರೆಸ್ಟ್​​ ಕ್ರಿಯೇಟಿವ್​ ಏಜೆನ್ಸಿ ಸಿದ್ದಪಡಿಸಿದೆ ಎಂದು ಹೇಳಿದ್ದಾರೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »