TOP STORIES:

FOLLOW US

ಶಬರಿಮಲೆಗೆ ಪಾದಯಾತ್ರೆ: ಬಂಟ್ವಾಳ ತಂಡದ ಜತೆ ಹೆಜ್ಜೆ ಹಾಕಿದ ದಾರಿಯಲ್ಲಿ ಸಿಕ್ಕ ಶ್ವಾನ !


ಬಂಟ್ವಾಳ: ಶಬರಿಮಲೆಗೆ ಪಾದಯಾತ್ರೆಯಲ್ಲಿ ಹೊರಟ ಅಯ್ಯಪ್ಪ ಸ್ವಾಮಿ ವ್ರತಾಧಾರಿಗಳ ತಂಡಕ್ಕೆ ದಾರಿ ಮಧ್ಯೆ ಸಿಕ್ಕಿ ಶ್ವಾನವೊಂದು ಅವರ ಜತೆಗೆ ಕಿಲೋ ಮೀಟರ್‌ಗಟ್ಟಲೆ ಹೆಜ್ಜೆ ಹಾಕಿ, ಅವರು ವಾಸ್ತವ್ಯ ಹೂಡಿದ ಸ್ಥಳದಲ್ಲೇ ನಿಂತು, ಅವರು ಕೊಟ್ಟ ತಿಂಡಿ ತಿನಸುಗಳನ್ನು ತಿಂದು, ಅವರ ತಂಡದ ಪ್ರೀತಿಯ “ಮಲ್ಲಿ’ಯಾಗಿ ಇದೀಗ ವ್ರತಾಧಾರಿಗಳು ಅದನ್ನು ಊರಿಗೆ ತರುವುದಕ್ಕೆ ನಿರ್ಧರಿಸಿದ್ದಾರೆ.

ಮಣಿನಾಲ್ಕೂರು ಗ್ರಾಮದ ಬಡೆಕೊಟ್ಟಿನಿಂದ ಡಿ. 11ರಂದು ಅಯ್ಯಪ್ಪ ಸ್ವಾಮಿ ವ್ರತಾಧಾರಿಗಳ ತಂಡವೊಂದು ಪಾದಯಾತ್ರೆಯ ಮೂಲಕ ಶಬರಿಮಲೆಗೆ ಹೊರಟಿತ್ತು. ತಂಡವು ಎಟ್ಟುಮಾನೂರ್‌ ತಲುಪಿದ ಸಂದರ್ಭದಲ್ಲಿಅವರ ಜತೆ ಶ್ವಾನವೊಂದು ಹೆಜ್ಜೆ ಹಾಕುವುದನ್ನು ಕಂಡರು. ಬಳಿಕ ಅವರು ಅದಕ್ಕೆ ತಿಂಡಿ ಹಾಕಲು ಆರಂಭಿಸಿದ್ದು, ಅಂದಿನಿಂದ ನಿರಂತರವಾಗಿ ಹಲವು ದಿನಗಳ ಕಾಲ ಆ ತಂಡದ ಜತೆಗೆ ಶ್ವಾನ ಹೆಜ್ಜೆ ಹಾಕಿದೆ.

ದಾರಿ ಕಾಯುವ ಶ್ವಾನ
ಬೆಳಗ್ಗೆ ಇವರ ಜತೆಗೆ ಹೆಜ್ಜೆ ಹಾಕುವ ಶ್ವಾನವು ಮುಂದೆ ಹೋಗಿ ನಿಂತು ಇವರು ಬರುವುದನ್ನೇ ಕಾಯುತ್ತದೆ. ಇವರ ತಂಡ ಹತ್ತಿರಕ್ಕೆ ಬಂದ ಬಳಿಕ ಮತ್ತೆ ಮುಂದೆ ಸಾಗುತ್ತದೆ. ಹೀಗೆ ಸಾಗುತ್ತಿರುವ ವೇಳೆ ಮಣ್ಣಕಟ್ಟ ಬದ್ರಿ ದೇವಸ್ಥಾನದ ಬಳಿ ಶ್ವಾನ ತಪ್ಪಿ ತಮಿಳುನಾಡಿನ ತಂಡವೊಂದರ ಜತೆ ಸೇರಿತ್ತು. ಬಳಿಕ ಅದು ಇವರ ತಂಡ ಅಲ್ಲ ಎಂದು ತಿಳಿದು ಮತ್ತೆ ಇವರನ್ನು ಹುಡುಕಿಕೊಂಡು ಬಂದಿತ್ತು ಎಂದು ವ್ರತಾಧಾರಿಗಳು ವಿವರಿಸುತ್ತಾರೆ.

ಮತ್ತೊಂದು ಶ್ವಾನ ಬಂದಿತ್ತು!
ಪಾಲಾದ ಬಳಿಕ ಮತ್ತೊಂದು ದೊಡ್ಡ ಗಾತ್ರದ ಶ್ವಾನವೊಂದು ಇವರ ತಂಡದ ಜತೆಗೆ ಹೆಜ್ಜೆ ಹಾಕಲು ಆರಂಭಿಸಿತ್ತು. ಆದರೆ ಬಳಿಕ ಅದಕ್ಕೆ ನಡೆದು ಆಯಾಸವಾಗಿ ಕಾಲನೋವು ಆರಂಭಗೊಂಡಿತ್ತು. ವ್ರತಾಧಾರಿಗಳು ದೇವಸ್ಥಾನದಲ್ಲಿ ನಿಂತ ಸಂದರ್ಭ ಅದನ್ನು ಆರೈಕೆ ಮಾಡಿ ನೋವಿಗೆ ಸ್ಟ್ರೇ ಔಷಧ ಹಾಕಿದ್ದರು. ಆದರೆ ಸ್ವಲ್ಪ ದೂರ ಇವರ ಜತೆ ಸಾಗಿದ ಆ ಶ್ವಾನ ಮುಂದೆ ಕಣ್ಮರೆಯಾಗಿತ್ತು.

ಊರಿಗೆ ತರುವುದಕ್ಕೆ ನಿರ್ಧಾರ
ಜ. 3ರಂದು ಅಯ್ಯಪ್ಪ ವ್ರತಾಧಾರಿಗಳ ತಂಡ ಪಂಪೆಗೆ ತಲುಪಿದ್ದು, ಸ್ವಾಮಿಯ ಸನ್ನಿಧಿಗೆ ತೆರಳಿದ್ದಾರೆ. ತಂಡದ ಚೇತನ್‌ ಗುರುಸ್ವಾಮಿ ಅದನ್ನು ತಮ್ಮ ಊರಿಗೆ ಕರೆದುಕೊಂಡು ಬರುವುದಾಗಿ ನಿರ್ಧರಿಸಿ, ಹೀಗಾಗಿ “ಮಲ್ಲಿ’ಯನ್ನು ಹೊಟೇಲೊಂದರ ಬಳಿ ಕಟ್ಟಿ ಹಾಕಿ ದ್ದಾರೆ. ಸನ್ನಿಧಿಗೆ ಹೋಗಿ ಹಿಂದಿರು ವವರೆಗೆ ನೋಡಿಕೊಳ್ಳಿ, ಸ್ಥಳದ ಬಾಡಿಗೆ ಯನ್ನೂ ಕೊಡುತ್ತೇವೆ ಎಂದು ಹೊಟೇಲ್‌ನವರಲ್ಲಿ ವಿನಂತಿಸಿದ್ದಾರೆ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »