TOP STORIES:

FOLLOW US

ಅವರು ನಾರಾಯಣ ಗುರುಗಳನ್ನು ಹಿಂದೆಯೂ ತಿರಸ್ಕರಿಸಿದ್ದರು, ಮುಂದೆಯೂ ತಿರಸ್ಕರಿಸುತ್ತಾರೆ-ದಿನೇಶ್ ಅಮೀನ್ ಮಟ್ಟು


ಗಣರಾಜ್ಯೋತ್ಸವ ಪರೇಡ್ ನಲ್ಲಿ ನಾರಾಯಣ ಗುರುಗಳ ಮೂರ್ತಿ ಇದ್ದ ಸ್ಥಬ್ದಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದರಲ್ಲಿ ಯಾವ ಆಶ್ಚರ್ಯವೂ ಇಲ್ಲ. ಇದನ್ನು ಯಾರೂ ವಿರೋಧಿಸಬೇಕಾಗಿಲ್ಲ, ಬದಲಿಗೆ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಆಡಳಿತಾರೂಢ ಬಿಜೆಪಿಯ ಪ್ರಾಮಾಣಿಕ ನಡವಳಿಕೆಗಾಗಿ ಎಲ್ಲರೂ ಅಭಿನಂದಿಸಬೇಕು.
ಇದೇ ರೀತಿಯ ಪ್ರಾಮಾಣಿಕತೆಯಿಂದ ಬುದ್ದ,ಬಸವ, ಅಂಬೇಡ್ಕರ್, ಕನಕ, ಕಬೀರ, ವಾಲ್ಮೀಕಿಯೂ ಸೇರಿದಂತೆ ಎಲ್ಲ ಮಹಾ ಪುರುಷರ ಬಗೆಗಿನ ತಮ್ಮ ವಿರೋಧವನ್ನು ಬಿಜೆಪಿ ಮತ್ತು ಅದರ ಸರ್ಕಾರಗಳು ಮುಕ್ತವಾಗಿ ದಾಖಲಿಸಬೇಕು ಎಂದು ನಾವೆಲ್ಲರೂ ಕೂಡಿ ಒತ್ತಾಯಿಸಬೇಕು.
ಸಾವರ್ಕರ್, ಗೋಲ್ವಾಲ್ಕರ್, ಹೆಗಡೆವಾರ್ , ಗೋಡ್ಸೆ ಸೇರಿದಂತೆ ರಾಜಕೀಯ ಹಿಂದುತ್ವದ ಪ್ರಚಾರಕರ ವಿರುದ್ದ ನಮ್ಮ ವಿರೋಧವನ್ನು ನಾವು ಹೇಗೆ ಮುಕ್ತವಾಗಿ ಮಂಡಿಸುತ್ತೇವೆಯೋ ಹಾಗೆ ಅವರು ಆತ್ಮವಂಚನೆ ಮಾಡಿಕೊಳ್ಳದೆ ನಾವು ಆದರ್ಶಪ್ರಾಯರೆಂದು ತಿಳಿದುಕೊಂಡ ಮತ್ತು ಅವರು ಮನಸ್ಸಿನೊಳಗೆ ವಿರೋಧಿಸುತ್ತಿರುವ ಮಹಾಪುರುಷರ ವಿರುದ್ದದ ತಮ್ಮ ಅಭಿಪ್ರಾಯವನ್ನು ಪ್ರಾಮಾಣಿಕತೆಯಿಂದ ಮುಕ್ತವಾಗಿ ಹೇಳಿಕೊಳ್ಳಬೇಕು.
ನಡೆಯಲಿ ಇಂತಹದ್ದೊಂದು ಸೈದ್ದಾಂತಿಕ ಸಂಘರ್ಷ. ಗಟ್ಟಿಯಾಗಿರುವುದು ಉಳಿಯುತ್ತದೆ, ಉಳಿದದ್ದು ಇತಿಹಾಸದ ಕಸದ ಬುಟ್ಟಿಗೆ ಸೇರುತ್ತದೆ. ಹೊಡೆದು, ಬಡಿದು, ಕಡಿದು ಯಾವ ಸಿದ್ದಾಂತವನ್ನೂ ನೆಲೆ ಗೊಳಿಸಲಾಗುವುದಿಲ್ಲ.
ಇಂತಹದ್ದೊಂದು ದಾರಿಯನ್ನು ಹೇಳಿಕೊಟ್ಟವರೇ ನಾರಾಯಣ ಗುರುಗಳು. ಅವರು ತನ್ನ ಜನರಿಗೆ ಉಳಿದ ಸಮಾಜ ಸುಧಾರಕರಂತೆ ದೇವಸ್ಥಾನದೊಳಗೆ ಪ್ರವೇಶ ನೀಡಿ ಎಂದು ಅಂಗಲಾಚಲಿಲ್ಲ. ಅಲ್ಲಿಯೇ ಇದ್ದ ನದಿಯೊಳಗೆ ಧುಮುಕಿ ಶಿವಲಿಂಗವನ್ನು ಎದೆಗಪ್ಪಿಕೊಂಡು ಬಂದು ಅರವಿಪುರಂನಲ್ಲಿ ಸ್ಥಾಪಿಸಿ ಇದು ನಿಮ್ಮ ಶಿವ ಎಂದು ತನ್ನ ಜನರಿಗೆ ಹೇಳಿದರು.
ಪ್ರಶ್ನಿಸಿದ ಪುರೋಹಿತರಿಗೆ ‘ನಿಮ್ಮ ಶಿವ ನಿಮ್ಮಲ್ಲಿಯೇ ಇದ್ದಾನೆ, ಇದು ಈಳವರ ಶಿವ. ನೀವು ನಿಮ್ಮ ಪಾಡಿಗೆ ನಿಮ್ಮ ದೇವರನ್ನು ಪೂಜಿಸಿ, ನನ್ನ ಜನ ಅವರು ನಂಬಿದ ದೇವರನ್ನು ಪೂಜಿಸುತ್ತಾರೆ.. ’’ ಎಂದು ಬಾಯಿ ಮುಚ್ಚಿಸಿದ್ದರು.
ಅವರು ದೇವಾಲಯದೊಳಗೆ ಜನರನ್ನು ನುಗ್ಗಿಸಲಿಲ್ಲ, ದೇವರಮೂರ್ತಿಯನ್ನು ಒಡೆದುಹಾಕಲಿಲ್ಲ, ಅರ್ಚಕರನ್ನು ಪ್ರಶ್ನಿಸಲೂ ಇಲ್ಲ.. ಇದು ಯುದ್ಧದಲ್ಲಿ ಶಸ್ತ್ರ ಪ್ರಯೋಗ ಮಾಡದೆ ಶತ್ರುವನ್ನು ನಿಶಸ್ತ್ರಗೊಳಿಸುವ ಅಪರೂಪದ ಹೋರಾಟ.
ತಿರುವಾಂಕೂರು ಸಂಸ್ಥಾನದಲ್ಲಿ ಇಂದು ಕೇಂದ್ರ ಸರ್ಕಾರದಲ್ಲಿರುವಂತಹರದ್ದೇ ಪ್ರಭುತ್ವ ಇತ್ತು. ಅವರೊಡನೆ ನಾರಾಯಣ ಗುರುಗಳು ಸಂಘರ್ಷಕ್ಕಿಳಿದಿರಲಿಲ್ಲ. ವೈಕಂ ನಲ್ಲಿ ದೇವಸ್ಥಾನದ ಎದುರಿನ ಹಾದಿಯಲ್ಲಿ ನಡೆದುಕೊಂಡು ಹೋಗುವ ಸ್ವಾತಂತ್ರ್ಯಕ್ಕಾಗಿ ನಡೆದ ಸತ್ಯಾಗ್ರಹದ ಬಗ್ಗೆಯೂ ನಾರಾಯಣ ಗುರುಗಳ ವಿರೋಧ ಇತ್ತು. ‘’ಅವರು ಕಟ್ಟಿಕೊಂಡ ದೇವಸ್ಥಾನ, ಅದರ ಎದುರಿನ ಹಾದಿಯನ್ನು ಕಟ್ಟಿಕೊಂಡು ನೀವ್ಯಾಕೆ ಬಡಿದಾಡಿಕೊಳ್ಳುತ್ತೀರಿ,ನಿಮ್ಮ ದೇವಸ್ಥಾನವನ್ನು ನೀವೇ ಕಟ್ಟಿಕೊಳ್ಳಿ’’, ಎಂದು ಹೇಳುತ್ತಿದ್ದರು ನಾರಾಯಣ ಗುರುಗಳು.
ಆದರೆ ನಾರಾಯಣ ಗುರುಗಳು ಕಟ್ಟಿದ ದೇವಸ್ಥಾನಗಳನ್ನಷ್ಟೇ ಉಳಿಸಿಕೊಂಡಿರುವ ಅವರ ಅನುಯಾಯಿಗಳು ಅವರು ಹೇಳಿಕೊಟ್ಟಿರುವ ಚಿಂತನೆಯ ಪಾಠವನ್ನು ಮರೆತುಬಿಟ್ಟಿದ್ದಾರೆ.
ಮಂಗಳೂರಿನ ಕುದ್ರೋಳಿಯಲ್ಲಿ ಅಸ್ಪೃಶ್ಯ ಬಿಲ್ಲವರಿಗಾಗಿ ನಾರಾಯಣ ಗುರುಗಳೂ ಬಂದು ಸ್ಥಾಪಿಸಿದ್ದ ದೇವಸ್ಥಾನವನ್ನು ಹತ್ತಾರು ಕೋಟಿ ರೂಪಾಯಿ ವೆಚ್ಚದಲ್ಲಿ ನವೀಕರಿಸಲಾಗಿದೆ. ಆದರೆ ಬಿಲ್ಲವರು ಧಾರ್ಮಿಕ ಪ್ರವಾಸಕ್ಕೆ ಹೋದ ರೀತಿ ಅಲ್ಲಿಗೆ ಹೋಗಿ ಕೊಂಡಾಡಿ ಸೆಲ್ಪಿ ತೆಗೆಸಿಕೊಂಡು ಬರುತ್ತಾರೆ. ಅಲ್ಲಿಂದ ಉಡುಪಿ ಮಠ, ಕಟೀಲು, ಧರ್ಮಸ್ಥಳಗಳಿಗೆ ಹೋಗಿ ತಾವು ಕಷ್ಟ ಪಟ್ಟು ದುಡಿದ ದುಡ್ಡನ್ನು ಸುರಿದು ಬರುತ್ತಾರೆ.
ಉಡುಪಿ ಮಠದ ಸ್ವಾಮಿಗಳು, ಕಟೀಲಿನ ಆಸ್ರಣ್ಣರು ಮತ್ತು ಧರ್ಮಸ್ಥಳದ ಹೆಗಡೆಯವರು ಇಲ್ಲವೆ ಅವರ ಸಮುದಾಯದವರು ಎಂದಾದರೂ ಕುದ್ರೋಳಿ ದೇವಸ್ಥಾನಕ್ಕೆ ಭಕ್ತರಂತೆ ಬಂದು ಕೈಮುಗಿದು ನಾರಾಯಣ ಗುರುಗಳಿಗೆ ನಮಿಸಿ ಹೋಗಿದ್ದಾರೆಯೇ?
ಮತ್ತೆ ಯಾಕೆ ಗಣರಾಜ್ಯೋತ್ಸವದಲ್ಲಿ ನಾರಾಯಣ ಗುರುಗಳ ಸ್ಥಬ್ದಚಿತ್ರವನ್ನು ತಿರಸ್ಕರಿಸಿದ್ದಾರೆ ಎಂದು ಗೋಳು ಹೋಯ್ಕೊಳ್ತೀರಿ? ಅವರು ನಾರಾಯಣ ಗುರುಗಳನ್ನು ಹಿಂದೆಯೂ ತಿರಸ್ಕರಿಸಿದ್ದರು, ಮುಂದೆಯೂ ತಿರಸ್ಕರಿಸುತ್ತಾರೆ. ಅವರನ್ನು ವಿರೋಧಿಸುವುದನ್ನು ಬಿಟ್ಟು ನಾರಾಯಣ ಗುರುಗಳ ಅನುಯಾಯಿಗಳು ನಿಜವಾಗಿ ತಮ್ಮನ್ನು ತಾವೇ ಪ್ರಶ್ನೆ ಮಾಡಬೇಕಾಗಿದೆ. ನಾರಾಯಣ ಗುರುಗಳನ್ನು ತಿರಸ್ಕರಿಸಿದವರನ್ನು ನಾವು ಯಾಕೆ ಪುರಸ್ಕರಿಸುತ್ತಿದ್ದೇವೆ? ಎಂದು.
ಇದಕ್ಕಾಗಿಯೇ ಕುವೆಂಪು “…ಹುಲಿಗೆ ಗುಂಡು ಹೊಡೆಯುವ ಮೊದಲು ನಿಮ್ಮ ಮೆದುಳಿಗೆ ಹೊಡೆಯಬೇಕು..” ಹೇಳಿದ್ದು.

Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »