TOP STORIES:

ನಾರಾಯಣ ಗುರುಗಳನ್ನು ಅವಮಾನಿಸಿದ್ದಕ್ಕೆ ಬಿಜೆಪಿ ಕ್ಷಮೆ ಯಾಚಿಸಲಿ : ಸಿದ್ದರಾಮಯ್ಯ ಕಿಡಿ


ಬೆಂಗಳೂರು : ಬಾರಿಯ ಗಣರಾಜ್ಯೋತ್ಸವದ ಪೆರೇಡ್ ನಲ್ಲಿ ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಅವಕಾಶ ನಿರಾಕರಿಸಿರುವ ಬಗ್ಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೇಂದ್ರದವಿರುದ್ಧ ಕಿಡಿಕಾರಿದ್ದಾರೆ.

ಬಗ್ಗೆ ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರ ಸಮಾಜ ಸುಧಾರಕನನ್ನು ಅವಮಾನಿಸಿದ ಕಾರಣಕ್ಕೆ ದೇಶದ ಜನರ ಕ್ಷಮೆಯಾಚಿಸಿ, ನಾರಾಯಣ ಗುರುಗಳ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದುತಳಸಮುದಾಯದ ಮಹಾಪುರುಷರ ಬಗ್ಗೆ ಬಿಜೆಪಿ ಪಕ್ಷ ಮತ್ತು ಕೇಂದ್ರ ಸರ್ಕಾರಕ್ಕೆ ಇರುವ ಪೂರ್ವಗ್ರಹ ಮತ್ತು ತಿರಸ್ಕಾರಕ್ಕೆಸಾಕ್ಷಿ.ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಯಾವ ಕಾರಣಕ್ಕಾಗಿ ಅವಕಾಶ ನಿರಾಕರಿಸಲಾಗಿದೆ? ನಾರಾಯಣ ಗುರುಗಳು ಹಿಂದೂಧರ್ಮಕ್ಕೆ ಸೇರಿದವರಲ್ಲವೇ?
ಅಂತಹ ಅಭಿಪ್ರಾಯವನ್ನು ಬಿಜೆಪಿ ಪಕ್ಷ ಹೊಂದಿದ್ದರೆ ಹಾಗೆಂದು ಮುಕ್ತವಾಗಿ ಹೇಳುವ ಧೈರ್ಯ ತೋರಲಿ ಎಂದಿದ್ದಾರೆ.

ಹಿಂದೂ ಧರ್ಮದ ಸುಧಾರಕ ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಅವಕಾಶ ನಿರಾಕರಿಸಿ ಅವಮಾನಿಸಿರುವುದುಹಿಂದು ಹೃದಯಸಾಮ್ರಾಟಎಂದು ಕರೆಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ಇ‌ನ್ನೂ ಬಂದಿಲ್ಲವೇ? ಶತಮಾನದ ಹಿಂದೆಯೇಅಸ್ಪೃಶ್ಯತೆ ಮತ್ತು ಪುರೋಹಿತಷಾಹಿ ವ್ಯವಸ್ಥೆ ವಿರುದ್ದ ಸಿಡಿದೆದ್ದು ಹಿಂದೂ ಧರ್ಮದ ಸುಧಾರಣೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದನಾರಾಯಣ ಗುರುಗಳಿಗೆ ಅವಮಾನಿಸಿರುವ ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ಹಿಂದೂ ಧರ್ಮದ ಬಗ್ಗೆ ಮಾತನಾಡುವ ಯಾವನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ.

ತಮ್ಮ ಮೂಗಿನಡಿಯಲ್ಲಿಯೇ ನಾರಾಯಣ ಗುರುಗಳಿಗೆ ಮಾಡಿರುವ ಅವಮಾನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇನ್ನೂಪ್ರತಿಕ್ರಿಯಿಸದೆ ಇರುವುದು ಆಶ್ಚರ್ಯಕರ.ಇದನ್ನು ಹೇಗೆ ಅರ್ಥೈಸಬೇಕು? ಅವಮಾನಕ್ಕೆ ಸಹಮತ ಇದೆಯೆಂದೇ? ನಾನುಮುಖ್ಯಮಂತ್ರಿಯಾಗಿದ್ದಾಗ ನಾರಾಯಣ ಗುರುಗಳ ಜಯಂತಿಯನ್ನು ರಾಜ್ಯ ಸರ್ಕಾರವೇ ಅಧಿಕೃತವಾಗಿ ಆಚರಿಸಬೇಕೆಂಬ ನಿರ್ಧಾರಕೈಗೊಂಡೆ.ಇದರಿಂದಾಗಿ ಇಂದು ರಾಜ್ಯದ ಮೂಲೆಮೂಲೆಗೆ ಗುರುಗಳ ಚಿಂತನೆಯ ಸಂದೇಶ ತಲುಪುತ್ತಿದೆ‌ ಎಂಬ ಹೆಮ್ಮೆ ಮತ್ತು ತೃಪ್ತಿನನ್ನದು.ನಾರಾಯಣ ಗುರುಗಳಿಗೆ ಮಾಡಿರುವ ಅವಮಾನಕ್ಕಾಗಿ ಕೇಂದ್ರ ಸರ್ಕಾರ ದೇಶದ ಕ್ಷಮೆ ಕೇಳಬೇಕು. ಬಾರಿಯಗಣರಾಜ್ಯೋತ್ಸವದಲ್ಲಿ ನಾರಾಯಣ ಗುರುಗಳ ಸ್ತಬ್ಧ ಚಿತ್ರಕ್ಕೆ ಪ್ರಾಧಾನ್ಯ ಕೊಟ್ಟು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »