TOP STORIES:

FOLLOW US

ಬ್ರಹ್ಮ ಶ್ರೀ ನಾರಾಯಣ ಗುರು ಸಬ್ದ ಚಿತ್ರ ನಿರಾಕರಣೆ ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಖಂಡಣೆ


ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಮೂರ್ತಿ ಇರುವ ಸಬ್ದ ಚಿತ್ರವನ್ನು ಕೇಂದ್ರ ಗಣರಾಜ್ಯೋತ್ಸವದ ಆಯ್ಕೆ ಸಮಿತಿ ನಿರಾಕರಿಸಿದ್ದನ್ನು ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಖಂಡಿಸುತ್ತದೆ, ಎಂದು ಎಸ್ ಎನ್ ಜಿ ಯ ರಾಜ್ಯಾಧ್ಯಕ್ಷರಾದ ಸತ್ಯಜಿತ್‌ ಸುರತ್ಕಲ್ ಆಕ್ಷೇಪ ವ್ಯಕ್ತಪಡಿಸಿದರು.

“ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಯುತರಾಗಿ ಎಂಬ ಸಂದೇಶವನ್ನು ಸಾರಿದ ಸಂತ, ಮಾನವತಾವಾದಿ, ಸಮಾಜ ಸುಧಾರಕ, ಹಿಂದುಳಿದ ವರ್ಗಗಳ ಶೋಷಿತ ವರ್ಗಗಳ ತುಳಿತಕ್ಕೆ ಒಳಗಾದ ಸಮುದಾಯದವರನ್ನು ಮೇಲೆತ್ತಿದವರು, ಅವರ ಬದುಕಿನಲ್ಲಿ ಆಶಾಕಿರಣವನ್ನು ಮೂಡಿಸಿದವರು ಹಾಗೂ ಅಕ್ಷರ ಬ್ರಹ್ಮ ಎಂದೆ ಜನಮಾನಸದಲ್ಲಿ ಮನೆಮಾತಾಗಿರುವ, ಬ್ರಹ್ಮರ್ಷಿ ನಾರಾಯಣ ಗುರುಗಳು ಕೇರಳದ ಮೂಲಕ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮುಂತಾದ, ಸರ್ವ ಧರ್ಮಗಳ ಜನರು ಸಹ ಬಾಳ್ವೆಗಳ ಮೂಲಕ ಒಂದೇ ಜಾತಿ, ಒಂದೇ ಧರ್ಮ, ಒಬ್ಬನೇ ದೇವರು, ‘ಮನುಷ್ಯ ಕುಲಂ ತಾನೊಂದೇ ವಲಂ’ ಎನ್ನುವ ಆದಿಕಪಿ ಪಂಪನ ಮಾತುಗಳನ್ನು ತಮ್ಮ ಧಾರ್ಮಿಕ ತತ್ವಾದರ್ಶಗಳ ಮೂಲಕ ನನಸು ಮಾಡಿದ ಭಾರತೀಯ ದಾರ್ಷನಿಕರಾದ ಅಂಬೇಡ್ಕರ್‌, ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧಿ, ರವೀಂದ್ರನಾಥ ಠಾಗೂರ್ ಇವರುಗಳು ಬ್ರಹ್ಮರ್ಷಿ ನಾರಾಯಣ ಗುರುಗಳ ಪ್ರಭಾವಕ್ಕೆ ಒಳಗಾಗಿ ಪ್ರೇರೆಪಣೆಯನ್ನು ಪಡೆದ ಮಹನೀಯರು, ಇಂತಹ ಮನುಕುಲದ ದಿವ್ಯ ಜ್ಯೋತಿಯೊಂದರ ಸ್ಥಬ್ದ ಚಿತ್ರವೊಂದನ್ನು ಕೇರಳದ ಸರ್ಕಾರವು ದೆಹಲಿಯಲ್ಲಿ ನಡೆಯಲಿರುವ ಜನವರಿ 26 ರ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಕೇರಳ ರಾಜ್ಯದ ಹೆಮ್ಮೆಯ ಪ್ರತೀಕವಾಗಿ ಕಳಿಸಿರುವುದನ್ನು ಕೇಂದ್ರ ಆಯ್ಕೆ ಸಮಿತಿ ತಿರಸ್ಕರಿಸಿರುವುದು ಅತ್ಯಂತ ನೋವಿನ ವಿಚಾರವಾಗಿದೆ, ಸ್ತ್ರೀ ಸಮಾನತೆ ಪ್ರತಿಪಾದಿಸಿ ಜಾತಿ, ಮತ ಭೇದಗಳನ್ನು ದಿಕ್ಕರಿಸಿ ಸಮಾಜೋದ್ಧಾರಕ್ಕೆ ಶ್ರಮಿಸಿದ ಮಹಾನ್ ಚೇತನ. ಅಂತವರ ಮೂರ್ತಿ ಇದ್ದ ಸ್ಥಬ್ಧ ಚಿತ್ರವನ್ನು ತಿರಸ್ಕಾರ ಮಾಡಿರುವುದು ಕ್ಷಮಾರ್ಹವಲ್ಲದ ತಪ್ಪು ಹಾಗೂ ಭಾರತೀಯ ಸುಧಾರಣಾ ಪರಂಪರೆಯ ಬಗ್ಗೆ ತಿಳುವಳಿಕೆ ಇಲ್ಲದ ಅಜ್ಞಾನದ ಪರಮಾವಧಿ, ಆಯ್ಕೆ ಸಮಿತಿಯಲ್ಲಿ ಇಂತಹ ಅಜ್ಞಾನಿಗಳಿರುವುದು ದೇಶಕ್ಕೆ ಶೋಭೆಯಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ಕೆಲವು ಮೂಲಗಳ ಪ್ರಕಾರ, ಗುರುಗಳ ಶಿಲ್ಪದ ಬದಲು ಶಂಕರಾಚಾರ್ಯರ ಪ್ರತಿಮೆ ಇಡಬಹುದು ಎಂಬ ಮಾಹಿತಿ ಇದ್ದು ಅದನ್ನು ಖಂಡಿಸುತ್ತೇವೆ . ಕೇವಲ ಶಂಕರಾಚಾರ್ಯರ ಶಿಲ್ಪ ಇಡುತ್ತಿದ್ದರೆ ಆ ಬಗ್ಗೆ ಯಾವುದೇ ಆಕ್ಷೇಪ ಇರುತ್ತಿರಲಿಲ್ಲ ಎಂದರು.

ಸಮಾನತೆಯ ಸಮಾಜದ ಕನಸು ಕಾಣುವ ಪ್ರತಿಯೊಬ್ಬ ಭಾರತೀಯರು ಖಂಡಿಸಬೇಕಿದೆ. ಇದು ಹಿಂದುಳಿದ ಶೋಷಿತ ದಲಿತ ಗುರುಗಳಿಗೆ ಮತ್ತು ಸಮಾಜಕ್ಕೆ ಮಾಡಿದ ಅವಮಾನವಾಗಿದ್ದು ಬ್ರಹ್ಮರ್ಷಿ ನಾರಾಯಣ ಗುರುಗಳ ಮೂರ್ತಿ ಇರುವ ಸ್ಥಬ್ಧ ಚಿತ್ರವನ್ನು ಗಣರಾಜ್ಯೋತ್ಸವದ ಮೆರವಣಿಗೆಯ ಸಮಿತಿಯು ಅಂಗೀಕಾರ ಮಾಡದೇ ಗುರುಗಳಿಗೆ ಗೌರವವನ್ನು ನೀಡಬೇಕೆಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಅಚ್ಚುತ ಅಮೀನ್ ಕಲ್ಮಾಡಿ, ರಾಜ್ಯ ಉಪಾಧ್ಯಕ್ಷರು, ರಾಜು ಪೂಜಾರಿ ಉಳ್ಳೂರು, ಗೌರವ ಅಧ್ಯಕ್ಷರು, ಜಗನ್ನಾಥ್ ಕೋಟೆ, ಉಡುಪಿ ಜಿಲ್ಲಾ ಅಧ್ಯಕ್ಷರು, ಶಶಿಧರ ಎಮ್. ಅಮೀನ್, ವಡಭಾಂಡೇಶ್ವರ, ತಾಲೂಕು ಅಧ್ಯಕ್ಷರು ಮತ್ತಿತರರು ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »