TOP STORIES:

ದೆಹಲಿಯಲ್ಲಿ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದಾಗ


ನನಗೆ ದೆಹಲಿಗೆ ಹೋಗುವ ಅವಕಾಶ ಸಿಕ್ಕಿತು 2006 ರಲ್ಲಿ. ಆಗ ನಾನು ಕರ್ನಾಟಕ ತುಳುಸಾಹಿತ್ಯ ಅಕಾಡೆಮಿ ಸದಸ್ಯನಾಗಿದ್ದೆ. ಅಮೇರಿಕದ ಸಾಂಸ್ಕೃತಿಕ ಸಂಘದವರಿಗೆ ನಮ್ಮ ದೈವಾರಾಧನೆ ಕುರಿತು ತಿಳಿಸುವ ಜವಾಬ್ದಾರಿಯಿತ್ತು. ಅದಕ್ಕಾಗಿ ತುಳುನಾಡಿನಕೋಲ ಹೇಗಿರುತ್ತದೆ ಎನ್ನುವುದನ್ನು ಮನವರಿಕೆ ಮಾಡಿಕೊಡುವ ಉದ್ದೇಶ. ಅದಕ್ಕಾಗಿ ತುಳು ಸಾಹಿತ್ಯ ಅಕಾಡೆಮಿಯಿಂದ ತಂಡವನ್ನುದೆಹಲಿಗೆ ಒಯ್ಯುವ ಹೊಣೆ ನನಗೆ. ಸರಿ ನನ್ನೊಂದಿಗೆ ನಾಲ್ಕು ಜನರ ತಂಡವಿತ್ತು. ನಾವು ದೆಹಲಿ ತಲುಪಿ ಕರ್ನಾಟಕ ಸಂಘದಲ್ಲಿಉಳಿದುಕೊಂಡಿದ್ದೆ.

ಒಂದು ದಿನ ಮುಂಜಾನೆ ನಾನು ಕುತೂಹಲಕ್ಕಾಗಿ ದೆಹಲಿಯಲ್ಲಿದ್ದ ಮತ್ತು ಆಗ ರಾಜ್ಯ ಸಭಾ ಸದಸ್ಯರಾಗಿದ್ದ ಬಿ.ಜನಾರ್ಧನಪೂಜಾರಿಯವರಿಗೆ ಫೋನ್ ಮಾಡಿದೆ. ಆಕಡೆಯಿಂದ ದೂರವಾಣಿ ಕರೆ ತೆಗೆದುಕೊಂಡರು. ‘ಸಾರ್ ನಾನು ಚಿದಂಬರಎಂದೆ. ‘ ಹೋಎಲ್ಲಿದ್ದೀರಿಪ್ರಶ್ನೆ ಬಂತು. ‘ನಾನು ದೆಹಲಿಗೆ ಬಂದೆಎಂದೆ. ‘ಯಾವಾಗ ಬಂದಿರಿಎಂದರು. ‘ ಸಾರ್ ಮೂರು ದಿನವಾಯ್ತುಎಂದೆ. ‘ಛೇ ಛೇ ಮೂರು ದಿನವಾದರೂ ಯಾಕೆ ನನಗೆ ಹೇಳಲಿಲ್ಲ ?, ಯಾವಾಗ ಹೋಗುತ್ತೀರಿ ?’ ಮತ್ತೆ ಪ್ರಶ್ನೆ. ‘ಇಲ್ಲ ಸಾರ್ ನಾಳೆಹೋಗುತ್ತೀನಿ’. ‘ ಹಾಗಾದರೆ ಈಗಲೇ ಬನ್ನಿ ನನ್ನ ಮನೆಗೆಎಂದವರೇ ಮನೆಯ ವಿಳಾಸ ಹೇಳಿದರು.‘ ಏನಾದರೂ ಸಮಸ್ಯೆಯಾದರೆಫೋನ್ ಮಾಡಿ, ಕಾಯುತ್ತೇನೆಎಂದು ಫೋನ್ ಇಟ್ಟರು.

ಈಗ ನನಗೆ ಸಮಸ್ಯೆ, ಅಲ್ಲಿಗೆ ಹೋಗುವುದು ಹೇಗೆಂದು. ಸರಿ ನಾನು ನನ್ನ ಗೆಳೆಯ ಡಾ. ಪುರುಷೋತ್ತಮ ಬಿಳಿಮಲೆ (ದೆಹಲಿಯಕರ್ನಾಟಕ ಸಂಘದ ಅಧ್ಯಕ್ಷ)ಯನ್ನು ಕೇಳಿ ವಿಳಾಸ ತಿಳಿಸಿದೆ. ಅವರು ಹೇಳಿದಂತೆ ಟ್ಯಾಕ್ಸಿ ಮಾಡಿಕೊಳ್ಳುವುದು ಅನಿವಾರ್ಯವಾಗಿತ್ತು. ಅವರಿಗೇ ಹೇಳಿದೆ ಟ್ಯಾಕ್ಸಿ ಮಾಡಿಕೊಡಿ ಯಾಕೆಂದರೆ ನಾನು ಕೇಳಿದರೆ ಬಾಡಿಗೆ ದುಬಾರಿ ಹೇಳಬಹುದೆಂದೆ. ಅವರೇ ತಕ್ಷಣ ಒಂದುಟ್ಯಾಕ್ಸಿಗೆ ಫೋನ್ ಮಾಡಿ ಬರಲು ಹೇಳಿದರು. ಟ್ಯಾಕ್ಸಿ ಬಂತು.

ನಾನು ಬಿ.ಜನಾರ್ಧನ ಪೂಜಾರಿ ಮನೆಗೆ ಹೋಗಬೇಕು ಪೂಜಾರಿಜೀ ಯೇ ಬಹುತ್ ಅಚ್ಛಾ ಆಧ್ಮಿ, ವೋ ತೋತೋ ಸಬ್ಕೋಮಾಲೂಮ್ ಹೈಎಂದ ಟ್ಯಾಕ್ಸಿ ಡ್ರೈವರ್. ನನಗೆ ಅಚ್ಚರಿ. ಜನಾರ್ಧನ ಪೂಜಾರಿ ಮನುಷ್ಯನಿಗೂ ಪರಿಚಯವಲ್ಲಾ ಎಂದು.

ಟ್ಯಾಕ್ಸಿ ಹೊರಟಿತು ಪೂಜಾರಿ ಮನೆಗೆ. ಟ್ಯಾಕ್ಸಿ ಡ್ರೈವರ್ ಗೂ ಯಾಕೋ ಸಂಶವಾಯಿತು. ಅಲ್ಲಿದ್ದವರನ್ನು ವಿಚಾರಿಸಿದ. ಆತ ಬಂದಜಾಗ ಸರಿಯಾಗಿತ್ತು. ಮತ್ತೆ ಆತ ನನಗೆ ಹೇಳಿದ ನಾನು ತುಂಬಾ ದಿನವಾಯ್ತು ಬಂದು. ಅದಕಾಗಿಯೇ ಅಲ್ಲೇ ಇದ್ದಾರೋ ಬದಲಾಗಿಬೇರೆ ಎಲ್ಲಿಗಾದರೂ ಹೋಗಿದ್ದಾರೋ ಎಂದು ಕೇಳಿದೆ, ನಿಮಗೆ ತೊಂದರೆಯಾಗಲಿಲ್ಲ ತಾನೇ ಕೇಳಿದ. ನಾನು ಇಲ್ಲ ಎಂದೆ. ಟ್ಯಾಕ್ಸಿಯನ್ನು ಸರಿಯಾಗಿ ಪೂಜಾರಿಯವರಿದ್ದ ಮನೆಯ ಮುಂದೆ ನಿಲ್ಲಿಸಿ ಗೇಟ್ ತೆಗೆದು ಹೋಗಿ ಎಂದ.

ನಾನು ಅಳುಕುತ್ತಲೇ ನಿಧಾನವಾಗಿ ಗೇಟ್ ತೆಗೆದುಕೊಂಡು ಹೋದೆ. ಅದು ದೊಡ್ಡ ಮನೆ. ನಾಲ್ಕು ಸುತ್ತಲೂ ಕಾಂಪೌಂಡ್. ವಿಶಾಲವಾದ ಜಾಗದಲ್ಲಿತ್ತು ಮನೆ. ಹೊರಗಿನಿಂದ ಗಲಾಟೆ, ಜನಜಂಗುಳಿಯಿಲ್ಲ, ಪ್ರಶಾಂತವಾದ ವಾತಾವರಣ. ಸಮಯ ಬೆಳಿಗ್ಗೆ 11 ಗಂಟೆಯಾಗಿತ್ತು. ನಾನು ಮನೆಯ ಕಾಲಿಂಗ್ ಬೆಲ್ ಒತ್ತಿದೆ. ಸ್ವಲ್ಪ ಸಮಯದಲ್ಲಿ ಬಾಗಿಲು ತೆರೆದುಕೊಂಡಿತು. ‘ಕ್ಯಾ ಚಾಯಿಯೇಪ್ರಶ್ನೆಓರ್ವ ಅಪರಿಚಿತ ವ್ಯಕ್ತಿಯಿಂದ. ನಾನು ಬಿ.ಜನಾರ್ಧನ ಪೂಜಾರಿ ಕೋ ಮಿಲ್ನೇಕೇಲಿಯೇ ಆಯೇಎಂದೆ. ತಕ್ಷಣ ಒಳಗೆ ಬರಲುಹೇಳಿದರು. ಅವರು ಸ್ನಾನ ಮಾಡುತ್ತಿದ್ದಾರೆ, ಕೂತುಕೊಳ್ಳಿ ಎಂದು ಒಳಗೆ ಹೋದರು. ಸ್ವಲ್ಪ ಹೊತ್ತಲ್ಲಿ ಬಂದುಚಹಾ, ಕಾಫಿ ಏನುತೆಗೆದುಕೊಳ್ಳುತ್ತೀರಿಎಂದರು. ಬೇಡಾ ಬಿಡಿ ಎಂದೆ, ಆದರೂ ಒತ್ತಾಯ ಮಾಡಿದಾಗ ಚಹಾ ಎಂದೆ. ಸ್ವಲ್ಪಹೊತ್ತಲ್ಲಿ ಚಹಾ ಬಂತು. ಕುಡಿದು ಅಲ್ಲಿದ್ದ ಪೇಪರ್ ನೋಡುತ್ತಾ ಕುಳಿತೆ.

ಸ್ವಲ್ಪ ಸಮಯದ ಬಳಿಕ ಬಿ.ಜನಾರ್ಧನ ಪೂಜಾರಿ ಬಂದರು . ಶುದ್ಧ ಬಿಳಿ ಪ್ಯಾಂಟ್, ಬಿಳಿ ಅಂಗಿ ಧರಿಸಿದ್ದರು. ಕನ್ನಡವನ್ನುಬಟ್ಟೆಯಿಂದ ಉಜ್ಜಿಕೊಂಡು ನಗುತ್ತಲೇ ಬಂದರು. ‘ದಾನೆಗೇ ಬರಿಯೆರೆ ಕಷ್ಟ ಆಂಡ್’ (ಏನಂತೆ ಬರಲು ಕಷ್ಟವಾಯಿತೇ). ನಾನುಇಲ್ಲವೆಂದೆ. ಆಮೇಲೆ ಪೂಜಾರಿಯವರಿಂದ ಚಹಾ ಕುಡಿಯಲು ಒತ್ತಾಯ. ನಾನು ಕುಡಿದೆ ಎಂದರು ಒಪ್ಪಲಿಲ್ಲ ಮತ್ತೆ ಕುಡಿಯಿರಿಎಂದು ಚಹಾ ತರಿಸಿದರು.

ಹಾಗೆ ಮಾತಾಡುತ್ತಾ ಕುಳಿತೆವು. ಸ್ಥಳೀಯ ರಾಜಕೀಯದ ಕುರಿತೇ ಮಾತು. ನಾವಿಬ್ಬರೇ ಕುಳಿತುಕೊಂಡಿದ್ದೆವು, ಅಲ್ಲಿಗೆ ಬೇರೆ ಯಾರೂಬರಲಿಲ್ಲ. ಸದ್ದುಗದ್ದಲವಿಲ್ಲದೆ ಮಾತನಾಡಿದೆವು. ಪೂಜಾರಿ ಮಕ್ಕಳ ಕುರಿತು ವಿಚಾರಿಸಿದರು. ಯಾಕೆ ಬಂದದ್ದು ಪ್ರಶ್ನೆಗೆ ವಿವರಿಸಿದೆ. ಸುಮಾರು ಒಂದು ಗಂಟೆ ಕಾಲ ಮಾತನಾಡಿದೆವು. ನಾನು ಹೊರಟು ನಿಂತೆ. ಪೂಜಾರಿಯವರು ಊಟ ಮಾಡಿಕೊಂಡು ಹೋಗಲುಒತ್ತಾಯಿಸಿದರು. ನಾನು ಬೇಡವೆಂದು ಹೇಳಿ ಮತ್ತೆ ಅಮೇರಿಕಾ ತಂಡವನ್ನು ಭೇಟಿ ಮಾಡುವ ನೆಪಕೊಟ್ಟು ಹೊರಡಲು ಬಯಸಿದೆ.

ಸರಿ ಪೂಜಾರಿಯವರು ಸಮ್ಮತಿಸಿದರು. ನಾನಿನ್ನು ಬರ್ತ್ತೇನೆ ಎಂದು ಕೈಮುಗಿದೆ. ‘ಇಲ್ಲಾ ಇಲ್ಲಾ ಬನ್ನಿಎನ್ನುತ್ತಾ ನನ್ನೊಂದಿಗೆ ಗೇಟ್ವರೆಗೂ ಬರಲು ಸಜ್ಜಾದರು. ನಾನುಬೇಡ ಸಾರ್ ನಾನು ಹೊಗ್ತೇನೆಎಂದರು ಕೇಳಲಿಲ್ಲ. ‘ನೀವು ನನ್ನ ಗೆಸ್ಟ್ ಬನ್ನಿಎನ್ನುತ್ತಾನಡೆದುಕೊಂಡು ಬಂದು ಅವರೇ ಗೇಟ್ ತೆಗೆದು ಟ್ಯಾಕ್ಸಿ ತನಕ ಬಂದು ನನ್ನ ಟ್ಯಾಕ್ಸಿ ಅಲ್ಲಿಂದ ಹೊರಟ ಮೇಲೆ ಗೇಟ್ ಹಾಕಿಕೊಂಡರು.

ಒಬ್ಬ ಕೇಂದ್ರ ಸಚಿವರಾಗಿದ್ದವರು ಹೇಗೆ ನಡೆದುಕೊಂಡರು ಎನ್ನುವುದನ್ನು ತಿಳಿಸಲು ಇಷ್ಟೆಲ್ಲಾ ಹೇಳಬೇಕಾಯಿತು. ಪೂಜಾರಿಯವರುಮುಂಗೋಪಿ, ಸಿಡುಕಿನವರು ಎನ್ನುವ ಅಭಿಪ್ರಾಯ ಎಷ್ಟು ಸಹಜ ಮತ್ತು ಎಷ್ಟು ಸುಳ್ಳು ಎನ್ನುವುದೇ ನನಗೆ ಅರ್ಥವಾಗಲಿಲ್ಲ. ಸಿಡುಕಿನ ವ್ಯಕ್ತಿಯಲ್ಲೂ ಎಂಥ ಗುಣಗಳಿರುತ್ತವೆ, ಎಷ್ಟು ಮನುಷ್ಯತ್ವ ಇರುತ್ತದೆ ಅಂದುಕೊಂಡೆ. ನನ್ನನ್ನು ಮನೆಯಿಂದ ಬೀಳ್ಕೊಟ್ಟಾಗನನ್ನೊಂದಿಗೆ ಬಂದ ಬಿ.ಜನಾರ್ಧನ ಪೂಜಾರಿಯವರಲ್ಲೂ ಇಷ್ಟೊಂದು ಸೌಜನ್ಯವಿದೆಯಲ್ಲ ಎಂದುಕೊಂಡೆ.

ಚಿದಂಬರ ಬೈಕಂಪಾಡಿ


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »