TOP STORIES:

ರವಿ ಕಕ್ಯಪದವುಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ


ಮಗಳೂರು: ಮಂಗಳೂರು ಪ್ರೆಸ್ ಕ್ಲಬ್‌ನಿಂದ ದಕ್ಷಿಣ ಕನ್ನಡ ಜಿಲ್ಲೆಯ ಶ್ರೇಷ್ಠ ಸಾಧಕರಿಗೆ ಪ್ರತಿವರ್ಷ ನೀಡಲಾಗುವ ಮಂಗಳೂರುಪ್ರೆಸ್ ಕ್ಲಬ್– 2021ನೇ ಸಾಲಿನ ವರ್ಷದ ಪ್ರಶಸ್ತಿಗೆ ಅಕ್ಷರ ಜ್ಞಾನವಿಲ್ಲದೆಯೂ ಪರಿಶ್ರಮದಿಂದ ಯಶಸ್ವಿ ಉದ್ಯಮಿಯಾಗಿ 300ರಷ್ಟುಮಂದಿಗೆ ಉದ್ಯೋಗ, ಬಡವರಿಗೆ ನೆರವು ನೀಡುತ್ತಿರುವ ಸಮಾಜಸೇವಕ ರವಿ ಕಕ್ಯಪದವು ಆಯ್ಕೆಯಾಗಿದ್ದಾರೆ.

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್, ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಶಾಖೆಯ ಕಾರ್ಯಕಾರಿ ಸಮಿತಿಸದಸ್ಯ, ಸಮಾಜ ಸೇವಕ ರವೀಂದ್ರನಾಥ್ ಕೆ. ಹಾಗೂ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ.ಜಿ.ಅನಂತ ಪ್ರಭುನೇತೃತ್ವದ ನಿರ್ಣಾಯಕ ಸಮಿತಿ ಆಯ್ಕೆ ನಡೆಸಿದೆ.

ಮಾ.6ರಂದು ಪ್ರಶಸ್ತಿ ಪ್ರದಾನ: ಮಾ.6ರಂದು ತಣ್ಣೀರುಬಾವಿಯ ಟ್ರೀ ಪಾರ್ಕ್‌ನಲ್ಲಿ ನಡೆಯಲಿರುವ ಪ್ರೆಸ್ ಕ್ಲಬ್ ದಿನಾಚರಣೆಯಂದುರವಿ ಕಕ್ಯಪದವು ಅವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 10,001 ರೂ. ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನವನ್ನೊಳಗೊಂಡಿದೆ ಎಂದು ಮಂಗಳೂರು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ಪಡುಬಿದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರವಿ ಕಕ್ಯಪದವು ಪರಿಚಯ: ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಮುದಲಾಡಿ ಕುಟುಂಬದ ದಿವಂಗತ ಚಂದು ಪೂಜಾರಿಕಮಲದಂಪತಿಯ ಇಬ್ಬರು ಮಕ್ಕಳ ಪೈಕಿ ಹಿರಿಯವರು ರವಿ ಕಕ್ಯಪದವು. ಬಡ ಕುಟುಂಬದಲ್ಲಿ ಹುಟ್ಟಿದ ಅವರಿಗೆ ಆರನೇ ವರ್ಷದಲ್ಲಿ ಶಾಲೆಗೆಸೇರಿಸಲಾಗಿತ್ತು. ಕಟ್ಟಿಗೆ ಒಡೆಯುವ ಕಾಯಕ ಮಾಡುತ್ತಿದ್ದ ತಂದೆಯ ಕಾಲಿಗೆ ಕೊಡಲಿ ಪೆಟ್ಟು ಬಿದ್ದು, ಗಂಭೀರ ಗಾಯವಾದ ದಿನವೇಶಾಲೆ ಬಿಟ್ಟಿದ್ದಾರೆ. ಕೇವಲ 15 ದಿನ ಶಾಲೆಯ ಮೆಟ್ಟಿಲು ಹತ್ತಿದ್ದು, ಅವರಿಗೆ ಅಕ್ಷರ ಜ್ಞಾನವಿಲ್ಲ.

ಕುಟುಂಬವನ್ನು ಸಾಗಿಸುವ ಜವಾಬ್ದಾರಿಯಿಂದ ಬಾಲ್ಯದಲ್ಲೇ ದುಡಿಮೆ ಆರಂಭಿಸಿದ ಅವರು, ಧರ್ಮಸ್ಥಳದಲ್ಲಿ ಪತ್ರಿಕಾವಿತರಕರಾಗಿದ್ದರು. ಅಂಗಡಿಯಲ್ಲಿ ಸಹಾಯಕರಾಗಿದ್ದರು. ಮುಂಬಯಿಯಲ್ಲಿ ಹೋಟೆಲ್ ಕ್ಲೀನರ್ ಆಗಿದ್ದರು. ಮೇಸ್ತ್ರಿಗೆ ಹೆಲ್ಪರ್ಆಗಿದ್ದರು. ಹೋಟೆಲ್‌ನಲ್ಲಿ ಸಹಾಯಕರಾಗಿದ್ದರು. ಅರ್ಚಕರ ಸಹಾಯಕನಾಗಿಯೂ ಕೆಲಸ ಮಾಡಿದ್ದರು.

2000 ಇಸವಿಗೆ ಸುಬ್ರಹ್ಮಣ್ಯಕ್ಕೆ ಬಂದ ಅವರು, ಪೈಂಟರ್, ಸಾರಣೆ ಕೆಲಸಗಾರನಾಗಿ ದುಡಿದು ಬಳಿಕ ಗುತ್ತಿಗೆದಾರನಾದರು. ಬಳಿಕಸ್ವಂತ ಅನುಗ್ರಹ ಕನ್‌ಸ್ಟ್ರಕ್ಷನ್, ಏನೆಕಲ್‌ನಲ್ಲಿ ಅಮೃತ ಅನುಗ್ರಹ ಇಂಡಸ್ಟ್ರೀಸ್ ಸ್ಥಾಪಿಸಿ, ಯಶಸ್ವಿ ಮತ್ತು ಬೇಡಿಕೆಯಗುತ್ತಿಗೆದಾರನಾಗಿದ್ದಾರೆ. ಇಷ್ಟರ ತನಕ 265ಕ್ಕೂ ಹೆಚ್ಚು ಮನೆಗಳನ್ನು ಹಾಗೂ ಐದು ಅಪಾರ್ಟ್‌ಮೆಂಟ್‌ ನಿರ್ಮಿಸಿದ ಹಿರಿಮೆಅವರದ್ದು. ಇಂದು ಸುಮಾರು 300 ಮಂದಿಗೆ ನೇರ ಉದ್ಯೋಗ ಒದಗಿಸಿದ್ದಾರೆ.

ಸಮಾಜಸೇವೆ: ಸಮಾಜಸೇವೆಯು ರವಿ ಕಕ್ಯಪದವು ಅವರ ಇಷ್ಟದ ಪ್ರವೃತ್ತಿ. ತನ್ನ ದುಡಿಮೆಯ ಉಳಿತಾಯದ ಶೇ.25 ಭಾಗವನ್ನುಸಮಾಜಸೇವೆಗೆ ವ್ಯಯ ಮಾಡುತ್ತಿದ್ದಾರೆ. ಪ್ರತಿವರ್ಷ ನೂರಾರು ಮಕ್ಕಳಿಗೆ ಪುಸ್ತಕ ಮತ್ತು ಸಮವಸ್ತ್ರ ನೀಡುತ್ತಿದ್ದಾರೆ. ಕುಲ್ಕುಂದಗ್ರಾಮದಲ್ಲಿ 80 ಸೆಂಟ್ಸ್ ಜಾಗವನ್ನು ಖರೀದಿಸಿ, ಅದನ್ನು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ದಾನ ಮಾಡಿದ್ದಾರೆ. ಅದರಲ್ಲಿಅರ್ಹ ವ್ಯಕ್ತಿಗಳಿಗೆ ಮನೆಗಳನ್ನೂ ಉಚಿತವಾಗಿ ನಿರ್ಮಿಸಿ ಕೊಟ್ಟಿದ್ದಾರೆ. ಪ್ರತಿವರ್ಷ ಷಷ್ಠಿ ಸಂದರ್ಭದಲ್ಲಿ ಬಡವರಿಗೆ ಅಕ್ಕಿಯನ್ನು ದಾನಮಾಡುತ್ತಿದ್ದಾರೆ.

ಸಮಾಜಸೇವೆಗಾಗಿ ಜೇಸಿಐ ಮತ್ತಿತರ ಸಂಘ ಸಂಸ್ಥೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಜೆಸಿಐನ ವಲಯ ಉಪಾಧ್ಯಕ್ಷ, ವಲಯಾಧಿಕಾರಿ ಆಗಿದ್ದರು. ಅವರ ಜೀವನ, ಸಾಧನೆ ಕುರಿತು ದಂತ ವೈದ್ಯೆ ಡಾ.ರಾಜೇಶ್ವರಿ ಗೌತಮ್ ಅವರು *’ಬೆಂಕಿಯಲ್ಲಿ ಅರಳಿದಹೂವು‘ ಎಂಬ ಪುಸ್ತಕ ಬರೆದಿದ್ದಾರೆ.

ರವಿ ಕಕ್ಯಪದವು ಅವರಿಗೆ ಜೆಸಿಐ ಸಾಧನಾಶ್ರೀ, ಕಮಲ ಪತ್ರ ಪ್ರಶಸ್ತಿ, ಸ್ವಸ್ತಿಶ್ರೀ ರಾಜ್ಯ ಪ್ರಶಸ್ತಿ ಇತ್ಯಾದಿಯಲ್ಲದೇ, 270ಕ್ಕೂ ಅಧಿಕಸನ್ಮಾನಗಳು ಲಭಿಸಿವೆ.

ಶೂನ್ಯದಿಂದ ಬಂದು ಸಾಧಕನಾಗಿ ಮೆರೆದ ಅವರ ಜೀವನ ವೃತ್ತಾಂತ ಮತ್ತೊಬ್ಬರಿಗೆ ಪ್ರೇರಣದಾಯಕ. ಬದುಕಿನ ಕಷ್ಟ, ಕಾರ್ಪಣ್ಯ, ಕಲ್ಲು ಮುಳ್ಳುಗಳನ್ನು ದಾಟಿ ಸಾಧನೆ ಮಾಡಿದ್ದಾರೆ.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »