TOP STORIES:

FOLLOW US

ರವಿ ಕಕ್ಯಪದವುಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ


ಮಗಳೂರು: ಮಂಗಳೂರು ಪ್ರೆಸ್ ಕ್ಲಬ್‌ನಿಂದ ದಕ್ಷಿಣ ಕನ್ನಡ ಜಿಲ್ಲೆಯ ಶ್ರೇಷ್ಠ ಸಾಧಕರಿಗೆ ಪ್ರತಿವರ್ಷ ನೀಡಲಾಗುವ ಮಂಗಳೂರುಪ್ರೆಸ್ ಕ್ಲಬ್– 2021ನೇ ಸಾಲಿನ ವರ್ಷದ ಪ್ರಶಸ್ತಿಗೆ ಅಕ್ಷರ ಜ್ಞಾನವಿಲ್ಲದೆಯೂ ಪರಿಶ್ರಮದಿಂದ ಯಶಸ್ವಿ ಉದ್ಯಮಿಯಾಗಿ 300ರಷ್ಟುಮಂದಿಗೆ ಉದ್ಯೋಗ, ಬಡವರಿಗೆ ನೆರವು ನೀಡುತ್ತಿರುವ ಸಮಾಜಸೇವಕ ರವಿ ಕಕ್ಯಪದವು ಆಯ್ಕೆಯಾಗಿದ್ದಾರೆ.

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್, ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಶಾಖೆಯ ಕಾರ್ಯಕಾರಿ ಸಮಿತಿಸದಸ್ಯ, ಸಮಾಜ ಸೇವಕ ರವೀಂದ್ರನಾಥ್ ಕೆ. ಹಾಗೂ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ.ಜಿ.ಅನಂತ ಪ್ರಭುನೇತೃತ್ವದ ನಿರ್ಣಾಯಕ ಸಮಿತಿ ಆಯ್ಕೆ ನಡೆಸಿದೆ.

ಮಾ.6ರಂದು ಪ್ರಶಸ್ತಿ ಪ್ರದಾನ: ಮಾ.6ರಂದು ತಣ್ಣೀರುಬಾವಿಯ ಟ್ರೀ ಪಾರ್ಕ್‌ನಲ್ಲಿ ನಡೆಯಲಿರುವ ಪ್ರೆಸ್ ಕ್ಲಬ್ ದಿನಾಚರಣೆಯಂದುರವಿ ಕಕ್ಯಪದವು ಅವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 10,001 ರೂ. ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನವನ್ನೊಳಗೊಂಡಿದೆ ಎಂದು ಮಂಗಳೂರು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ಪಡುಬಿದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರವಿ ಕಕ್ಯಪದವು ಪರಿಚಯ: ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಮುದಲಾಡಿ ಕುಟುಂಬದ ದಿವಂಗತ ಚಂದು ಪೂಜಾರಿಕಮಲದಂಪತಿಯ ಇಬ್ಬರು ಮಕ್ಕಳ ಪೈಕಿ ಹಿರಿಯವರು ರವಿ ಕಕ್ಯಪದವು. ಬಡ ಕುಟುಂಬದಲ್ಲಿ ಹುಟ್ಟಿದ ಅವರಿಗೆ ಆರನೇ ವರ್ಷದಲ್ಲಿ ಶಾಲೆಗೆಸೇರಿಸಲಾಗಿತ್ತು. ಕಟ್ಟಿಗೆ ಒಡೆಯುವ ಕಾಯಕ ಮಾಡುತ್ತಿದ್ದ ತಂದೆಯ ಕಾಲಿಗೆ ಕೊಡಲಿ ಪೆಟ್ಟು ಬಿದ್ದು, ಗಂಭೀರ ಗಾಯವಾದ ದಿನವೇಶಾಲೆ ಬಿಟ್ಟಿದ್ದಾರೆ. ಕೇವಲ 15 ದಿನ ಶಾಲೆಯ ಮೆಟ್ಟಿಲು ಹತ್ತಿದ್ದು, ಅವರಿಗೆ ಅಕ್ಷರ ಜ್ಞಾನವಿಲ್ಲ.

ಕುಟುಂಬವನ್ನು ಸಾಗಿಸುವ ಜವಾಬ್ದಾರಿಯಿಂದ ಬಾಲ್ಯದಲ್ಲೇ ದುಡಿಮೆ ಆರಂಭಿಸಿದ ಅವರು, ಧರ್ಮಸ್ಥಳದಲ್ಲಿ ಪತ್ರಿಕಾವಿತರಕರಾಗಿದ್ದರು. ಅಂಗಡಿಯಲ್ಲಿ ಸಹಾಯಕರಾಗಿದ್ದರು. ಮುಂಬಯಿಯಲ್ಲಿ ಹೋಟೆಲ್ ಕ್ಲೀನರ್ ಆಗಿದ್ದರು. ಮೇಸ್ತ್ರಿಗೆ ಹೆಲ್ಪರ್ಆಗಿದ್ದರು. ಹೋಟೆಲ್‌ನಲ್ಲಿ ಸಹಾಯಕರಾಗಿದ್ದರು. ಅರ್ಚಕರ ಸಹಾಯಕನಾಗಿಯೂ ಕೆಲಸ ಮಾಡಿದ್ದರು.

2000 ಇಸವಿಗೆ ಸುಬ್ರಹ್ಮಣ್ಯಕ್ಕೆ ಬಂದ ಅವರು, ಪೈಂಟರ್, ಸಾರಣೆ ಕೆಲಸಗಾರನಾಗಿ ದುಡಿದು ಬಳಿಕ ಗುತ್ತಿಗೆದಾರನಾದರು. ಬಳಿಕಸ್ವಂತ ಅನುಗ್ರಹ ಕನ್‌ಸ್ಟ್ರಕ್ಷನ್, ಏನೆಕಲ್‌ನಲ್ಲಿ ಅಮೃತ ಅನುಗ್ರಹ ಇಂಡಸ್ಟ್ರೀಸ್ ಸ್ಥಾಪಿಸಿ, ಯಶಸ್ವಿ ಮತ್ತು ಬೇಡಿಕೆಯಗುತ್ತಿಗೆದಾರನಾಗಿದ್ದಾರೆ. ಇಷ್ಟರ ತನಕ 265ಕ್ಕೂ ಹೆಚ್ಚು ಮನೆಗಳನ್ನು ಹಾಗೂ ಐದು ಅಪಾರ್ಟ್‌ಮೆಂಟ್‌ ನಿರ್ಮಿಸಿದ ಹಿರಿಮೆಅವರದ್ದು. ಇಂದು ಸುಮಾರು 300 ಮಂದಿಗೆ ನೇರ ಉದ್ಯೋಗ ಒದಗಿಸಿದ್ದಾರೆ.

ಸಮಾಜಸೇವೆ: ಸಮಾಜಸೇವೆಯು ರವಿ ಕಕ್ಯಪದವು ಅವರ ಇಷ್ಟದ ಪ್ರವೃತ್ತಿ. ತನ್ನ ದುಡಿಮೆಯ ಉಳಿತಾಯದ ಶೇ.25 ಭಾಗವನ್ನುಸಮಾಜಸೇವೆಗೆ ವ್ಯಯ ಮಾಡುತ್ತಿದ್ದಾರೆ. ಪ್ರತಿವರ್ಷ ನೂರಾರು ಮಕ್ಕಳಿಗೆ ಪುಸ್ತಕ ಮತ್ತು ಸಮವಸ್ತ್ರ ನೀಡುತ್ತಿದ್ದಾರೆ. ಕುಲ್ಕುಂದಗ್ರಾಮದಲ್ಲಿ 80 ಸೆಂಟ್ಸ್ ಜಾಗವನ್ನು ಖರೀದಿಸಿ, ಅದನ್ನು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ದಾನ ಮಾಡಿದ್ದಾರೆ. ಅದರಲ್ಲಿಅರ್ಹ ವ್ಯಕ್ತಿಗಳಿಗೆ ಮನೆಗಳನ್ನೂ ಉಚಿತವಾಗಿ ನಿರ್ಮಿಸಿ ಕೊಟ್ಟಿದ್ದಾರೆ. ಪ್ರತಿವರ್ಷ ಷಷ್ಠಿ ಸಂದರ್ಭದಲ್ಲಿ ಬಡವರಿಗೆ ಅಕ್ಕಿಯನ್ನು ದಾನಮಾಡುತ್ತಿದ್ದಾರೆ.

ಸಮಾಜಸೇವೆಗಾಗಿ ಜೇಸಿಐ ಮತ್ತಿತರ ಸಂಘ ಸಂಸ್ಥೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಜೆಸಿಐನ ವಲಯ ಉಪಾಧ್ಯಕ್ಷ, ವಲಯಾಧಿಕಾರಿ ಆಗಿದ್ದರು. ಅವರ ಜೀವನ, ಸಾಧನೆ ಕುರಿತು ದಂತ ವೈದ್ಯೆ ಡಾ.ರಾಜೇಶ್ವರಿ ಗೌತಮ್ ಅವರು *’ಬೆಂಕಿಯಲ್ಲಿ ಅರಳಿದಹೂವು‘ ಎಂಬ ಪುಸ್ತಕ ಬರೆದಿದ್ದಾರೆ.

ರವಿ ಕಕ್ಯಪದವು ಅವರಿಗೆ ಜೆಸಿಐ ಸಾಧನಾಶ್ರೀ, ಕಮಲ ಪತ್ರ ಪ್ರಶಸ್ತಿ, ಸ್ವಸ್ತಿಶ್ರೀ ರಾಜ್ಯ ಪ್ರಶಸ್ತಿ ಇತ್ಯಾದಿಯಲ್ಲದೇ, 270ಕ್ಕೂ ಅಧಿಕಸನ್ಮಾನಗಳು ಲಭಿಸಿವೆ.

ಶೂನ್ಯದಿಂದ ಬಂದು ಸಾಧಕನಾಗಿ ಮೆರೆದ ಅವರ ಜೀವನ ವೃತ್ತಾಂತ ಮತ್ತೊಬ್ಬರಿಗೆ ಪ್ರೇರಣದಾಯಕ. ಬದುಕಿನ ಕಷ್ಟ, ಕಾರ್ಪಣ್ಯ, ಕಲ್ಲು ಮುಳ್ಳುಗಳನ್ನು ದಾಟಿ ಸಾಧನೆ ಮಾಡಿದ್ದಾರೆ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »