TOP STORIES:

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಸೇವಿಸುವುದರಿಂದ ಸಿಗುತ್ತೆ ಈ 6 ಲಾಭಗಳು


ಹಣ್ಣುಗಳ ಸೇವನೆಯಿಂದ ಆರೋಗ್ಯಕ್ಕೆ ಅಸಂಖ್ಯಾತ ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ತಿಳಿದಿದೆ. ಪೋಷಕಾಂಶಗಲ್ಲಿ ಸಮೃದ್ಧವಾಗಿರುವ ಹಣ್ಣುಗಳು ದೇಹದ ಉತ್ತಮ ಕಾರ್ಯನಿರ್ವಹಣೆಗೆ ಅವಶ್ಯಕವಾಗಿವೆ. ಕೆಲವು ಹಣ್ಣುಗಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ದೇಹಕ್ಕೆ ಹೆಚ್ಚಿನ ಪ್ರಯೋಜನಗಳು ಲಭ್ಯವಾಗುತ್ತವೆ.

ಅಂತಹ ಹಣ್ಣುಗಳಲ್ಲಿ ಪಪ್ಪಾಯಿ ಕೂಡ ಒಂದಾಗಿದ್ದು, ಇದನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಸಾಕಷ್ಟು ಲಾಭಗಳಿಗೆ ಎಂದು ತಜ್ಞರು ಹೇಳುತ್ತಾರೆ.

ಯುನೈಟೆಡ್ ಸ್ಟೇಟ್ಸ್ ಡಿಪಾರ್ಟ್ಮೆಂಟ್ ಆಫ್ ಅಗ್ರಿಕಲ್ಚರ್ (ಯುಎಸ್ಡಿಎ) ಪ್ರಕಾರ, ಪಪ್ಪಾಯಿಗಳಲ್ಲಿ ವಿಟಮಿನ್ ಎ, ಸಿ ಮತ್ತು ಕೆ ಗಳು ಸಮೃದ್ಧವಾಗಿದ್ದು, ಇದು ದೇಹದಿಂದ ವಿಷವನ್ನು ತೆಗೆದುಹಾಕುವ ಮೂಲಕ ಪ್ರತಿರಕ್ಷಣಾ ವ್ಯವಸ್ಥೆಯನ್ನು ಸುಧಾರಿಸಿ, ಇದು ರೋಗಗಳು ಮತ್ತು ಸೋಂಕುಗಳನ್ನು ದೂರವಿರಿಸಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿಯನ್ನು ತಿನ್ನುವುದರಿಂದ ಆಗುವ ಇತರ ಆರೋಗ್ಯ ಲಾಭಗಳು ಯಾವುವು ಎಂಬುದನ್ನು ನೋಡೋಣ.

ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಎಂಬುದನ್ನು ಈ ಕೆಳಗೆ ನೀಡಲಾಗಿದೆ:

ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುವುದು:

ಜೀರ್ಣಕ್ರಿಯೆಯು ದುರ್ಬಲವಾಗಿರುವ ಜನರು ಪ್ರತಿದಿನ ಪಪ್ಪಾಯಿಯನ್ನು ತಿನ್ನುವುದು ಅತ್ಯಗತ್ಯ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ ಮತ್ತು ಆಹಾರವನ್ನು ವೇಗವಾಗಿ ಚಯಾಪಚಯಗೊಳಿಸಲು ಸಹಾಯ ಮಾಡುತ್ತದೆ. ಪಪ್ಪಾಯಿಯಲ್ಲಿ ಪಪೈನ್ ಎಂಬ ಕಿಣ್ವವಿದ್ದು, ಇದು ಆಹಾರವನ್ನು ವೇಗವಾಗಿ ಒಡೆಯಲು ಸಹಾಯ ಮಾಡುತ್ತದೆ. ಇದಲ್ಲದೆ, ಮಲಬದ್ಧತೆಯ ಅಪಾಯವನ್ನು ತಡೆಯುವ ಹಣ್ಣುಗಳಲ್ಲಿ ಪಪ್ಪಾಯಿ ಕೂಡ ಒಂದು, ಏಕೆಂದರೆ ಇದರಲ್ಲಿ ಹೆಚ್ಚಿನ ನೀರಿನ ಅಂಶವಿದೆ.

ಮಧುಮೇಹಿಗಳಿಗೆ ಒಳ್ಳೆಯದು:

ಡಯಾಬಿಟಿಸ್ ಅಥವಾ ಮಧುಮೇಹ ಹೊಂದಿರುವ ರೋಗಿಗಳು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಕಪ್ ಪಪ್ಪಾಯಿಯನ್ನು ತಿನ್ನಬೇಕು. ಇದು ನೈಸರ್ಗಿಕ ಸಕ್ಕರೆಯನ್ನು ಹೊಂದಿದ್ದು, ಜೊತೆಗೆ ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಂದಾಗಿ, ಇದು ಸಕ್ಕರೆ ಕಾಯಿಲೆ ಇರುವವರಿಗೆ ಉತ್ತಮ ಆಯ್ಕೆಯಾಗಿದೆ. ಇದು ದೇಹದ ಮೇಲೆ ಹೈಪೊಗ್ಲಿಸಿಮಿಕ್ ಪರಿಣಾಮವನ್ನು ಬೀರಿ, ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುತ್ತದೆ.

ಹೃದಯವನ್ನು ಆರೋಗ್ಯಕರವಾಗಿರಿಸುವುದು:

ಪಪ್ಪಾಯಿಯಲ್ಲಿ ಫೈಬರ್, ಪೊಟ್ಯಾಸಿಯಮ್ ಮತ್ತು ವಿಟಮಿನ್ ಗಳು ಹೇರಳವಾಗಿದ್ದು ಹೃದಯ ಸಂಬಂಧಿ ಕಾಯಿಲೆಗಳನ್ನು ದೂರವಿಡುತ್ತವೆ. ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು, ವೈದ್ಯರು ಪೊಟ್ಯಾಸಿಯಮ್‌ನ ಹೆಚ್ಚಿನ ಸೇವನೆಯನ್ನು ಶಿಫಾರಸು ಮಾಡುತ್ತಾರೆ. ವಿಟಮಿನ್ ಬಿ, ಸಿ, ಇ, ಬೀಟಾ-ಕ್ಯಾರೋಟಿನ್ ಮತ್ತು ಲೈಕೋಪೀನ್ ನಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಪಪ್ಪಾಯಿ ಅಪಧಮನಿಗಳಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೊರಹಾಕುತ್ತದೆ.

ವಯಸ್ಸಾಗುವಿಕೆ ಲಕ್ಷಣ ಕಡಿಮೆ ಮಾಡುವುದು:

ಪಪ್ಪಾಯಿಯು ಆಲ್ಫಾ-ಹೈಡ್ರಾಕ್ಸಿ ಆಮ್ಲಗಳಲ್ಲಿ ಸಮೃದ್ಧವಾಗಿದೆ. ಇದು ಚರ್ಮವನ್ನು ಹೊಳೆಯುವ, ಕೊಬ್ಬಿದ ಮತ್ತು ತಾಜಾವಾಗಿಡುವ ಅಂಶವಾಗಿದೆ. ತ್ವಚೆಯ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸಲು ಪಪ್ಪಾಯಿಯನ್ನು ಸೇವಿಸಿ, ಏಕೆಂದರೆ ಇದು ಕಡಿಮೆ ಸೋಡಿಯಂ ಹೊಂದಿರುವುದರಿಂದ, ಚರ್ಮವನ್ನು ಹೈಡ್ರೇಟ್ ಮಾಡುತ್ತದೆ.

ಕೊಲೆಸ್ಟ್ರಾಲ್ ಸುಧಾರಿಸಬಹುದು:

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿಯನ್ನು ತಿನ್ನುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸಬಹುದು. ಬೇಯಿಸಿದ ಓಟ್ ಮೀಲ್‌ಗೆ ಕತ್ತರಿಸಿದ ಪಪ್ಪಾಯಿಯನ್ನು ಸೇರಿಸಿ, ಸೇವಿಸುವುದರಿಂದ ಗರಿಷ್ಠ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು, ಏಕೆಂದರೆ ಎರಡೂ ಆಹಾರಗಳು ಫೈಬರ್ ಸಮೃದ್ಧವಾಗಿದ್ದು, ಇದು ದೇಹದಿಂದ ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್‌ಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುವುದು:

ಸ್ವತಂತ್ರ ರಾಡಿಕಲ್ಗಳು ಮತ್ತು ಆಕ್ಸಿಡೇಟಿವ್ ಒತ್ತಡವು ವಿವಿಧ ರೀತಿಯ ಕ್ಯಾನ್ಸರ್‌ಗೆ ಮುಖ್ಯ ಕಾರಣಗಳಾಗಿವೆ. ಉತ್ಕರ್ಷಣ ನಿರೋಧಕ-ಸಮೃದ್ಧವಾಗಿರುವ ಪಪ್ಪಾಯಿಯು ಜೀವಕೋಶಗಳನ್ನು ಹಾನಿಯಿಂದ ರಕ್ಷಿಸಲು ಮತ್ತು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಲೈಕೋಪೀನ್ ಎಂಬುದು ಹಣ್ಣುಗಳು ಮತ್ತು ತರಕಾರಿಗಳಲ್ಲಿ ಕಂಡುಬರುವ ಒಂದು ರೀತಿಯ ಕ್ಯಾರೊಟಿನಾಯ್ಡ್ ಆಗಿದ್ದು, ಅದು ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿದೆ.


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »