TOP STORIES:

ಮಾದರಿಯಾದ ಕಾರ್ಕಳ ಉತ್ಸವ – ಪದ್ಮರಾಜ್ ಆರ್.


– ಪದ್ಮರಾಜ್ ಆರ್.

ವಕೀಲರು, ಕೋಶಾಧಿಕಾರಿ ಶ್ರೀ ಗೋಕರ್ಣನಾಥ ದೇವಸ್ಥಾನ ಕುದ್ರೋಳಿ

ಮಾದರಿಯಾದ ಕಾರ್ಕಳ ಉತ್ಸವ

ಸಚಿವ ಸುನೀಲ್ ಕುಮಾರ್ ನೇತೃತದಲ್ಲಿ ನಡೆಯುತ್ತಿರುವ ಕಾರ್ಕಳ ಉತ್ಸವ ಮಾದರಿ ಉತ್ಸವವಾಗುತ್ತಿದೆ. ಜಾತಿ ಮತ, ಪಕ್ಷ ಭೇದವಿಲ್ಲದೆ ಕಾರ್ಕಳದ ಸುತ್ತಮುತ್ತದ ಜನತೆಗೆ ಹಬ್ಬದ ವಾತಾವರಣ ಸೃಷ್ಟಿಸಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ಕಾರ್ಕಳದ ಕಲೆ, ಸಂಸ್ಕೃತಿಯನ್ನು ಪ್ರತಿಬಿಂಬಿಸುವುದಲ್ಲದೆ ರಾಜ್ಯದ ಹಾಗೂ ರಾಷ್ಟ್ರದ ವಿವಿಧ ಜನಪದ ಕಲೆ ಸಂಸ್ಕೃತಿಯನ್ನು ನಾಡಿಗೆ ಪರಿಚಯಿಸುವ ಮೂಲಕ ಹೊಸತನಕ್ಕೆ ನಾಂದಿ ಹಾಡಿರುವುದು ಶ್ಲಾಘನೀಯ. ಇಡೀ ಉತ್ಸವಕ್ಕೆ ಮೆರುಗು ಎಂಬಂತೆ ಹೆಲಿಕಾಪ್ಟರ್ ವಿಹಾರವನ್ನು ಸಚಿವರು ಪೌರ ಕಾರ್ಮಿಕರ ಜತೆ ಪಯಣಿಸುವ ಮೂಲಕ ಚಾಲನೆ ನೀಡಿ ಸಾಮಾನ್ಯರ ನಡುವಿನ ಸಚಿವ ಎನ್ನುವುದಕ್ಕೆ ಸಾಕ್ಷಿಯಾದರು. ಮಾತ್ರವಲ್ಲದೆ ಮರೆಯಾದ ಕಾರ್ಕಳದ ಸಾಧಕರನ್ನು ಸ್ಮರಿಸುವ ಕಾರ್ಯವೂ ಇಲ್ಲಿ ನಡೆದಿದೆ.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಾತ್ಮರ ಹೆಸರನ್ನು ವೇದಿಕೆ, ಮಳಿಗೆ ಸಭಾಂಗಣಗಳಿಗೆ ಹೆಸರಿಸುವ ಮೂಲಕ ಗೌರವ ನಮನ ಸಲ್ಲಿಸಿರುವುದು ಮಾದರಿ. ಜಸ್ಟೀಸ್ ಕೆ.ಎಸ್.ಹೆಗ್ಡೆ ವೇದಿಕೆ, ಕಾರ್ಕಳದ ಶಾಸಕರಾಗಿದ್ದ ಸರಳ ರಾಜಕಾರಣಿ ದಿ.ಗೋಪಾಲ ಭಂಡಾರಿ, ಶಿಲ್ಪಕಲೆಯಲ್ಲಿ ಅಗಾಧ ಪಾಂಡಿತ್ಯ ಹೊಂದಿದ್ದ ಧರ್ಮಸ್ಥಳದ ಗೊಮ್ಮಟೇಶ್ವರನ ಮೂರ್ತಿ ಕೆತ್ತಿದ ಮಹಾನ್ ಶಿಲ್ಪಿ ದಿ.ರೆಂಜಾಳ ಗೋಪಾಲಕೃಷ್ಣ, ಮೊದಲ ಶಿಲ್ಪಕಲಾ ಅಧ್ಯಕ್ಷರಾಗಿದ್ದ ಶಿಲ್ಪಿ ಶ್ಯಾಮರಾಯ ಆಚಾರ್ಯ, ಕನ್ನಡ ಸಾಹಿತ್ಯ ಲೋಕದ ಮಹಾಕವಿ ನಂದಳಿಕೆಯ ಮುದ್ದಣ್ಣ, ಕರ್ನಾಟಕದ ಏಕೀಕರಣಕ್ಕಾಗಿ ಅವಿರತ ಹೋರಾಡಿದ ಕಾಂತಾವರ ಬಾರಾಡಿ ಬೀಡಿನ ಜಿನರಾಜ ಹೆಗ್ಡೆ, ಅಡುಗೆ ಭೋಜಣ್ಣ ಎಂದೇ ಖ್ಯಾತರಾಗಿದ್ದ ಮುಡಾರು ಗ್ರಾಮದ ಭೋಜರಾಜ ಜೈನ್ ಬನ್ನಾಡಿ ಹೆಸರಲ್ಲಿ ವೇದಿಕೆ ಮಾಡುವ ಮೂಲಕ ಅಗಲಿದವರನ್ನು ನೆನಪಿಸುವ ಕಾರ್ಯ ಮಾಡಿರುವುದು ಉತ್ತಮ ಹೆಜ್ಜೆ. ಅಲ್ಲದೆ ತಾಲೂಕಿನಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸುವ ಕಾರ್ಯವೂ ನಡೆಯುತ್ತಿರುವುದು ಶ್ಲಾಘನೀಯ. ಈ ರೀತಿ ಎಲ್ಲ ರಾಜಕಾರಣಿಗಳು ಜಾತಿ ಮತ, ಪಕ್ಷ ಭೇದ ಮರೆತು ಮಾದರಿ ಕಾರ್ಯಕ್ರಮ ಆಯೋಜಿಸುವ ಪ್ರಯತ್ನ ಮಾಡಲಿ….

 

 


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »