TOP STORIES:

ಮಾದರಿಯಾದ ಕಾರ್ಕಳ ಉತ್ಸವ – ಪದ್ಮರಾಜ್ ಆರ್.


– ಪದ್ಮರಾಜ್ ಆರ್.

ವಕೀಲರು, ಕೋಶಾಧಿಕಾರಿ ಶ್ರೀ ಗೋಕರ್ಣನಾಥ ದೇವಸ್ಥಾನ ಕುದ್ರೋಳಿ

ಮಾದರಿಯಾದ ಕಾರ್ಕಳ ಉತ್ಸವ

ಸಚಿವ ಸುನೀಲ್ ಕುಮಾರ್ ನೇತೃತದಲ್ಲಿ ನಡೆಯುತ್ತಿರುವ ಕಾರ್ಕಳ ಉತ್ಸವ ಮಾದರಿ ಉತ್ಸವವಾಗುತ್ತಿದೆ. ಜಾತಿ ಮತ, ಪಕ್ಷ ಭೇದವಿಲ್ಲದೆ ಕಾರ್ಕಳದ ಸುತ್ತಮುತ್ತದ ಜನತೆಗೆ ಹಬ್ಬದ ವಾತಾವರಣ ಸೃಷ್ಟಿಸಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ಕಾರ್ಕಳದ ಕಲೆ, ಸಂಸ್ಕೃತಿಯನ್ನು ಪ್ರತಿಬಿಂಬಿಸುವುದಲ್ಲದೆ ರಾಜ್ಯದ ಹಾಗೂ ರಾಷ್ಟ್ರದ ವಿವಿಧ ಜನಪದ ಕಲೆ ಸಂಸ್ಕೃತಿಯನ್ನು ನಾಡಿಗೆ ಪರಿಚಯಿಸುವ ಮೂಲಕ ಹೊಸತನಕ್ಕೆ ನಾಂದಿ ಹಾಡಿರುವುದು ಶ್ಲಾಘನೀಯ. ಇಡೀ ಉತ್ಸವಕ್ಕೆ ಮೆರುಗು ಎಂಬಂತೆ ಹೆಲಿಕಾಪ್ಟರ್ ವಿಹಾರವನ್ನು ಸಚಿವರು ಪೌರ ಕಾರ್ಮಿಕರ ಜತೆ ಪಯಣಿಸುವ ಮೂಲಕ ಚಾಲನೆ ನೀಡಿ ಸಾಮಾನ್ಯರ ನಡುವಿನ ಸಚಿವ ಎನ್ನುವುದಕ್ಕೆ ಸಾಕ್ಷಿಯಾದರು. ಮಾತ್ರವಲ್ಲದೆ ಮರೆಯಾದ ಕಾರ್ಕಳದ ಸಾಧಕರನ್ನು ಸ್ಮರಿಸುವ ಕಾರ್ಯವೂ ಇಲ್ಲಿ ನಡೆದಿದೆ.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಾತ್ಮರ ಹೆಸರನ್ನು ವೇದಿಕೆ, ಮಳಿಗೆ ಸಭಾಂಗಣಗಳಿಗೆ ಹೆಸರಿಸುವ ಮೂಲಕ ಗೌರವ ನಮನ ಸಲ್ಲಿಸಿರುವುದು ಮಾದರಿ. ಜಸ್ಟೀಸ್ ಕೆ.ಎಸ್.ಹೆಗ್ಡೆ ವೇದಿಕೆ, ಕಾರ್ಕಳದ ಶಾಸಕರಾಗಿದ್ದ ಸರಳ ರಾಜಕಾರಣಿ ದಿ.ಗೋಪಾಲ ಭಂಡಾರಿ, ಶಿಲ್ಪಕಲೆಯಲ್ಲಿ ಅಗಾಧ ಪಾಂಡಿತ್ಯ ಹೊಂದಿದ್ದ ಧರ್ಮಸ್ಥಳದ ಗೊಮ್ಮಟೇಶ್ವರನ ಮೂರ್ತಿ ಕೆತ್ತಿದ ಮಹಾನ್ ಶಿಲ್ಪಿ ದಿ.ರೆಂಜಾಳ ಗೋಪಾಲಕೃಷ್ಣ, ಮೊದಲ ಶಿಲ್ಪಕಲಾ ಅಧ್ಯಕ್ಷರಾಗಿದ್ದ ಶಿಲ್ಪಿ ಶ್ಯಾಮರಾಯ ಆಚಾರ್ಯ, ಕನ್ನಡ ಸಾಹಿತ್ಯ ಲೋಕದ ಮಹಾಕವಿ ನಂದಳಿಕೆಯ ಮುದ್ದಣ್ಣ, ಕರ್ನಾಟಕದ ಏಕೀಕರಣಕ್ಕಾಗಿ ಅವಿರತ ಹೋರಾಡಿದ ಕಾಂತಾವರ ಬಾರಾಡಿ ಬೀಡಿನ ಜಿನರಾಜ ಹೆಗ್ಡೆ, ಅಡುಗೆ ಭೋಜಣ್ಣ ಎಂದೇ ಖ್ಯಾತರಾಗಿದ್ದ ಮುಡಾರು ಗ್ರಾಮದ ಭೋಜರಾಜ ಜೈನ್ ಬನ್ನಾಡಿ ಹೆಸರಲ್ಲಿ ವೇದಿಕೆ ಮಾಡುವ ಮೂಲಕ ಅಗಲಿದವರನ್ನು ನೆನಪಿಸುವ ಕಾರ್ಯ ಮಾಡಿರುವುದು ಉತ್ತಮ ಹೆಜ್ಜೆ. ಅಲ್ಲದೆ ತಾಲೂಕಿನಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸುವ ಕಾರ್ಯವೂ ನಡೆಯುತ್ತಿರುವುದು ಶ್ಲಾಘನೀಯ. ಈ ರೀತಿ ಎಲ್ಲ ರಾಜಕಾರಣಿಗಳು ಜಾತಿ ಮತ, ಪಕ್ಷ ಭೇದ ಮರೆತು ಮಾದರಿ ಕಾರ್ಯಕ್ರಮ ಆಯೋಜಿಸುವ ಪ್ರಯತ್ನ ಮಾಡಲಿ….

 

 


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »