TOP STORIES:

ಚುನಾವಣೆಗೆ ನಾನೂ ಸೇರಿದಂತೆ 50 ಸ್ವಾಮೀಜಿಗಳು ಸ್ಪರ್ಧಿಸಲಿದ್ದೇವೆ: ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ


ಮುಂದಿನ ಕರ್ನಾಟಕ ವಿಧಾನ ಸಭಾ ಚುನಾವಣೆಗೆ ನಾನೂ ಸೇರಿದಂತೆ ೫೦ ಸ್ವಾಮೀಜಿಗಳು ಸ್ಪರ್ಧಿಸಲಿದ್ದೇವೆ ಎಂದು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ. ಶಿರಾಲಿಯ ಹಳೇಕೋಟೆ ಹನುಮಂತ ದೇವಸ್ಥಾನದ ಶಿಲಾಮಯ ದೇಗುಲ ಸಮರ್ಪಣೆ, ಶ್ರೀ ದೇವರ ಪುನರ್ ಪ್ರತಿಷ್ಠೆ ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಆಶಿರ್ವಚನ ನೀಡಿ ಮಾತನಾಡಿದರು, ರಾಜಕೀಯ ಕ್ಷೇತ್ರ ಹಾಳಾಗಿದ್ದು, ರಾಜ್ಯಾಂಗದ ವ್ಯವಸ್ಥೆಯೇ ದಿಕ್ಕು ತಪ್ಪಿದ್ದು, ರಾಜಕೀಯ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆ ತರಲು ಸ್ವಾಮೀಜಿಗಳು ಸ್ಪರ್ಧಿಸಲಿದ್ದೇವೆ ಎಂದರು.

ಶಾಸಕನಾಗುವವನು ಇಂದು ತಾನೆಷ್ಟು ಗಳಿಸುತ್ತೇನೆ ಎಂಬ ಲೆಕ್ಕಚಾರದೊಂದಿಗೆ ಚುನಾವಣೆಗೆ ನಿಲ್ಲುತ್ತಾನೆ. ನಾವು ಚುನಾವಣೆಯಲ್ಲಿ ನಿಂತು ಗೆದ್ದರೆ ನಮಗೆ ಸರಕಾರ ಸಂಬಳ ಕೊಡುವುದು ಬೇಡ, ಕೇವಲ ರೇಷನ್ ಕೊಟ್ಟರೆ ಸಾಕು, ಕ್ಷೇತ್ರ ಸುತ್ತುವ ಭತ್ತೆಯನ್ನು ಕೂಡಾ ನಾವು ಕೇಳುವುದಿಲ್ಲ. ಪಿಂಚಣಿಯಂತೂ ಬೇಡವೇ ಬೇಡ, ಸದ್ಯ ಪ್ರಜೆಗಳ ಹಣವು ಅನವಶ್ಯಕವಾಗಿ ದುಂದು ವೆಚ್ಚವಾಗುತ್ತಿದೆ ಎಂದು ಸ್ವಾಮೀಜಿಗಳು ಬೇಸರ ವ್ಯಕ್ತಪಡಿಸಿದರು. ಇನ್ನು, ಸ್ವಾಮೀಜಿಗಳು ಚುನಾವಣೆಗೆ ಸ್ಪರ್ಧಿಸಲು ನಮಗೆ ಮೋದೀಜಿ ಹಾಗೂ ಯೋಗೀಜಿ ಪ್ರೇರಣೆಯಾಗಿದ್ದಾರೆ. ಆದರೆ, ನಾವು ಯಾವುದೇ ಪಕ್ಷದಿಂದಲೂ ನಿಲ್ಲುವುದಿಲ್ಲ. ಭಗವದ್ಗೀತೆಯೇ ನಮ್ಮ ಚುನಾವಣಾ ಚಿಹ್ನೆ ಎಂದರು.

ಸದ್ಯದ ರಾಜಕೀಯ ವ್ಯವಸ್ಥೆಯ ಬಗ್ಗೆ ಖೇದ ವ್ಯಕ್ತಪಡಿಸಿದ ಸ್ವಾಮೀಜಿಗಳು, ವಿಧಾನಸಭೆಯ ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆಯನ್ನು ನಿಗದಿಪಡಿಸಬೇಕು. ಮಂತ್ರಿಗಳಾಗಲು ಕೂಡಾ ವಿದ್ಯಾರ್ಹತೆಯನ್ನು ಮಾನದಂಡವನ್ನಾಗಿಸಬೇಕು. ಆದರೆ, ಇಂದು ವಿದ್ಯೆಯಿಲ್ಲದ ಮಂತ್ರಿಗಳು ನಮ್ಮನ್ನು ಆಳುತ್ತಿದ್ದಾರೆ. ವಿಧಾನ ಸೌಧದಲ್ಲಿ ಕಚ್ಚಾಡಿಕೊಳ್ಳುವವರು ಹೊರ ಬಂದ ತಕ್ಷಣ ಟೇಬಲ್ ಹಂಚಿಕೊಂಡು ಚಹಾ ಸೇವಿಸುತ್ತಾರೆ. ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡುತ್ತಾ ಜನರ ಹಣ ದುರುಪಯೋಗವಾಗುತ್ತಿದೆ. ಇದು, ಸರಿಯಾಗಬೇಕು, ಹಳಿತಪ್ಪಿರುವ ರಾಜ್ಯಾಂಗ ವ್ಯವಸ್ಥೆಯನ್ನು ಸರಿಪಡಿಸುವ ಉದ್ಧೇಶದಿಂದ ನಾವು ಚುನಾವಣೆಗೆ ಸ್ಪರ್ಧಿಸುತ್ತಿದ್ದೇವೆ ಎಂದರು.


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »