TOP STORIES:

ಮರಕಡ ಬೈಲುಗುತ್ತು ಗರಡಿಮನೆ ಧರ್ಮಚಾವಡಿ ಅಮೀನ್ ಕುಟುಂಬಸ್ಥರ ದೈವದೇವರ ಆರಾಧನ ಸಾನ್ನಿಧ್ಯ ನಿರ್ಮಾಣದ ಶಿಲಾನ್ಯಾಸ


ಮರಕಡ ಬೈಲುಗುತ್ತು ಗರಡಿಮನೆ ಧರ್ಮಚಾವಡಿ ಅಮೀನ್ ಕುಟುಂಬಸ್ಥರ ದೈವದೇವರ ಆರಾಧನ ಸಮಿತಿ ರಿಜಿಸ್ಟರ್ಡ್ ಇದರ ನವೀಕೃತ ಶ್ರೀ ನಾಗಸಾನ್ನಿಧ್ಯ ಗರಡಿಮನೆ, ಧರ್ಮಚಾವಡಿ, ಜಲದುರ್ಗೆ ,ಭದ್ರಕಾಳಿ ಗುಡಿ, ಪಂಚದೈವ ,ಭೈರವ ಶಕ್ತಿ ,ಕಲ್ಲುರ್ಟಿ ಪಂಜುರ್ಲಿ ಹಾಗೂ ಸಂಘ ಪರಿವಾರ ದೈವಗಳ ಸಾನ್ನಿಧ್ಯ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ರವಿವಾರ ಯಶಸ್ವಿಯಾಗಿ ಜರಗಿತು .

ಭಾರತ ಸರಕಾರದ ಮಾಜಿ ಸಚಿವ ಗೌರವಾನ್ವಿತ ಶ್ರೀ ಬಿ. ಜನಾರ್ದನ ಪೂಜಾರಿಯವರು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು. ಬಂಟ್ವಾಳ ತಾಲ್ಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಕೆ ಸೇಸಪ್ಪ ಕೋಟ್ಯಾನ್ ರವರ ಗೌರವ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಿತು. ಆರಾಧನಾ ಸಮಿತಿಯ ಅಧ್ಯಕ್ಷರಾದ ಮರಕಡಬೈಲು ಗುತ್ತು ಶ್ರೀ ರಾಘವ ಅಮೀನ್ ರವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಕುಟುಂಬದ ಬಂಧುಗಳು ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಿದರು .

ನಂತರ ಜನಾರ್ದನ ಪೂಜಾರಿ ಅವರು ಮಾತನಾಡಿ ನೂತನವಾಗಿ ವಾಗಿ ನಿರ್ಮಾಣ ಗೊಳ್ಳಲಿರುವ ಈ ಧರ್ಮ ಚಾವಡಿ ಅತಿ ಶೀಘ್ರವಾಗಿ ನಿರ್ಮಾಣವಾಗಲಿ ತನ್ನ ಪೂರ್ಣ ಸಹಕಾರವನ್ನು ಈ ಪುಣ್ಯಕಾರ್ಯಕ್ಕೆ ನೀಡುವುದಾಗಿ ತಿಳಿಸಿ ದರು.

ಕುಟುಂಬದ ಎಲ್ಲಾ ಬಂಧುಗಳು ಈ ಪುಣ್ಯಕಾರ್ಯದಲ್ಲಿ ಕೈಜೋಡಿಸಬೇಕೆಂದರು. ಜನಾರ್ದನ ಪೂಜಾರಿಯವರ ಜತೆಗೆ ಧರ್ಮಪತ್ನಿ ಶ್ರೀಮತಿ ಮಾಲತಿ ಜನಾರ್ದನ ಪೂಜಾರಿ ಮತ್ತು ಮಗ ಸಂತೋಷ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ನಂತರ ಕುಟುಂಬಿಕರ ಸಭೆಯು ಯಶಸ್ವಿಯಾಗಿ ನಡೆಯಿತು . ಕುಟುಂಬಿಕರ ಸಭೆಯ ಅಧ್ಯಕ್ಷತೆ ವಹಿಸಿದ್ದ ಮರಕಡಬೈಲು ಗುತ್ತು ರಾಘವ ಅಮೀನ್ ಕುಟುಂಬದ ಬಂಧುಗಳಿಗೆ ಈ ಕಾರ್ಯವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು . ವೈದಿಕ ಕಾರ್ಯ ಗಳನ್ನು ನಡೆಸಿರುವ ಲೋಕೇಶ್ ಶಾಂತಿ ಅವರು ಆಶೀರ್ವಚನ ನೀಡಿದರು . ಸಮಿತಿಯ ಕಾರ್ಯದರ್ಶಿ ಶ್ರೀಧರ್ ಅಮೀನ್ ವರದಿ ವಾಚಿಸಿದರು . ಕೋಶಾಧಿಕಾರಿ ಸುರೇಂದ್ರ ಅಮೀನ್ ಲೆಕ್ಕಪತ್ರ ಮಂಡಿಸಿದರು . ಉಪಾಧ್ಯಕ್ಷರಾದ ದಿನೇಶ್ ಅಮೀನ್ ನೂತನ ಧರ್ಮ ಚಾವಡಿ ಯ ಬಗ್ಗೆ ವಿವರಗಳನ್ನು ನೀಡಿದರು . ಜತೆ ಕಾರ್ಯದರ್ಶಿ ಸಂದೀಪ್ ಸ್ವಾಗತಿಸಿ ಲೆಕ್ಕ ಪರಿಶೋಧಕರಾದ ಶ್ರೀಮತಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು . ಶಿಲಾನ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ಜರುಗಲು ಕಾರಣ ಕರ್ತರಾದ ಕುಟುಂಬದ ಎಲ್ಲ ಬಂಧುಗಳಿಗೆ ಸಮಿತಿಯ ವತಿಯಿಂದ ವಂದನೆಗಳನ್ನು ಸಲ್ಲಿಸುತ್ತಿದ್ದೇವೆ ಮುಂದೆಯೂ ಸಹಕಾರವನ್ನು ಪ್ರತಿ ಸಂದರ್ಭದಲ್ಲಿ ಯಾಚಿಸುತ್ತಿದ್ದೇವೆ ತಾವೆಲ್ಲರೂ ಈ ಪುಣ್ಯ ಕಾರ್ಯದಲ್ಲಿ ಕೈಜೋಡಿಸಿ ನಮ್ಮ ಕಾರ್ಯಕ್ರಮ ಯಶಸ್ವಿಯಾಗಲು ತಮ್ಮೆಲ್ಲರ ಸಹಕಾರವನ್ನು ಬಯಸುತ್ತೇವೆ.

 


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »