TOP STORIES:

ಶ್ರೀ ಕ್ಷೇತ್ರ ಗೆಜ್ಜೆಗಿರಿ ನಿರ್ಮಾಣದ ಆರ್ಕಿಟೆಕ್ಚರ್ ಸಂತೋಷ್ ಕುಮಾರ್ ಕೊಟ್ಟಿಂಜ ಅಮರ್ ರಹೇ


ಅಮರ್ ರಹೇ ಸಂತೋಷ್ ಕುಮಾರ್ ಕೊಟ್ಟಿ೦ಜ.

ನಮ್ಮನ್ನು ಅಗಲಿದ ಸಂತೋಷ್ ಗೆ

ಇದು ಅಕ್ಷರದ ನಮನ  ಅಷ್ಟೇ.

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸೌಂದರ್ಯವನ್ನು ನೋಡಿದಾಗ ಯಾರನ್ನು ಮೂಕವಿಸ್ಮಿತರನ್ನಾಗಿಸುತ್ತದೆ. ಅಂತಹ ಸುಂದರ ದೇವಸ್ಥಾನದನಿರ್ಮಾಣದ ಆರ್ಕಿಟೆಕ್ಚರ್ ಸಂತೋಷ್ ಕುಮಾರ್ ಕೊಟ್ಟಿಂಜ. ಕೆಲಸವನ್ನು ನಿಷ್ಠೆಯಿಂದ, ಭಕ್ತಿಯಿಂದ ಹಾಗೂಪ್ರಾಮಾಣಿಕತೆಯಿಂದ ಮಾಡಿದ ವ್ಯಕ್ತಿ ಸಂತೋಷ್.

ಅವರು ಕೋಟಿಚೆನ್ನಯ್ಯ , ದೇಯಿ ಬೈದೆತಿ ಬಗ್ಗೆ ಅಧ್ಯಯನ ಮಾಡಿದ್ದರು. ತಜ್ಞರೊಂದಿಗೆ ಸಮಾಲೋಚನೆ ಮಾಡಿದ್ದರು. ಕಾರಣದಿಂದಲೇ ಸರ್ವರೂ ಮೆಚ್ಚುವ ದೇವಸ್ಥಾನದ ನಿರ್ಮಾಣದ ಆರ್ಕಿಟೆಕ್ಚರ್ ಆಗಿ ಅವರು ಯಶಸ್ವಿಯಾಗಿದ್ದರು.

ಅದು ಅಲ್ಲದೆ ಗೆಜ್ಜೆ ಗಿರಿಯ ಮೂಲಕ ಸಮಾಜಕ್ಕೆ ಕೊಡುಗೆ ಕೊಡಬೇಕು ಎಂಬ ಪ್ರಾಮಾಣಿಕ ಆಸೆ ಅವರಲ್ಲಿ ಇತ್ತು. ಮರಣಹೊಂದುವ ಎರಡು ದಿವಸದ ಮುಂದೆ ಅವರೊಂದಿಗೆ ಮಾತನಾಡಲು ಬಂದ ಕ್ಷೇತ್ರದ ಪದಾಧಿಕಾರಿ ಹಾಗೂ ಸಲಹೆಗಾರ ರಲ್ಲಿ ವಿಷಯವನ್ನು ಪ್ರಸ್ತಾಪಿಸಿದ್ದರು. ಅಂದರೆ ಗೆಜ್ಜೆಗಿರಿ ಬಗ್ಗೆ ಅವರಿಗಿದ್ದ ಕನಸು, ಆಶಯ ಅದನ್ನು ಶಬ್ದಗಳಲ್ಲಿ ವರ್ಣಿಸಲುಅಸಾಧ್ಯ.

ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳ, ಉದ್ಯೋಗ ದೊರಕಿಸುವ ಕಾರ್ಯಕ್ರಮಗಳ

ಮೂಲಕ ಗೆಜ್ಜೆಗಿರಿಯ ಸ್ಥಾಪನೆಯ ನಿಜವಾದ ಉದ್ದೇಶವನ್ನು ಹಾಗೂ ಕೋಟಿಚೆನ್ನಯರ ಆಶಯಗಳನ್ನು ಅನುಷ್ಠಾನಿಸಲು , ಮೂಲಕ

ಸಮಾಜಕ್ಕೆ ಕೊಡುಗೆ ನೀಡಬೇಕು ಎಂಬ ಸ್ಪಷ್ಟ ಕಲ್ಪನೆ ಹೊಂದಿದ್ದ ಸಂತೋಷ್ ನಮ್ಮ ಜೊತೆ ಇಲ್ಲ.

ಅವರೊಬ್ಬ ಕ್ಷೇತ್ರದ ಆರ್ಕಿಟೆಕ್ಚರ್ ಮಾತ್ರ ಆಗಿರಲಿಲ್ಲ, ಅವರು ಕ್ಷೇತ್ರದ ಹಿನ್ನೆಲೆಯ  ಬೌದ್ಧಿಕ ಶಕ್ತಿ ಕೂಡ ಆಗಿದ್ದರು.

ಇಂತಹ ಸಂತೋಷ್ ಕುಮಾರ್ ಕೊಟ್ಟಿಂಜ ನಮ್ಮೊಂದಿಗಿಲ್ಲ. ಆದರೆ ಅವರು ಹಂಚಿಕೊಂಡ ಕನಸು ನಮ್ಮೊಂದಿಗಿದೆ. ಅದನ್ನು ನನಸುಮಾಡುವ ಜವಾಬ್ದಾರಿ ನಮ್ಮ ಮೇಲೆ  ಇದೆ. ಗೆಜ್ಜೆಗಿರಿ ಭಕ್ತರು ಹಾಗೂ ಸರ್ವ ಸಮಾಜ ಎಂದಿಗೂ ಸಂತೋಷ್ ಕುಮಾರ್ಕೊಟ್ಟಿಂಜ ಅವರನ್ನು ನೆನಪಿಸುತ್ತದೆ. ಅವರ ಕನಸನ್ನು ನನಸು ಮಾಡಿದಾಗಲೇ ಅದು ಅವರಿಗೆ ಸಲ್ಲುವ ಬಹುದೊಡ್ಡ ಗೌರವ.

ಮತ್ತೊಮ್ಮೆಅಮರ್ ರಹೇ ಸಂತೋಷ್ ಕುಮಾರ್ ಕೊಟ್ಟಿಂಜ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »