TOP STORIES:

10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನಾರಾಯಣಗುರು ಮತ್ತು ಪೆರಿಯಾರ್ ಅವರ ಕುರಿತಾದ ಪಠ್ಯಭಾಗವನ್ನು ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಕೈಬಿಟ್ಟಿದ್ದು ಖಂಡನೀಯ ಪದ್ಮರಾಜ್ ಆರ್


10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನಾರಾಯಣಗುರು ಮತ್ತು ಪೆರಿಯಾರ್ ಅವರ ಕುರಿತಾದ ಪಠ್ಯಭಾಗವನ್ನುಪಠ್ಯಪುಸ್ತಕ ಪರಿಷ್ಕರಣ ಸಮಿತಿ ಕೈಬಿಟ್ಟಿದ್ದು ಖಂಡನೀಯ

ಸಮಾಜ ಸುಧಾರಕ ಸಂತರೆನಿಸಿಕೊಂಡ ಇವರಿಬ್ಬರ ಸಂದೇಶಗಳಿರುವ ಪಠ್ಯ ಭಾಗವನ್ನು, ಪಠ್ಯಪುಸ್ತಕ ಪರಿಷ್ಕರಣೆಯ ವೇಳೆಪರಿಗಣಿಸದೆ ನಿರ್ಲಕ್ಷಿಸಿರುವುದು,

ಜಾತಿಧರ್ಮಗಳ ಕಲಹದ ಬೇಗೆಯಲ್ಲಿ ರಾಜಕೀಯದ ಬೇಳೆ ಬೇಯಿಸಿಕೊಳ್ಳುವ ಪಕ್ಷಗಳ ದುರುದ್ದೇಶಪೂರಿತ ನಡೆಯಾಗಿ ಕಂಡರೂ, ಪಠ್ಯ ಪರಿಷ್ಕರಣ ಸಮಿತಿ, ಇಲಾಖೆ ಅಥವಾ ಸರಕಾರ ಕುರಿತು ಯಾವುದೇ ಸ್ಪಷ್ಟೀಕರಣ ನೀಡದೆ, ಸಂತರ ತತ್ವಸಿದ್ಧಾಂತಗಳನ್ನು ಅನುಸರಿಸುತ್ತಿರುವ ಅವರ ಅನುಯಾಯಿಗಳಿಗೆ ಮಾಡಿದ ಬಹಿರಂಗ ಅವಮಾನ ಎಂಬುದು ಸತ್ಯ.

ಜಾತಿಪದ್ಧತಿಯ ಕಪಿ ಮುಷ್ಟಿಯಲ್ಲಿ ನಲುಗಿ, ಅಸ್ಪೃಶ್ಯತೆಯ ಪರಾಕಾಷ್ಠೆ ತಲುಪಿ, ಮತಾಂತರದ ಸುಳಿಗೆ ಸಿಲುಕಿದ್ದ ಸನಾತನಹಿಂದೂಧರ್ಮದ ಬಹುಸಂಖ್ಯಾತ ಹಿಂದುಳಿದ ವರ್ಗದ ಜನರ ಧ್ವನಿಯಾಗಿ, ಧಾರ್ಮಿಕ ಸುಧಾರಣೆಯ ಮೂಲಕ ಸಾಮಾಜಿಕಪರಿವರ್ತನೆಯ ಹರಿಕಾರರೆನಿಸಿದ ನಾರಾಯಣ ಗುರುಗಳ ತತ್ವ ಸಂದೇಶ, ಪ್ರಸ್ತುತ ಸನ್ನಿವೇಶದಲ್ಲಿ ಇಂದಿನ ಯುವ ಪೀಳಿಗೆಗೆ ಅತ್ಯಂತಮಹತ್ವಪೂರ್ಣದ್ದಾಗಿದೆ.

ಅಸಹಿಷ್ಣುತೆ, ಅಸ್ಪೃಶ್ಯತೆ, ಕೋಮುಭಾವನೆ ಕೆರಳಿಸುವ ಘಟನೆಗಳು ಸೇರಿದಂತೆ ಪ್ರಪಂಚದಾದ್ಯಂತ  ಆಂತರಿಕ ಕಲಹಗಳುನಡೆಯುತ್ತಿರುವ ಸಂದರ್ಭದಲ್ಲಿ, ಮುಂದಿನ ಪೀಳಿಗೆ ಶಾಂತಿ ಸೌಹಾರ್ದತೆಯಿಂದ ಬಾಳಿ ಬದುಕಲು ಇಂತಹ ತತ್ವಜ್ಞಾನಿಗಳ, ಸಾಮಾಜಿಕ ಪರಿವರ್ತಕರ ಜೀವನ ಸಂದೇಶ ಅತೀ ಅವಶ್ಯಕವಾದುದು.

ಆದ್ದರಿಂದ ಸರಕಾರ ಕುರಿತು ಮರುಚಿಂತನೆ ನಡೆಸಬೇಕಾಗಿ ಆಗ್ರಹಿಸುತ್ತಿದ್ದೇವೆ.

Lಪದ್ಮರಾಜ್ ಆರ್.

ಕೋಶಾಧಿಕಾರಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಹಾಗೂ ಸಂಸ್ಥಾಪಕರು ಗುರು ಬೆಳದಿಂಗಳು (ರಿ) ಕುದ್ರೋಳಿ 


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »