TOP STORIES:

10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನಾರಾಯಣಗುರು ಮತ್ತು ಪೆರಿಯಾರ್ ಅವರ ಕುರಿತಾದ ಪಠ್ಯಭಾಗವನ್ನು ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಕೈಬಿಟ್ಟಿದ್ದು ಖಂಡನೀಯ ಪದ್ಮರಾಜ್ ಆರ್


10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನಾರಾಯಣಗುರು ಮತ್ತು ಪೆರಿಯಾರ್ ಅವರ ಕುರಿತಾದ ಪಠ್ಯಭಾಗವನ್ನುಪಠ್ಯಪುಸ್ತಕ ಪರಿಷ್ಕರಣ ಸಮಿತಿ ಕೈಬಿಟ್ಟಿದ್ದು ಖಂಡನೀಯ

ಸಮಾಜ ಸುಧಾರಕ ಸಂತರೆನಿಸಿಕೊಂಡ ಇವರಿಬ್ಬರ ಸಂದೇಶಗಳಿರುವ ಪಠ್ಯ ಭಾಗವನ್ನು, ಪಠ್ಯಪುಸ್ತಕ ಪರಿಷ್ಕರಣೆಯ ವೇಳೆಪರಿಗಣಿಸದೆ ನಿರ್ಲಕ್ಷಿಸಿರುವುದು,

ಜಾತಿಧರ್ಮಗಳ ಕಲಹದ ಬೇಗೆಯಲ್ಲಿ ರಾಜಕೀಯದ ಬೇಳೆ ಬೇಯಿಸಿಕೊಳ್ಳುವ ಪಕ್ಷಗಳ ದುರುದ್ದೇಶಪೂರಿತ ನಡೆಯಾಗಿ ಕಂಡರೂ, ಪಠ್ಯ ಪರಿಷ್ಕರಣ ಸಮಿತಿ, ಇಲಾಖೆ ಅಥವಾ ಸರಕಾರ ಕುರಿತು ಯಾವುದೇ ಸ್ಪಷ್ಟೀಕರಣ ನೀಡದೆ, ಸಂತರ ತತ್ವಸಿದ್ಧಾಂತಗಳನ್ನು ಅನುಸರಿಸುತ್ತಿರುವ ಅವರ ಅನುಯಾಯಿಗಳಿಗೆ ಮಾಡಿದ ಬಹಿರಂಗ ಅವಮಾನ ಎಂಬುದು ಸತ್ಯ.

ಜಾತಿಪದ್ಧತಿಯ ಕಪಿ ಮುಷ್ಟಿಯಲ್ಲಿ ನಲುಗಿ, ಅಸ್ಪೃಶ್ಯತೆಯ ಪರಾಕಾಷ್ಠೆ ತಲುಪಿ, ಮತಾಂತರದ ಸುಳಿಗೆ ಸಿಲುಕಿದ್ದ ಸನಾತನಹಿಂದೂಧರ್ಮದ ಬಹುಸಂಖ್ಯಾತ ಹಿಂದುಳಿದ ವರ್ಗದ ಜನರ ಧ್ವನಿಯಾಗಿ, ಧಾರ್ಮಿಕ ಸುಧಾರಣೆಯ ಮೂಲಕ ಸಾಮಾಜಿಕಪರಿವರ್ತನೆಯ ಹರಿಕಾರರೆನಿಸಿದ ನಾರಾಯಣ ಗುರುಗಳ ತತ್ವ ಸಂದೇಶ, ಪ್ರಸ್ತುತ ಸನ್ನಿವೇಶದಲ್ಲಿ ಇಂದಿನ ಯುವ ಪೀಳಿಗೆಗೆ ಅತ್ಯಂತಮಹತ್ವಪೂರ್ಣದ್ದಾಗಿದೆ.

ಅಸಹಿಷ್ಣುತೆ, ಅಸ್ಪೃಶ್ಯತೆ, ಕೋಮುಭಾವನೆ ಕೆರಳಿಸುವ ಘಟನೆಗಳು ಸೇರಿದಂತೆ ಪ್ರಪಂಚದಾದ್ಯಂತ  ಆಂತರಿಕ ಕಲಹಗಳುನಡೆಯುತ್ತಿರುವ ಸಂದರ್ಭದಲ್ಲಿ, ಮುಂದಿನ ಪೀಳಿಗೆ ಶಾಂತಿ ಸೌಹಾರ್ದತೆಯಿಂದ ಬಾಳಿ ಬದುಕಲು ಇಂತಹ ತತ್ವಜ್ಞಾನಿಗಳ, ಸಾಮಾಜಿಕ ಪರಿವರ್ತಕರ ಜೀವನ ಸಂದೇಶ ಅತೀ ಅವಶ್ಯಕವಾದುದು.

ಆದ್ದರಿಂದ ಸರಕಾರ ಕುರಿತು ಮರುಚಿಂತನೆ ನಡೆಸಬೇಕಾಗಿ ಆಗ್ರಹಿಸುತ್ತಿದ್ದೇವೆ.

Lಪದ್ಮರಾಜ್ ಆರ್.

ಕೋಶಾಧಿಕಾರಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಹಾಗೂ ಸಂಸ್ಥಾಪಕರು ಗುರು ಬೆಳದಿಂಗಳು (ರಿ) ಕುದ್ರೋಳಿ 


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »