TOP STORIES:

ಬೆಂಗಳೂರಿನಲ್ಲಿ ಮೋದಿ ಪಕ್ಕದಲ್ಲಿ ನಿಂತು ಮಿಂಚಿದ ರೀಣಾ ರಘು ಸುವರ್ಣ


 

 

ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರದ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಬ್ರೈನ್ ಸೆಂಟರ್ ಉದ್ಘಾಟನೆ ವೇಳೆ ಪ್ರಧಾನಿ ಮೋದಿ ಪಕ್ಕದಲ್ಲಿ ನಿಂತಿದ್ದ ಕರ್ನಾಟಕ ಪೊಲೀಸ್ ಸೇವೆಯ ಭದ್ರತಾ ಅಧಿಕಾರಿ ಹೆಸರು ರೀಣಾ ರಘು ಸುವರ್ಣ. ಸದ್ಯ ಜೆಸಿ ನಗರದ ಎಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರೀನಾ ಸುವರ್ಣ 2014 ರಲ್ಲಿ ಕರ್ನಾಟಕ ಪೊಲೀಸ್ ಸೇವೆಗೆ ಸೇರಿದ್ದರು. ಪ್ರೊಬೇಷನರಿ ಅವಧಿಯಲ್ಲಿಯೇ ಹಿರಿಯ ಅಧಿಕಾರಿಗಳ ಗಮನ ಸೆಳೆದಿದ್ದ ರೀನಾ ರಘು ಸುವರ್ಣಾ ಅವರು ಇದೀಗ ಪ್ರಧಾನಿ ಪಕ್ಕದಲ್ಲೇ ನಿಂತು ಭದ್ರತೆ ಒದಗಿಸಿ ಭಾರೀ ಸುದ್ದಿಯಾಗಿದ್ದಾರೆ.

ಸೋಮವಾರ ಬಳಗ್ಗೆ ಮಲ್ಲೇಶ್ವರಂ ಬಳಿ ಇರುವ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಬ್ರೈನ್ ಸೆಂಟರ್ ಪ್ರಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಅಡಿಗಲ್ಲು ಹಾಕುವ ಕಾರ್ಯಕ್ರಮವಿತ್ತು. ಈ ವೇಳೆ ಪ್ರಧಾನಿ ಅಕ್ಕ ಪಕ್ಕ ಇದ್ದಿದ್ದು ಎನ್‌ಎಸ್ ಜಿ ಪಡೆ. ರಾಜ್ಯದಿಂದಲೂ ಸಾಕಷ್ಟು ಪೊಲೀಸ್ ಸಿಬ್ಬಂದಿಯನ್ನು ಪ್ರಧಾನಿ ಭದ್ರತೆಗಾಗಿ ನಿಯೋಜಿಸಲಾಗಿತ್ತು. ಆದರೆ, ಮೋದಿ ಅವರಿಂದ ಕೇವಲ ಎರಡು ಮೀಟರ್ ಅಂತರದಲ್ಲಿ ನಿಂತು ಗಮನ ಸೆಳೆದಿದ್ದು ಎಸಿಪಿ ರೀನಾ ಸುವರ್ಣಾ. ಪ್ರಧಾನಿಗಳಿಗೆ ಸಮೀಪ ಹೋಗಿ ಭದ್ರತೆ ಒದಗಿಸಿದ ಅವಕಾಶ ರೀನಾ ಅವರಿಗೆ ಸಿಕ್ಕಿದ್ದು ಇದೀಗ ಭಾರೀ ಚರ್ಚೆಗೆ ನಾಂದಿ ಹಾಡಿದೆ.

ಯಾರು ಈ ರೀನಾ ರಘು ಸುವರ್ಣ: 2014 ರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಸೇವೆಗೆ ಆಯ್ಕೆಯಾಗಿದ್ದರು. ವ್ಯಾಸಂಗದ ಅವಧಿಯಲ್ಲಿ ಬೆಂಗಳೂರು ವಿವಿಯಲ್ಲಿ ಚಿನ್ನದ ಪದಕ ಗಿಟ್ಟಿಸಿದ್ದ ರೀನಾ ಸುವರ್ಣ ಅವರು, ರಾಜ್ಯ ಪೊಲೀಸ್ ಸೇವೆಗೆ ಆಯ್ಕೆಯಾಗಿದ್ದರು. ಪ್ರೊಬೆಷನರಿ ಅವಧಿಯಲ್ಲಿಯೇ ನಾನಾ ಅಪರಾಧ ಪ್ರಕರಣಗಳನ್ನು ಪತ್ತೆ ಮಾಡುವ ಮೂಲಕ ಬೆಂಗಳೂರಿನಲ್ಲಿ ಸದ್ದು ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಡಿವೈಎಸ್ಪಿಯಾಗಿ ಸೇವೆ:

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ ರೀನಾ ಸುವರ್ಣ ಅವರು ಸುಮಾರು ಹನ್ನೊಂದು ಮಿಸ್ಸಿಂಗ್ ಪ್ರಕರಣ ಪತ್ತೆ ಮಾಡುವ ಮೂಲಕ ಸುದ್ದಿಯಾಗಿದ್ದರು. ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪೋಸ್ಕೋ ಪ್ರಕರಣವನ್ನು ಒಂದು ದಿನದಲ್ಲಿ ಪತ್ತೆ ಮಾಡುವ ಮೂಲಕ ರೀನಾ ಅವರ ತನಿಖಾ ಶೈಲಿ ಅಧಿಕಾರಿಗಳ ಗಮನ ಸೆಳೆಯಿತು. ಜಿಗಣಿ ಪೊಲೀಸ್ ಠಾಣೆಯಲ್ಲಿ ಪತ್ತೆಯಾಗದೇ ಉಳಿದಿದ್ದ ಅಪರಿಚಿತ ಶವ ಪ್ರಕರಣವನ್ನು ಬೇಧಿಸಿದ್ದರು. ಹೀಗೆ ಅಪರಾಧ ಪ್ರಕರಣಗಳನ್ನು ಕ್ಷಾಣಾಕ್ಷತೆಯಿಂದ ಪತ್ತೆ ಮಾಡುವ ಮೂಲಕ ರೀನಾ ಸುವರ್ಣ ಬೆಂಗಳೂರಿನಲ್ಲಿ ಸುದ್ದಿಯಾಗಿದ್ದಾರೆ.

 

ಮಾದಕ ಜಾಲದ ವಿರುದ್ಧ ಕಾರ್ಯಾಚರಣೆ:

ಇನ್ನು ಡ್ರಗ್ ಮಾಫಿಯಾ ವಿರುದ್ಧ ರೀನಾ ಸುವರ್ಣ ನಡೆಸಿರುವ ಕಾರ್ಯಾಚರಣೆ ಬಾರೀ ಸದ್ದು ಮಾಡಿದೆ. ಮೂವರು ಅಂತಾರಾಜ್ಯ ಡ್ರಗ್ ಪೆಡ್ಲರ್ ಗಳ ಎಡೆಮುರಿ ಕಟ್ಟುವಲ್ಲಿ ಎಸಿಪಿ ರೀನಾ ಸುವರ್ಣ ಯಶಸ್ವಿಯಾಗಿದ್ದರು. ಹಲವು ಮಾಫಿಯಾಗಳ ವಿರುದ್ಧ ಕಾರ್ಯಾಚರಣೆ ನಡೆಸಿ ಮಹತ್ವದ ಪ್ರಕರಣ ಪತ್ತೆ ಮಾಡುವಲ್ಲಿ ರೀನಾ ಅವರು ಖ್ಯಾತಿಯಾಗಿದ್ದಾರೆ.

ಕೊರೊನಾ ವಾರಿಯರ್:

ಇನ್ನು ಕೊರೊನಾ ಕಾಲದಲ್ಲಿ ತಮ್ಮ ಮನೆ ಸ್ವಚ್ಛತೆ ಜತೆಗೆ ಕೆಲಸ ಮಾಡುವ ಪೊಲೀಸ್ ಠಾಣೆಗಳು ಸ್ವಚ್ಛವಾಗಿಟ್ಟುಕೊಳ್ಳುವ ಅಭಿಯಾನ ಶುರು ಮಾಡಿ ಯಶಸ್ವಿಯಾಗಿದ್ದರು. ಪೊಲೀಸ್ ಠಾಣೆಗಳನ್ನು ಕ್ಲೀನ್ ಮಾಡಿದ್ದರು. ಕೊರೊನಾ ಕಾಲದಲ್ಲಿ ಪೊಲೀಸರಿಗೆ ಯೋಗ ಪರಿಚಯಿಸಿದ್ದರು. ಕೊರೊನಾ ವಾರಿಯರ್ ಆಗಿ ಹೆಸರು ಮಾಡಿದ್ದರು. ಇದೀಗ ಪ್ರಧಾನಿ ಮೋದಿ ಅವರ ಸಮೀಪ ನಿಂತು ಭದ್ರತೆ ಒದಗಿಸುವ ಮೂಲಕ ಸುದ್ದಿಯಾಗಿದ್ದಾರೆ

 


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »