TOP STORIES:

ಇನ್ನು ವಾಟ್ಸಪ್ ರಿಯಾಕ್ಷನ್ ಫೀಚರ್‌ನಲ್ಲಿ ಯಾವುದೇ ಎಮೋಜಿ ಬಳಸಬಹುದು


ವಾಷಿಂಗ್ಟನ್:- ವಾಟ್ಸಪ್‌ನಲ್ಲಿ ರಿಯಾಕ್ಷನ್ ಫೀಚರ್ ಅನ್ನು ಹೊರತಂದು 2 ತಿಂಗಳಷ್ಟೇ ಕಳೆದಿದೆ. ಆದರೆ ಬಳಕೆದಾರರು ಇಲ್ಲಿಯವರೆಗೆಕೇವಲ 6 ಎಮೋಜಿಗಳನ್ನು ಮಾತ್ರವೇ ರಿಯಾಕ್ಷನ್ ಆಗಿ ಬಳಸಬಹುದಿತ್ತು. ಇದೀಗ ರಿಯಾಕ್ಷನ್ ಫೀಚರ್‌ನಲ್ಲಿ ಯಾವುದೇಎಮೋಜಿಗಳನ್ನು ( Emoji can be used) ಬಳಸಲು ವಾಟ್ಸಪ್ ಅನುಮತಿ ನೀಡಿದೆ.

ಇಲ್ಲಿಯವರೆಗೆ ಲೈಕ್, ಪ್ರೀತಿ, ನಗು, ಆಶ್ಚರ್ಯ, ದುಃಖ ಹಾಗೂ ಧನ್ಯವಾದದ ಎಮೋಜಿಗಳನ್ನಷ್ಟೇ ರಿಯಾಕ್ಷನ್ ಆಗಿ ಕಳುಹಿಸಲುಅವಕಾಶ ನೀಡಿತ್ತು. ಇದೀಗ ರಿಯಾಕ್ಷನ್‌ನಲ್ಲಿ ಯಾವುದೇ ಎಮೋಜಿಗಳನ್ನು ಬಳಸಬಹುದಾಗಿದ್ದು, ಬಗ್ಗೆ ವಾಟ್ಸಪ್‌ನ ಮಾತೃ ಸಂಸ್ಥೆಮೆಟಾದ ಸಿಇಒ ಮಾರ್ಕ್ ಜುಕರ್‌ಬರ್ಗ್ ಇನ್‌ಸ್ಟಾಗ್ರಾಮ್‌ನಲ್ಲಿ ರೋಲ್‌ಔಟ್ ಪ್ರಾರಂಭವಾಗಿದೆ ಎಂದು ತಿಳಿಸಿದ್ದಾರೆ.

ಬೀಟಾ ಪರೀಕ್ಷಕರ ವರದಿಗಳ ಪ್ರಕಾರ ಇತ್ತೀಚಿನ ದಿನಗಳಲ್ಲಿ ವಾಟ್ಸಪ್ ಹಲವಾರು ಫೀಚರ್‌ಗಳನ್ನು ಪರೀಕ್ಷಿಸುತ್ತಿದೆ. ಬಳಕೆದಾರರುವಾಟ್ಸಪ್ ಅನ್ನು ಇನ್ನೊಂದು ಹ್ಯಾಂಡ್‌ಸೆಟ್‌ನಿಂದ ಲಾಗ್‌ಇನ್ ಮಾಡಲು ಆಂಡ್ರಾಯ್ಡ್‌ಗಳಿಗಾಗಿ ಚ್ಯಾಟ್ ಸಿಂಕ್ ಫೀಚರ್, ನಿಮ್ಮಆನ್‌ಲೈನ್ ಸ್ಥಿತಿಯನ್ನು ಮರೆಮಾಡುವ ಸಾಮರ್ಥ್ಯದಂತಹ ಫೀಚರ್‌ಗಳು ಟೆಸ್ಟಿಂಗ್‌ನಲ್ಲಿ ಒಳಗೊಂಡಿವೆ.

ಜೂನ್‌ನಲ್ಲಿ ವಾಟ್ಸಪ್ ಬಳಕೆದಾರರಿಗೆ ಗೌಪ್ಯತೆಯನ್ನು ನಿಯಂತ್ರಿಸುವ ಫೀಚರ್‌ಗಳನ್ನು ಹೊರತರಲು ಪ್ರಾರಂಭಿಸಿತು. ಅದರಲ್ಲಿಕೊನೆಯದಾಗಿ ಆನ್‌ಲೈನ್‌ನಲ್ಲಿದ್ದ ಸಮಯವನ್ನು ಮರೆಮಾಡುವುದು ಹಾಗೂ ಪ್ರೊಫೈಲ್ ಫೋಟೋವನ್ನು ಆಯ್ಕೆಮಾಡಿದವರಿಗಷ್ಟೇ ತೋರುವಂತೆ ಮಾಡುವಂತಹ ಅವಕಾಶವನ್ನು ನೀಡಿದೆ.

ಜುಕರ್‌ಬರ್ಗ್ ಇತ್ತೀಚೆಗೆ ಆಂಡ್ರಾಯ್ಡ್ ಸ್ಮಾರ್ಟ್ಫೋನ್‌ನಿಂದ ಐಫೋನ್‌ಗೆ ತಮ್ಮ ವಾಟ್ಸಪ್ ಡೇಟಾವನ್ನು ಸುಲಭವಾಗಿವರ್ಗಾಯಿಸುವ ಸಾಮರ್ಥ್ಯವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ವರದಿಗಳ ಪ್ರಕಾರ ಇದು ಇನ್ನೂಪರೀಕ್ಷೆಯಲ್ಲಿದೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »