ಬೈಂದೂರು, ಜು 20 ಶಾಲೆಗೆ ತೆರಳುತ್ತಿದ್ದ ಏಳು ವರ್ಷದ ಬಾಲಕಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬುಧವಾರಜು.20ರಂದು ನಡೆದಿದೆ.ಸಮನ್ವಿ ಖಾಸಗಿ ಆಂಗ್ಲಮಾಧ್ಯಮದಲ್ಲಿ 2ನೇ ತರಗತಿ ಓದುತ್ತಿದ್ದು, ಮುಂಜಾನೆ ಶಾಲೆಗೆ ಹೊರಡುತ್ತಿರುವ ವೇಳೆ ಹಠ ಹಿಡಿದಿದ್ದಳು. ಮಗಳನ್ನು ಸಮಧಾನಪಡಿಸಲು ಅಮ್ಮ ಚಾಕಲೇಟ್ ನೀಡಿದ್ದಾರೆ. ಈ ವೇಳೆ ಶಾಲಾ ವಾಹನ ಬಂದಿದ್ದು, ವಿದ್ಯಾರ್ಥಿನಿ ಕವರ್ ಸಹಿತಚಾಕಲೇಟ್ ನುಂಗಿದ್ದಾಳೆ. ಚಾಕಲೇಟ್ ಗಂಟಲಲ್ಲಿ ಸಿಲುಕಿಕೊಂಡು, ಅಸ್ವಸ್ಥಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಆ ವೇಳೆಗಾಗಲೇ ಬಾಲಕಿ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಬಾಲಕಿಯ ಪಾರ್ಥಿವ ಶರೀರವನ್ನು ಬೈಂದೂರು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯನ್ನುಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಡೆಸಲಾಗುವುದು.
ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಬೇಕಿದೆ.